ಗ್ರಾಮಾಂತರ ಶಾಲೆಯಲ್ಲಿ ಕೈತೋಟ ಕಡ್ಡಾಯ!


Team Udayavani, Jul 10, 2018, 2:20 AM IST

kaithota-9-7.jpg

ಪುತ್ತೂರು: ಗ್ರಾಮಾಂತರ ಪ್ರದೇಶದ ಶಾಲಾ ವಿದ್ಯಾರ್ಥಿಗಳ ಪೌಷ್ಟಿಕ ಆಹಾರ ತಯಾರಿಕೆಗೆ ಶಾಲೆಯಲ್ಲೇ ವೇದಿಕೆ ಸಿದ್ಧವಾಗುತ್ತಿದೆ. ಪೌಷ್ಟಿಕ ಆಹಾರ ತಯಾರಿಕೆ ಜತೆಗೆ ಕೃಷಿ ಕೆಲಸಗಳ ಬಗ್ಗೆ ಅರಿವು ಮೂಡಿ ಸುವ ವಿಶಿಷ್ಟ ಯೋಜನೆಯಿದು. ಹೆಸರೇ ಸೂಚಿಸುವಂತೆ ಇದು ಅಕ್ಷರ- ಕೈತೋಟ. ಅಕ್ಷರ ಕಲಿಕೆಯ ಜತೆಗೆ ಕೈ ತೋಟದ ನಿರ್ಮಾಣವೂ ನಡೆಯಲಿದೆ. ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ| ಎಂ.ಆರ್‌. ರವಿ ಅವರು ಈ ಯೋಜನೆಯನ್ನು ರೂಪಿಸಿದ್ದಾರೆ. ಜಿಲ್ಲೆಯ 1,400 ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಪೈಕಿ 1,000 ಶಾಲೆಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಪುತ್ತೂರು ತಾಲೂಕಿನಲ್ಲಿ 190 ಶಾಲೆಗಳು ಇದರಲ್ಲಿ ಸೇರಿವೆ. ನರೇಗಾ ಯೋಜನೆಯಡಿ ಕೆಲಸ ಕಾರ್ಯಗಳು ನಡೆಯಲಿವೆ.

ತೋಟಗಾರಿಕೆ ಹಾಗೂ ಅಕ್ಷರ ದಾಸೋಹದ ಸಹಕಾರ ಪಡೆದುಕೊಂಡು ಗ್ರಾಮಾಂತರದ ಪ್ರತಿ ಶಾಲೆಯಲ್ಲಿಯೂ ಕೈ ತೋಟ ರೂಪು ಪಡೆಯಲಿದೆ. ಶಾಲಾ ಮುಖ್ಯ ಗುರುಗಳೇ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಿಕೊಡಬೇಕು. ಇದನ್ನು ಗ್ರಾ.ಪಂ.ನಲ್ಲಿ ನಿರ್ಣಯ ಮಾಡಬೇಕು. ನರೇಗಾ ಯೋಜನೆಗೆ ಗ್ರಾ.ಪಂ. ನಿರ್ಣಯ ಅಗತ್ಯ. ಇದನ್ನು ಜಿ.ಪಂ. ಸಿ.ಎಸ್‌.ಗೆ ಕಳುಹಿಸಿ ಕೊಡಲಾಗುವುದು. ಬಳಿಕವಷ್ಟೇ ಗಿಡಗಳ ಹಂಚಿಕೆ ಪ್ರಮಾಣ ಹಾಗೂ ತಾಂತ್ರಿಕ ಮಂಜೂರಾತಿ ನೀಡಲಾಗುತ್ತದೆ. ಅಂದ ಹಾಗೆ, ಶಾಲಾ ಕೈತೋಟ ರಚನೆ ಇದೇ ಮೊದಲಲ್ಲ.

