ಬದಲಾಗುತ್ತಾ  ಚಾಲುಕ್ಯರ ನಾಡು?


Team Udayavani, Jul 8, 2018, 5:35 PM IST

8-july-28.jpg

ಬಾಗಲಕೋಟೆ: ಅದ್ಭುತ ನಿರ್ಮಾಣದ ಮೂಲಕ ವಿಶ್ವದ ಗಮನ ಸೆಳೆಯುವ ಚಾಲುಕ್ಯ ಅರಸರ ಕಾಲದ ಜಿಲ್ಲೆಯ ಪ್ರವಾಸಿ ತಾಣಗಳ ಹಣೆ ಬರಹ ಇನ್ನಾದರೂ ಬದಲಾಗುತ್ತಾ? ಎಂಬ ನಿರೀಕ್ಷೆ ಹೆಚ್ಚಿದೆ. ಈ ನಿರೀಕ್ಷೆ ಹೆಚ್ಚಲು, ಮಾಜಿ ಮುಖ್ಯಮಂತ್ರಿಯೊಬ್ಬರು ಬಾದಾಮಿ ಕ್ಷೇತ್ರ ಪ್ರತಿನಿಧಿಸುತ್ತಿರುವುದು ಕಾರಣ. ಜತೆಗೆ ಅವರು ಶಾಸಕರಾದ ಬಳಿಕ ಬಾದಾಮಿ ಕ್ಷೇತ್ರದ ಹಲವು ಪ್ರಮುಖ ಹಾಗೂ ಬಹು ವರ್ಷಗಳ ಬೇಡಿಕೆಗಳತ್ತ ಗಮನ ಹರಿಸುತ್ತಿರುವುದು, ಬಾದಾಮಿ ಕ್ಷೇತ್ರದ ಜನರ ನಿರೀಕ್ಷೆ ಹೆಚ್ಚಲು ಮತ್ತಷ್ಟು ಕಾರಣವಾಗಿದೆ. ಸಿದ್ದರಾಮಯ್ಯ ಅವರು, ಬಾದಾಮಿ ಕ್ಷೇತ್ರದ ಶಾಸಕರಾದ ಬಳಿಕ ಮುಖ್ಯವಾಗಿ ನೇಕಾರರ ಸಮಸ್ಯೆಗೆ ಮುಕ್ತಿ ಕೊಡುವ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿದ್ದಾರೆ. ಆದರೆ, ಐದು ವರ್ಷ ತಾವೇ ಸಿಎಂ ಆಗಿದ್ದಾಗ ಮಾಡದ ಕೆಲಸ, ಈಗ ಹಾಲಿ ಸಿಎಂಗೆ ಒತ್ತಡ ತಂದರೆ ಬೇಡಿಕೆ ಈಡೇರುತ್ತಾ ಎಂಬ ಮಾತೂ ಇನ್ನೊಂದೆಡೆ ಕೇಳಿ ಬರುತ್ತಿದೆ.

ಅದೆನೇ ಇದ್ದರೂ, ಗುಳೇದಗುಡ್ಡದ ನೇಕಾರರ ಒಕ್ಕೂಟ ಮಾಡಿಕೊಂಡ ಮನವಿಗೆ ಸ್ಪಂದಿಸಿ, ನೇಕಾರರ ವಲಸೆ ಹಾಗೂ ಅವರ ಜೀವನೋಪಾಯಕ್ಕೆ ನೆರವಾಗುವ ನಿಟ್ಟಿನಲ್ಲಿ ಜವಳಿ ಪಾರ್ಕ್‌, ಪವರ್‌ಲೂಮ್‌ ಮತ್ತು ಗಾರ್ಮೆಂಟ್‌ ಉದ್ಯಮ ನಿರ್ಮಿಸಿ, ಗುಳೇದಗುಡ್ಡಕ್ಕೆ ಶಾಶ್ವತ ಉದ್ಯೋಗ ಕಲ್ಪಿಸಲು ಮುಂದಾಗುವಂತೆ ಹಾಲಿ ಸಿಎಂಗೆ ಪತ್ರ ಬರೆದಿದ್ದಾರೆ. ಮಾಜಿ ಸಿಎಂವೊಬ್ಬರ ಹಾಗೂ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದರಿಂದ ಸಿದ್ದರಾಮಯ್ಯ ಅವರ ಪತ್ರಕ್ಕೆ ಹೆಚ್ಚು ಮಾನ್ಯತೆ ನೀಡಿ, ಸಂಬಂಧಿಸಿದ ಇಲಾಖೆಗೆ ಸಮಗ್ರ ಕಡತ ನೀಡಲು ಹಾಲಿ ಸಿಎಂ ಸೂಚನೆ ನೀಡಿದ್ದಾರೆ. ಆದರೆ, ಈ ಬೇಡಿಕೆ ಪ್ರಸಕ್ತ ಬಜೆಟ್‌ನಲ್ಲೇ ಘೋಷಣೆಯಾಗಲಿವೆ ಎಂಬ ನೇಕಾರರ ನಿರೀಕ್ಷೆ ಹುಸಿಯಾಗಿದೆ. ಅಲ್ಲದೇ ಬಾದಾಮಿ ತಾಲೂಕಿನ ಪರ್ವತಿಕೆರೆ, ಹಿರೇಕೆರೆ, ಗಂಜಿಕೆರೆಗೆ ಮಲಪ್ರಭಾ ನದಿಯ ಆಸಂಗಿ ಬ್ಯಾರೇಜ್‌ನಿಂದ ನೀರು ತುಂಬಿಸಲು ಸಣ್ಣ ನೀರಾವರಿ ಇಲಾಖೆಯಿಂದ 12 ಕೋಟಿ ಮೊತ್ತದ ಪ್ರಸ್ತಾವನೆ ಸಿದ್ಧಗೊಂಡಿದೆ. ಇದಕ್ಕೆ ಅನುಮೋದನೆ ಕೊಡಿಸಿ, ನೀರು ತುಂಬಿಸುವ ಕೆಲಸ ಮಾಡಿದರೆ, ಗುಳೇದಗುಡ್ಡ ನಗರವೂ ಸೇರಿ ಸುತ್ತಲು ಅಂತರ್ಜಲ ವೃದ್ಧಿಗೊಂಡು ಜನ- ಜಾನುವಾರುಗಳಿಗೆ ನೀರಿನ ಸಮಸ್ಯೆ ನೀಗಲಿದೆ.

