ತೋಡಿನಂತಾದ ಅರಂತೋಡು – ಎಲಿಮಲೆ ರಸ್ತೆ


Team Udayavani, Jul 10, 2018, 3:10 AM IST

elimale-road-9-7.jpg

ಅರಂತೋಡು: ಅರಂತೋಡು ಮಾಣಿ-ಮೈಸೂರು ರಾಜ್ಯ ಹೆದ್ದಾರಿಯಿಂದ ಸಂಪರ್ಕ ಕಲ್ಪಿಸುವ ಅರಂತೋಡು-ಅಡ್ತಲೆ-ಮರ್ಕಂಜ-ಎಲಿಮಲೆ ಲೋಕೋಪಯೋಗಿ (PWD) ರಸ್ತೆ ಸಂಪೂರ್ಣ ಕೆಸರುಮಯವಾಗಿದ್ದು, ಈ ಮಾರ್ಗವಾಗಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳುವ ಭಕ್ತರ ಸಹಿತ ಇತರ ವಾಹನ ಚಾಲಕರೂ ತೊಂದರೆಗೆ ಒಳಗಾಗಿದ್ದಾರೆ. ಇಲಾಖೆಯವರು 8 ಲಕ್ಷ ರೂ. ಅನುದಾನದಲ್ಲಿ ಜನವರಿ ತಿಂಗಳಿನಲ್ಲಿ ರಸ್ತೆಯ ಎರಡೂ ಬದಿಗಳಿಗೆ ಮಣ್ಣು ಹಾಕಿ ಸಮತಟ್ಟು ಮಾಡಿದ್ದರು. ಈ ಮಣ್ಣು ಸಂಪೂರ್ಣ ಕೆಸರಾಗಿ ಪರಿವರ್ತನೆಗೊಂಡಿದೆ. ಇದರಲ್ಲಿ ಚಾಲಕರು ವಾಹನ ಚಲಾಯಿಸಲು ಹರಸಹಾಸ ಪಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಗೂಗಲ್‌ ನಲ್ಲಿ ಮಾಹಿತಿ ಲಭ್ಯ
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ ಪ್ರಯಾಣಿಸಲು ಅತೀ ಹತ್ತಿರದ ರಸ್ತೆ ಇದಾಗಿದೆ ಎಂದು ಗೂಗಲ್‌ ನಲ್ಲಿ ಮಾಹಿತಿ ಇದೆ. ಈ ಕಾರಣದಿಂದ ಮಡಿಕೇರಿ, ಮೈಸೂರು, ಮಂಡ್ಯ, ಬೆಂಗಳೂರು ಭಾಗದ ಭಕ್ತರು ತಲಕಾವೇರಿಗೆ ಹೋಗಿ ಅಲ್ಲಿಂದ ಈ ರಸ್ತೆಯ ಮೂಲಕ ಕುಕ್ಕೆ ಸುಬ್ರಹ್ಮಣ್ಯವನ್ನು ಸೇರುತ್ತಾರೆ. ಅರಂತೋಡು- ಅಡ್ತಲೆ-ಮರ್ಕಂಜ-ಎಲಿಮಲೆ ರಸ್ತೆ, ಸುಳ್ಯ-ಸುಬ್ರಹ್ಮಣ್ಯ ರಸ್ತೆಯನ್ನು ಎಲಿಮಲೆ ಎನ್ನುವಲ್ಲಿ ಸಂಪರ್ಕಿಸುತ್ತದೆ. ಸುಳ್ಯ ತಾಲೂಕು ಕೇಂದ್ರಕ್ಕೆ ತೆರಳಿ ಸುಳ್ಯ-ಸುಬ್ರಹ್ಮಣ್ಯ ರಸ್ತೆಯ ಮೂಲಕ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಪ್ರಯಾಣಿಸಿದರೆ 13 ಕಿ.ಮೀ. ಹೆಚ್ಚು ದೂರವಾಗುತ್ತದೆ. ಅರಂತೋಡು- ಅಡ್ತಲೆ- ಮರ್ಕಂಜ ಎಲಿಮಲೆ ರಸ್ತೆ 13 ಕಿ.ಮೀ. ಉಳಿಸುತ್ತದೆ. ಇದರಿಂದ ಭಕ್ತರ ಸಮಯ, ವಾಹನದ ಇಂಧನ, ಶ್ರಮ ಉಳಿತಾಯವಾಗುತ್ತದೆ. 


