ಕಟ್ಟೆಚ್ಚರ: ಜಿಲ್ಲಾಡಳಿತಕ್ಕೆ ಖಾದರ್‌ 


Team Udayavani, Jul 8, 2018, 6:00 AM IST

v-35.jpg

ಮಂಗಳೂರು: ದ.ಕ. ಜಿಲ್ಲಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ನದಿಗಳು ಅಪಾಯದ ಮಟ್ಟ ಮೀರುವ ಸಾಧ್ಯತೆಯಿದೆ. ಮೂರು ದಿನ ಮತ್ತಷ್ಟು ಮಳೆಯಾಗುವ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ ಎಲ್ಲ ಅಧಿಕಾರಿಗಳು ಕಟ್ಟೆಚ್ಚರ ವಹಿಸಬೇಕು ಎಂದು ವಸತಿ ಮತ್ತು ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್‌ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ಸಹಾಯಕ ಆಯುಕ್ತರು, ಮೀನುಗಾರಿಕೆ, ಪಾಲಿಕೆ, ಆರೋಗ್ಯ ಇಲಾಖೆ ಅಧಿಕಾರಿಗಳನ್ನು ಒಳಗೊಂಡ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುನ್ನೆಚ್ಚರಿಕೆ ದೃಷ್ಟಿಯಿಂದ ಎನ್‌ಡಿಆರ್‌ಎಫ್‌ ತಂಡ ಮಂಗಳೂರಿಗೆ ಆಗಮಿಸುತ್ತಿದೆ. ಅಗ್ನಿಶಾಮಕ ಇಲಾಖೆ ದಿನದ 24 ಗಂಟೆಯೂ ಸನ್ನದ್ಧವಾಗಿರಬೇಕು. ಸ್ಥಳೀಯ ಮೀನುಗಾರರ ಬೋಟ್‌ಗಳ ಸಹಾಯವನ್ನೂ ಪಡೆಯಬೇಕಾಗುತ್ತದೆ ಎಂದು ಹೇಳಿದರು.

ಮಳೆಗೆ ಜಿಲ್ಲೆಯಲ್ಲಿ ಇಬ್ಬರು ಮೃತ ಪಟ್ಟಿದ್ದಾರೆ. ಆ ಕುಟುಂಬಕ್ಕೆ ಆದಷ್ಟು ಬೇಗ ಪರಿಹಾರ ನೀಡಲಾಗುವುದು. ಎರಡು ದಿನಗಳಲ್ಲಿ 12 ಸಹಿತ ಒಟ್ಟು 929 ಮನೆಗಳಿಗೆ ಹಾನಿಯಾಗಿದೆ. 803 ಪಕ್ಕಾ ಮನೆಗಳ ಪೈಕಿ 727 ಮನೆಗಳಿಗೆ ಪರಿಹಾರ ನೀಡಲಾಗಿದೆ. 118 ಕಚ್ಚಾ ಮನೆಗಳ ಪೈಕಿ 102 ಮನೆಗಳಿಗೆ ಪರಿಹಾರ ವಿತರಿಸಲಾಗಿದೆ. ಈ ವರೆಗೆ 10 ಮಂದಿ ಸಾವನ್ನಪ್ಪಿದ್ದಾರೆ ಎಂದರು.

ಇಲ್ಲಿಯವರೆಗೆ 1,451 ಮಿ.ಮೀ. ವಾಡಿಕೆ ಮಳೆಯಾಗಬೇಕಿತ್ತು. ಆದರೆ 1,957.8 ಮಿ.ಮೀ. ಮಳೆಯಾಗಿದೆ. ಪ್ರಕೃತಿ ವಿಕೋಪ ಸಂಭವಿಸಿದ ಸಮಯದಲ್ಲಿ ಪರಿಹಾರ ನೀಡಲು ಸಮಸ್ಯೆಯಿದ್ದ ನಿಯಮ ಬದಲಾಗಿದ್ದು, ಶೇ. 45ರ ವರೆಗೆ ಮನೆ ಹಾನಿ ಸಂಭವಿಸಿದರೆ 42,795 ರೂ., ಶೇ. 68ರಷ್ಟು ಹಾನಿ ಸಂಭವಿಸಿದರೆ 64,000 ರೂ. ಮತ್ತು ಅದಕ್ಕೂ ಜಾಸ್ತಿ ಹಾನಿ ಸಂಭವಿಸಿದರೆ 95,000 ರೂ. ಪರಿಹಾರ ನೀಡಲಾಗುವುದು. ಪ್ರಾಣ ಹಾನಿ ಸಂಭವಿಸಿದರೆ 5 ಲಕ್ಷ ರೂ. ಪರಿಹಾರ ನೀಡಲಾಗುತ್ತಿದೆ ಎಂದರು.

