ನಿರಂತರ ಮಳೆ: ದ.ಕ. ಜಿಲ್ಲೆ: ಅಪಾಯದ ಮಟ್ಟ ತಲುಪಿದ ಪ್ರಮುಖ ನದಿಗಳು


Team Udayavani, Jul 8, 2018, 6:00 AM IST

v-42.jpg

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ಬೆಳಗ್ಗಿನಿಂದ ಸಂಜೆವರೆಗೆ ಸುರಿದ ಮಳೆಗೆ ಪುತ್ತೂರು ತಾಲೂಕಿನಲ್ಲಿ  ಇಬ್ಬರು ಮೃತಪಟ್ಟಿದ್ದಾರೆ.  ಜಿಲ್ಲೆಯ ನದಿಗಳು ಪ್ರಮುಖ ನದಿಗಳು ಅಪಾಯದ ಮಟ್ಟ ತಲುಪುತ್ತಿದ್ದು, ಪ್ರವಾಹದ ಆತಂಕ ಎದುರಾಗಿದೆ.

ಪುತ್ತೂರು, ಸುಳ್ಯ, ಬೆಳ್ತಂಗಡಿ ತಾಲೂಕುಗಳಲ್ಲಿ ಶನಿವಾರ ಶಾಲೆಗಳಿಗೆ ರಜೆ ನೀಡಲಾಗಿತ್ತು. ಮಳೆಯಿಂದಾಗಿ ಹಲವೆಡೆ ಭೂಕುಸಿತ ಸಂಭವಿಸಿದೆ, ತಗ್ಗು ಪ್ರದೇಶ ಹಾಗೂ ನದಿ ತೀರದ ಮನೆಗಳಿಗೂ ನೀರು ನುಗ್ಗಿದ್ದು ಅಪಾರ ಹಾನಿ ಸಂಭವಿಸಿದೆ. ಮಂಗಳೂರು ನಗರದ ಹೊರ ವಲಯದಲ್ಲಿ ಇತ್ತೀಚೆಗೆ ಸೇತುವೆ ಕುಸಿತ ಸಂಭವಿಸಿದ ಮೂಲರ ಪಟ್ಣದಲ್ಲಿ ತೂಗು ಸೇತುವೆಗೆ ಸಂಪರ್ಕಿಸುವ ರಸ್ತೆ ಜಲಾಮಯವಾಗಿತ್ತು. ಸೂರಿಂಜೆ ಮತ್ತು ಶಿಬರೂರು ಪ್ರದೇಶಗಳಲ್ಲಿ ನಂದಿನಿ ನದಿಯ ನೀರು ಉಕ್ಕಿ ಹರಿದ ಪರಿಣಾಮ ಹಲವು ಮನೆಗಳು ಜಲಾವೃತವಾಗಿದ್ದು, 16 ಮಂದಿಯನ್ನು ಅಗ್ನಿ ಶಾಮಕ ದಳ ಮತ್ತು ಪೊಲೀಸರು ದೋಣಿಯಲ್ಲಿ ರಕ್ಷಿಸಿದರು.

