ರಾಜ್ಯದಲ್ಲಿ ಎನ್ಟಿಆರ್ ಭವನ
Team Udayavani, Jul 7, 2018, 2:15 PM IST
ಬೆಂಗಳೂರು: ಕನ್ನಡದಲ್ಲಿ ವರನಟ ಡಾ.ರಾಜ್ಕುಮಾರ್ ಅವರಂತೆ ತೆಲುಗಿನಲ್ಲಿ ನಟರತ್ನ ಡಾ.ಎನ್ಟಿಆರ್ ಕೂಡ ಅಪಾರ ಅಭಿಮಾನಿ ಬಳಗ ಹೊಂದಿದ್ದಾರೆ. ಅವರ ಹೆಸರಿನಲ್ಲಿ ರಾಜ್ಯದಲ್ಲಿ ಭವನ ನಿರ್ಮಿಸಲು ಜಮೀನು ನೀಡಲು ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡುವುದಾಗಿ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಭರವಸೆ ನೀಡಿದರು.
ರವೀಂದ್ರ ಕಲಾಕ್ಷೇತ್ರದಲ್ಲಿ ಕರ್ನಾಟಕ ತೆಲುಗು ಅಕಾಡೆಮಿ ಶುಕ್ರವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಸಿನಿಮಾ ಮತ್ತು ರಂಗ ಸಾಧಕರಿಗೆ ಡಾ.ಎನ್ಟಿಆರ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ಬಣ್ಣದ ಲೋಕದಲ್ಲಿ ಛಾಪು ಮೂಡಿಸಿದ್ದ ಎನ್ಟಿಆರ್ 9 ತಿಂಗಳಲ್ಲಿ ರಾಜಕೀಯ ಪಕ್ಷ ಸ್ಥಾಪಿಸಿ, ಆಗಿನ ಘಟಾನುಘಟಿ ರಾಜಕೀಯ ಮುಖಂಡರಲ್ಲಿ ನಡುಕ ಹುಟ್ಟಿಸಿದ್ದರು. ಇವರ ಬದುಕು ನಮಗೆ ಮಾದರಿ. ಭಾರತ ರತ್ನ ಪ್ರಶಸ್ತಿಗೂ ಅರ್ಹ ವ್ಯಕ್ತಿಯಾಗಿದ್ದಾರೆ ಎಂದು ಬಣ್ಣಿಸಿದರು.
ದೇಶ, ಭಾಷೆ, ಗಡಿ, ಜಾತಿಗಳ ನಡುವೆ ಇಂದು ಸಾಕಷ್ಟು ಕಂದಕ ಏರ್ಪಟ್ಟಿದ್ದು, ಅದನ್ನು ಹೋಗಲಾಡಿಸಬೇಕಾಗಿದೆ. ವಿವಿಧ ಸಂಸ್ಕೃತಿಯಲ್ಲಿ ಸಮ್ಮಿಲನಗೊಂಡಿರುವ ಭಾರತದಲ್ಲಿ ಇಲ್ಲಿರುವಷ್ಟು ಭಾಷೆ, ಸಂಸ್ಕೃತಿಗಳು ಬೇರ್ಯಾವ ದೇಶದಲ್ಲೂ ಇಲ್ಲ. ಇಂತಹ ದೇಶದಲ್ಲಿ ಹಲವು ವಿಚಾರಗಳಲ್ಲಿ ಕಂದಕಗಳು ಶುರುವಾಗಿವೆ ಎಂದು ವಿಷಾದಿಸಿದರು.
ಶಾಸಕ ಮುನಿರತ್ನ ಮಾತನಾಡಿ, ಎನ್ಟಿಆರ್ ಭವನ ನಿರ್ಮಾಣಕ್ಕೆ ರಾಜರಾಜೇಶ್ವರಿ ನಗರದಲ್ಲಿ ಭೂಮಿ ನೀಡಲು ಶಿಫಾರಸು ಮಾಡಲಾಗುವುದು. ಜತೆಗೆ ಅದಕ್ಕೆ ಬೇಕಿರುವ ಅಗತ್ಯ ಸೌಲಭ್ಯ ನೀಡಲಾಗುವುದು ಎಂದರು. ಎನ್ಟಿಆರ್ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಸಂಗೀತ ನಿರ್ದೇಶಕ ಡಾ.ಹಂಸಲೇಖ, ತೆಲುಗು ಚಿತ್ರರಂಗದ ಮೇರು ಕಲಾವಿದನ ಹೆಸರಿನಲ್ಲಿ ಪ್ರಶಸ್ತಿ ನೀಡಿ ಗೌರವಿಸುತ್ತಿರುವುದು ಖುಷಿ ನೀಡಿದೆ.
