ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ


Team Udayavani, Jul 8, 2018, 6:00 AM IST

0707kdpp1.jpg

ಕುಂದಾಪುರ: ಕನಿಷ್ಠ ವೇತನ, ಕನಿಷ್ಠ ಮಾಸಿಕ ಪಿಂಚಣಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕುಂದಾಪುರ ತಾಲೂಕು ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘ ಶನಿವಾರ ಕುಂದಾಪುರದಲ್ಲಿ ಕಾಲ್ನಡಿಗೆ ಜಾಥಾದ ಮೂಲಕ ಬೃಹತ್‌ ಪ್ರತಿಭಟನೆ ನಡೆಸಿತು. 

ಕುಂದಾಪುರದ ತಾ.ಪಂ. ಕಚೇರಿ ಮುಂಭಾಗದಿಂದ ಆರಂಭವಾದ ಜಾಥಾವು ಶಾಸಿŒ ಸರ್ಕಲ್‌ ಮೂಲಕವಾಗಿ ಮಿನಿವಿಧಾನಸೌಧದವರೆಗೆ ನಡೆಯಿತು. ಅಲ್ಲಿ ಘೋಷಣೆಗಳನ್ನು ಕೂಗಿ ಬೇಡಿಕೆ ಈಡೇರಿಕೆಗೆ ಆಗ್ರಹಿಸಿದರು. ಬಳಿಕ ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತ ಟಿ. ಭೂಬಾಲನ್‌ ಅವರಿಗೆ ಮನವಿ ಸಲ್ಲಿಸಿದರು. 

ಮಳೆಯ ನಡುವೆಯೂ ಜಾಥಾ
ಜೋರಾಗಿ ಸುರಿಯುತ್ತಿರುವ ಮಳೆಯ ಮಧ್ಯೆಯೂ ಕರೆ ನೀಡಿದ್ದ ಮುಷ್ಕರದಿಂದ ಹಿಂದೆ ಸರಿಯದೇ ಪ್ರತಿಭಟನೆಯನ್ನು ನಡೆಸಿದರು. ಭಾರೀ ಮಳೆಯ ನಡುವೆಯೂ 13 ವಲಯಗಳ ಸುಮಾರು 500ಕ್ಕೂ ಅಧಿಕ ಮಂದಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಭಾಗವಹಿಸಿದ್ದರು. 

ಪ್ರತಿಭಟನೆಯಲ್ಲಿ ಕುಂದಾಪುರ ತಾಲೂಕು ಅಂಗನವಾಡಿ ಕಾರ್ಯ ಕರ್ತೆಯರ ಮತ್ತು ಸಹಾಯಕಿಯರ ಸಂಘದ ಅಧ್ಯಕ್ಷೆ ಫಿಲೋಮಿನಾ ಫೆರ್ನಾಂಡೀಸ್‌, ಕಾರ್ಯದರ್ಶಿ ನಾಗರತ್ನಾ ಹವಾಲ್ದಾರ್‌, ಕೋಶಾಧಿಕಾರಿ ಶೋಭಾ, ಉಪಾಧ್ಯಕ್ಷರಾದ ಗುಲಾಬಿ ಬೆಳ್ವೆ, ಪದ್ಮಾವತಿ ಬಾಳೇಕೆರೆ, ದಾಕ್ಷಿಯಿಣಿ, ಇಂದಿರಾ ಬೈಂದೂರು, ಸವಿತಾ ಬಸ್ರೂರು, ನಾಗರತ್ನಾ ತೆಂಕಬೆಟ್ಟು ಮತ್ತಿತರರು ಪಾಲ್ಗೊಂಡಿದ್ದರು. 

ಸರಕಾರದ ಗಮನಕ್ಕೆ
ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಉತ್ತಮ ಕೆಲಸ ಮಾಡುತ್ತಿದ್ದು, ಅವರ ಕುರಿತು ಒಳ್ಳೆಯ ಭಾವನೆಯಿದೆ. ಇದೇ ಕಾರ್ಯವನ್ನು ಇನ್ನೂ ಕೂಡ ಮುಂದುವರಿಸಿಕೊಂಡು ಹೋಗಿ. ನಿಮ್ಮ ಬೇಡಿಕೆಗಳನ್ನು ಡಿಸಿ ಅವರ ಮೂಲಕ ಸರಕಾರದ ಗಮನಕ್ಕೆ ತರಲಾಗುವುದು.
– ಟಿ. ಭೂಬಾಲನ್‌, ಕುಂದಾಪುರ ಉಪ ವಿಭಾಗದ ಸಹಾಯಕ ಆಯುಕ್ತ  