ರಂಗಸಮುದ್ರ-ಕೆಂದೂರ ಕೆರೆಗೂ ನೀರು:
ಇನ್ನು ಜಿಲ್ಲೆಯಲ್ಲಿ ಅದ್ಭುತ ನಿರ್ಮಾಣದ ಮೂಲಕ ಗಮನ ಸೆಳೆಯುವ ರಂಗಸಮುದ್ರ ಕೆರೆ ಹಾಗೂ 2ನೇ ಅತಿದೊಡ್ಡ ಕೆರೆ ಎಂಬ ಖ್ಯಾತಿ ಪಡೆದ ಕೆಂದೂರ ಕೆರೆಗೆ ನೀರು ತುಂಬಿಸಲು ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳೊಂದಿಗೆ ಸಿದ್ದರಾಮಯ್ಯ ಚರ್ಚೆ ನಡೆಸಿ, ಯೋಜನೆ ರೂಪಿಸಲು ಸೂಚನೆ ನೀಡಿದ್ದಾರೆ. ಅದು ಶೀಘ್ರ ಜಾರಿಗೊಳ್ಳಲಿ ಎಂಬುದು ಕ್ಷೇತ್ರದ ಜನರ ಒತ್ತಾಯ.

ಸಿದ್ದರಾಮಯ್ಯ ಅವರು, ಶನಿವಾರ ಲೋಕೋಪಯೋಗಿ ಇಲಾಖೆ, ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿ, ಪ್ರವಾಸಿ ತಾಣಗಳ ಸಮಗ್ರ ಆಭಿವೃದ್ಧಿ ಜತೆಗೆ ಮೂಲ ಸೌಲಭ್ಯ ಕಲ್ಪಿಸಲು ಏನೇನು ಯೋಜನೆ ಜಾರಿಗೊಳಿಸಬೇಕು ಎಂಬುದರ ಕುರಿತ ಯೋಜನೆ ಸಿದ್ಧಪಡಿಸಿ ಕೊಡಲು ಸೂಚಿಸಿದ್ದಾರೆ. ಈಗ ಲೋಕೋಪಯೋಗಿ ಇಲಾಖೆಯ ಎಸ್‌ಇ ಸುರೇಶ ಅವರು ಬಾಗಲಕೋಟೆಗೆ ಬಂದು ಯೋಜನೆ ತಯಾರಿಸುತ್ತಿದ್ದಾರೆ.
.ಹೊಳೆಬಸು ಶೆಟ್ಟರ,
ಸಿದ್ದರಾಮಯ್ಯ ಆಪ್ತ

ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

mutalik (2)

B.C.Road ಏನು ಅಫ್ಘಾನಿಸ್ಥಾನ,ಪಾಕಿಸ್ಥಾನದಲ್ಲಿ ಇದೆಯಾ?: ಮುತಾಲಿಕ್ ಕಿಡಿ

ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ

Hubli: ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ

ShreeKanth

Meet Friends: ಧಾರವಾಡದ ಹಳೆಯ ಗೆಳೆಯರ ಭೇಟಿಯಾದ ತೆಲುಗು ನಟ ಶ್ರೀಕಾಂತ್

Hubli: ಬೈಕಲ್ಲಿ ಹೋಗುತ್ತಿದ್ದಾಗ ತಲೆಗೆ ರಾಡ್‌ ಬಿದ್ದು ಗಾಯಗೊಂಡಿದ್ದ ಎಎಸ್‌ಐ ಸಾವು

Hubli: ಬೈಕಲ್ಲಿ ಹೋಗುತ್ತಿದ್ದಾಗ ತಲೆಗೆ ರಾಡ್‌ ಬಿದ್ದು ಗಾಯಗೊಂಡಿದ್ದ ಎಎಸ್‌ಐ ಸಾವು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.