ಗಡಿ ಭಾಗದ ಪ್ರತಿಭೆಗಳಿಗೆ ಪ್ರೋತ್ಸಾಹ ಅಗತ್ಯ: ಅನೀಲ


Team Udayavani, Jul 9, 2018, 11:26 AM IST

bid-2.jpg

ಭಾಲ್ಕಿ: ಗಡಿ ಭಾಗದಲ್ಲಿ ಸಾಕಷ್ಟು ಪ್ರತಿಭೆಗಳಿದ್ದು, ಅವರನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ನಡೆಯಬೇಕಿದೆ ಎಂದು ಸಾಪ್ಟ್ವೇರ್‌ ಅಭಿಯಂತರ ಅನೀಲ ದುಬಳಿಗುಂಡಿಕರ ಹೇಳಿದರು.

ಬೀರಿ(ಬಿ) ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ನಮ್ಮ ಬೀದರ ಕ್ಷೇಮಾಭಿವೃದ್ಧಿ ಸಂಘದ ಸಹಯೋಗದಲ್ಲಿ ಆಯೋಜಿಸಿದ್ದ ಪ್ರತಿಭಾನ್ವಿತ ವಿದ್ಯಾರ್ಥಿಗಳ ಸನ್ಮಾನ ಮತ್ತು ಪರಿಸರ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಪ್ರತಿಭೆ ಗುರುತಿಸುವ ನಿಟ್ಟಿನಲ್ಲಿ ನಮ್ಮ ಬೀದರ ಕ್ಷೇಮಾಭಿವೃದ್ಧಿ ಸಂಘದಿಂದ ಕಾರ್ಯಕ್ರಮ ಆಯೋಜಿಸಲಾಗಿದ್ದು. ಪ್ರತಿಭಾವಂತ ವಿದ್ಯಾರ್ಥಿಗಳು ಇದರ ಲಾಭ ಪಡೆಯಬೇಕು. ಅಲ್ಲದೇ ವಿದ್ಯಾರ್ಥಿಗಳು ನಿರ್ದಿಷ್ಟ ಗುರಿಯಿಟ್ಟುಕೊಂಡು ಅಧ್ಯಯನ ಮಾಡಿದರೆ ಜೀವನದಲ್ಲಿ ಯಶಸ್ಸು ಕಂಡುಕೊಳ್ಳಲು ಸಾಧ್ಯ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ನಮ್ಮ ಬೀದರ ಕ್ಷೇಮಾಭಿವೃದ್ಧಿ ಸಂಘದ ಪ್ರಧಾನ ಕಾರ್ಯದರ್ಶಿ ಶರಣಬಸವ ಸೇಡಮಕರ್‌ ಮಾತನಾಡಿ, ತಾಲೂಕು ಶೈಕ್ಷಣಿಕವಾಗಿ ಪ್ರಗತಿ ಸಾಧಿ ಸುತ್ತಿರುವುದು ಉತ್ತಮ ಬೆಳವಣಿಗೆ. ಆದರೆ, ನಿಷ್ಕಾಳಜಿತನ ಮಾಡದೇ ಹೆಚ್ಚು ಪ್ರಯತ್ನ ಮಾಡಿದರೆ ಮತ್ತಷ್ಟು ಪ್ರತಿಭೆಗಳು ಹೊರಬರಲು ಸಾಧ್ಯವಾಗುತ್ತದೆ. ಗಡಿ ಭಾಗದ ಪ್ರಗತಿಗಾಗಿ ಜಿಲ್ಲೆಯ ಎಲ್ಲ ಇಂಜನೀಯರ್‌ಗಳು ಸೇರಿ “ನಮ್ಮ ಬೀದರ್‌ ಕ್ಷೇಮಾಭಿವೃದ್ಧಿ ಸಂಘ’ ಸ್ಥಾಪಿಸಿದ್ದು, ಶೈಕ್ಷಣಿಕ, ಕೃಷಿ, ಸಾಮಾಜಿಕ ಸೇರಿದಂತೆ ಇನ್ನಿತರ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಈ ಸಂಘ ಗುರುತಿಸಿ ಪ್ರೋತ್ಸಾಹಿಸಲಿದೆ. ಜತೆಗೆ ಮುಂದಿನ ದಿನಗಳಲ್ಲಿ ಕೃಷಿ ಮೇಳ ಸೇರಿದಂತೆ ನಾನಾ ಕಾರ್ಯಾಗಾರ ಹಮ್ಮಿಕೊಂಡು ಜಿಲ್ಲೆಯ ಪ್ರಗತಿಗೆ ಸಂಘ ಕೈಜೊಡಿಸಲಿದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಮುಖ್ಯಗುರು ಯುವರಾಜ ದೇವಪ್ಪನೋರ್‌ ಮಾತನಾಡಿ, ಶೈಕ್ಷಣಿಕ ಪ್ರಗತಿಗಾಗಿ ಸರಕಾರ ಹಾಗೂ ಸಂಘ ಸಂಸ್ಥೆಗಳು ಸಾಕಷ್ಟು ಪ್ರೋತ್ಸಾಹ ನೀಡುತ್ತಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯಬೇಕೆಂದು ಸಲಹೆ ನೀಡಿದರು.
 
