ಮೂಲ ಯೋಜನೆಯೇ ಬೇರೆ ಯೋಜನೆಯಲ್ಲಿ ವಿಲೀನ


Team Udayavani, Jul 19, 2018, 1:01 PM IST

karnataka-mathrushree-scheme-2018.png

*ಯೋಜನೆ ಸ್ಥಗಿತ 
*ಮಡಿಲು ಯೋಜನೆ ಕೂಡ ರದ್ದು
*ಫ‌ಲಾನುಭವಿಗೆ ದೊರೆಯದ ಹಣ
*ಹೊಸ ಯೋಜನೆ ಜತೆ ವಿಲೀನ

ಕುಂದಾಪುರ: ಸಮ್ಮಿಶ್ರ ಸರಕಾರ ಹೊಸದಾಗಿ ಮಾತೃಶ್ರೀ ಯೋಜನೆಯನ್ನು ಜಾರಿಗೊಳಿಸಲು ಮುಂದಾಗಿದೆ. ಆದರೆ ಗರ್ಭಿಣಿ ಹಾಗೂ ಬಾಣಂತಿ ಯರ ಆರೈಕೆಗೆ ರಾಜ್ಯ ಆರೋಗ್ಯ ಇಲಾಖೆ ಮೂಲಕ ನೀಡುತ್ತಿದ್ದ ಪ್ರಸೂತಿ ಆರೈಕೆ ಅನುದಾನ ಎರಡು ವರ್ಷದಿಂದ ಇನ್ನೂ ಬಿಡುಗಡೆಯಾಗಿಲ್ಲ. ಈಗ ಯೋಜನೆಯನ್ನೇ ಕೇಂದ್ರ ಸರಕಾರದ ಮಾತೃವಂದನ, ರಾಜ್ಯದ ಮಾತೃಪೂರ್ಣ ಯೋಜನೆಯಲ್ಲಿ ವಿಲೀನಗೊಳಿಸಲಾಗುತ್ತಿದೆ.

ಪ್ರಸೂತಿ ಆರೈಕೆ
ಹೆರಿಗೆ ಸಮಯದಲ್ಲಿ ತಾಯಿ ಮತ್ತು ಶಿಶು ಮರಣವನ್ನು ತಪ್ಪಿಸಲು, ಗರ್ಭಿಣಿ ಮಹಿಳೆಯರಿಗೆ ರಕ್ತ ಹೀನತೆಯನ್ನು ತಡೆದು ಸುರಕ್ಷಿತ ಹೆರಿಗೆಯಾಗಿ ತಾಯಿ ಮತ್ತು ಮಗು ಆರೋಗ್ಯವಾಗಿರಲು ಈ ಯೋಜನೆ ಜಾರಿಗೊಳಿಸಲಾಗಿತ್ತು ಹೆರಿಗೆ ಅನಂತರ ಮಗುವಿಗೆ ಕನಿಷ್ಠ 6 ತಿಂಗಳವರೆಗೆ ತಾಯಿ ಹಾಲು ಕುಡಿಸಬೇಕು. ಅದಕ್ಕೆ ಪೂರಕವಾಗಿ ಪೌಷ್ಟಿಕಾಂಶ ಹೆಚ್ಚಿಸಲೆಂದು  ಹೆರಿಗೆಯಾದ ಅನಂತರವೂ 300 ರೂ. ಪ್ರಸೂತಿ ಆರೈಕೆ ಕಾರ್ಯಕ್ರಮ ಮತ್ತು 700 ರೂ. ಗಳು ಜನನಿ ಸುರಕ್ಷಾ ಯೋಜನೆಯ ಮೊತ್ತ ಎಂದು ಒಟ್ಟು ಒಂದು ಸಾವಿರ ರೂ. ಗಳನ್ನು ನೀಡಲಾಗುತ್ತಿತ್ತು.

ಎರಡು ವರ್ಷದಿಂದ ಇಲ್ಲ
ಪ್ರಸೂತಿ ಆರೈಕೆಗೆ ಫ‌ಲಾನುಭವಿಗಳ ಖಾತೆಗೆ ನೇರ ಹಣ ಜಮೆ ಮಾಡಲು ಆರೋಗ್ಯ ಇಲಾಖೆಗೆ ರಾಜ್ಯ (ಸ್ಟೇಟ್‌ ಹೆಡ್‌) ನಿಧಿಯಿಂದಲೇ ಅನುದಾನ ನೀಡಲಾಗುತ್ತದೆ. ಆದರೆ ಎರಡು ವರ್ಷದಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಫ‌ಲಾನುಭವಿಗಳಿಗೆ ಹಣ ಪಾವತಿಯಾಗಿದೆ. ಆದರೆ ಇತರ ಫ‌ಲಾನುಭವಿಗಳಿಗೆ ಸರಕಾರ ಅನುದಾನ ಒದಗಿಸಿಲ್ಲ.

