ಸಂಚಾರಕ್ಕೆ ಅಯೋಗ್ಯವಾದ ಪಿಲಾರುಖಾನ-ಸೂಡ ರಸ್ತೆ


Team Udayavani, Jul 10, 2018, 6:00 AM IST

0607shirva3.jpg

ಶಿರ್ವ: ಕಟಪಾಡಿ- ಶಿರ್ವ-ಬೆಳ್ಮಣ್‌ ಮುಖ್ಯರಸ್ತೆಯ ಪಿಲಾರುಖಾನದಿಂದ ಸೂಡ-ಪಳ್ಳಿಯನ್ನು ಸಂಪರ್ಕಿಸುವ ರಸ್ತೆಯು ತೀರಾ ಹದಗೆಟ್ಟಿದ್ದು ವಾಹನ ಸಂಚಾರ ದುಸ್ತರವಾಗಿದೆ. ರಸ್ತೆಯ ಡಾಂಬರು ಕಿತ್ತು ಹೋಗಿ ಹೊಂಡ ಗುಂಡಿಗಳು ಉಂಟಾಗಿ ಅಪಾಯದ ಸ್ಥಿತಿ ನಿರ್ಮಾಣಗೊಂಡಿದೆ.

ಸಂಚಾರಕ್ಕೆ ಅಯೋಗ್ಯ
ಪಿಲಾರುಖಾನದಿಂದ ಸೂಡ ಮಾರ್ಗವಾಗಿ ಪಳ್ಳಿ ನಿಂಜೂರು ಕಡೆಗೆ ಮತ್ತು ನಂದಳಿಕೆ ಮತ್ತು ಹಾಳೆಕಟ್ಟೆ-ಕಲ್ಯಾಕಡೆಗೆ ಸಾಗಲು ಹತ್ತಿರದ ರಸ್ತೆಯಾಗಿದೆ.ಸೂಡದಿಂದ ಶಿರ್ವ ಹಾಗೂ ಬೆಳ್ಮಣ್‌ ಕಡೆಗೆ ಹೋಗುವ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಲ್ಲದೆ ಪ್ರತಿನಿತ್ಯ ನೂರಾರು ವಾಹನಗಳು ಓಡಾಟ ನಡೆಸುತ್ತಿವೆ.
ಅಧಿಕ ಭಾರದ ಲಾರಿ,ಟಿಪ್ಪರ್‌ಗಳ ಓಡಾಟದಿಂದಾಗಿ ರಸ್ತೆ ಮಳೆಗಾಲದಲ್ಲಿ ಸಂಪೂರ್ಣ ಹಾಳಾಗಿದೆ. ಮಳೆಗಾಲದಲ್ಲಿ ಹೊಂಡ ಗುಂಡಿಗಳಲ್ಲಿ ನೀರು ನಿಂತು ದ್ವಿಚಕ್ರವಾಹನ ಸವಾರರು ಮತ್ತು ಪಾದಾಚಾರಿಗಳ ಮೇಲೆ ಕೆಸರಿನ ಸಿಂಚನವಾಗುತ್ತಿದೆ.