ನಿರ್ಲಕ್ಷ್ಯ ಸಲ್ಲ

ಅರಂತೋಡು – ಎಲಿಮಲೆ ಸುಬ್ರಹ್ಮಣ್ಯ ಸಂಪರ್ಕ ರಸ್ತೆಯು ಅತ್ಯಂತ ಮುಖ್ಯ ರಸ್ತೆಯಾಗಿದೆ. ಈ ರಸ್ತೆ ಅಗತ್ಯವಾಗಿ ಮೇಲ್ದರ್ಜೆಗೆ ಏರಬೇಕಿದೆ. ಮೇಲ್ದರ್ಜೆಗೆ ಏರಿಸಲು ಲೋಕೋಪಯೋಗಿ ಇಲಾಖೆಯು ಈ ತನಕ ಯಾವುದೇ ಪ್ರಸ್ತಾವನೆಯನ್ನು ಸಲ್ಲಿಸಿಲ್ಲ ಎನ್ನುವುದು ಅಧಿಕಾರಿಗಳ ನಿರ್ಲಕ್ಷ್ಯವೆನ್ನಬಹುದು. ರಸ್ತೆಯನ್ನು ಮೇಲ್ದರ್ಜೆಗೇರಿಸಲು ಜನಪ್ರತಿನಿಧಿಗಳು, ಇಲಾಖೆಯ ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ಮಾಡಬೇಕಾಗಿದೆ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

23 ವರ್ಷ: ಒಮ್ಮೆ ಡಾಮರು
ಸುಮಾರು 23 ವರ್ಷಗಳ ಹಿಂದೆ ಈ ರಸ್ತೆ ಡಾಮರು ಕಂಡಿತ್ತು. ಆ ಬಳಿಕ ಒಂದು ಸಲ ಮಾತ್ರ ಡಾಮರು ಹಾಕಲಾಗಿದೆ. ಹಿಂದೆ ಬೆರಳೆಣಿಕೆಯ ವಾಹನ ಸಂಚಾರ ಇತ್ತು. ಈಗ ಹೆಚ್ಚಾಗಿದೆ. ಈ ರಸ್ತೆಯಲ್ಲಿ ಸಿಗುವ ವೈ.ಎಂ.ಕೆ. ಚಡಾವು ಅತ್ಯಂತ ದೊಡ್ಡ ಏರಿಕೆಯಾಗಿದ್ದು, ಹಲವು ಏರಿಳಿತಗಳಿವೆ. ಅನೇಕ ಮೋರಿಗಳಿದ್ದು, ಅವುಗಳು ಕಡಿದಾಗಿವೆ. ಹೆಚ್ಚು ತಿರುವುಗಳು, ಹಂಪ್‌ ಗಳಿರುವುದರಿಂದ ವಾಹನಗಳನ್ನು ಓವರ್‌ ಟೇಕ್‌ ಮಾಡುವುದೂ ಕಷ್ಟ. ಈ ಕಾರಣದಿಂದ ಇಲ್ಲಿ ಅಪಘಾತಗಳು ಹೆಚ್ಚುತ್ತಿವೆ.

ಮೇಲ್ದರ್ಜೆ ಪ್ರಸ್ತಾವನೆ ಇಲ್ಲ
ಈ ರಸ್ತೆ ಕಿರಿದಾಗಿದ್ದ ಹಿನ್ನೆಲೆಯಲ್ಲಿ ಜನವರಿ ತಿಂಗಳಿನಲ್ಲಿ ರಸ್ತೆಯ ಎರಡೂ ಬದಿಗಳಿಗೆ 8 ಲಕ್ಷ ರೂ. ಅನುದಾನದಲ್ಲಿ ಮಣ್ಣು ಹಾಕಿ ಸಮತಟ್ಟು ಮಾಡಲಾಗಿದೆ. ಇಲ್ಲಿ ಮಣ್ಣು ಕೆಸರಾಗಿ ವಾಹನ ಸಂಚಾರಕ್ಕೆ ಸಮಸ್ಯೆಯಾಗುತ್ತಿದೆ ಎನ್ನುವ ಕುರಿತು ನಮಗೆ ದೂರು ಬಂದಿದೆ. ಇದನ್ನು ಸರಿ ಮಾಡುವ ಕಾರ್ಯ ನಡೆಯುತ್ತಿದೆ. ರಸ್ತೆಯನ್ನು ಮೇಲ್ದರ್ಜೆಗೆ ಏರಿಸುವ ಪ್ರಸ್ತಾವನೆ ಇಲ್ಲ.
– ಹರೀಶ್‌, PWD ಎಂಜಿನಿಯರ್‌

