ಫೋರ್ಟ್‌ ಕನ್ನಡ ಭವನ ಸೊಸೈಟಿ: ಸಮವಸ್ತ್ರ ಮತ್ತು ಶಾಲಾ ಪರಿಕರಗಳ ವಿತರಣೆ


Team Udayavani, Jul 13, 2018, 2:06 PM IST

1107mum08.jpg

ಮುಂಬಯಿ: ಪರಿಶ್ರಮ ಮತ್ತು ಶ್ರದ್ಧೆಯೇ ಶಿಕ್ಷಣತ ಯಶಸ್ಸಿಗೆ ಮೂಲವಾಗಿದೆ. ವಿದ್ಯಾರ್ಥಿಗಳಲ್ಲಿ ಪ್ರಾಮಾಣಿಕತೆಯೇ ಯಶಸ್ಸನ್ನು ಸಾಧಿಸುವ ಮೂಲ ಮಂತ್ರವಾಗಿದೆ. ನಮ್ಮದೇ ಆದ ನಾಡುನುಡಿಯಲ್ಲಿ ವಿದ್ಯಾರ್ಜನೆಗೈದು ಯಶಸ್ಸನ್ನು ಪಡೆಯುತ್ತಿರುವ ಕನ್ನಡ ಭವನದ ಮಕ್ಕಳು ಹಾಗೂ ಭಾಷಾಭಿಮಾನವನ್ನು ಮೆರೆಯುತ್ತಿರವ ಶಿಕ್ಷಕರು ನಿಜವಾಗಿಯೂ ಅಭಿನಂದನೀಯರು. ಕನ್ನಡದ ವಿದ್ಯಾರ್ಥಿಗಳ ನೆರವಿಗಾಗಿ ನಾನು ಸದಾ ಸಿದ್ಧನಿದ್ದೇನೆ ಎಂದು ಉದ್ಯಮಿ, ಸಮಾಜ ಸೇವಕ ಶ್ರೀನಿವಾಸ್‌ ಶೆಟ್ಟಿ ಅವರು ನುಡಿದರು.

ಜು. 6 ರಂದು ಫೋರ್ಟ್‌ ಪರಿಸರದ ಕನ್ನಡ ಭವನ ಸಭಾಗೃಹದಲ್ಲಿ ನಡೆದ ಪ್ರಸ್ತುತ ವರ್ಷ ಬದಲಾವಣೆಗೊಂಡ ಸಮವಸ್ತ್ರ ವಿತರಣೆ ಮತ್ತು ಶಾಲಾ ಪರಿಕರಗಳ ವಿತರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ಮಾತನಾಡಿದ ಇವರು, ಪ್ರಸ್ತುತ ವರ್ಷ ಶಾಲೆಯ ಸಮವಸ್ತÅ ಬದಲಾವಣೆಗೊಂಡು ನೂತನ ಸಮವಸ್ತ್ರ ವಿತರಣೆಯಾಗುತ್ತಿರುವುದು ಸಂತೋಷದ ಸಂಗತಿಯಾಗಿದೆ. ಮಕ್ಕಳು ಶಿಕ್ಷಣದೊಂದಿಗೆ ಸಂಸ್ಕಾರವಂತರಾಗಿ ಆದರ್ಶ ಪ್ರಜೆಗಳಾಗಿ ಬಾಳಬೇಕು ಎಂದು ನುಡಿದು ಶುಭಹಾರೈಸಿದರು.

ಇದೇ ಸಂದರ್ಭದಲ್ಲಿ ನೂತನ ಸಮವಸ್ತ್ರ ಮತ್ತು ಶಾಲಾ ಪರಿಕರಗಳ ಪ್ರಾಯೋಜಕರಾದ ಉದ್ಯಮಿ ಶ್ರೀನಿವಾಸ್‌ ಶೆಟ್ಟಿ ಮತ್ತು  ಶ್ರೀದೇವಿ ದಂಪತಿಯನ್ನು ಶಾಲೆಯ ವತಿಯಿಂದ ಕನ್ನಡ ಭವನ ಎಜುಕೇಶನ್‌ ಸೊಸೈಟಿಯ ಕಾರ್ಯಾಧ್ಯಕ್ಷ ಎ. ಬಿ. ಶೆಟ್ಟಿ ಮತ್ತು  ಆಡಳಿತ ಮಂಡಳಿಯ ಇತರ ಪದಾಧಿಕಾರಿಗಳು ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆಯನ್ನಿತ್ತು ಅಭಿನಂದಿಸಿ ಕೃತಜ್ಞತೆ ಸಲ್ಲಿಸಿದರು.

