ಜಿಎಸ್‌ಟಿ ವಂಚನೆ: ಉದ್ಯಮಿ ಬಂಧನ


Team Udayavani, Jul 8, 2018, 6:00 AM IST

gst-ddd.jpg

ಬೆಂಗಳೂರು: ಜಿಎಸ್‌ಟಿಯಡಿ 15 ಕೋಟಿ ರೂ.ತೆರಿಗೆ ವಂಚಿಸಿದ ಆರೋಪದಡಿ ಬೆಂಗಳೂರಿನ ಉದ್ಯಮಿಯೊಬ್ಬರನ್ನು ಬಂಧಿಸಲಾಗಿದೆ. ಜಿಎಸ್‌ಟಿ ವಂಚನೆ ಸಂಬಂಧ ರಾಜ್ಯದಲ್ಲಿ ಇದು ಪ್ರಥಮ ಬಂಧನವಾಗಿದೆ.

ಕೇಂದ್ರೀಯ ತೆರಿಗೆಗಳ ಇಲಾಖೆಯ ಬೆಂಗಳೂರು ದಕ್ಷಿಣ ಜಿಎಸ್‌ಟಿ ಆಯುಕ್ತಾಲಯದ ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿ ಉದ್ಯಮಿಯನ್ನು ಬಂಧಿಸಿದರು. ಜಿಎಸ್‌ಟಿಯಡಿ ಗ್ರಾಹಕರಿಂದ ಸಂಗ್ರಹಿಸಿದ್ದ ತೆರಿಗೆಯನ್ನು ಪಾವತಿಸದ ಬೆಂಗಳೂರಿನ ಬೊಮ್ಮಸಂದ್ರದಲ್ಲಿನ ಆಟೋಮೊಬೈಲ್‌ ಕೈಗಾರಿಕೆಯೊಂದರ ವ್ಯವಸ್ಥಾಪಕ ನಿರ್ದೇಶಕರೇ ಬಂಧನ ಕ್ಕೊಳಗಾದ ವ್ಯಕ್ತಿ. ಬಳಿಕ ಮ್ಯಾಜಿಸ್ಟ್ರೇಟರ್‌ ಮುಂದೆ ಹಾಜರುಪಡಿಸಿದಾಗ ಎರಡು ವಾರದೊಳಗೆ 15 ಕೋಟಿ ರೂ. ಪಾವತಿಸುವಾಗಿ ಉದ್ಯಮಿ ಮುಚ್ಚಳಿಕೆ ನೀಡಿದ ಹಿನ್ನೆ ಲೆಯಲ್ಲಿ ಅವರು ಮಧ್ಯಂತರ ಜಾಮೀನು ಪಡೆದುಕೊಂಡಿದ್ದಾ ರೆ.

ನೂತನ ಜಿಎಸ್‌ಟಿ ವ್ಯವಸ್ಥೆ ಜಾರಿಯಾಗಿ ವರ್ಷ ಕಳೆದಿದ್ದು, ಎಲ್ಲ ತೆರಿಗೆದಾರರು ಸಮರ್ಪಕವಾಗಿ ತೆರಿಗೆ ಪಾವತಿಸುವಂತೆ ಕೇಂದ್ರೀಯ ತೆರಿಗೆ ಇಲಾಖೆಯೂ ಮೇಲ್ವಿಚಾರಣೆ ನಡೆಸುತ್ತಿದೆ. ಅದರಂತೆ ಮೇಲ್ವಿಚಾರಣೆ ನಡೆಸುವಾಗ ಆಟೋಮೊಬೈಲ್‌ ಕೈಗಾರಿಕೆಯೊಂದು ಭಾರಿ ಮೊತ್ತದ ತೆರಿಗೆ ಬಾಕಿ ಉಳಿಸಿಕೊಂಡಿರುವುದು ಕಂಡುಬಂತು. ಕೂಡಲೇ ಅಧಿಕಾರಿಗಳು ಆ ಕಂಪೆನಿಯ ವಹಿವಾಟು, ತೆರಿಗೆ ಬಗ್ಗೆ ಪರಿಶೀಲನೆ ಆರಂಭಿಸಿದ್ದರು.

ವಂಚನೆ ನಡೆಸಿರುವುದು ಮೇಲ್ನೋಟಕ್ಕೆ ಕಂಡುಬಂದ ಕೂಡಲೇ ಕಂಪೆನಿಯ ಮೇಲೆ ದಾಳಿ ನಡೆಸಿ ವ್ಯವಹಾರಕ್ಕೆ ಸಂಬಂಧಪಟ್ಟ ರಸೀದಿ, ಇನ್‌ವಾಯ್ಸಗಳು, ಪಾವತಿಗಳನ್ನು ಪರಿಶೀಲಿಸಲಾಯಿತು. ಜಿಎಸ್‌ಟಿ ಜಾರಿಯಾದ 2017ರ ಜುಲೈ ತಿಂಗಳ ತೆರಿಗೆಯನ್ನಷ್ಟೇ ಕಂಪೆನಿ ಪಾವತಿಸಿತ್ತು. ನಂತರದ ಅಂದರೆ 2017ರ ಆಗಸ್ಟ್‌ನಿಂದ 2018ರ ಮೇ ತಿಂಗಳವರೆಗಿನ ತೆರಿಗೆ ಪಾವತಿಸದಿರುವುದು ಕಂಡುಬಂತು. ಕಂಪೆನಿಯು ತನ್ನ ಗ್ರಾಹಕರಿಗೆ ಜಿಎಸ್‌ಟಿ ತೆರಿಗೆ ವಿಧಿಸಿ ಅವರಿಂದ ಸಂಗ್ರಹಿಸಿದ್ದರೂ ಅದನ್ನು ಇಲಾಖೆಗೆ ಪಾವತಿಸದೆ ಸುಮಾರು 15 ಕೋಟಿ ರೂ. ವಂಚಿಸಿರುವುದು ಬಯಲಾಯಿತು.

