ಸದನಕ್ಕೆ ಕಡ್ಡಾಯವಾಗಿ ಹಾಜರಾಗಲು ಡಿಸಿಎಂ ಪತ್ರ
Team Udayavani, Jul 8, 2018, 6:45 AM IST
ಬೆಂಗಳೂರು: ರಾಜ್ಯ ವಿಧಾನಮಂಡಲದ ಬಜೆಟ್ ಅಧಿವೇಶನದಲ್ಲಿ ಸಚಿವರು ಕಲಾಪಗಳಲ್ಲಿ ಪಾಲ್ಗೊಳ್ಳದೆ ಗೈರು ಹಾಜರಾಗುತ್ತಿರುವ ಬಗ್ಗೆ ವಿಧಾಸನಭಾಧ್ಯಕ್ಷ ರಮೇಶ್ ಕುಮಾರ್ ಸರ್ಕಾರದ ವಿರುದ್ಧ ಚಾಟಿ ಬೀಸಿರುವುದರಿಂದ ಎಚ್ಚೆತ್ತುಕೊಂಡಿರುವ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್, ಕಾಂಗ್ರೆಸ್ನ ಎಲ್ಲ ಸಚಿವರಿಗೂ ಪತ್ರ ಬರೆದಿದ್ದಾರೆ.
ಸಚಿವರು ನಿತ್ಯ ತಮ್ಮ ಹೊಣೆಗಾರಿಕೆ ನಿಭಾಯಿಸಬೇಕು. ಉಭಯ ಸದನದ ಕಲಾಪಗಳಲ್ಲಿ ಕಡ್ಡಾಯವಾಗಿ ಹಾಜರಾಗಬೇಕು. ಎಐಸಿಸಿ ಸಹ ಇದನ್ನು ಗಮನಿಸಲಿದೆ ಎಂದು ಹೇಳಿದ್ದಾರೆ.
ಮೈತ್ರಿಕೂಟ ಸರ್ಕಾರದ ಆಯವ್ಯಯ ಅಧಿವೇಶನ ಆರಂಭವಾಗಿದ್ದು, ಇಲಾಖಾವಾರು ಬೇಡಿಕೆಗೆ
ಅನುಗುಣವಾಗಿ ಮಹತ್ವದ ಚರ್ಚೆಗಳು ನಡೆಯುತ್ತಿವೆ. ಉಭಯ ಸದನಗಳಲ್ಲಿ ಸಚಿವರು ಗೈರು ಹಾಜರಾಗಿರುವ ಬಗ್ಗೆ ಸಭಾಧ್ಯಕ್ಷರು ಮತ್ತು ಸಭಾಪತಿಗಳು ಈಗಾಗಲೇ ಹಲವು ಬಾರಿ ಪ್ರಸ್ತಾಪಿಸಿರುತ್ತಾರೆ. ಅಲ್ಲದೇ ಸದನದಲ್ಲಿ ಸಚಿವರ ಸಮರ್ಪಕ ಕಾರ್ಯ ಚಟುವಟಿಕೆ ಮತ್ತು
ಕ್ರಿಯಾಶೀಲತೆಯನ್ನು ಎಐಸಿಸಿ ವರಿಷ್ಠರು ಗಮನಿಸುತ್ತಿದ್ದು, ವರದಿ ನೀಡಬೇಕಿದೆ. ಹೀಗಾಗಿ, ಕಡ್ಡಾಯವಾಗಿ ಹಾಜರಿರುವಂತೆ ಪತ್ರದಲ್ಲಿ ಪರಮೇಶ್ವರ್ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್?
Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.