ಅಧ್ಯಕ್ಷತೆ ವಹಿಸಿದ್ದ ಕನ್ನಡ ಭವನ ಎಜುಕೇಶನ್‌ ಸೊಸೈಟಿಯ ಕಾರ್ಯಾಧ್ಯಕ್ಷ ಎ. ಬಿ. ಶೆಟ್ಟಿ ಅವರು ಮಾತನಾಡಿ, ಇದ್ಯೆಯು ಇಂದಿನ ಯುಗದಲ್ಲಿ ಮನುಷ್ಯನ ಮೂಲಭೂತ ಆವಶ್ಯಕತೆಗಳಲ್ಲಿ ಒಂದಾಗಿದೆ. ಕನ್ನಡ ಭವನವು ಮಕ್ಕಳ ಭವಿಷ್ಯದ ದೃಷ್ಟಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ವೈಯಕ್ತಿಕ ಶೇ. 94.20 ಅಂಕಗಳನ್ನು ನಮ್ಮ ಶಾಲೆಯ ವಿದ್ಯಾರ್ಥಿನಿ ಸುಮಾ ಗೌಡ ಅವರು ಪಡೆದು ಕನ್ನಡ ಮಾಧ್ಯಮದಲ್ಲಿ ಮುಂಬಯಿಗೆ ಪ್ರಥಮ ಸ್ಥಾನಿಯಾಗಿದ್ದಾರೆ. ಅಲ್ಲದೆ ಶಾಲಾ ಫಲಿತಾಂಶ ಶೇ. 94 ರಷ್ಟು ಬಂದಿರುವುದು ಸಂತೋಷದ ಸಂಗತಿಯಾಗಿದೆ. ಈ ಬೆಳವಣಿಗೆ ನಮ್ಮ ಸಂಸ್ಥೆಯ ನಾಡು-ನುಡಿ ಸೇವೆಗೆ ಮತ್ತಷ್ಟು ಬಲ ನೀಡಿದಂತಾಗಿದೆ. ಪ್ರಸ್ತುತ ವರ್ಷ ನೂತನ ಸಮವಸ್ತ್ರದ ಬದಲಾವಣೆಯೊಂದಿಗೆ ಕನ್ನಡ ಭವನ ಇನ್ನಷ್ಟು ಅಭಿವೃದ್ಧಿಯತ್ತ ಸಾಗಲಿ ಎಂದು ಹಾರೈಸಿದರು.

ಉಪಾಧ್ಯಕ್ಷ ಡಿ. ಬಿ. ಅಮೀನ್‌, ಕೇಶವ ಕೋಟ್ಯಾನ್‌, ಕಾರ್ಯದರ್ಶಿ ಶೇಖರ್‌ ಅಮೀನ್‌ ಅವರು ಮಾತನಾಡಿ ಶುಭಹಾರೈಸಿದರು. ಪ್ರಾರಂಭದಲ್ಲಿ ಕನ್ನಡ ಭವನದ ಉಪಾಧ್ಯಕ್ಷ ಡಿ. ಬಿ. ಅಮೀನ್‌ ಅವರು ಪ್ರಾಯೋಜಿಸಿದ ಶುದ್ಧ ಕುಡಿಯುವ ನೀರಿನ ಯಂತ್ರಕ್ಕೆ ಮುಖ್ಯ ಅತಿಥಿ ಶ್ರೀನಿವಾಸ ಶೆಟ್ಟಿ ಅವರು ಚಾಲನೆ ನೀಡಿದರು.
ಸಮ್ಮಾನ ಸ್ವೀಕರಿಸಿದ ಶ್ರೀದೇವಿ ಶ್ರೀನಿವಾಸ್‌ ಶೆಟ್ಟಿ ಅವರು ಮಾತನಾಡಿ ಕೃತಜ್ಞತೆ ಸಲ್ಲಿಸಿದರು. ಶಾಲಾ ವಿದ್ಯಾರ್ಥಿಗಳಿಗೆ ಶಾಲಾ ಪರಿಕರಗಳನ್ನು ವಿತರಿಸಲಾಯಿತು. ಶಾಲಾ ಪ್ರಾಂಶುಪಾಲ ಎಲ್‌. ರಾಧಾಕೃಷ್ಣ ಅವರು ಸ್ವಾಗತಿಸಿದರು. ಶಾಲಾ ಹಿರಿಯ ಶಿಕ್ಷಕಿ ವಸಂತಿ ಶೆಟ್ಟಿ ಅತಿಥಿಗಳನ್ನು ಪರಿಚಯಿಸಿದರು. ಶಿಕ್ಷಕ ವಿಟuಲ ಮಣೂರೆ ವಂದಿಸಿದರು. ಶಿವಾನಂದ ಪಾಟೀಲ್‌ ಅವರು ಸಹಕರಿಸಿದರು.