ಇದೇ ವೇಳೆ ಎಸ್ಸೆಸ್ಸೆಲ್ಸಿಯಲ್ಲಿ ಉತ್ತಮ ರ್‍ಯಾಂಕ್‌ ಗಳಿಸಿದ ಭಾಗ್ಯಶ್ರೀ ಮಹಾಂತೇಶ ಕಾರಬಾರಿ, ನಿಕೀತಾ ಮಚೇಂದ್ರ ಮತ್ತು ಜಗದೇವಿ ತುಕಾರಾಮ ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು. ಅಲ್ಲದೇ ಶಾಲೆಯ ಸುಮಾರು 80 ವಿದ್ಯಾರ್ಥಿಗಳಿಗೆ ಇಂಗ್ಲಿಷ್‌ ಶಬ್ದಕೋಶದ ಜತೆಗೆ ಸಸಿಗಳನ್ನು ವಿತರಿಸಲಾಯಿತು. ಕರವೇ ಅಧ್ಯಕ್ಷ ಸಂಗಮೇಶ ಗುಮ್ಮೆ, ಸಂಗಮೇಶ ತೋರಣೆ ಸೇರಿದಂತೆ ಶಿಕ್ಷಕರು ಹಾಜರಿದ್ದರು. ಶಬೀರ ನಿರೂಪಿಸಿದರು. ವಿಜಯಕುಮಾರ ಕುಲಕರ್ಣಿ ವಂದಿಸಿದರು. 

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; Minister Eshwar Khandre visits Gunateerthawadi village; Financial assistance to the bereaved family

Bidar; ಗುಣತೀರ್ಥವಾಡಿ ಗ್ರಾಮಕ್ಕೆ ಈಶ್ವರ ಖಂಡ್ರೆ ಭೇಟಿ; ನೊಂದ ಕುಟುಂಬಕ್ಕೆ ಹಣಕಾಸಿನ ನೆರವು

Bidar: BRIMS ಆಸ್ಪತ್ರೆಯಲ್ಲಿ ಕೈಕೊಟ್ಟ ವಿದ್ಯುತ್… ಆಕ್ಸಿಜನ್ ಇಲ್ಲದೆ ರೋಗಿಗಳ ಪರದಾಟ

Bidar: BRIMS ಆಸ್ಪತ್ರೆಯಲ್ಲಿ ಕೈಕೊಟ್ಟ ವಿದ್ಯುತ್… ಆಕ್ಸಿಜನ್ ಇಲ್ಲದೆ ರೋಗಿಗಳ ಪರದಾಟ

1-bhalki

Bidar; ಪೊಲೀಸರ ಮೇಲೆ ಮಚ್ಚಿನಿಂದ ಹಲ್ಲೆ: ಕಿಡ್ನಾಪ್ ಆರೋಪಿ ಕಾಲಿಗೆ ಗುಂಡೇಟು

1-bidar-1

Bidar; ಬಾನಂಗಳದಲ್ಲಿ ಲೋಹದ ಹಕ್ಕಿಗಳ ಚಿತ್ತಾರ: ಪುಳಕಿತರಾದ ಜನರು

Bidar; ಜನರ ಸಮಸ್ಯೆ ಪರಿಹಾರಕ್ಕೆ ಅಧಿಕಾರಿಗಳ ಅಸಹಕಾರ: ಗ್ರಾ.ಪಂ. ಸದಸ್ಯ ರಾಜೀನಾಮೆ

Bidar; ಜನರ ಸಮಸ್ಯೆ ಪರಿಹಾರಕ್ಕೆ ಅಧಿಕಾರಿಗಳ ಅಸಹಕಾರ: ಗ್ರಾ.ಪಂ. ಸದಸ್ಯ ರಾಜೀನಾಮೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.