ಹುಚ್ಚು ಮಂಗಗಳ ಕಾಟ


Team Udayavani, Jul 9, 2018, 10:28 AM IST

gul-5.jpg

ವಾಡಿ: ಪಟ್ಟಣ ಸಮೀಪದ ಕಡಬೂರ ಗ್ರಾಪಂ ವ್ಯಾಪ್ತಿಯ ಚಾಮನೂರ ಗ್ರಾಮದಲ್ಲಿ ಕಳೆದ ಒಂದು ತಿಂಗಳಿಂದ ಕಪಿ ಚೇಷ್ಟೆ ಹೆಚ್ಚಾಗಿದ್ದು, ಗ್ರಾಮಸ್ಥರು ಆತಂಕದಲ್ಲಿ ದಿನಗಳೆಯುತ್ತಿದ್ದಾರೆ. ಭೀಮಾನದಿ ದಂಡೆಯಲ್ಲಿರುವ ಚಾಮನೂರಿಗೆ ಅರಣ್ಯ ಪ್ರದೇಶದ ನಂಟಿದ್ದು, ಮಂಗಗಳು ಗ್ರಾಮ ಪ್ರವೇಶಿಸಿ ವಾಸಿಸುತ್ತಿವೆ. ಮರಗಳಿಂದ ಮರಕ್ಕೆ ಮತ್ತು ಮಾಳಿಗೆಯಿಂದ ಮಾಳಿಗೆಗಳಿಗೆ ಜಿಗಿದು ಜನರ ನೆಮ್ಮದಿ ಕಸಿದಿವೆ. ಮಕ್ಕಳು, ಮಹಿಳೆಯರು ಹಾಗೂ ವೃದ್ಧರು ಎನ್ನೆದೆ ಸಿಕ್ಕಸಿಕ್ಕವರ ಮೇಲೆ ದಾಳಿ ನಡೆಸುತ್ತಿರುವ ಮಂಗಗಳು ಭಯದ ವಾತಾವರಣ ಸೃಷ್ಟಿಸಿವೆ.

ಗ್ರಾಮದ ಶ್ರೀ ಆಂಜನೇಯ ದೇವಸ್ಥಾನ ಆವರಣದ ಮರಗಳ ಮೇಲೆ ಕುಳಿತಿಕೊಳ್ಳುವ ಮಂಗಗಳು ದೇವಸ್ಥಾನಕ್ಕೆ ಬರುವವರನ್ನು ಹಾಗೂ ರಸ್ತೆಯಲ್ಲಿ ನಡೆದುಕೊಂಡು ಹೋಗುವವರ ಮೇಲೆ ದಾಳಿ ನಡೆಸುತ್ತಿವೆ. ಕೈ ಕಾಲುಗಳಿಗೆ ಬಾಯಿ ಹಾಕಿ ಮಾಂಸ ಕಂಡವನ್ನು ಹೀರುತ್ತಿವೆ.
 
ಹುಚ್ಚಾಟದ ಮಂಗಗಳ ದಾಳಿಗೆ ತುತ್ತಾದವರು ರಕ್ತಗಾಯಗೊಂಡು ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಕೆಲವರು ಗಂಭೀರ ಗಾಯಗೊಂಡು ವಾರಗಟ್ಟಲೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದಾರೆ.
 
ಗ್ರಾಮದ ನೀಲಪ್ಪ ಪೂಜಾರಿ ಎಂಬುವವರ ಮೇಲೆ ಶನಿವಾರ ಸಂಜೆ ಆಕ್ರಮಣ ಮಾಡಿರುವ ಮಂಗವೊಂದು ಹಿಗ್ಗಾಮುಗ್ಗಾ ಕಚ್ಚಿ ಗಾಯಗೊಳಿಸಿದೆ. ಕಾಲಿಗೆ ಬಾಯಿ ಹಾಕಿ ನರಗಳನ್ನು ತುಂಡು ಮಾಡಿದೆ. ತೀವ್ರ ರಕ್ತ ಸ್ರಾವದಿಂದ ನರಳುತ್ತಿದ್ದ ನೀಲಪ್ಪ ಪೂಜಾರಿಯನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹೀಗೆ ಪದೇಪದೇ ಮಂಗಗಳು ಗ್ರಾಮಸ್ಥರ ಮೇಲೆರಗಿ ಗಾಯಗೊಳಿಸುತ್ತಿವೆ. ಸಣ್ಣಪುಟ್ಟ ಗಾಯಗಳಾದವರು ವಾಡಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಗ್ರಾಮದಲ್ಲಿ ಬೀಡುಬಿಟ್ಟಿರುವ ಹತ್ತಾರು ಮಂಗಗಳಲ್ಲಿ, ಒಂದು ಮಂಗ ಹುಚ್ಚಾಟ ನಡೆಸುತ್ತಿದೆ.

ಇದರಿಂದ ಆತಂಕ ಹೆಚ್ಚಿದೆ. ಮಕ್ಕಳು ಮನೆ ಹೊರಗೆ ಬರಲಾಗದಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ಗ್ರಾಪಂ ಸದಸ್ಯೆ ಚಂದಮ್ಮ ಮಲ್ಲಿಕಾರ್ಜುನ ಮಾಲಗತ್ತಿ ಕಳವರಣ ವ್ಯಕ್ತಪಡಿಸಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ಈ ಕುರಿತು ತಕ್ಷಣ ಕ್ರಮ ಕೈಗೊಂಡು, ಮಂಗಗಳಿಂದ ಉಂಟಾಗಿರುವ ಆತಂಕ ನಿವಾರಿಸಬೇಕು ಎಂದು ಒತ್ತಾಯಿಸಿದ್ದಾರೆ. 

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Cabinet Meeting: ದಶಕದ ಬಳಿಕ ಕಲಬುರಗಿಯಲ್ಲಿ ಸಂಪುಟ ಸಭೆ

v

Kalaburagi; ಸೆ.17ರಂದು ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ; ದಿನಾಂಕ ಅಂತಿಮಗೊಳಿಸಿ ಅಧಿಸೂಚನೆ

Kalaburagi: ಶಿಕ್ಷಕರ ಪ್ರಶಸ್ತಿ ಆಯ್ಕೆಯಲ್ಲಿ ರಾಜಕೀಯ ಕೆಸರಾಟ… ಪಟ್ಟಿಯಲ್ಲಿ ಬದಲಾವಣೆ

Kalaburagi: ಶಿಕ್ಷಕರ ಪ್ರಶಸ್ತಿ ಆಯ್ಕೆಯಲ್ಲಿ ರಾಜಕೀಯ ಕೆಸರಾಟ… ಪಟ್ಟಿಯಲ್ಲಿ ಬದಲಾವಣೆ

8-

Chittapur: ದಂಡೋತಿ ಸೇತುವೆ; ಕಿತ್ತು ಹೋದ ರಸ್ತೆ

7-

Sedam: ಕಾಗಿಣಾ ನಾಲೆಯಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯ ಶವ ಪತ್ತೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.