ವಾಹನ ಸಂಚಾರಕ್ಕೆ ಹಿಂದೇಟು
ಹಲವಾರು ವರ್ಷಗಳ ಹಿಂದೆ ಈ ರಸ್ತೆಗೆ ಡಾಂಬರು ಹಾಕಲಾಗಿತ್ತು. ಸೂಡ ಹಾಗೂ ಪಳ್ಳಿಯ ಸಮೀಪದ ಪ್ರದೇಶಗಳಲ್ಲಿ ಕಲ್ಲಿನ ಕೋರೆಗಳಿದ್ದು ಅಧಿಕ ಭಾರದ ಕಲ್ಲುಗಳನ್ನು ಹೊತ್ತ ಲಾರಿ,ಟಿಪ್ಪರ್‌ಗಳು ಹೆಚ್ಚಾಗಿ ಈ ರಸ್ತೆಯಲ್ಲೇ ಸಾಗುವುದರಿಂದ ರಸ್ತೆಯ ಡಾಂಬರು ಕಿತ್ತು ಹೋಗಿ ಹೊಂಡ ಗುಂಡಿ ನಿರ್ಮಾಣಗೊಂಡಿದೆ. ಸೂಡ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಮತ್ತು ಪಳ್ಳಿಕಡೆ ಹೋಗಲು ನಿಗದಿತ ಅವಧಿಯಲ್ಲಿ ಮಾತ್ರ ಬಸ್‌ಗಳಿದ್ದು ಬೇರೆ ಸಮಯದಲ್ಲಿ ನಾಗರಿಕರು ರಿಕ್ಷಾ ಅಥವಾ ಇತರೆ ಬಾಡಿಗೆ ವಾಹನಗಳನ್ನು ಅವಲಂಬಿಸಬೇಕಾಗಿದೆ. ರಸ್ತೆ ಹೊಂಡ ಗುಂಡಿಗಳಿಂದ ಕೂಡಿರುವುದರಿಂದ ಬಾಡಿಗೆ ವಾಹನಗಳವರು ಈ ರಸ್ತೆಯಲ್ಲಿ ಸಾಗಲು ಹಿಂದೇಟು ಹಾಕುತ್ತಿದ್ದು ಜನರಿಗೆ ತೊಂದರೆಯಾಗಿದೆ.
ಕೆಲವು ವರ್ಷಗಳ ಹಿಂದೆ ಸೂಡದ ಕಲ್ಲಿನ ಕೋರೆಯಿಂದ ಜಲ್ಲಿಕಲ್ಲು ಸಾಗಿಸಿದ್ದರಿಂದಾಗಿ ಡಾಮರೀಕರಣಗೊಂಡಿದ್ದ ರಸ್ತೆಯು ಸಂಪೂರ್ಣ ಹದಗೆಟ್ಟು ವಾಹನ ಸವಾರರು ಚಲಿಸಲಾಗದಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು.ಬಳಿಕ ನಾಗರಿಕರ ಪ್ರತಿಭಟನೆಯಿಂದ ಮರು ಡಾಮರೀಕರಣಗೊಂಡಿತ್ತು.ಇದೀಗ ಸಂಚಾರಕ್ಕೆ ಅಯೋಗ್ಯವಾದ ರಸ್ತೆಯ ಬಗ್ಗೆ ನಾಗರಿಕರು ಪ್ರತಿಭಟಿಸಬೇಕಾದ ಅನಿವಾರ್ಯ ಪರಿಸ್ಥಿತಿ ಎದುರಾಗಿದೆ. ಸಂಚಾರಕ್ಕೆ ದುಸ್ತರವಾದ ರಸ್ತೆಯನ್ನು ಜನಪ್ರತಿನಿಧಿಗಳು,ಸಂಬಂಧಪಟ್ಟ ಇಲಾಖೆ ಕೂಡಲೇ ಕ್ರಮ ಕೈಗೊಂಡು ಸರಿಪಡಿಸಬೇಕಾಗಿದೆ.

ರಸ್ತೆಯಲ್ಲಿ ಹೊಂಡ ಗುಂಡಿಗಳಿದ್ದು ವಾಹನದಲ್ಲಿ ಸಂಚಾರ ನಡೆಸುವುದೇ ಕಷ್ಟಕರವಾಗಿದೆ. ಶಾಲಾ ವಿದ್ಯಾರ್ಥಿಗಳು ಕೂಡಾ ಈ ಭಾಗದಿಂದ ಸಂಚರಿಸುತ್ತಿದ್ದು ಹೊಂಡಗಳಲ್ಲಿ ನೀರು ತುಂಬಿರುವುದರಿಂದಾಗಿ ದ್ವಿಚಕ್ರವಾಹನ ಸವಾರರು ಬಿದ್ದು ಕೈಕಾಲು ಮುರಿದುಕೊಳ್ಳಬೇಕಾದ ಪರಿಸ್ಥಿತಿ ಎದುರಾಗಿದೆ ಎಂದು ಸೂಡ ಅರ್ಚಕರಾದ ಶ್ರೀಶ ಭಟ್‌ ಅವರು ಹೇಳುತ್ತಾರೆ.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-kota-pammu

Pramod Madhwaraj ಅವರದ್ದು ಯಾರನ್ನೂ ದ್ವೇಷಿಸದ ಅಪರೂಪದ ವ್ಯಕ್ತಿತ್ವ: ಕೋಟ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

4

Malpe: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

1

Udupi: ಅಡ್ಡಗಟ್ಟಿ ಹಲ್ಲೆ, ಜೀವಬೆದರಿಕೆ; ದೂರು

13(1)

Udupi: ಸಂತೆಕಟ್ಟೆ ಓವರ್‌ಪಾಸ್‌ ಕಾಮಗಾರಿ ಚುರುಕು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.