ಪರ್ಯಾಯ ವಸತಿ ವ್ಯವಸ್ಥೆ 
ಪುತ್ತೂರು ತಾಲೂಕು ಸಹಾಯಕ ಆಯುಕ್ತ ಕೃಷ್ಣಮೂರ್ತಿ  ಮಾತನಾಡಿ, ಉಪ್ಪಿನಂಗಡಿಯಲ್ಲಿ ಕುಮಾರಧಾರಾ ಮತ್ತು ನೇತ್ರಾವತಿ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು, ಒಂದು ವೇಳೆ ಸಂಗಮವಾದರೆ ಸುಮಾರು 18 ಮನೆಗಳು ಸೇರಿದಂತೆ ಸುಮಾರು 2 ಎಕರೆ ಪ್ರದೇಶ ಮುಳುಗಡೆಯಾಗಲಿದೆ. ಈ ಸಮಯದಲ್ಲಿ ಉಪ್ಪಿನಂಗಡಿ ಕಾಲೇಜಿನಲ್ಲಿ ವಸತಿ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.

ಪರಿಕರ ವಿತರಣೆ
ಸಿಆರ್‌ಎಫ್‌ ನಿಧಿಯ 22 ಲಕ್ಷ ರೂ. ಅನುದಾನದಿಂದ 8 ಬೋಟ್‌, 3 ಸ್ಕೂಬಾ ಡ್ರೈವಿಂಗ್‌ ಸೆಟ್‌, 4 ಪೆಟ್ರೋಲ್‌ ಡ್ರಿವಿನ್‌ ಚೈನ್‌, ಟ್ರೀ ಕಟ್ಟರ್‌ ಯಂತ್ರವನ್ನು ಸಚಿವ ಯು.ಟಿ. ಖಾದರ್‌ ಇದೇ ವೇಳೆ ಅಗ್ನಿಶಾಮಕ ಇಲಾಖೆಗೆ ವಿತರಿಸಿದರು. 

ಟಾಪ್ ನ್ಯೂಸ್

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

20

UV Fusion: ವಿಘ್ನ ವಿನಾಯಕನಿಗೆ ನಮನ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drinking Water198 ಕೋ.ರೂ.ವೆಚ್ಚದ ಶಾಶ್ವತ ಕುಡಿಯುವ ನೀರಿನ ಯೋಜನೆ: ಇಂದು ಪ್ರಾಯೋಗಿಕ ಚಾಲನೆ

Drinking Water198 ಕೋ.ರೂ.ವೆಚ್ಚದ ಶಾಶ್ವತ ಕುಡಿಯುವ ನೀರಿನ ಯೋಜನೆ: ಇಂದು ಪ್ರಾಯೋಗಿಕ ಚಾಲನೆ

ಈಗ ಮಂಗಳೂರಿನ ಗಾಳಿಯೂ ಕಲುಷಿತ! ಬೆಂಗಳೂರು, ಮೈಸೂರಿನಲ್ಲೂ ಮಾಲಿನ್ಯ ಅಪಾಯಕಾರಿ ಮಟ್ಟದಲ್ಲಿ

ಈಗ ಮಂಗಳೂರಿನ ಗಾಳಿಯೂ ಕಲುಷಿತ! ಬೆಂಗಳೂರು, ಮೈಸೂರಿನಲ್ಲೂ ಮಾಲಿನ್ಯ ಅಪಾಯಕಾರಿ ಮಟ್ಟದಲ್ಲಿ

Surathkal ನಾಲ್ಕು ತಿಂಗಳ ಮಗುವಿಗೆ ಥೈರಾಯ್ಡ್ ಎಂದ ವೈದ್ಯರು!

Surathkal ನಾಲ್ಕು ತಿಂಗಳ ಮಗುವಿಗೆ ಥೈರಾಯ್ಡ್ ಎಂದ ವೈದ್ಯರು!

Rain ಕರಾವಳಿಯಲ್ಲಿ ಎಲ್ಲೋ ಅಲರ್ಟ್‌

Rain ಕರಾವಳಿಯಲ್ಲಿ ಎಲ್ಲೋ ಅಲರ್ಟ್‌

Campco ಸದಸ್ಯತ್ವ ಚೀಟಿ ದುರ್ಬಳಕೆ ಮಾಡಿ ಕಳಪೆ ಅಡಿಕೆ ಮಾರಾಟ ಯತ್ನ

Campco ಸದಸ್ಯತ್ವ ಚೀಟಿ ದುರ್ಬಳಕೆ ಮಾಡಿ ಕಳಪೆ ಅಡಿಕೆ ಮಾರಾಟ ಯತ್ನ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

2-desiswara-1

Teacher: ಗುರಿಯೊಂದಿಗೆ ಗುರುಕೃಪೆಯಿದ್ದರೆ ಯಶ

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

1-teachers-day

Teacher’s Day ವಿಶೇಷ: ವಿಚಾರ ವಿನಿಮಯ ಶಿಕ್ಷಣದ ಸುತ್ತ: ಆಲೋಚನೆಯಲ್ಲಿ ವೈವಿಧ್ಯತೆ ಇರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.