ಗಿಳಿಯಾರು: ಅಂತರಗಂಗೆಯಿಂದ ನೆರೆ ಹಾವಳಿ


Team Udayavani, Jul 10, 2018, 6:00 AM IST

0907kota1e.jpg

ಕೋಟ: ಕೋಟ ಗ್ರಾ.ಪಂ. ವ್ಯಾಪ್ತಿಯ ಗಿಳಿಯಾರಿನಲ್ಲಿ ಅಂತರಗಂಗೆ ಸಮಸ್ಯೆಯಿಂದ ಸೇತುವೆಯಲ್ಲಿ ನೀರು ಹರಿಯಲು ಅಡ್ಡಿಯಾಗಿ ಕಳೆದ 12ದಿನಗಳಿಂದ ನೆರೆ ಸಮಸ್ಯೆ ಎದುರಾಗಿದ್ದು   300 ಎಕ್ರೆಗೂ ಅಧಿಕ ಪ್ರದೇಶದಲ್ಲಿ ನಾಟಿ ಮಾಡಿದ ನೇಜಿ ಕೊಳೆಯುವ ಸ್ಥಿತಿಯಲ್ಲಿದೆ.

ಹಲವು ವರ್ಷಗಳ ಹಿಂದೆ  ಗಿಳಿಯಾರು ರಸ್ತೆಯಲ್ಲಿ  ಹಳೆಯ ತಂತ್ರಜ್ಞಾನದ ಮೋರಿ ಅಳವಡಿಸಿ ಸೇತುವೆ ನಿರ್ಮಿಸಿದ್ದು  ಪ್ರತಿವರ್ಷ ಮಳೆಗಾಲದಲ್ಲಿ  ಅಂತರಗಂಗೆ ಮೋರಿಗೆ ಸಿಲುಕಿ ಕೃತಕ ನೆರೆಯಾಗಿ ಬೆಳೆ ನಾಶವಾಗುತ್ತದೆ. ಈ ಬಾರಿ ನೆರೆ ಪ್ರಮಾಣ ಕೂಡ ಜಾಸ್ತಿ ಇದ್ದು  ಎರಡು ಸಮಸ್ಯೆಗಳು ಒಟ್ಟಾಗಿದೆ.

300 ಎಕರೆಗೂ ಅಧಿಕ ಬೆಳೆ ನಾಶ
ಗಿಳಿಯಾರಿನಿಂದ ತೆಕ್ಕಟ್ಟೆ ಮಲ್ಯಾಡಿಯ ತನಕ ಹೊಳೆಯ ಎರಡೂ ಕಡೆಗಳಲ್ಲಿ ಸುಮಾರು 300 ಎಕ್ರೆ ಗದ್ದೆಗೆ ನೀರು ಆವರಿಸಿದ್ದು  ಬೆಳೆ ನಾಶವಾಗುವ ಆತಂಕವಿದೆ ಹಾಗೂ 50ಎಕ್ರೆಗೂ ಹೆಚ್ಚು ಈಗಾಗಲೇ ಹಾನಿಯಾಗಿದೆ.

ರೈತರಿಂದ ಹಿಡಿಶಾಪ
ಮಳೆಗಾಲಕ್ಕೆ ಮೊದಲು ಹೊಳೆಯ ಹೂಳೆತ್ತಿ ನೀರು ಸರಾಗವಾಗಿ ಹರಿಯುವಂತೆ ವ್ಯವಸ್ಥೆ ಮಾಡಬೇಕು. ಹಳೆಯ ತಂತ್ರಜ್ಞಾನದ ಸೇತುವೆಯನ್ನು ತೆರವುಗೊಳಿಸಿ ಹೊಸ ಸೇತುವೆ ನಿರ್ಮಿಸಬೇಕು. ಅಂತರಗಂಗೆ ನಿಯಂತ್ರಣಕ್ಕೆ  ಕೃಷಿ ಇಲಾಖೆಯವರು ಕ್ರಮಕೈಗೊಳ್ಳಬೇಕು ಎಂದು ಇಲ್ಲಿನ ರೈತರು ಹಲವು ವರ್ಷಗಳಿಂದ ಬೇಡಿಕೆ ಸಲ್ಲಿಸುತ್ತಿದ್ದಾರೆ. ಆದರೆ ಈ ಕುರಿತು ಯಾರೂ ಕ್ರಮಕೈಗೊಳ್ಳದ ಕುರಿತು ರೈತರು ಹಿಡಿಶಾಪ ಹಾಕುತ್ತಿದ್ದಾರೆ.

