ಅನುದಾನ ಮಂಜೂರಾದರೂ ರಸ್ತೆ ನಿರ್ಮಿಸಿಲ್ಲ:ಕೆಡವಿದ ಮೆಟ್ಟಿಲ ಮೇಲೆ ನಡಿಗೆ


Team Udayavani, Jul 9, 2018, 11:01 AM IST

9-july-4.jpg

ಕುಂಜತ್ತಬೈಲ್‌: ಇಲ್ಲಿನ ನಿವಾಸಿಗಳು ವಾಹನ ಹಿಡಿಯಬೇಕಾದರೆ ಮೆಟ್ಟಿಲು ಹತ್ತಿ ಇಳಿದು ನಡೆಯಬೇಕು. ಸ್ವಂತ ವಾಹನವಿದ್ದರೂ ಮನೆ ಅಂಗಳಕ್ಕೆ ಕೊಂಡೊಯ್ಯಲಾಗುತ್ತಿಲ್ಲ. ರಸ್ತೆಯಂತೂ ಈ ಭಾಗದ ಜನ ಮರೀಚಿಕೆ. ವಿಪರ್ಯಾ ಸವೆಂದರೆ ಜನ ನಡೆದಾಡಲು ಇದ್ದ ಮೆಟ್ಟಿಲುಗಳನ್ನೂ ಅಧಿಕಾರಿಗಳು ಕೆಡವಿ ಹಾಕಿದ್ದಾರೆ. ಕುಂಜತ್ತಬೈಲ್‌ನ ಬಸವನಗರ ಆಸುಪಾಸಿನ ನಿವಾಸಿಗಳು ರಸ್ತೆಯಂತಹ ಕನಿಷ್ಠ ಮೂಲ ಸೌಕರ್ಯದಿಂದಲೂ ವಂಚಿತರಾಗಿ ದಿನಗಳೆಯುತ್ತಿದ್ದಾರೆ. ಆದರೆ ಗಮನಕ್ಕೆ ಬಂದರೂ ಸಂಬಂಧಪಟ್ಟ ಜನಪ್ರತಿನಿಧಿಗಳು ಮೌನ ವಹಿಸಿದ್ದಾರೆ.

ಜನಪ್ರತಿನಿಧಿ ನಿರ್ಲಕ್ಷ್ಯ
ಹಲವು ವರ್ಷಗಳಿಂದ ಇಲ್ಲಿ ಇರುವ ಮೆಟ್ಟಿಲುಗಳೇ ಈ ಭಾಗದ ಜನರಿಗೆ ನಡೆದಾಡಲು ಇರುವ ಏಕೈಕ ದಾರಿ. ಜ್ಯೋತಿನಗರ, ಬಸವನಗರ, ರಾಮನಗರ ಸಂಪರ್ಕಿಸುವಂತೆ ರಸ್ತೆ ನಿರ್ಮಾಣಕ್ಕಾಗಿ ಕೆಲವು ವರ್ಷಗಳ ಹಿಂದೆಯೇ ಅನುದಾನ ಮಂಜೂರಾಗಿದೆ. ಆದರೆ ಜನಪ್ರತಿನಿಧಿಗಳು ಮಾತ್ರ ರಸ್ತೆ ನಿರ್ಮಾಣಕ್ಕೆ ಆಸಕ್ತಿ ತೋರಿಸುತ್ತಿಲ್ಲ. ಇದರಿಂದ ಹಳೆಯ ಕಾಲದಲ್ಲಿ ನಿರ್ಮಾಣವಾಗಿರುವ ಮೆಟ್ಟಿಲುಗಳ ಮೂಲಕವೇ ಹತ್ತಿಳಿದು ಸುತ್ತು ಬಳಸಿಕೊಂಡು ಜನ ಊರು ತಲುಪುತ್ತಾರೆ. ರಸ್ತೆ ನಿರ್ಮಾಣವಾದರೆ ಈ ಭಾಗಗಳಿಗೆ ಕೇವಲ 200 ಮೀಟರ್‌ ಉದ್ದದ ದಾರಿಯಾಗಿದೆ. 