ಕರ್ನಾಟಕ-ತೆಲಗು ಅಕಾಡೆಮಿ, ಕನ್ನಡದ ವರ ನಟ ಡಾ.ರಾಜಕುಮಾರ್ ಹೆಸರಿನಲ್ಲಿ ಪ್ರಶಸ್ತಿ ಸ್ಥಾಪಿಸಲು ಮುಂದಾಗಿರುವುದು ಮತ್ತಷ್ಟು ಸಂತಸ ನೀಡಿದೆ ಎಂದರು. ಲಹರಿ ಸಂಸ್ಥೆಯ ಲಹರಿ ವೇಲು, ಪಿಇಎಸ್ ವಿವಿ ಕುಲಪತಿ ಎಂ.ಆರ್.ದೊರೆಸ್ವಾಮಿ ನಾಯ್ಡು ಇತರರಿದ್ದರು.
ರಾಜ್ ಹೆಸರಿನಲ್ಲಿ ತೆಲುಗು ನಟರಿಗೆ ಪ್ರಶಸ್ತಿ: ಈಗಿರುವ ಕರ್ನಾಟಕ ತೆಲುಗು ಅಕಾಡೆಮಿ ಹೆಸರನ್ನು ಕರ್ನಾಟಕ-ಕನ್ನಡ-ತೆಲಗು ಅಕಾಡೆಮಿಯಾಗಿ ಬದಲಾವಣೆ ಮಾಡಲಾಗುವುದು. ಅಲ್ಲದೇ ಮುಂದಿನ ದಿನಗಳಲ್ಲಿ ತೆಲುಗಿನ ಸಿನಿಮಾ ಕಲಾವಿದರುಗಳಿಗೆ ಡಾ.ರಾಜ್ಕುಮಾರ್ ಹೆಸರಿನಲ್ಲಿ ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದೆ ಎಂದು ಕರ್ನಾಟಕ ತೆಲುಗು ಅಕಾಡೆಮಿ ಅಧ್ಯಕ್ಷ ಆರ್.ವಿ.ಹರೀಶ್ ಹೇಳಿದರು.
ಪ್ರಶಸ್ತಿ ಸ್ವೀಕರಿಸದೆ ಹಿಂತಿರುಗಿದ ಅರುಂಧತಿ: ಎನ್ಟಿಆರ್ ಪ್ರಶಸ್ತಿಗೆ ಆಯ್ಕೆಯಾಗಿದ್ದ ಕಲಾವಿದೆ ಅರುಂಧತಿ ನಾಗ್ ಕಾರ್ಯಕ್ರಮಕ್ಕೆ ನಿಗದಿಗೊಳಿಸಿದ್ದ ಸಂಜೆ 5 ಗಂಟೆಗೆ ಆಗಮಿಸಿದ್ದರು. ಆದರೆ, ಕಾರ್ಯಕ್ರಮ 7 ಗಂಟೆವರೆಗೂ ಆರಂಭವಾಗಲಿಲ್ಲ. ಹೀಗಾಗಿ, ಅರುಂಧತಿ ಬೇಸರಗೊಂಡ ಕಾರ್ಯಕ್ರಮದಿಂದ ನಿರ್ಗಮಿಸಿದರು. ಸಂಘಟಕರು, ಅವರ ಮನೆಗೆ ಮೇಯರ್ ಆವರನ್ನು ಕರೆದುಕೊಂಡು ಹೋಗಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suspension: ಸುಳ್ಳು ಮಾಹಿತಿ ಮೇರೆಗೆ ಇಬ್ಬರು ಯುವಕರ ಬಂಧನ; ನಾಲ್ವರು ಪೊಲೀಸರು ಅಮಾನತು
Bengaluru: ನಗರದಲ್ಲಿ ಏಕಕಾಲಕ್ಕೆ 200 ಗಣೇಶ ಮೂರ್ತಿಗಳ ಮೆರವಣಿಗೆ
Parappana Agrahara Prison: ಪರಪ್ಪನ ಅಗ್ರಹಾರ ಜೈಲಲ್ಲಿ ಮತ್ತೆ ಮೊಬೈಲ್ಗಳು ಪತ್ತೆ
Bengaluru: ಚಿನ್ನಾಭರಣ ಮಳಿಗೆಯಲ್ಲಿ ತಡರಾತ್ರಿ ದುಷ್ಕರ್ಮಿಗಳಿಂದ ಕಳವಿಗೆ ಯತ್ನ
BBMP: ರಜೆ ದಿನದಲ್ಲೂ ಗುಂಡಿ ಮುಚ್ಚಿದ ಪಾಲಿಕೆ ನೌಕರರು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.