![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Jul 9, 2018, 10:41 AM IST
ಮುಂಬೈ: ಕುಖ್ಯಾತ ಭೂಗತ ಪಾತಕಿ ಮುನ್ನಾ ಬಜರಂಗಿಯನ್ನು ಜೈಲಿನೊಳಗೆ ಗುಂಡು ಹೊಡೆದು ಹತ್ಯೆಗೈದಿರುವ ಘಟನೆ ಉತ್ತರಪ್ರದೇಶದ ಬಾಘ್ ಪತ್ ಜೈಲಿನಲ್ಲಿ ನಡೆದಿದೆ ಎಂದು ಎಎನ್ ಐ ವರದಿ ಮಾಡಿದೆ.
ಪಾತಕಿ ಬಜರಂಗಿಯನ್ನು ಸೋಮವಾರ ಬೆಳಗ್ಗೆ ನ್ಯಾಯಾಲಯಕ್ಕೆ ಹಾಜರುಪಡಿಸಬೇಕಾಗಿತ್ತು. ಇಂದು ಬೆಳಗ್ಗೆ 6.30ರ ಹೊತ್ತಿಗೆ ಮತ್ತೊಂದು ಗ್ಯಾಂಗ್ ನ ಆರೋಪಿ ಸುನೀಲ್ ಎಂಬಾತ ಜೈಲಿನೊಳಗೆ ಗುಂಡು ಹೊಡೆದು ಹತ್ಯೆಗೈದಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಭಾನುವಾರ ಬಜರಂಗಿಯನ್ನು ಝಾನ್ಸಿ ಜೈಲಿನಿಂದ ಬಾಘ್ ಪತ್ ಜೈಲಿಗೆ ಸ್ಥಳಾಂತರಿಸಲಾಗಿತ್ತು. ಬಿಜೆಪಿ ಮುಖಂಡ ಕೃಷ್ಣಾನಂದ ರಾಯ್ ಅವರನ್ನು ಹತ್ಯೆಗೈದ ಪ್ರಕರಣದಲ್ಲಿ ಪಾತಕಿ ಮುನ್ನಾನನ್ನು ಪೊಲೀಸರು ಬಂಧಿಸಿದ್ದರು.
ಕೋರ್ಟ್ ಗೆ ಕರೆದೊಯ್ಯುವ ಮುನ್ನವೇ ಜೈಲಿನೊಳಗೆ ಮುನ್ನಾನನ್ನು ಹತ್ಯೆಗೈಯಲಾಗಿದೆ. ಘಟನೆ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸಿದ್ದು, ಜೈಲರ್ ಅನ್ನು ಅಮಾನತಿನಲ್ಲಿಡಲಾಗಿದೆ. ಜೈಲಿನೊಳಗೆ ಇಂತಹೇ ಘಟನೆ ನಡೆಯುವುದು ತುಂಬಾ ಗಂಭೀರವಾದ ಪ್ರಕರಣ. ಈ ಬಗ್ಗೆ ಕೂಲಂಕಷ ತನಿಖೆ ನಡೆಸಿ, ಕಠಿಣ ಕ್ರಮ ಕೈಗೊಳ್ಳಲು ಆದೇಶ ನೀಡಿರುವುದಾಗಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.