ಮುಳುಗಡೆ ಪಟ್ಟಿಯಲ್ಲಿ  ಗ್ರಾಮ ಸೇರಿಸಿ


Team Udayavani, Jul 8, 2018, 4:42 PM IST

8-july-24.jpg

ಅಥಣಿ: ಕೃಷ್ಣಾ ನದಿ ದಡದ ಗ್ರಾಮಗಳು ಹಿಪ್ಪರಗಿ ಆಣೆಕಟ್ಟಿನ ಹಿನ್ನೀರಿನಿಂದ ಬಾಧಿತವಾಗಿ ಮುಳುಗಡೆಯಾಗುತ್ತವೆ ಅದರಲ್ಲಿ ಸತ್ತಿಗ್ರಾಮ ಕೃಷ್ಣಾ ನದಿಗೆ ಮಹಾಪೂರ ಬಂದಾಗ ನಡುಗಡ್ಡೆಯಾಗಿ ಪರಿವರ್ತನೆಯಾಗುವುದರಿಂದ ಸತ್ತಿ ಗ್ರಾಮವನ್ನು ಸಂಪೂರ್ಣವಾಗಿ ಮುಳುಗಡೆಗೆ ಒಳಪಡಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಶಾಸಕ ಮಹೇಶ ಕುಮಠಳ್ಳಿ ಹೇಳಿದರು.

ನೀರಾವರಿ ಇಲಾಖೆಯ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಹಲವಾರು ಗ್ರಾಮಗಳು ಇನ್ನು ಭೌಗೋಳಿಕವಾಗಿ ಮುಳುಗಡೆ ಆಗುತ್ತಿದ್ದರೂ ಕೆಲ ಗ್ರಾಮಗಳು ಗಮನಕ್ಕೆ ಬಾರದೇ ಉಳಿದಿದ್ದು, ಅಂತಹ ಗ್ರಾಮಗಳನ್ನು ಪಟ್ಟಿಯಲ್ಲಿ ಸೇರಿಸಲು ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಅಧಿಕಾರಿಗಳು ಈ ಕುರಿತು ಪ್ರಸ್ತಾವನೆ ಸಿದ್ಧಪಡಿಸಲಿದ್ದಾರೆ. ಹಿಪ್ಪರಗಿ ಹಿನ್ನೀರಿನಿಂದ ಬಾಧಿತವಾಗುವ ಹಳ್ಳಿಗಳನ್ನು ಪಟ್ಟಿಯಲ್ಲಿ ಸೇರಿಸುವಂತೆ ಸೂಚಿಸಿದರು.

ಹಿಪ್ಪರಗಿ ಅಣೆಕಟ್ಟಿನ ಹಿನ್ನೀರಿನಿಂದ ಬಾಧಿತವಾಗುವ ಗ್ರಾಮಗಳ ಗ್ರಾಮಸ್ಥರು ಸೂಕ್ತ ಪುನರ್ವಸತಿ ಕೇಂದ್ರ ನಿರ್ಮಿಸಿ, ಸ್ಥಳಾಂತರಿಸಲು ಜನರಲ್ಲಿ ಜಾಗೃತಿ ಮೂಡಿಸುವಂತೆ ಅಧಿ ಕಾರಿಗಳಿಗೆ ಸೂಚನೆ ನೀಡಿದವರು. ನೀರಾವರಿ ಸೌಲಭ್ಯದಿಂದ ವಂಚಿತಗೊಂಡ ಗ್ರಾಮಗಳಿಗೆ ತುಂತುರು ನೀರಾವರಿ ಸೌಲಭ್ಯ ಕಲ್ಪಿಸಲಾಗುವುದು. ಕೆರೆ ಹಾಗೂ ಅಗ್ರಾಣಿ ನದಿಗಳ ಬಾಂದಾರಗಳಿಗೆ ನೀರು ತುಂಬಿಸುವ ಯೋಜನೆಗೆ ಪ್ರಸ್ತಾವನೆ ತಯಾರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅಥಣಿ ಮತಕ್ಷೇತ್ರದಲ್ಲಿ ರೈತರ ಮೂಲ ಸಮಸ್ಯೆಯಾಗಿರುವ ಸವುಳು- ಜವುಳು ಸಮಸ್ಯೆಯಿಂದ ಬಳಲುತ್ತಿರುವ ಗ್ರಾಮಗಳಿಗೆ ಕೊಳವೆ ಮುಖಾಂತರ ಆಧುನಿಕ ತಂತ್ರಜ್ಞಾನ ಅಳವಡಿಸಿ ಈ ಸಮಸ್ಯೆಯನ್ನು ಪರಿಹರಿಸುವ ಪ್ರಸ್ತಾವನೆ ತಯಾರಿಸಿ ರಾಜ್ಯ ಸರ್ಕಾರಕ್ಕೆ ಸಲ್ಲಿಸಲು ಇಲಾಖೆಗೆ ಸೂಚಿಸಲಾಗಿದೆ. ಈಗಾಗಲೆ ಕರಿ ಮಸೂತಿ, ಹಲ್ಯಾಳ ಹಾಗೂ ಸಾವಳಗಿ ತುಂಗಳ ಏತ ನೀರಾವರಿ ಯೋಜನೆಗಳಿಗೆ ಜೂ.29 ರಿಂದ ಕಾಲುವೆಗಳಿಗೆ ಕೃಷ್ಣಾ ನದಿ ನೀರನ್ನು ಹರಿ ಬಿಡಲಾಗಿದೆ. ಎಲ್ಲ ರೈತರು ನೀರಾವರಿ ಸೌಲಭ್ಯದ ಸದುಪಯೋಗ ಮಾಡಿಕೊಳ್ಳಲು ತಿಳಿಸಿದರು. ನೀರಾವರಿ ಇಲಾಖೆಯ ಅಧಿಕಾರಿಗಳೊಂದಿಗೆ ಅನೇಕ ಗ್ರಾಮಗಳಲ್ಲಿರುವ ನೀರಿನ ಕೊರತೆ ಹಾಗೂ ಅನುಕೂಲಗಳ ಕುರಿತು ಚರ್ಚಿಸಲಾಯಿತು. ಈ ವೇಳೆ ನೀರಾವರಿ ಇಲಾಖೆಯ ಕಾರ್ಯಪಾಲಕ ಅಭಿಯಂತ ಜಿ.ಎಸ್‌. ಬುರ್ಲಿ, ಸಹಾಯಕ ಕಾರ್ಯಪಾಲಕ ಅಭಿಯಂತ ಅರುಣ ಯಲಗುದ್ರಿ, ಪ್ರವೀಣ ಹುಂಚಿಕಟ್ಟಿ, ಪಿ.ಕೆ. ಶಂಕರ, ಬಿ.ಎಸ್‌.ಯಾದವಾಡ, ಸತೀಶ ಮಿರ್ಜಿ, ಎಂ.ಬಿ.ಇಮ್ಮಡಿ, ಅಶೋಕ ಅಸ್ಕಿ, ಸತ್ಯಪ್ಪಾ ಬಾಗೇನ್ನವರ, ನಿಂಗಾಪ್ಪ ನಂದೇಶ್ವರ ಸೇರಿದಂತೆ ಅನೇಕರು ಇದ್ದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

8

Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು

Hubli: Police seize Rs 89.99 lakhs being transported without documents

Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್‌ ವಶಕ್ಕೆ

ED summons case: Temporary relief for Siddaramaiah’s wife Parvathi, Bairati Suresh

ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.