ಕೂಡಲೇ ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕರನ್ನು ಬಂಧಿಸಲಾಯಿತು. ಬಳಿಕ ಮ್ಯಾಜಿಸ್ಟೇಟ್‌ ಮುಂದೆ ಹಾಜರುಪಡಿಸಿದಾಗ ಉದ್ಯಮಿಯು ಎರಡು ವಾರಗಳಲ್ಲಿ ತೆರಿಗೆ ಪಾವತಿಸುವುದಾಗಿ ಭರವಸೆ ನೀಡಿದರು ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ದೊಡ್ಡ ತೆರಿಗೆದಾರರ ಮೇಲೆ ಕಣ್ಣು
ಜಿಎಸ್‌ಟಿ ಜಾರಿಯಾಗಿ ಒಂದು ವರ್ಷ ಕಳೆದಿದ್ದು, ಪ್ರತಿ ತೆರಿಗೆದಾರರು ನಿಯಮಾನುಸಾರ ಸೂಕ್ತ ತೆರಿಗೆ ಪಾವತಿಸುತ್ತಿದ್ದಾರೆ ಎಂಬ ಬಗ್ಗೆ ನಿರಂತರ ಮೇಲ್ವಿಚಾರಣೆ ನಡೆದಿದೆ. ಅದರಲ್ಲೂ ಒಂದು ಕೋಟಿ ರೂ., ಐದು ಕೋಟಿ ರೂ. ಮೊತ್ತದ ತೆರಿಗೆ ಪಾವತಿದಾರರ ಮೇಲೆ ವಿಶೇಷ ನಿಗಾ ಇರಿಸಲಾಗಿದೆ. ಅವರ ವಹಿವಾಟು, ವಿಧಿಸುತ್ತಿರುವ ಜಿಎಸ್‌ಟಿ, ಪಾವತಿಯ ಬಗ್ಗೆ ಸಲ್ಲಿಸುವ ವಿವರಗಳನ್ನು ಪರಿಶೀಲಿಸಲಾಗುತ್ತಿದೆ. ತೆರಿಗೆ ವಂಚನೆದಾರರ ವಿರುದ್ಧ ನಿದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಉನ್ನತ ಅಧಿಕಾರಿಗಳು ತಿಳಿಸಿದ್ದಾರೆ.

ಕೇಂದ್ರೀಯ ತೆರಿಗೆಗಳ ಇಲಾಖೆಯ ಬೆಂಗಳೂರು ದಕ್ಷಿಣ ಜಿಎಸ್‌ಟಿ ಆಯುಕ್ತಾಲಯದ ತಡೆ ಘಟಕವು (ಪ್ರಿವೆನÒನ್‌ ಯುನಿಟ್‌) ಕಾರ್ಯಾಚರಣೆ ನಡೆಸಿ 15 ಕೋಟಿ ರೂ. ತೆರಿಗೆ ಪಾವತಿಸದ ಆಟೋಮೊಬೈಲ್‌ ಕಂಪೆನಿಯೊಂದರ ವ್ಯವಸ್ಥಾಪಕ ನಿರ್ದೇಶಕರನ್ನು ಬಂಧಿಸಲಾಗಿದೆ. ತೆರಿಗೆ ವಂಚಿಸಿರುವುದನ್ನು ಉದ್ಯಮಿ ಒಪ್ಪಿಕೊಂಡಿದ್ದಾರೆ. ಮುಂದಿನ ತನಿಖೆ ಪ್ರಗತಿಯಲ್ಲಿದೆ.
– ಜಿ.ನಾರಾಯಣಸ್ವಾಮಿ, ಕೇಂದ್ರೀಯ ತೆರಿಗೆ ಆಯುಕ್ತ, ಬೆಂಗಳೂರು ದಕ್ಷಿಣ ಆಯುಕ್ತಾಲಯ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Chikkamagaluru: ಸಾವಿನಲ್ಲೂ ಸಾರ್ಥಕತೆ; ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Chikkamagaluru: ಸಾವಿನಲ್ಲೂ ಸಾರ್ಥಕತೆ… ರಸ್ತೆ ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

9

Cabinet Meeting: ದಶಕದ ಬಳಿಕ ಕಲಬುರಗಿಯಲ್ಲಿ ಸಂಪುಟ ಸಭೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.