ವರ ತಾಳಿ ಕಟ್ಟಿದ ಬಳಿಕ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ವಧು ಸಾವು
Team Udayavani, Jul 9, 2018, 12:21 PM IST
ಹೈದರಾಬಾದ್ : ಹಸೆ ಮಣೆ ಏರಿದ 23ರ ಹರೆಯದ ನೂತನ ವಧುವಿಗೆ ವರನು ಮಂಗಲ ಸೂತ್ರ ಕಟ್ಟಿದ ಒಡನೆಯೇ, ವಧು ಮದುವೆ ಮಂಟಪದಲ್ಲಿ ಹೃದಯಾಘಾತದಿಂದ ಕುಸಿದು ಬಿದ್ದು ಮೃತ ಪಟ್ಟ ಕರುಣಾಜನಕ ಘಟನೆ ಮೊನ್ನೆ ಶನಿವಾರ ಜು.7ರಂದು ತೆಲಂಗಾಣ ಪಟ್ಟಣದಲ್ಲಿ ನಡೆದಿದೆ.
ತೆಲಂಗಾಣದ ಕರ್ನೂಲ್ ಜಿಲ್ಲೆಯ ಅಚಾಮ್ಪೆಟ್ ಪಟ್ಟಣದಲ್ಲಿ ಈ ದುರ್ಘಟನೆ ನಡೆಯಿತು. ಮೃತ ಪಟ್ಟ ವಧುವಿನ ಹೆಸರು ಕೊಂಡಿ ನಿರಂಜನಮ್ಮ ಅಲಿಯಾಸ್ ಲಕ್ಷ್ಮೀ. ವರ ವೆಂಕಟೇಶ್ ಅವರು ಮಂಗಲ ಸೂತ್ರ ಕಟ್ಟಿದ ಒಡನೆಯೇ ವಧು ನಿರಂಜನಮ್ಮ ಹೃದಯಾಘಾತಕ್ಕೆ ಗುರಿಯಾಗಿ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಮೃತಪಟ್ಟರು. ಮದುವೆ ಸಮಾರಂಭವನ್ನು ವಧುವಿನ ಮನೆಯಲ್ಲೇ ಏರ್ಪಡಿಸಲಾಗಿತ್ತು.
ವರನು ತಾಳಿ ಕಟ್ಟಿದ ಬಳಿಕ ಮನೆಯವರೆಲ್ಲ ನೂತನ ವಧು-ವರನ ಮೇಲೆ ಅಕ್ಷತೆ ಹಾಕಿದ ಬಳಿಕ ಪುರೋಹಿತರು ಅರುಂಧತಿ ನಕ್ಷತ್ರ ನೋಡಲು ಎದ್ದೇಳಿ ಎಂದು ಹೇಳಿದರು. ಆದರೆ ಅಷ್ಟರೊಳಗಾಗಿ ಮದುವೆ ಮಂಟಪದಲ್ಲೇ ಕುಸಿದು ಬಿದ್ದ ವಧು ನಿರಂಜನಮ್ಮ ಮೇಲೇಳಲೇ ಇಲ್ಲ. ಒಡನೆಯೇ ಮನೆಯವರು ವಧುವನ್ನು ಆಸ್ಪತ್ರೆಗೆ ಒಯ್ದರು. ಆದರೆ ಆಕೆ ಅದಾಗಲೇ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ಪ್ರಕಟಿಸಿದರು.
ವಧುವಿನ ಹಠಾತ್ ಸಾವಿಗೆ ಎರಡೂ ಕಡೆಯವರು ಯಾವುದೇ ಸಂದೇಹ ವ್ಯಕ್ತಪಡಿಸಿಲ್ಲ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು
Puja Khedkar: ಐಎಎಸ್ ಸೇವೆಯಿಂದ ಪೂಜಾ ಖೇಡ್ಕರ್ ವಜಾ; ಕೇಂದ್ರ ಆದೇಶ
ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ
Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ
Crime: ಸೈನೈಡ್ ಮಿಶ್ರಿತ ಜ್ಯೂಸ್ ನೀಡಿ ಚಿನ್ನಾಭರಣ ಲೂಟಿ; ಲೇಡಿ ಗ್ಯಾಂಗ್ ಅರೆಸ್ಟ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.