ಮೇಲ್ದರ್ಜೆಗೆ ಏರಲೇಬೇಕು
ಅರಂತೋಡು – ಎಲಿಮಲೆ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ತೆರಳುವ ರಸ್ತೆ ಇದು. ಲೋಕೋಪಯೋಗಿ ಇಲಾಖೆಯ ಅತ್ಯಂತ ಹಳೆಯ ರಸ್ತೆ ಇದಾಗಿದ್ದು, ಇಲ್ಲಿ ವಾಹನ ದಟ್ಟಣೆ ಜಾಸ್ತಿಯಾಗಿರುವ ಕಾರಣ ರಸ್ತೆಯನ್ನು ಮೇಲ್ದರ್ಜೆಗೆ ಏರಿಸುವ ಕಾರ್ಯ ಅಗತ್ಯವಾಗಿ ಆಗಲೇಬೇಕು. ರಸ್ತೆಯ ಎರಡೂ ಬದಿಗಳಲ್ಲಿ ಇನ್ನೂ ಒಂದೊಂದು ಮೀಟರಿನಷ್ಟು ಡಾಮರು ಹಾಕಬೇಕು.
– ಕೇಶವ ಅಡ್ತಲೆ, ಅರಂತೋಡು ಗ್ರಾ.ಪಂ. ಸದಸ್ಯರು

— ತೇಜೇಶ್ವರ್‌ ಕುಂದಲ್ಪಾಡಿ

ಟಾಪ್ ನ್ಯೂಸ್

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

ed raid on mysore muda office

Mysore: ಮುಡಾ ಕಚೇರಿಗೆ ಇ.ಡಿ ದಾಳಿ; ಕಡತಗಳ ಪರಿಶೀಲನೆ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

Puttur: ಎಪಿಎಂಸಿ ವಸತಿಗೃಹದಲ್ಲಿ ಅನಧಿಕೃತ ವಾಸ; ಮಹಿಳೆ ಹೊರಕ್ಕೆ

1(1)

Belthangady: ರಸ್ತೆ ಶೋಚನೀಯ; ನಿರ್ವಹಣೆಯ ಕೊರತೆ; ರಸ್ತೆಯಲ್ಲಿ ಇಂಗು ಗುಂಡಿ ತರಹದ ಹೊಂಡ

5-ptr

Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

3

Puttur: ಅಪರಿಚಿತರಿಂದ ಬಾಲಕನಿಗೆ ಹಲ್ಲೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

10

Katpadi: ತ್ಯಾಜ್ಯ ಗುಂಡಿಯಾಗುತ್ತಿದೆ ಕುರ್ಕಾಲು ಮದಗ

Belagavi: UT Khader, Basavaraja Horatti visited Suvrana vidhasoudha

Belagavi: ಸುವರ್ಣ ವಿಧಾನಸೌಧಕ್ಕೆ‌ ಯು.ಟಿ.ಖಾದರ್‌, ಬಸವರಾಜ ಹೊರಟ್ಟಿ ಭೇಟಿ

16-bng

Bengaluru: ರಾಜಧಾನಿಯ ಬೀದಿ ನಾಯಿಗಳಿಗೆ ಅಕ್ಕರೆಯ ತುತ್ತು

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

15-

Bengaluru: ಎಎಸ್‌ಐ ಶಿವಶಂಕರಾಚಾರಿ ಹೃದಯಾಘಾತದಿಂದ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.