ಕೆಲವು ಶಾಲೆಗಳಲ್ಲಿ ಈ ಮೊದಲೇ ಕೈತೋಟ ರಚನೆ ಮಾಡಲಾಗಿದೆ. ಆದರೆ ನರೇಗಾ ಯೋಜನೆಯಡಿ ಸೇರಿಸಿ, ಪ್ರತಿ ಶಾಲೆಯಲ್ಲೂ ಆರಂಭಿಸುತ್ತಿರುವುದು ಮಾತ್ರ ಇದೇ ಮೊದಲು. ಮೊದಲಿಗೆ ಮಕ್ಕಳ ಹೆತ್ತವರ ಸಹಕಾರ ಪಡೆದುಕೊಂಡು ಕೈತೋಟ ನಿರ್ಮಾಣ ಮಾಡಬೇಕು. ಜಾಬ್‌ ಕಾರ್ಡ್‌ ಹೊಂದಿರುವ ಮಕ್ಕಳ ಹೆತ್ತವರಿಗೆ ದಿನಕ್ಕೆ 249 ರೂ. ಪಾವತಿ ಆಗುತ್ತದೆ. ಒಮ್ಮೆ ಕೆಲಸ ಪೂರ್ಣಗೊಂಡ ಕೈತೋಟದ ನಿರ್ವಹಣೆ ಜವಾಬ್ದಾರಿ ಶಾಲಾ ಹೆಗಲಿಗೆ ಬೀಳುತ್ತದೆ.

ಯಾವೆಲ್ಲ ಗಿಡಗಳು?
ತರಕಾರಿ ಜತೆಗೆ ಹಣ್ಣಿನ ಗಿಡಗಳಿಗೂ ಪ್ರಾಶಸ್ತ್ಯ ನೀಡಲಾಗಿದೆ. ಮಾವು, ಸಪೋಟ, ಚಿಕ್ಕು, ಕರಿಬೇವು, ಹಲಸು, ಪಪ್ಪಾಯಿ, ಬಾಳೆಗಿಡ, ಪೇರಳೆ ಹಾಗೂ ವಾಣಿಜ್ಯ ಕೃಷಿಯಾದ ಅಡಿಕೆ, ತೆಂಗು, ಕರಿಮೆಣಸು ಗಿಡಗಳನ್ನು ನೀಡಲಾಗುತ್ತದೆ. ಆಹಾರ ಉತ್ಪನ್ನ ಮಾತ್ರವಲ್ಲ, ಶಾಲಾ ಆವರಣದಲ್ಲಿ ಹೆಚ್ಚು ಜಾಗ ಇದ್ದರೆ, ವಾಣಿಜ್ಯ ಬೆಳೆಗಳಿಂದ ವರಮಾನವನ್ನು ಪಡೆಯಬಹುದು.