85 ಮನೆ ಜಲಾವೃತ
ಕೆಮ್ರಾಲ್‌ ಗ್ರಾ.ಪಂ. ವ್ಯಾಪ್ತಿಯ ಪಕ್ಷಿಕೆರೆಯ ಪಂಜ, ಉಲ್ಯ, ಕೊಯಿ ಕುಡೆಯಲ್ಲಿ 70 ಮನೆಗಳು ಜಲಾವೃತ ಗೊಂಡಿವೆ. ಪಂಜ ನಂದಿನಿ ನದಿ ಬಳಿ ರಸ್ತೆ ಮುಳುಗಡೆಯಾಗಿದೆ. ಕಟೀಲಿನ ಮಿತ್ತಬೈಲ್‌ಗೆ ಸಂಪರ್ಕ ಕಲ್ಪಿಸುವ ರಸ್ತೆ ಜಲಾವೃತಗೊಂಡಿದೆ. ಬಳಕುಂಜೆಯಲ್ಲಿ ಮುಗೇರ ಬೈಲು ಪ್ರದೇಶದಲ್ಲಿ 15 ಮನೆಗಳಿದ್ದು ನೀರಿನ ಮಟ್ಟ ಹೆಚ್ಚಾದರೆ ಸಂಪರ್ಕ ಕಳೆದುಕೊಳ್ಳಲಿವೆ. ಕಿಲೆಂಜೂರಿನಲ್ಲಿ ಜನರನ್ನು ರಕ್ಷಿಸಲಾಗಿದೆ. ಸಂತ್ರಸ್ತರಿಗಾಗಿ ಗಂಜಿ ಕೇಂದ್ರ ತೆರೆಯಲಾಗಿದೆ.

ಬೆಳ್ತಂಗಡಿ: 2 ಮನೆಗೆ ಹಾನಿ
ಬೆಳ್ತಂಗಡಿ ತಾಲೂಕಿನ ನಾವೂರು ಹಾಗೂ ಲಾೖಲ ಗ್ರಾಮದಲ್ಲಿ ಎರಡು ಮನೆಗಳಿಗೆ ಹಾನಿ ಮತ್ತು ಬೆಳ್ತಂಗಡಿ ಪೇಟೆಯ ಅಂಗಡಿಯ ಗೋದಾಮು ಕುಸಿದಿದೆ. ಲಾೖಲ ಗ್ರಾಮದ ಗುರಿಂಗಾಣ ನಿವಾಸಿ ರಮೇಶ್‌ ಅವರ ಮನೆಗೆ ಹಲಸಿನ ಮರ ಬಿದ್ದು, ಮನೆಯ ಒಂದು ಭಾಗ ಜಖಂಗೊಂಡಿದೆ.

ಚಾರ್ಮಾಡಿ ಬ್ಲಾಕ್‌
ಶುಕ್ರವಾರ ರಾತ್ರಿ 11ರ ಸುಮಾರಿಗೆ ಚಾರ್ಮಾಡಿ ಘಾಟ್‌ ರಸ್ತೆಯಲ್ಲಿ ಗೂಡ್ಸ್‌ ಲಾರಿಯೊಂದು ಬಾಕಿಯಾದ ಪರಿಣಾಮ ಕೊಂಚ ಹೊತ್ತು ಟ್ರಾಫಿಕ್‌ ಜಾಮ್‌ ಇತ್ತು. ಬಳಿಕ ಸ್ಥಳೀಯರು ಹಾಗೂ ಪೊಲೀಸರು ಸೇರಿ ಲಾರಿಯನ್ನು ಬದಿಗೆ ಸರಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
ಪುತ್ತೂರು ಕೆದಿಲದಲ್ಲಿ ಶನಿವಾರ ಬರೆ ಜರಿದು ಚಂದಪ್ಪ ಹಾಗೂ ಪೂವಮ್ಮ ಎಂಬವರು ಗಾಯಗೊಂಡಿದ್ದಾರೆ. ಮೂಡಬಿದಿರೆಯ ಕಡಂದಲೆಯ ಶಾಂಭವಿ ನದಿ ಬದಿಯ 4 ಮನೆಗಳಿಗೆ ನೀರು ನುಗ್ಗಿದ್ದು ನಿವಾಸಿಗಳನ್ನು  ಬೇರೆಡೆಗೆ ಸ್ಥಳಾಂತರಿಸಲಾಗಿದೆ. ಪೊಳಲಿ ಭಾಗದಲ್ಲಿ ಫಲ್ಗುಣಿ ಉಕ್ಕಿ ಹರಿದಿದ್ದು ಅಡೂxರು, ಪೊಳಲಿ ಪ್ರದೇಶಗಳಲ್ಲಿ ಇನ್ನಷ್ಟು ಮಳೆ ಬಂದರೆ ಅಪಾಯ ಉಂಟಾಗಲಿದೆ. 

