ನಗರ ಕತ್ತಲಲ್ಲಿದೆ; ಬೀದಿ ದೀಪವೆಲ್ಲ ಸ್ತಬ್ಧ 


Team Udayavani, Jul 9, 2018, 11:59 AM IST

9-july-7.jpg

ಮಹಾನಗರ: ನಗರದ ಹೃದಯ ಭಾಗವಾದ ಹಂಪನಕಟ್ಟೆ ಬಸ್‌ ನಿಲ್ದಾಣದಿಂದ ಆರ್‌ಟಿಒ ಬಸ್‌ ನಿಲ್ದಾಣದ ವರೆಗೆ ರಾತ್ರಿ ವೇಳೆಯಲ್ಲಿ ಸಾರ್ವಜನಿಕರು ಸಂಚರಿಸುವಾಗ ಎಚ್ಚರದಿಂದಿರಿ. ಏಕೆಂದರೆ ಈ ಪ್ರದೇಶಗಳಲ್ಲಿ ಕೆಲವು ದಿನಗಳಿಂದ ಪಾಲಿಕೆಯ ನಿರ್ಲಕ್ಷ್ಯದಿಂದಾಗಿ ರಾತ್ರಿ ವೇಳೆ ಬೀದಿ ದೀಪಗಳು ಉರಿಯುವುದಿಲ್ಲ.

ಈ ಬಗ್ಗೆ ಸಾರ್ವಜನಿಕರು ಮಹಾನಗರ ಪಾಲಿಕೆ ಈ ಹಿಂದೆಯೇ ದೂರು ನೀಡಿದ್ದರು. ಆದರೂ, ಪಾಲಿಕೆ ಮಾತ್ರ ಮಳೆಯ ನೆಪ ಹೇಳಿ ದಿನ ದೂಡುತ್ತಿದೆ. ಇದರ ನೇರ ಪರಿಣಾಮ ಮಾತ್ರ ಸಾರ್ವಜನಿಕರ ಮೇಲೆ ಆಗುತ್ತಿದೆ. ಹಂಪನಕಟ್ಟೆ ಅಂದರೆ ಸದಾ ಜನನಿಬಿಡ ಪ್ರದೇಶವಾಗಿದ್ದು, ರಾತ್ರಿ ಸುಮಾರು 10 ಗಂಟೆಯವರೆಗೂ ಈ ನಿಲ್ದಾಣದಲ್ಲಿ ಬಸ್‌ಗೆ ಕಾಯುವವರಿದ್ದಾರೆ. 

ಪಂಪ್‌ವೆಲ್‌, ಲಾಲ್‌ಬಾಗ್‌, ಕಂಕನಾಡಿ, ಕಾಸರಗೋಡು, ಪುತ್ತೂರು, ಧರ್ಮಸ್ಥಳ ಸಹಿತ ಇನ್ನಿತರ ಪ್ರದೇಶಗಳಿಗೆ ತೆರಳುವ ಬಸ್‌ ಗಳು ಇದೇ ಮಾರ್ಗವಾಗಿ ರಾತ್ರಿ ವೇಳೆಯಲ್ಲಿ ಮಹಿಳೆಯರು ಸಹಿತ ಹೆಚ್ಚಿನ ಮಂದಿ ಇಲ್ಲೇ ಬಸ್‌ಗೆ ಕಾಯುತ್ತಾರೆ. 

ಏನು ಕಾರಣ?
ಮಳೆ ಬರುವುದಕ್ಕೂ ಮುಂಚಿತವಾಗಿ ಪಾಲಿಕೆ ವ್ಯಾಪ್ತಿಯಲ್ಲಿ ವಿದ್ಯುತ್‌ ನಿರ್ವಹಣಾ ಕಾಮಗಾರಿ ನಡೆಸಬೇಕಿತ್ತು. ಆದರೆ ಇದು ಸಮರ್ಪಕವಾಗಿ ನಡೆಯಲಿಲ್ಲ. ಇದೇ ಕಾರಣಕ್ಕೆ ಮೇ ತಿಂಗಳ ಕೊನೆಯ ವಾರದಲ್ಲಿ ಬಂದಂತಹ ಭಾರೀ ಮಳೆಗೆ ಇಲ್ಲಿನ ಸುಮಾರು 250 ಮೀಟರ್‌ನಷ್ಟು ವಿದ್ಯುತ್‌ ಕೇಬಲ್‌ಗ‌ಳಿಗೆ ಹಾನಿಯಾಗಿದೆ. ಇದರಿಂದಾಗಿ ಹೆಚ್ಚಿನ ಬೀದಿ ದೀಪಗಳು ಉರಿಯುವುದಿಲ್ಲ.

ಇದು ಕೇವಲ ಇಲ್ಲಿಯ ಸಮಸ್ಯೆಯಲ್ಲ. ಮಳೆ ಗಾಳಿ ಬಂದರೆ ಸಾಕು ನಗರದ ಕೊಟ್ಟಾರ ಕ್ರಾಸ್‌, ಲಾಲ್‌ಬಾಗ್‌, ಬಿಜೈ, ಉರ್ವಸ್ಟೋರ್‌, ಎಂ.ಜಿ. ರೋಡ್‌ ಸೇರಿದಂತೆ ಇನ್ನಿತರ ಪ್ರದೇಶಗಳಲ್ಲಿನ ಬೀದಿ ದೀಪಗಳು ಕೆಟ್ಟು ಹೋಗುತ್ತಿವೆ. ಈ ಬಗ್ಗೆ ಸಾಮಾಜಿಕ ಜಾಲ ತಾಣಗಳಲ್ಲಿ ಅನೇಕ ಮಂದಿ ಅಳಲು ತೋಡಿಕೊಂಡಿದ್ದು, ಸಮಸ್ಯೆಯನ್ನು ಕೂಡಲೇ ಬಗೆಹರಿಸಿ ಎನ್ನುವುದು ಸಾರ್ವಜನಿಕರ ಬೇಡಿಕೆ.

ಸಮಸ್ಯೆ ಬಗೆಹರಿಸುತ್ತೇವೆ
ಮಳೆಯಿಂದಾಗಿ ಅನೇಕ ಪ್ರದೇಶಗಳಲ್ಲಿ ವಿದ್ಯುತ್‌ ಕೇಬಲ್‌ನ ಸಮಸ್ಯೆ ಇದೆ. ಇದೇ ಕಾರಣಕ್ಕೆ ಕೆಲವು ಕಡೆ ಬೀದಿ ದೀಪಗಳು ಉರಿಯುವುದಿಲ್ಲ. ಕೆಲವು ಸಮಯದಲ್ಲಿ ಮೆಸ್ಕಾಂ ವಿಭಾಗ ದುರಸ್ತಿ ಮಾಡದ ಕಾರಣದಿಂದಲೂ ಈ ಸಮಸ್ಯೆ ಉದ್ಭವಿಸುತ್ತಿದೆ. ಸದ್ಯದಲ್ಲೇ ಸಮಸ್ಯೆ ಬಗೆಹರಿಯಲಿದೆ.
– ಮಹಮ್ಮದ್‌ ನಜೀರ್‌, ಮಹಾನಗರ ಪಾಲಿಕೆ ಆಯುಕ್ತ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.