ಬೇಡಿಕೆಗಳೇನು?
– ಕನಿಷ್ಠ ವೇತನ 18 ಸಾವಿರ ರೂ. ಜಾರಿ
– ನಿವೃತ್ತಿಯಾದ, ನಿವೃತ್ತಿಯಾಗಲಿರುವ ಕಾರ್ಯಕರ್ತೆ ಹಾಗೂ ಸಹಾಯಕಿಯರಿಗೆ ಕನಿಷ್ಠ ಮಾಸಿಕ ಪಿಂಚಣಿ 6 ಸಾವಿರ ರೂ. 
– ನೂತನ ಬಾಲವಿಕಾಸ ಸಮಿತಿ ರಚನೆ ಆದೇಶದಲ್ಲಿ ಅಧ್ಯಕ್ಷರ ಅನುಮತಿ ಪಡೆದು ರಜೆ ಮಾಡಬೇಕೆಂಬ ಆದೇಶ ಹಿಂಪಡೆಯುವುದು
– ಕಾರ್ಯಕರ್ತೆಯರಿಗೆ ಮೇಲ್ವಿಚಾರಕರ ಹುದ್ದೆ ನೀಡುವಾಗ ಇಲಾಖೆ ಪರೀಕ್ಷೆ ಮಾಡಿ ನೇಮಿಸಬೇಕು. ಈ ಹಿಂದೆ ಲೋಕ ಸೇವಾ ಆಯೋಗ ನಡೆಸಿದ ಪರೀಕ್ಷೆ ರದ್ದು ಮಾಡಿ, ಸೇವಾ ಹಿರಿತನದ ಆಧಾರದಲ್ಲಿ ಭಡ್ತಿ 
– ಪ್ರತಿ ತಿಂಗಳ ಗೌರವ ಧನ ಹಾಗೂ ಮೊಟ್ಟೆ ಹಣವನ್ನು ಪ್ರತಿ ತಿಂಗಳ 5 ರೊಳಗೆ ನೀಡಬೇಕು
– ಸೇವಾವಧಿ ಆಧಾರದಲ್ಲಿ ಗೌರವಧನ/ ವೇತನ ಹೆಚ್ಚಳ
– ಸಾದಿಲ್ವಾರು ವೆಚ್ಚವನ್ನು ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಹೆಚ್ಚಿಸಬೇಕು
– ಅನಾರೋಗ್ಯದಲ್ಲಿರುವ ನೌಕರರಿಗೆ ಸ್ವಯಂ ನಿವೃತ್ತಿಗೆ ಅವಕಾಶ 
– ಅಂಗನವಾಡಿ ನೌಕರರನ್ನು ಸಿ, ಡಿ ಗ್ರೂಪ್‌ ನೌಕರರನ್ನಾಗಿ ಕೇಂದ್ರ ಸರಕಾರ ಘೋಷಿಸಬೇಕು
– ಬೇಸಿಗೆ ರಜೆ ಅಂಗನವಾಡಿಗೂ ನೀಡಬೇಕು.
– ಸರಕಾರಿ ಶಾಲೆಗಳಲ್ಲಿ ಎಲ್‌ಕೆಜಿ- ಯುಕೆಜಿ ಸರಕಾರದ ವತಿಯಿಂದ ಪ್ರಾರಂಭಿಸಿದರೆ, ಆ ಶಾಲೆಗೆ ಅಂಗನವಾಡಿ ನೌಕರ ಆಯ್ಕೆ ಮಾಡಬೇಕು
– ಮಾತೃಪೂರ್ಣ ಯೋಜನೆ ಹೊರೆಯಾಗುತ್ತಿದ್ದು, ಕೆಲವು ಅಂಗನವಾಡಿಗಳಲ್ಲಿ ಸಹಾಯಕಿಯರಿಲ್ಲದೆ ಸಮಸ್ಯೆ ಯಾಗಿದೆ. ಜಿಲ್ಲೆಯಲ್ಲಿ ಈ ಹಿಂದಿನಂತೆ ಕಿಟ್‌ ರೂಪದಲ್ಲಿ ಕೊಡಲಿ.