ಕೃತಕ ನೆರೆ: ನೋಟಿಸ್‌
ಬಂಟ್ವಾಳ ಬಿ.ಮೂಡ ಗ್ರಾಮದ ಭಂಡಾರಿಬೆಟ್ಟು ಪ್ರದೇಶದಲ್ಲಿ ಗ್ಯಾರೇಜ್‌ ಮತ್ತು ವಸತಿ ಸಂಕೀರ್ಣ ನಿರ್ಮಾಣ ಸಂದರ್ಭ ಚರಂಡಿ ಮುಚ್ಚಿದ ಕಾರಣ ಕೃತಕ ನೆರೆ ತಲೆದೋರಿದೆ. ಸಾರ್ವಜನಿಕರ ದೂರಿನಂತೆ ಗ್ಯಾರೇಜ್‌ ಮತ್ತು ವಸತಿ ಸಂಕೀರ್ಣದ ಮಾಲಕರಿಗೆ ಪುರಸಭೆ ಮುಖ್ಯಾಧಿಕಾರಿ ನೋಟಿಸ್‌ ಜಾರಿ ಮಾಡಿದ್ದಾರೆ.

ಮಂಗಳೂರು ನಗರದಲ್ಲಿ ತಗ್ಗು ಪ್ರದೇಶದ ರಸ್ತೆಗಳಲ್ಲಿ ನೀರು ತುಂಬಿ ನಿಂತ ಪರಿಣಾಮ ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿತ್ತು. ಉರ್ವ ಗಾಂಧಿನಗರ ಸರಕಾರಿ ಶಾಲೆಯ ಬಳಿ ಆವರಣ ಗೋಡೆ ಕುಸಿದಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ. ಬಾವುಟಗುಡ್ಡೆಯ ಕೇಂದ್ರ ಗ್ರಂಥಾಲಯದ ಬಳಿ ಆವರಣ ಗೋಡೆಯ ಒಂದು ಭಾಗ ಕುಸಿದು ಬಿದ್ದ ಘಟನೆ ನಡೆದಿದೆ. ನಗರದಲ್ಲಿಯೂ ಕೆಲವು ಶಾಲೆಗಳಿಗೂ ಮಳೆ ಕಾರಣ ರಜೆ ಸಾರಲಾಗಿತ್ತು. ಪಣಂಬೂರು ಕೂರಿಕಟ್ಟದಲ್ಲಿ ತಮಿಳ್ನಾಡು ಮೂಲದ ಎರಡು ಕೂಲಿ ಕಾರ್ಮಿಕ ಕುಟುಂಬಗಳ ಡೇರೆ ಸಮುದ್ರ ಪಾಲಾಗಿದೆ.

ನಳಿನ್‌ ರಾಂಚಿಯಿಂದ ವಾಪಸ್‌
ಮಳೆಯಿಂದ ಹಾನಿ ಉಂಟಾಗಿರುವ ಹಿನ್ನೆಲೆಯಲ್ಲಿ ಸಂಸದ ನಳಿನ್‌ ಕುಮಾರ್‌ ರಾಂಚಿ ಪ್ರವಾಸವನ್ನು ಮೊಟಕುಗೊಳಿಸಿ ಶನಿವಾರ ರಾತ್ರಿ ಮಂಗಳೂರಿಗೆ ಮರಳಿದ್ದಾರೆ. ಕೇಂದ್ರ ಸರಕಾರದ ಕೃಷಿ ಸಮಿತಿಯ ರಾಂಚಿ ಹಾಗೂ ಪಾಟ್ನಾ ಅಧ್ಯಯನ ಪ್ರವಾಸ ಜು.7ರಿಂದ 11ರ ವರೆಗೆ ನಿಗದಿಯಾಗಿತ್ತು.

