ಇಬ್ಬರಿಗೆ 5 ವರ್ಷ ಕಠಿನ ಸಜೆ, ದಂಡ
Team Udayavani, Jul 8, 2018, 6:00 AM IST
ಕುಂದಾಪುರ: ತಗ್ಗರ್ಸೆಯ ಅರಳಿಕಟ್ಟೆಯಲ್ಲಿ 3 ವರ್ಷಗಳ ಹಿಂದೆ ಜಾಗದ ವೈಷಮ್ಯದಿಂದ ಮನೆಗೆ ಬೆಂಕಿ ಹಚ್ಚಿದ ಪ್ರಕರಣ ಸಂಬಂಧ ಇಬ್ಬರಿಗೆ ಕುಂದಾಪುರದ ಹೆಚ್ಚು ವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಇಬ್ಬರಿಗೂ 5 ವರ್ಷಗಳ ಕಠಿನ ಕಾರಾಗೃಹ ಶಿಕ್ಷೆ ಹಾಗೂ 50 ಸಾ.ರೂ. ದಂಡ ವಿಧಿಸಿ ನ್ಯಾಯಾಧೀಶ ಪ್ರಕಾಶ್ ಖಂಡೇರಿ ತೀರ್ಪು ನೀಡಿದ್ದಾರೆ.
ಮದುವೆ ಸಂಭ್ರಮದಲ್ಲಿದ್ದ ತಗ್ಗರ್ಸೆ ಗ್ರಾಮದ ಅರಳಿಕಟ್ಟೆಯ ಕುಶಲ ಶೆಟ್ಟಿ ಅವರ ಮನೆಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ರಾಘವೇಂದ್ರ ಶೆಟ್ಟಿ ಹಾಗೂ ರಾಜೇಂದ್ರ ಶೆಟ್ಟಿ ಶಿಕ್ಷೆಗೊಳಗಾದವರು. ಮನೆಗೆ ಬೆಂಕಿ ಹಚ್ಚಿದ್ದಕ್ಕೆ 5 ವರ್ಷ ಕಠಿನ ಸಜೆ ಹಾಗೂ 50 ಸಾ.ರೂ. ದಂಡ, ಮನೆಗೆ ಅಕ್ರಮ ಪ್ರವೇಶ ಮಾಡಿದಕ್ಕೆ 1 ವರ್ಷ ಜೈಲು ಶಿಕ್ಷೆ ಹಾಗೂ 10 ಸಾ. ರೂ. ದಂಡ, ಸೊತ್ತು ನಾಶಕ್ಕೆ 1 ವರ್ಷ ಸಜೆ ಹಾಗೂ 10 ಸಾ. ರೂ. ದಂಡ ವಿಧಿಸಲಾಗಿದೆ. 3 ಶಿಕ್ಷೆಗಳನ್ನು ಏಕಕಾಲದಲ್ಲಿ ಅನು ಭವಿಸಬಹುದಾಗಿದ್ದು, ಒಟ್ಟು 5 ವರ್ಷ ಜೈಲು ಶಿಕ್ಷೆ ಅನುಭವಿಸಬೇಕು. ದಂಡದಲ್ಲಿ 45 ಸಾ.ರೂ. ಅನ್ನು ಬೆಂಕಿ ಬಿದ್ದ ಮನೆಗೆ ಪರಿಹಾರವಾಗಿ ನೀಡಬೇಕಾಗಿದೆ ಎಂದು ತೀರ್ಪಿನಲ್ಲಿ ಪ್ರಕಟಿಸಿದೆ.
ಪ್ರಾಸಿಕ್ಯೂಶನ್ ಪರ ಜಿಲ್ಲಾ ಸರಕಾರಿ ಅಭಿಯೋಜಕ ಪ್ರಕಾಶ್ಚಂದ್ರ ಶೆಟ್ಟಿ ವಾದಿಸಿದ್ದರು. ಪ್ರಕರಣದ ತನಿಖೆ ನಡೆಸಿದ್ದ ಅಂದಿನ ಬೈಂದೂರು ಎಸ್ಐ ಸಂತೋಷ್ ಕಾಯ್ಕಿಣಿ ನ್ಯಾಯಾಲಯಕ್ಕೆ ದೋಷರೋಪಣಾ ಪಟ್ಟಿ ಸಲ್ಲಿಸಿದ್ದರು. ಪ್ರಕರಣದಲ್ಲಿ ಒಟ್ಟು 14 ಸಾಕ್ಷಿಗಳಿದ್ದು, 12 ಮಂದಿಯನ್ನು ವಿಚಾರಣೆ ನಡೆಸಲಾಗಿತ್ತು.
ಪ್ರಕರಣದ ಹಿನ್ನೆಲೆ
ಕುಶಲ ಶೆಟ್ಟಿ ಮನೆಯವರಿಗೆ ಹಾಗೂ ಅಪರಾಧಿಗಳಿಗೆ ಬಹಳ ವರ್ಷಗಳಿಂದ ಜಾಗದ ತಕರಾರು ನಡೆಯುತ್ತಿತ್ತು. 2015ರ ಎ.22ರಂದು ಕುಶಲ ಶೆಟ್ಟಿ ಅವರ ಮಗನ ಮದುವೆ ಹೆಮ್ಮಾಡಿಯ ಸಭಾ ಭವನ ವೊಂದರಲ್ಲಿ ನಡೆಯುತ್ತಿತ್ತು. ಇದೇ ಸಂದರ್ಭವನ್ನು ಬಳಸಿ ಕೊಂಡ ರಾಜು ಶೆಟ್ಟಿ ಹಾಗೂ ರಾಘವೇಂದ್ರ ಶೆಟ್ಟಿ ರಾಡ್ನಿಂದ ಮನೆಯ ಬೀಗ ಒಡೆದು ಒಳ ನುಗ್ಗಿ, ಮನೆಯಲ್ಲಿದ್ದ ಟಿವಿ, ಫ್ರಿಡ್ಜ್, ಟೇಬಲ್, ಮಂಚವನ್ನೆಲ್ಲ ಹಾಲ್ಗೆ ತಂದು ರಾಶಿ ಹಾಕಿ ಅದಕ್ಕೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದರು. ಬಳಿಕ ಕಿಚ್ಚು ಇಡೀ ಮನೆಯನ್ನು ವ್ಯಾಪಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.