ಪಂಚ ಯೋಜನೆ
ಕೈತೋಟ ರಚನೆ ಜತೆಗೆ, ಆಟದ ಮೈದಾನ, ಮಳೆಕೊಯ್ಲು, ಆವರಣ ಗೋಡೆ ಹಾಗೂ ಸೋಕ್‌ ಪಿಟ್‌ ನಿರ್ಮಾಣಕ್ಕೆ ಯೋಜನೆ ಸಿದ್ಧ ಪಡಿಸಲಾಗಿದೆ. ಇವೆಲ್ಲವನ್ನು ನರೇಗಾ ಯೋಜನೆಯಡಿಯೇ ಮಾಡಬಹುದು. ಆಟದ ಮೈದಾನಕ್ಕೆ 2.18 ಲಕ್ಷ ರೂ. ನೀಡುವ ಅವಕಾಶ ಇದೆ. ಮಳೆಕೊಯ್ಲು ಭವಿಷ್ಯದ ಸಂಪತ್ತು. ಗೋಳಿತ್ತೂಟ್ಟು ಹಾಗೂ ಹಿರೇಬಂಡಾಡಿಯಲ್ಲಿ ಯೋಜನೆ ಅನುಷ್ಠಾನಗೊಂಡಿದೆ. ಇದನ್ನು ಪ್ರತಿ ಶಾಲೆಗಳಿಗೂ ತಲುಪಿಸಲು ಸಿದ್ಧತೆ ನಡೆಯುತ್ತಿದೆ. ಇದಕ್ಕಾಗಿ 1.60 ಲಕ್ಷ ರೂ.ಗಳನ್ನು ವಿನಿಯೋಗ ಮಾಡಬಹುದು. ಆವರಣ ಗೋಡೆ ತುಂಬಾ ಅಗತ್ಯ. ಹೆಚ್ಚಿನ ಶಾಲೆಗಳಲ್ಲಿ ಆವರಣ ಗೋಡೆಯೇ ಇಲ್ಲ. ಕೊನೆಯದಾಗಿ, ಸೋಕ್‌ ಪಿಟ್‌. ಇದು ಕೊಳಚೆ ನೀರನ್ನು ಇಂಗಿಸುವ ಯೋಜನೆ. ನರೇಗಾದಡಿ ಇದಕ್ಕಾಗಿ 14 ಸಾವಿರ ರೂ. ನೀಡಲಾಗುತ್ತದೆ. ಕೊಳಚೆ ನೀರಿನಿಂದ ರೋಗಭೀತಿ ಹರಡುವುದನ್ನು ತಡೆಗಟ್ಟಲು ಇದು ಸಹಾಯ ಮಾಡುತ್ತದೆ.

ಹಿನ್ನೆಲೆ
ಹಲವು ವರ್ಷಗಳಿಂದ ಶಿಕ್ಷಕರೇ ಸ್ವ-ಆಸಕ್ತಿಯಿಂದ ಕೈತೋಟ ನಿರ್ಮಿಸುತ್ತಿದ್ದರು. ಇಲ್ಲಿ ಬೆಳೆದ ತರಕಾರಿಯನ್ನು ಬಿಸಿಯೂಟಕ್ಕೆ ಬಳಕೆ ಮಾಡುತ್ತಿದ್ದರು. 2017-18ನೇ ಶೈಕ್ಷಣಿಕ ಸಾಲಿನಲ್ಲಿ ಜಿಲ್ಲೆಯ 407 ಶಾಲೆಗಳಲ್ಲಿ ಕೈತೋಟ ನಿರ್ಮಿಸಲಾಗಿತ್ತು. ಇದನ್ನು ಆಧರಿಸಿ ಜಿಲ್ಲಾ ಪಂಚಾಯತ್‌ ನಿಂದ ಅಕ್ಷರ ಕೈತೋಟ ಎಂಬ ಕಿರುಹೊತ್ತಗೆಯನ್ನು ಹೊರತಂದಿದ್ದರು. ಇದು ರಾಜ್ಯ ಮಟ್ಟದಲ್ಲಿ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದ್ದು, ರಾಷ್ಟ್ರಮಟ್ಟದವರೆಗೂ ತಲುಪಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಗ್ರಾಮಾಂತರದ ಪ್ರತಿ ಶಾಲೆಗಳಲ್ಲಿ ಅಕ್ಷರ- ಕೈತೋಟ ರಚನೆಗೆ ಮುಂದಾಗಿದೆ.

ನಗರ ಪ್ರದೇಶಕ್ಕಿಲ್ಲ
ನಗರ ಪ್ರದೇಶದ ವಿದ್ಯಾರ್ಥಿಗಳಿಗೆ ಕೃಷಿ ಚಟುವಟಿಕೆಯ ಟಚ್‌ ಕಡಿಮೆಯೇ. ಇತ್ತೀಚಿನ ದಿನಗಳಲ್ಲಿ, ಉತ್ತಮ ಸ್ಥಿತಿಗತಿ ಇರುವ ಕುಟುಂಬಗಳ ಮಕ್ಕಳನ್ನು ನಗರ ಪ್ರದೇಶದ ಶಾಲೆಗಳಿಗೇ ಕಳುಹಿಸಲಾಗುತ್ತಿದೆ. ಬಡ ಮನೆತನದವರು ಹಾಗೂ ಕೃಷಿ ಹಿನ್ನೆಲೆಯ ಮನೆಯವರು ಮಾತ್ರ ಗ್ರಾಮೀಣ ಭಾಗದ ಶಾಲೆಗಳಿಗೆ ಆಗಮಿಸುತ್ತಾರೆ. ಆದ್ದರಿಂದ ಇಂತಹ ಯೋಜನೆಗಳನ್ನು ನಗರ ಪ್ರದೇಶಗಳಿಗೂ ಅನ್ವಯಿಸಿದರೆ ಉತ್ತಮ ಎಂಬ ಅಭಿಪ್ರಾಯವೂ ಕೇಳಿಬಂದಿದೆ.

