ದುಪಟ್ಟು ನೀರಿನ ಬಿಲ್‌; ಗ್ರಾಹಕರಿಗೆ ಪಾಲಿಕೆಯ ಶಾಕ್‌ !


Team Udayavani, Jul 10, 2018, 9:55 AM IST

10-july-1.jpg

ಮಹಾನಗರ: ಘಟನೆ ಒಂದು: ಕಾವೂರಿನ ರಕ್ಷಿತ್‌ ಅವರ ಹೊಟೇಲ್‌ಗೆ ಪ್ರತಿ ತಿಂಗಳು 1,500 ರೂ. ಗಳಷ್ಟು ಬರುತ್ತಿದ್ದ ನೀರಿನ ಬಿಲ್‌ ಈ ಬಾರಿ ಬಂದಿದ್ದು 18,000 ರೂ. ! ಘಟನೆ ಎರಡು: ಕುಂಜತ್ತಬೈಲಿನ ವಾಮನ ಅವರ ಮನೆಗೆ ಪ್ರತಿ ತಿಂಗಳು ಬರುತ್ತಿದ್ದ ನೀರಿನ ಬಿಲ್‌ 80 ರೂ. ಆದರೆ ಈ ಬಾರಿ ಮಾತ್ರ 850 ರೂ.! ಆಶ್ಚರ್ಯವಾದರೂ ಸತ್ಯ. ನೀರಿನ ಬಿಲ್‌ ಬಂದಿಲ್ಲ ಎಂದು ಮನೆ ಮಂದಿ ಕಾಯುತ್ತಿದ್ದರೆ, ಈಗ ಬಂದ ಬಿಲ್‌ ನೋಡಿ ಬೆಚ್ಚಿ ಬೀಳುವಂತಾಗಿದೆ. ನಗರದ ಬಹುತೇಕ ಕಡೆ ಇದೇ ರೀತಿಯಾಗಿದೆ. ಎಪ್ರಿಲ್‌ನಿಂದ ನೀರಿನ ಬಿಲ್‌ ತಲುಪಿಲ್ಲ ಎಂದು ನಗರದ ಬಹುತೇಕ ಮಂದಿ ಪಾಲಿಕೆಗೆ ದೂರು ನೀಡಿದ್ದರು.  ಈ ಬಗ್ಗೆ ಉದಯವಾಣಿ ಸುದಿನ ವಿಶೇಷ ವರದಿಯನ್ನೂ ಪ್ರಕಟಿಸಿತ್ತು. ಪಾಲಿಕೆ ಸಭೆಯೂಲ್ಲೂ ಇದು ಪ್ರಸ್ತಾವವಾಗಿತ್ತು. ಆದರೆ, ಈಗ ಈ ಸಮಸ್ಯೆ ಬಗೆಹರಿಸಲು ಪಾಲಿಕೆ ತೆಗೆದುಕೊಂಡ ಕ್ರಮ ಇನ್ನೊಂದು ಎಡವಟ್ಟಿಗೆ ಕಾರಣವಾಗಿದೆ.

ಸಿಬಂದಿಯಿಂದ ಬಿಲ್‌
ಹತ್ತು ವರ್ಷಗಳ ಹಿಂದೆ ಖಾಸಗಿ ಸಂಸ್ಥೆಗಳಿಗೆ ನೀರಿನ ಬಿಲ್‌ ನೀಡಲು ಟೆಂಡರ್‌ ನೀಡಲಾಗಿತ್ತು. ಇದರಿಂದ ಕೆಲವು ಭಾಗಗಳಿಗೆ ಬಿಲ್‌ ಹೋಗುತ್ತಿರಲಿಲ್ಲ ಎಂಬ ಆರೋಪ ಕೇಳಿಬಂದಿತ್ತು. ಈ ಸಮಸ್ಯೆ ಇತ್ಯರ್ಥಕ್ಕೆ ಪಾಲಿಕೆಯ ಮಲೇರಿಯಾ ನಿಯಂತ್ರಣ ಘಟಕದ ಸಿಬಂದಿಯನ್ನು ನಿಯೋಜಿಸಿದೆ. ನೀರಿನ ಬಿಲ್‌ ಸಾರ್ವಜನಿಕರಿಗೆ ನೀಡಲು ಹೊರಗುತ್ತಿಗೆ ನೀಡಿದವರ ಅವಧಿ ಮಾರ್ಚ್‌ಗೆ ಕೊನೆಗೊಂಡ ಕಾರಣ ಎಪ್ರಿಲ್‌ನಿಂದ ಪಾಲಿಕೆ ಮಲೇರಿಯಾ ನಿಯಂತ್ರಣ ಘಟಕದ ಸಿಬಂದಿಯನ್ನು ನಿಯೋಜಿಸಲಾಗಿತ್ತು. ಆದರೆ, ಆ ವೇಳೆ ಚುನಾವಣೆ ಎದುರಾಗಿದ್ದು ಒಂದೆಡೆಯಾದರೆ, ಹೊಸತಾಗಿ ಕಾರ್ಯ ನಿರ್ವಹಿಸುವ ಹಿನ್ನೆಲೆಯಲ್ಲಿ ಪಾಲಿಕೆಯ 60 ವಾರ್ಡ್ ಗಳಿಗೂ ಭೇಟಿ ನೀಡಿ ಬಿಲ್‌ ನೀಡಲು ಸಾಧ್ಯವಾಗಿರಲಿಲ್ಲ. ಜತೆಗೆ ಎರಡು ತಿಂಗಳು ತರಬೇತಿ ಅವಧಿ ಎಂದು ಪರಿಗಣಿಸಿ, ಜೂನ್‌ 1ರಿಂದ ನೀರಿನ ಬಿಲ್‌ ನೀಡಲು ಮನೆಮನೆಗೆ ತೆರಳುತ್ತಿದ್ದಾರೆ. ಈ ಗೊಂದಲಗಳ ನಡುವೆ ಈಗ ಗ್ರಾಹಕರ ಕೈಗೆ ದುಪ್ಪಟ್ಟು ಬಿಲ್‌ ಸಿಕ್ಕಿದೆ.

