ಗಂಗೊಳ್ಳಿ : ಇನ್ನೂ ಆರಂಭವಾಗದ ನಾಡದೋಣಿ ಮೀನುಗಾರಿಕೆ


Team Udayavani, Jul 9, 2018, 6:00 AM IST

0808kdpp3.jpg

ಗಂಗೊಳ್ಳಿ: ಮಳೆಗಾಲ ಆರಂಭವಾಗಿ ಒಂದು ತಿಂಗಳು ಕಳೆದರೂ, ಜೂನ್‌ನಲ್ಲಿ ಶುರುವಾಗಬೇಕಾದ ಸಾಂಪ್ರದಾಯಿಕ ಮೀನುಗಾರಿಕೆ ಕುಂದಾಪುರದ ಕೋಡಿ, ಗಂಗೊಳ್ಳಿ ಭಾಗದಲ್ಲಿ ಇನ್ನೂ ಕೂಡ ಪ್ರಾರಂಭವಾಗದೇ, ನಾಡದೋಣಿಗಳು ದಡದಲ್ಲೇ ಲಂಗರು ಹಾಕಿವೆ. 

ಸಾಮಾನ್ಯವಾಗಿ ಮಳೆಗಾಲ ಪ್ರಾರಂಭವಾದ ಅನಂತರ ಅಂದರೆ ಜೂನ್‌ ಮೊದಲ ವಾರದಿಂದ ನಾಡದೋಣಿಗಳು ಸಮುದ್ರಕ್ಕೆ ಇಳಿಯುತ್ತವೆ. ಆದರೆ ಪೂರಕವಾದ ವಾತಾವರಣವಿಲ್ಲದ ಕಾರಣದಿಂದ ನಾಡದೋಣಿ ಮೀನುಗಾರರು ಕಡಲಿಗಿಳಿಯುತ್ತಿಲ್ಲ. 

ಜೂನ್‌ನಲ್ಲಿ ಸುರಿದ ಭಾರೀ ಗಾಳಿ, ಮಳೆಗೆ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಈಗಲೂ ಎಲ್ಲೆಡೆ ಉತ್ತಮ ಮಳೆಯಾಗುತ್ತಿರುವುದರಿಂದ ಮೀನುಗಾರರಿಗೆ ಕಡಲಿಗಿಳಿಯಲು ಸಾಧ್ಯವಾಗುತ್ತಿಲ್ಲ. ಮಲ್ಪೆಯಲ್ಲಿ ಈಗಾಗಲೇ ನಾಡದೋಣಿಗಳು ಸಮುದ್ರಕ್ಕೆ ಇಳಿದಿದ್ದರೂ, ಸಾಕಷ್ಟು ಪ್ರಮಾಣದಲ್ಲಿ ಮೀನುಗಳು ಸರಿಯಾಗಿ ಸಿಕ್ಕಿಲ್ಲ ಎನ್ನುತ್ತಾರೆ ಮೀನುಗಾರರು.
 
ತೂಫಾನ್‌ ಎದ್ದಿಲ್ಲ
ಕಡಲಾಳದಲ್ಲಿ ತೂಫಾನ್‌ ಎದ್ದ ಬಳಿಕ ಕಡಲು ಪ್ರಕ್ಷುಬ್ಧಗೊಳ್ಳುತ್ತವೆ. ಇದರಿಂದ ನದಿ, ಹೊಳೆಗಳ ನೀರು, ಅದರೊಂದಿಗೆ ತ್ಯಾಜ್ಯವೆಲ್ಲ ಸಮುದ್ರಕ್ಕೆ ಸೇರುವುದರಿಂದ ಆಹಾರಕ್ಕಾಗಿ ವಿವಿಧ ಜಾತಿಯ ಮೀನುಗಳು ಕಡಲ ತೀರದತ್ತ ಧಾವಿಸುತ್ತವೆ. ಆದರೆ ಜೂನ್‌ನಲ್ಲಿ ಹಾಗೂ ಈಗ ಉತ್ತಮ ಮಳೆಯಾಗಿದ್ದರೂ, ಕೂಡ ತೂಫಾನ್‌ ಏಳುವಷ್ಟು ಮಟ್ಟಿಗೆ ಮಳೆಯಾಗಿಲ್ಲ. ತೂಫಾನ್‌ ಏಳದೇ ಮೀನುಗಾರರು ಕಡಲಿಗಿಳಿದರೂ, ಅದರಿಂದ ಹೇರಳವಾಗಿ ಮೀನುಗಳು ಸಿಗುವುದಿಲ್ಲ. 