190 ಶಾಲೆಗಳಲ್ಲಿ
ಪುತ್ತೂರು ತಾಲೂಕಿನ ನಗರ ಪ್ರದೇಶಗಳನ್ನು ಹೊರತುಪಡಿಸಿ ಗ್ರಾಮಾಂತರ ಪ್ರದೇಶದ 190 ಶಾಲೆಗಳಲ್ಲಿ ಕೈತೋಟ ರಚನೆ ಆಗಲಿದೆ. ಶಾಲಾ ಮಕ್ಕಳಲ್ಲಿ ಕಂಡುಬರುವ ಆರೋಗ್ಯದ ಸಮಸ್ಯೆಗೆ ಆಹಾರದ ಪೌಷ್ಟಿಕಾಂಶದ ಕೊರತೆ ಕಾರಣ. ಈ ನಿಟ್ಟಿನಲ್ಲಿ ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ| ಎಂ.ಆರ್‌. ರವಿ ಆದೇಶ ಹೊರಡಿಸಿದ್ದಾರೆ. 
– ಡಿ.ಎನ್‌. ಸುಕನ್ಯಾ, ಕ್ಷೇತ್ರ ಶಿಕ್ಷಣಾಧಿಕಾರಿ, ಪುತ್ತೂರು

— ಗಣೇಶ್‌ ಎನ್‌. ಕಲ್ಲರ್ಪೆ

ಟಾಪ್ ನ್ಯೂಸ್

ಹುಲಿಕೆರೆ ಕೆರೆ ಬಳಿಯ ರಸ್ತೆಯಲ್ಲಿ ಬಿರುಕು… ಕುಸಿಯುವ ಹಂತದಲ್ಲಿದೆ ಮಣ್ಣು, ಆತಂಕದಲ್ಲಿ ಜನ

Vijayanagara: ಹುಲಿಕೆರೆ ಕೆರೆ ಬಳಿಯ ರಸ್ತೆಯಲ್ಲಿ ಬಿರುಕು.. ಕುಸಿಯುವ ಭೀತಿ, ಆತಂಕದಲ್ಲಿ ಜನ

9-mysore-film-city-2

Mysore- Film City: ಮೈಸೂರಿಗೆ ಚಿತ್ರನಗರಿ ಕಿರೀಟ

Renukaswamy Case: ಬೆನ್ನು ನೋವಿನಿಂದ ಬಳಲುತ್ತಿರುವ ದರ್ಶನ್.. ಬೆಂಗಳೂರು ಶಿಫ್ಟ್ ಆಗ್ತಾರಾ?

Renukaswamy Case: ಬೆನ್ನು ನೋವಿನಿಂದ ಬಳಲುತ್ತಿರುವ ದರ್ಶನ್.. ಬೆಂಗಳೂರು ಶಿಫ್ಟ್ ಆಗ್ತಾರಾ?