ಕಾರ್ಕಳದಲ್ಲೂ  ಪ್ರತಿಭಟನೆ
ಕಾರ್ಕಳ:
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಅಂಗನವಾಡಿ ಕಾರ್ಯ ಕರ್ತೆಯರು, ಸಹಾಯಕಿಯರ ಸಂಘದ ವತಿಯಿಂದ ಜು. 7ರಂದು ಕಾರ್ಕಳ ತಾ.ಪಂ. ಕಚೇರಿ ಮುಂಭಾಗ ಬೃಹತ್‌ ಪ್ರತಿಭಟನೆ ನಡೆಯಿತು.

ಕೇಂದ್ರ ಸರಕಾರ ಜಾರಿಗೊಳಿಸಿರುವ ಯೋಜನೆಯಾದ ಪೌಷ್ಟಿಕಾಹಾರವನ್ನು ಪ್ಯಾಕೇಜ್‌ ರೂಪದಲ್ಲಿ ಹಾಗೂ ನೇರ ವರ್ಗಾವಣೆಗೆ ವಿರೋಧ ವ್ಯಕ್ತಪಡಿಸಿದ ಕಾರ್ಯಕರ್ತೆಯರು ರಾಜ್ಯ ಸರಕಾರದ ಮಾತೃಪೂರ್ಣ ಯೋಜನೆಯನ್ನು ಹಿಂದಿನಂತೆಯೇ ಫ‌ಲಾನುಭವಿಗಳಿಗೆ ನೀಡಲು ಆಗ್ರಹಸಿದರು. ತಮ್ಮ ಬೇಡಿಕೆಗಳ ಈಡೇರಿಕೆಗೆ ಸರಕಾರ ಸೂಕ್ತ ರೀತಿಯಲ್ಲಿ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಗೂ ಮೊದಲು ಕೆಇಬಿಯಿಂದ ಬಂಡೀಮಠ ಬಸ್ಸು ನಿಲ್ದಾಣದ ಮೂಲಕ ತಹಶೀಲ್ದಾರ್‌ ಕಚೇರಿವರೆಗೆ ಜಾಥ ನಡೆಸಿ ದರು. ಕಾರ್ಕಳ ತಾಲೂಕಿನ 9 ವಲಯಗಳ ಸುಮಾರು ಸುಮಾರು 450 ಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಪ್ರತಿ ಭಟನೆಯ ಬಳಿಕ ವಿವಿಧ ಬೇಡಿಕೆಗಳ ಮನವಿಯನ್ನು ತಹಶೀಲ್ದಾರ್‌ ಮೂಲಕ ಸರಕಾರಕ್ಕೆ ಸಲ್ಲಿಸಿದರು.

ಸಂಘದ ಅಧ್ಯಕ್ಷೆ ಪದ್ಮಾವತಿ, ಕಾರ್ಯದರ್ಶಿ ಸಾಕಮ್ಮ, ಕೋಶಾಧಿಕಾರಿ ಚಂದ್ರಕಲಾ, ಉಪಾಧ್ಯಕ್ಷೆ ಗೀತಾ, ಪ್ರಮುಖರಾದ ಪ್ರಮೀಳಾ, ಮಮತಾ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ganesha Chaturthi: ಆರೂರು: 35ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ… ವಿವಿಧ ಕಾರ್ಯಕ್ರಮ

ಆರೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ: ಸೆ.9ರಂದು ಪ್ರಥಮ ವರ್ಷದ ಲೋಬಾನ ಸೇವೆ ಹುಲಿವೇಷ ಕುಣಿತ

16-kumbashi

Ganesh Chaturthi; ಆನೆಗುಡ್ಡೆ: ಸಂಭ್ರಮದ ಶ್ರೀ ವಿನಾಯಕ ಚತುರ್ಥಿ; ಹರಿದು ಬಂದ ಭಕ್ತ ಸಮೂಹ

ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Kaup ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Udupi ಗೀತಾರ್ಥ ಚಿಂತನೆ-29 ಭಗವದವತಾರದ ಉದ್ದೇಶವೇನು?

Udupi ಗೀತಾರ್ಥ ಚಿಂತನೆ-29; ಭಗವದವತಾರದ ಉದ್ದೇಶವೇನು?

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.