ಗಂಗೊಳ್ಳಿಯಲ್ಲಿ ಉಪ್ಪುಂದ, ನಾವುಂದ, ಮರವಂತೆ, ಶಿರೂರು, ಗಂಗೊಳ್ಳಿ, ಕೋಡಿ ಭಾಗದ ಸುಮಾರು 600 ನಾಡದೋಣಿಗಳಿವೆ. ಕಳೆದ ಮೀನುಗಾರಿಕಾ ಋತು ಯಾಂತ್ರಿಕ ಮೀನುಗಾರಿಕೆಗೆ ಶುಭ ತಂದಿರಲಿಲ್ಲ. ಈಗ ನಾಡದೋಣಿ ಮೀನುಗಾರರಿಗೂ ಲಾಭದಾಯಕವಾಗುವ ಲಕ್ಷಣ ತೋರುತ್ತಿಲ್ಲ. 

ಚಟ್ಲಿ ಸೀಸನ್‌ ಶುರುವಾಗಿಲ್ಲ
ನಾಡದೋಣಿಗಳಿಗೆ ವಿವಿಧ ತಳಿಯ ಮೀನುಗಳಿಗಿಂತ ಚಟ್ಲಿ (ಸಿಗಡಿ) ಸಿಕ್ಕರೆ ಹೆಚ್ಚು ಲಾಭ. ಕಡಲಿಗಿಳಿದ ಎಲ್ಲ ದೋಣಿಗಳಿಗೆ ಮೀನು ಸಿಕ್ಕರೆ ಆಗ ಮೀನಿನ ದರ ಕುಸಿತಗೊಂಡು, ಹೆಚ್ಚೇನೂ ಲಾಭವಾಗುವುದಿಲ್ಲ. ಆದರೆ ಮೀನಿನ ಜತೆ ಚಟ್ಲಿ(ಈಗ ಕೆಜಿಗೆ 450 ರೂ. ಇದೆ) ಸಿಕ್ಕರೆ ಅದರಿಂದ ಲಾಭ ಹೆಚ್ಚು. ಅದಕ್ಕಿರುವ ಬೆಲೆ ಹಾಗೂ ಬೇಡಿಕೆ ಯಾವತ್ತೂ ಕಡಿಮೆಯಾಗುವುದಿಲ್ಲ. 

ಲಾಭಕ್ಕಿಂತ ನಷ್ಟವೇ ಜಾಸ್ತಿ
ನಾಡದೋಣಿಯಲ್ಲಿ 1 ಜೋಡು (3 ದೋಣಿಗಳಿರುತ್ತವೆ) ನಲ್ಲಿ ತಲಾ 10 ಮಂದಿಯಂತೆ 30 ಜನ ಇರುತ್ತಾರೆ. ಸುಮಾರು 15 ಸಾವಿರ ರೂ. ಖರ್ಚಾಗುತ್ತದೆ. ಆದರೆ ಈಗ ನಾವು ಕಡಲಿಗಳಿದರೆ 10 ಸಾವಿರ ರೂ. ಕೂಡ ಸಿಗುವುದಿಲ್ಲ. ಇದರಿಂದ ಮೀನುಗಾರಿಕೆ ನಡೆಸಿದರೂ, ನಮಗೇನೂ ಲಾಭ ಸಿಗುವುದಿಲ್ಲ. 
– ಗೋಪಾಲ ಖಾರ್ವಿ, ಕೋಡಿ

ಜು. 15ರ ಅನಂತರ ಪ್ರಾರಂಭ
ಈಗ ತೂಫಾನ್‌ ಎದ್ದಿದ್ದು, ಅದು ಶಾಂತವಾದ ನಂತರ ನಾಡದೋಣಿಗಳು ಕಡಲಿಗೆ ಇಳಿಯಬಹುದು. ಸುಮಾರು ಜು. 15 ರ ವೇಳೆಗೆ ನಾಡದೋಣಿ ಮೀನುಗಾರಿಕೆ ಪ್ರಾರಂಭವಾಗಬಹುದು. ಮಲ್ಪೆಯಲ್ಲಿ ಹೋಗಿದ್ದರೂ, ಅಷ್ಟೇನೂ ಮೀನು ಸಿಕ್ಕಿಲ್ಲ. 
– ಮಂಜು ಬಿಲ್ಲವ,ಗಂಗೊಳ್ಳಿ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ 

– ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ganesha Chaturthi: ಆರೂರು: 35ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ… ವಿವಿಧ ಕಾರ್ಯಕ್ರಮ

ಆರೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ: ಸೆ.9ರಂದು ಪ್ರಥಮ ವರ್ಷದ ಲೋಬಾನ ಸೇವೆ ಹುಲಿವೇಷ ಕುಣಿತ

16-kumbashi

Ganesh Chaturthi; ಆನೆಗುಡ್ಡೆ: ಸಂಭ್ರಮದ ಶ್ರೀ ವಿನಾಯಕ ಚತುರ್ಥಿ; ಹರಿದು ಬಂದ ಭಕ್ತ ಸಮೂಹ

ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Kaup ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Udupi ಗೀತಾರ್ಥ ಚಿಂತನೆ-29 ಭಗವದವತಾರದ ಉದ್ದೇಶವೇನು?

Udupi ಗೀತಾರ್ಥ ಚಿಂತನೆ-29; ಭಗವದವತಾರದ ಉದ್ದೇಶವೇನು?

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.