ವೇದಿಕೆಯಲ್ಲಿ ಆಡಳಿತ ಮಂಡಳಿಯ ಕೋಶಾಧಿಕಾರಿ ಪುರುಷೋತ್ತಮ ಪೂಜಾರಿ, ಜತೆ ಕೋಶಾಧಿಕಾರಿ ಸತೀಶ್‌ ಎನ್‌. ಬಂಗೇರ, ಇತರ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯ ಶ್ರೀನಿವಾಸ ಪೂಜಾರಿ, ಸಂಸ್ಥೆಯ  ಶಾಲಾ-ಕಾಲೇಜಿನ  ಶಿಕ್ಷಕ ವೃಂದದವರು, ಶಿಕ್ಷಕೇತರ ಸಿಬಂದಿಗಳು, ಪಾಲಕರು-ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ  ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

ಶಸ್ತ್ರಾಸ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಕೇಂದ್ರ ಸಚಿವ ಅಮಿತ್ ಶಾ ಮನವಿ

Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ

Supreme Court slams Karnataka High Court judge for Pakistan statement

Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್‌ ಜಡ್ಜ್‌ ಗೆ ಸುಪ್ರೀಂ ಕೋರ್ಟ್ ತರಾಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಬುಧಾಬಿ: ಯು.ಎ.ಇ: ಸಿ.ಬಿ.ಎಸ್.ಸಿ.ಕ್ಲಸ್ಟರ್ ವಿಭಾಗದ ಚೆಸ್ ಟೂರ್ನಮೆಂಟ್ ಉದ್ಘಾಟನೆ

ಅಬುಧಾಬಿ: ಯು.ಎ.ಇ: ಸಿ.ಬಿ.ಎಸ್.ಸಿ.ಕ್ಲಸ್ಟರ್ ವಿಭಾಗದ ಚೆಸ್ ಟೂರ್ನಮೆಂಟ್ ಉದ್ಘಾಟನೆ

Desi Swara: “ಅಕ್ಕ’ ಅರಮನೆಯ ರಚನೆಯ ನೆನ್ನೆ, ಇಂದು, ನಾಳೆಗಳು

Desi Swara: “ಅಕ್ಕ’ ಅರಮನೆಯ ರಚನೆಯ ನೆನ್ನೆ, ಇಂದು, ನಾಳೆಗಳು

Desi Swara: 12ನೆಯ ಅಕ್ಕ ಸಮ್ಮೇಳನ: ವೀರಶೈವ 10 ಸಾವಿರ ವರ್ಷಗಳ ಪ್ರಾಚೀನ ಧರ್ಮ

Desi Swara: 12ನೆಯ ಅಕ್ಕ ಸಮ್ಮೇಳನ: ವೀರಶೈವ 10 ಸಾವಿರ ವರ್ಷಗಳ ಪ್ರಾಚೀನ ಧರ್ಮ

Desi Swara: ಮಸ್ಕತ್‌- 40ನೇ ವರ್ಷದ ಗಣೇಶೋತ್ಸವ-ಮೂರು ದಿನದ ಉತ್ಸವ

Desi Swara: ಮಸ್ಕತ್‌- 40ನೇ ವರ್ಷದ ಗಣೇಶೋತ್ಸವ-ಮೂರು ದಿನದ ಉತ್ಸವ

Desi Swara: ಹೊನ್ನುಡಿ-ಜ್ಞಾನ ಬಳಸಿದರಷ್ಟೇ ಶ್ರೇಷ್ಠ..ಗರ್ವದಿಂದ ಹೊತ್ತು ತಿರುಗಬಾರದು…

Desi Swara: ಹೊನ್ನುಡಿ-ಜ್ಞಾನ ಬಳಸಿದರಷ್ಟೇ ಶ್ರೇಷ್ಠ..ಗರ್ವದಿಂದ ಹೊತ್ತು ತಿರುಗಬಾರದು…

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

Davanagere: Judicial custody of 14 accused in Ganesh procession stone pelting case

Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ

ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.