ಸ್ಥಳಕ್ಕೆ  ಜಿ.ಪಂ. ಗ್ರಾ.ಪಂ. ಪ್ರತಿನಿಧಿಗಳ ಭೇಟಿ
ಸ್ಥಳಕ್ಕೆ ಜಿಲ್ಲಾ ಪಂಚಾಯತ್‌ ಸದಸ್ಯ ರಾಘವೇಂದ್ರ ಕಾಂಚನ್‌ ಹಾಗೂ ಕೋಟ ಗ್ರಾಮ ಪಂಚಾಯತ್‌ ಸದಸ್ಯೆ ವನಿತಾ ಶ್ರೀಧರ್‌ ಆಚಾರ್ಯ ಭೇಟಿ ನೀಡಿ ಪರಿಶೀಲಿಸಿದರು ಹಾಗೂ ಕೃಷಿ ಮತ್ತು ಜಿ.ಪಂ. ಅಧಿಕಾರಿಗಳ ಜತೆ ಚರ್ಚಿಸಿದ ಜಿಲ್ಲಾ ಪಂಚಾಯತ್‌ ಸದಸ್ಯರು ಅಂತರಗಂಗೆ ತೆರವಿಗೆ ಅನುದಾನ ನೀಡು ವುದಾಗಿ ತಿಳಿಸಿದರು ಹಾಗೂ ಗ್ರಾಮ ಪಂಚಾ ಯತ್‌ ಕೂಡ ಅನುದಾನದ ಭರವಸೆ ನೀಡಿದೆ.
 
ತಾಲೂಕು ಪಂಚಾಯತ್‌ ಮಾಜಿ ಸದಸ್ಯ ಭರತ್‌ ಕುಮಾರ್‌ ಶೆಟ್ಟಿ, ರಾಘವೇಂದ್ರ ಶೆಟ್ಟಿ ಹಂಡಿಕೆರೆ ಮುಂತಾದವರು ರೈತರ ಸಮಸ್ಯೆ ಕುರಿತು ವಿವರಿಸಿದರು.

ರೈತರಿಂದಲೇ ಕಾರ್ಯಾಚರಣೆ 
ಹತ್ತಾರು ವರ್ಷಗಳಿಂದ ಇಲ್ಲಿನ ಸ್ಥಳೀಯ ಪ್ರಗತಿಪರ ಕೃಷಿಕ ಭೋಜ ಪೂಜಾರಿಯವರ ನೇತೃತ್ವದಲ್ಲಿ ಗಿಳಿಯಾರಿನ ಕೃಷಿಕರು ಹಾಗೂ ಯುವಕರನ್ನು  ಸಂಘಟಿಸಿಕೊಂಡು ಸೇತುವೆಯಲ್ಲಿ ಸಿಲುಕಿದ ಅಂತರಗಂಗೆಯನ್ನು  ಬೇರ್ಪಡಿಸುವ ಕಾರ್ಯ ನಡೆಯುತಿತ್ತು. ಆದರೆ ಪ್ರತಿ ವರ್ಷ ಇದೇ ಸಮಸ್ಯೆ ಮರುಕಳಿಸುತ್ತಿರುವುದರಿಂದ ಹಾಗೂ ಶಾಶ್ವತ ಪರಿಹಾರವಿಲ್ಲದಿರುವುದರಿಂದ ಈ ಬಾರಿ ಬೇಸರಗೊಂಡು ಸ್ವತ್ಛತೆ ನಡೆಸಿರಲಿಲ್ಲ.

ಇದೀಗ ಸಮಸ್ಯೆ ಉಲ್ಬಣಿಸಿರುವುದರಿಂದ ಸೋಮವಾರ ಸ್ಥಳೀಯರು ಮತ್ತೆ ಕಾರ್ಯಾಚರಣೆ ಗಿಳಿದು ಅಂತರಗಂಗೆ ಬೇರ್ಪಡಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ.

ಉದಯವಾಣಿ ವರದಿ ಮಾಡಿತ್ತು
ಅತರಗಂಗೆ ಸಮಸ್ಯೆಯ ಕುರಿತು ಮಳೆಗಾಲಕ್ಕೆ ಮೊದಲು ಉದಯವಾಣಿ ವಿಸ್ತೃತ ವರದಿ ಪ್ರಕಟಿಸಿ ಬೆಳೆ ನಾಶದ ಅಪಾಯದ ಕುರಿತು ಎಚ್ಚರಿಸಿತ್ತು. ಆದರೆ ಈ ಕುರಿತು ಸಮರ್ಪಕ ಕ್ರಮಕೈಗೊಳ್ಳದ ಕಾರಣ ಇದೀಗ ಸಮಸ್ಯೆ ಉಲ್ಬಣಿಸಿದೆ.

ಟಾಪ್ ನ್ಯೂಸ್

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Udupi: ಮದ್ಯ ಸೇವಿಸಿ ಬಸ್‌ ಚಾಲನೆ: ಪ್ರಕರಣ ದಾಖಲು

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

POlice

Kundapura: ನಿಂದನೆ, ಜೀವ ಬೆದರಿಕೆ: ಕೇಸು ದಾಖಲು

13

Udupi: ಅಪಾಯಕಾರಿಯಾಗಿ ಬಸ್‌ ಚಾಲನೆ: ಪ್ರಕರಣ ದಾಖಲು

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.