ಭಾರೀ ಮಳೆ: ಮುನ್ನೆಚ್ಚರಿಕೆ
ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಮಂಗಳೂರು ನಗರ ಸೇರಿದಂತೆ, ಜಿಲ್ಲೆಯಾದ್ಯಂತ ಇನ್ನೂ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ. ಜಿಲ್ಲೆಯ ತಾಲೂಕು ಕೇಂದ್ರಗಳಲ್ಲಿ ಕಂಟ್ರೋಲ್‌ ರೂಂ ತೆರೆದಿದ್ದು, ಸಾರ್ವಜನಿಕರು ಸಂಪರ್ಕಿಸಬಹುದು.
ಮಂಗಳೂರು 0824-2220587 ಅಥವಾ 2220596
ಬಂಟ್ವಾಳ 08255-232120/232500
ಪುತ್ತೂರು 08251-230349/232799
ಬೆಳ್ತಂಗಡಿ 08256-232047/233123
ಸುಳ್ಯ 08257-230330/231231, 
ಮೂಡಬಿದಿರೆ 08258-238100/239900
ಕಡಬ 08251-260435, ಮೂಲ್ಕಿ 0824-2294496
ಮಹಾನಗರ ಪಾಲಿಕೆ 0824-2220306

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drinking Water198 ಕೋ.ರೂ.ವೆಚ್ಚದ ಶಾಶ್ವತ ಕುಡಿಯುವ ನೀರಿನ ಯೋಜನೆ: ಇಂದು ಪ್ರಾಯೋಗಿಕ ಚಾಲನೆ

Drinking Water198 ಕೋ.ರೂ.ವೆಚ್ಚದ ಶಾಶ್ವತ ಕುಡಿಯುವ ನೀರಿನ ಯೋಜನೆ: ಇಂದು ಪ್ರಾಯೋಗಿಕ ಚಾಲನೆ

ಈಗ ಮಂಗಳೂರಿನ ಗಾಳಿಯೂ ಕಲುಷಿತ! ಬೆಂಗಳೂರು, ಮೈಸೂರಿನಲ್ಲೂ ಮಾಲಿನ್ಯ ಅಪಾಯಕಾರಿ ಮಟ್ಟದಲ್ಲಿ

ಈಗ ಮಂಗಳೂರಿನ ಗಾಳಿಯೂ ಕಲುಷಿತ! ಬೆಂಗಳೂರು, ಮೈಸೂರಿನಲ್ಲೂ ಮಾಲಿನ್ಯ ಅಪಾಯಕಾರಿ ಮಟ್ಟದಲ್ಲಿ

Surathkal ನಾಲ್ಕು ತಿಂಗಳ ಮಗುವಿಗೆ ಥೈರಾಯ್ಡ್ ಎಂದ ವೈದ್ಯರು!

Surathkal ನಾಲ್ಕು ತಿಂಗಳ ಮಗುವಿಗೆ ಥೈರಾಯ್ಡ್ ಎಂದ ವೈದ್ಯರು!

Rain ಕರಾವಳಿಯಲ್ಲಿ ಎಲ್ಲೋ ಅಲರ್ಟ್‌

Rain ಕರಾವಳಿಯಲ್ಲಿ ಎಲ್ಲೋ ಅಲರ್ಟ್‌

Campco ಸದಸ್ಯತ್ವ ಚೀಟಿ ದುರ್ಬಳಕೆ ಮಾಡಿ ಕಳಪೆ ಅಡಿಕೆ ಮಾರಾಟ ಯತ್ನ

Campco ಸದಸ್ಯತ್ವ ಚೀಟಿ ದುರ್ಬಳಕೆ ಮಾಡಿ ಕಳಪೆ ಅಡಿಕೆ ಮಾರಾಟ ಯತ್ನ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.