ಅಗೆದ ಮೆಟ್ಟಿಲುಗಳನ್ನು ಬಿಟ್ಟು ಹೋದರು
ಪೈಪ್‌ಲೈನ್‌ ಅಳವಡಿಕೆ ಮಾಡಿರುವುದರಿಂದ ಇಲ್ಲಿನ ಮೆಟ್ಟಿಲುಗಳು ಸಂಪೂರ್ಣ ಶಿಥಿಲಾವಸ್ಥೆಯಲ್ಲಿವೆ. ನೀರಿನ ಸಮಸ್ಯೆ ಸರಿಪಡಿಸಲು ಮೆಟ್ಟಿಲುಗಳನ್ನು ಅಗೆದ ಅಧಿಕಾರಿಗಳು ಅದನ್ನು ಹಾಗೇ ಬಿಟ್ಟು ಹೋಗಿದ್ದಾರೆಯೇ ಹೊರತು ಜನರಿಗೆ ನಡೆದಾಡಲು ವ್ಯವಸ್ಥೆ ಮಾಡಿಕೊಟ್ಟಿಲ್ಲ. ‘ನಡೆದಾಡಲೂ ಅಸಾಧ್ಯವಾಗಿರುವ ಈ ಮೆಟ್ಟಿಲುಗಳಲ್ಲಿ ಈಗಾಗಲೇ ಹಲವು ಮಂದಿ ಬಿದ್ದು ಕೈಕಾಲಿಗೆ ಗಾಯ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಾಜಿ ಶಾಸಕ ಮೊಯಿದಿನ್‌ ಬಾವಾ ಹಾಗೂ ಉಪ ಮೇಯರ್‌ ಮಹಮ್ಮದ್‌ ಅವರಲ್ಲಿ ಹಲವು ಬಾರಿ ಮನವಿ ಮಾಡಿದ್ದೇವೆ. ಆದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರಾದ ಪ್ರಕಾಶ್‌ ಆರೋಪಿಸುತ್ತಾರೆ.

ರಸ್ತೆ ನಿರ್ಮಿಸುವ ಬಗ್ಗೆ ಅಧ್ಯಯನಕ್ಕೆ ಸೂಚನೆ
ಕುಂಜತ್ತಬೈಲ್‌ ಬಸವನಗರದಲ್ಲಿ ಮೆಟ್ಟಿಲು ಅಗೆದಿರುವುದನ್ನು ಸರಿ ಪಡಿಸಲು ಈ ಹಿಂದೆ ಕಾಂಟ್ರಾಕ್ಟರ್‌ ಮುಂದಾಗಿದ್ದರು. ಆದರೆ ಅಲ್ಲಿನ ನಿವಾಸಿಗಳು ನಮಗೆ ಮೆಟ್ಟಿಲು ಬೇಡ; ರಸ್ತೆಯೇ ಬೇಕು ಎಂದು ಒತ್ತಾಯ ಮಾಡಿದ್ದರು. ಅಗಲ ಕಿರಿದಾಗಿರುವುದರಿಂದ ಅಲ್ಲಿ ರಸ್ತೆ ನಿರ್ಮಾಣಕ್ಕೆ ಸೂಕ್ತ ಸ್ಥಳಾವಕಾಶದ ಕೊರತೆ ಇದೆ. ಅಲ್ಲದೆ ಸುಮಾರು ನಾಲ್ಕೂವರೆ ತಿಂಗಳು ಕಾಲ ಚುನಾವಣಾ ನೀತಿ ಸಂಹಿತೆ ಇದುದ್ದರಿಂದ ಇಲ್ಲಿ ಕೆಲಸ ನಡೆಸಲು ಸಾಧ್ಯವಾಗಿರಲಿಲ್ಲ. ಇದೀಗ ಎಸ್‌ಎಫ್‌ಸಿ ಫಂಡ್‌ನಿಂದ ಹಣ ಮಂಜೂರಾತಿಗಾಗಿ ಕಳೆದ ತಿಂಗಳ 16ನೇ ತಾರೀಕಿಗೆ ಪಾಲಿಕೆಗೆ ಬರೆದಿದ್ದೇನೆ. ಅಲ್ಲದೆ ರಸ್ತೆ ನಿರ್ಮಾಣದ ಸಾಧ್ಯತೆಗಳನ್ನು ಅಧ್ಯಯನ ನಡೆಸಿ ವರದಿ ಮಾಡುವಂತೆ ಇನ್ಛ್ರಾಸ್ಟ್ರಕ್ಚರ್‌ ಡೆವಲಪ್‌ಮೆಂಟ್‌ ಫೌಂಡೇಶನ್‌ಗೆ ತಿಳಿಸಿದ್ದೇನೆ.
-ಮಹಮ್ಮದ್‌, ಉಪ ಮೇಯರ್‌

ಟಾಪ್ ನ್ಯೂಸ್

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.