1-tamilnadu

Tamil Nadu; ಎಕ್ಸ್‌ಪ್ರೆಸ್ ರೈಲು ಗೂಡ್ಸ್ ರೈಲಿಗೆ ಢಿಕ್ಕಿ: ಹಲವರಿಗೆ ಗಾಯ

7-mysore

Mysore: ರಾಜ ಪ್ರಭುತ್ವದ ನಾಡ ಕುಸ್ತಿ: ರಾಜಾಶ್ರಯ ಪಡೆದು ಉತ್ತುಂಗಕ್ಕೇರಿದ್ದ ನಾಡಿನ ಗಂಡುಕಲೆ

Rohit-SHarma-(2)

Test Series; ನ್ಯೂಜಿ ಲ್ಯಾಂಡ್ ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟ

1-aaatttt

Tamil Nadu; ಎಕ್ಸ್‌ಪ್ರೆಸ್ ರೈಲು ಗೂಡ್ಸ್ ರೈಲಿಗೆ ಢಿಕ್ಕಿ: ಹೊತ್ತಿ ಉರಿದ ಬೆಂಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Subramanya: ಮನೆ ಮನೆಗೆ ಕೇರ್ಪಡ ದೇವಳದ ಹುಲಿ

11

Kadaba: ಮನೆಗಳಲ್ಲಿ ಮಕ್ಕಳಿಂದಲೇ ಶಾರದಾ ಪೂಜೆ

10(2)

Bantwal: ಪಾಣೆಮಂಗಳೂರು ಶಾಲಾ ಶಾರದೋತ್ಸವಕ್ಕೆ ಶತಮಾನ

sullia

Sullia: ಬಣ್ಣದ ಮಾಲಿಂಗರ ಮಹಿರಾವಣನ ಯಕ್ಷ ಪ್ರತಿಮೆ ಅನಾವರಣ

Puttur: ಕ್ಯಾಂಪ್ಕೋದಲ್ಲೂ ಹೊಸ ಅಡಿಕೆ ಧಾರಣೆ ಏರಿಕೆ

Puttur: ಕ್ಯಾಂಪ್ಕೋದಲ್ಲೂ ಹೊಸ ಅಡಿಕೆ ಧಾರಣೆ ಏರಿಕೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಹುಲಿಕೆರೆ ಕೆರೆ ಬಳಿಯ ರಸ್ತೆಯಲ್ಲಿ ಬಿರುಕು… ಕುಸಿಯುವ ಹಂತದಲ್ಲಿದೆ ಮಣ್ಣು, ಆತಂಕದಲ್ಲಿ ಜನ

Vijayanagara: ಹುಲಿಕೆರೆ ಕೆರೆ ಬಳಿಯ ರಸ್ತೆಯಲ್ಲಿ ಬಿರುಕು.. ಕುಸಿಯುವ ಭೀತಿ, ಆತಂಕದಲ್ಲಿ ಜನ

9-mysore-film-city-2

Mysore- Film City: ಮೈಸೂರಿಗೆ ಚಿತ್ರನಗರಿ ಕಿರೀಟ

Renukaswamy Case: ಬೆನ್ನು ನೋವಿನಿಂದ ಬಳಲುತ್ತಿರುವ ದರ್ಶನ್.. ಬೆಂಗಳೂರು ಶಿಫ್ಟ್ ಆಗ್ತಾರಾ?

Renukaswamy Case: ಬೆನ್ನು ನೋವಿನಿಂದ ಬಳಲುತ್ತಿರುವ ದರ್ಶನ್.. ಬೆಂಗಳೂರು ಶಿಫ್ಟ್ ಆಗ್ತಾರಾ?

1-tamilnadu

Tamil Nadu; ಎಕ್ಸ್‌ಪ್ರೆಸ್ ರೈಲು ಗೂಡ್ಸ್ ರೈಲಿಗೆ ಢಿಕ್ಕಿ: ಹಲವರಿಗೆ ಗಾಯ

7-mysore

Mysore: ರಾಜ ಪ್ರಭುತ್ವದ ನಾಡ ಕುಸ್ತಿ: ರಾಜಾಶ್ರಯ ಪಡೆದು ಉತ್ತುಂಗಕ್ಕೇರಿದ್ದ ನಾಡಿನ ಗಂಡುಕಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.