ಆದಾಯ ವೃದ್ಧಿಸುವ ಉದ್ದೇಶ
ನೀರಿನ ಸಂಪರ್ಕದ ಬಿಲ್‌ ಪಾವತಿ ಯನ್ನು ಹೊರಗುತ್ತಿಗೆಗೆ ವಹಿಸಿದರೆ ಪಾಲಿಕೆಗೆ ಆರ್ಥಿಕ ಹೊರೆಯಾಗುತ್ತಿತ್ತು. ಅದಕ್ಕಾಗಿ ನೀರಿನ ಬಿಲ್‌ನ ಜತೆಗೆ ಮಲೇರಿಯಾ ನಿಯಂತ್ರಣ ಘಟಕದ ಸಿಬಂದಿ ಮಲೇರಿಯಾ ಕಾರ್ಯನಿರ್ವಹಣೆ ಮಾಡಿದರೆ ವೆಚ್ಚ ಕಡಿಮೆಯಾಗಿ ನೀರಿನ ತೆರಿಗೆ ಸಂಗ್ರಹ ದಿಂದ ಹೆಚ್ಚಿನ ಆದಾಯ ಬರುವ ನಿರೀಕ್ಷೆ ಇರಿಸಿತ್ತು. ಇದಕ್ಕಾಗಿ ಪ್ರತೀ ವಾರ್ಡ್‌ಗೆ ಒಬ್ಬ ಎಂ.ಪಿ.ಡಬ್ಲ್ಯೂ. ಅನ್ನು ನಿಯುಕ್ತಿಗೊಳಿಸಲಾಗಿತ್ತು.

ನೀರಿನ ಸಂಪರ್ಕ
ಪಾಲಿಕೆ ವ್ಯಾಪ್ತಿಯಲ್ಲಿ ಈಗಿನ ಮಾಹಿತಿ ಪ್ರಕಾರ ಒಟ್ಟು ಸುಮಾರು 87,000 ನೀರಿನ ಸಂಪರ್ಕಗಳಿವೆ. ಇದರಲ್ಲಿ ವಸತಿ-79,304, ವಸತಿಯೇತರ-5,000, ನಿರ್ಮಾಣ ಹಂತದ ಕಟ್ಟಡ-1,328, ಬಹುಮಹಡಿ ಕಟ್ಟಡ-805, ಕೈಗಾರಿಕೆಗಳು-845, ಶಾಲೆ, ದೇವಸ್ಥಾನ ಸಹಿತ ಸಾರ್ವಜನಿಕ ನೀರಿನ ಸಂಪರ್ಕಗಳು-6,000 ಇವೆ.

ಸಮಸ್ಯೆ ಪರಿಹಾರಕ್ಕೆ  ಸೂಚನೆ
ಕೆಲವು ದಿನಗಳ ನೀರಿನ ಬಿಲ್‌ನಲ್ಲಿ ವ್ಯತ್ಯಾಸವಾಗಿರುವ ಗಮನಕ್ಕೆ ಬಂದಿದೆ. ಯಾವ ಕಡೆಯಲ್ಲಿ ಸಮಸ್ಯೆ ಆಗಿದೆ ಎಂಬ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತೇನೆ. ಮುಂದೆ ಈ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಲು ಅಧಿಕಾರಿಗಳಿಗೆ
ಸೂಚಿಸಲಾಗುವುದು.
– ಭಾಸ್ಕರ್‌ ಕೆ., ಮೇಯರ್‌, ಮನಪಾ

ಟಾಪ್ ನ್ಯೂಸ್

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

4

Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು

9-maski

ಆಟೋ, ದ್ವಿಚಕ್ರ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲು ಸಾರ್ವಜನಿಕರ ಒತ್ತಾಯ

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.