ಮಾತೃವಂದನ ವಿಲೀನ
ಕೇಂದ್ರದ ಮಾತೃವಂದನ ಹಾಗೂ ರಾಜ್ಯದಲ್ಲಿ ಅಕ್ಟೋಬರ್‌ನಲ್ಲಿ ಅನುಷ್ಠಾನಕ್ಕೆ ಬಂದ ಮಾತೃಪೂರ್ಣ ಯೋಜನೆ ಜತೆ ಈಗ ಯೋಜನೆಯನ್ನು ವಿಲೀನಗೊಳಿಸಲಾಗಿದೆ. ಆದ್ದರಿಂದ ಮಾರ್ಚ್‌ ಅನಂತರ ಈ ಯೋಜನೆ ಮೂಲಕ ಹಣ ನೀಡಲು ಅವಕಾಶ ಇಲ್ಲ. ಆದರೆ ಈ ಕುರಿತು ಅಧಿಕೃತ ಸುತ್ತೋಲೆ ಇನ್ನೂ ಇಲಾಖೆಗಳಿಗೆ ಬಂದಿಲ್ಲ ಎಂದು ಮೂಲಗಳು ತಿಳಿಸಿವೆ. ಮಾತೃಪೂರ್ಣ ಮೂಲಕ ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಪೌಷ್ಟಿಕ ಊಟ ನೀಡಲಾಗುತ್ತಿದೆ. ಮಾತೃವಂದನ ಮೂಲಕ ಬ್ಯಾಂಕ್‌ ಖಾತೆಗೆ 6 ಸಾವಿರ ರೂ. ಹಣ ಜಮೆ ಮಾಡಲಾಗುತ್ತದೆ. 

ಮುಖ್ಯಮಂತ್ರಿ ಮಾತೃಶ್ರೀ
ಇದೀಗ ಹೊಸದಾಗಿ ಸಮ್ಮಿಶ್ರ ಸರಕಾರ ಮುಖ್ಯಮಂತ್ರಿ ಮಾತೃಶ್ರೀ ಯೋಜನೆ ಜಾರಿಗೆ ತರಲು ಉದ್ದೇಶಿಸಿದ್ದು ಬಿಪಿಎಲ್‌ ಕುಟುಂಬದ ಗರ್ಭಿಣಿ ಹಾಗೂ ಬಾಣಂತಿಯರಿಗೆ 6 ಸಾವಿರ ರೂ. ನೇರ ಖಾತೆಗೆ ಜಮೆಯಾಗ
ಲಿದೆ. ಇದಕ್ಕಾಗಿ 350 ಕೋ.ರೂ. ಮೀಸಲಿಡಲಾಗಿದ.

ತಾಯಿಭಾಗ್ಯ ರದ್ದು
ಮೊದಲು ಪ್ರಸೂತಿ ಆರೈಕೆ ಹಾಗೂ ತಾಯಿ ಭಾಗ್ಯ ಎಂದು ಹಣ ನೀಡಲಾಗುತ್ತಿತು. ಆದರೆ ಮಾರ್ಚ್‌
ನಿಂದ ತಾಯಿಭಾಗ್ಯ ರದ್ದಾಗಿದೆ. ಪ್ರಸೂತಿ ಆರೈಕೆಗೆ ಮಾತ್ರ 1 ಸಾವಿರ ರೂ. ನೀಡಲಾಗುತ್ತದೆ. ಬಿಪಿಎಲ್‌ನವರು ಸರಕಾರಿ ಆಸ್ಪತ್ರೆಯಲ್ಲಿ ಹೆರಿಗೆಯಾದರೆ 300 ರೂ. ಹಾಗೂ ಜನನಿ ಸುರಕ್ಷಾ ಯೋಜನೆಯಲ್ಲಿ 700 ರೂ. ನೀಡಲಾಗುತ್ತದೆ. 2007ರಲ್ಲಿ ಜಾರಿಗೆ ಬಂದ ಮಡಿಲು ಯೋಜನೆಯ ಇಲ್ಲ. ಹೆರಿಗೆ ಬಳಿಕ ಬಿಪಿಎಲ್‌ನವರಿಗೆ 22 ವಸ್ತುಗಳುಳ್ಳ ಮಡಿಲು ಕಿಟ್‌ನ್ನು ನೀಡಲಾಗುತ್ತಿತ್ತು. ಆದರೆ ಮಾರ್ಚ್‌ನಿಂದ ಅದು ಕೂಡಾ ರದ್ದಾಗಿದೆ.  

1.5 ಕೋ.ರೂ. ಬಾಕಿ
ಉಡುಪಿ ಜಿಲ್ಲೆಯಲ್ಲಿ ವರ್ಷಕ್ಕೆ 15,500 ಮಂದಿಗೆ ಹೆರಿಗೆಯಾಗುತ್ತದೆ. ಇದರಲ್ಲಿ ಶೇ.50ರಷ್ಟು ಬಿಪಿಎಲ್‌ನವರು. ಪ್ರಸೂತಿ ಭಾಗ್ಯವಷ್ಟೇ ಲೆಕ್ಕ ಹಿಡಿದರೂ ಎರಡು ವರ್ಷಗಳಿಂದ ಉಡುಪಿ ಜಿಲ್ಲೆಗೆ ಅಂದಾಜು 1.5 ಕೋ.ರೂ.ಗಳಷ್ಟು ಹಣ ಬರಬೇಕಿದೆ. 

ಎರಡೇ ಕಂತು ಬಂದದ್ದು
ನನ್ನ ಪತ್ನಿಗೆ ಪೂರ್ಣ ಪ್ರಮಾಣದ ಹಣ ಬಂದಿಲ್ಲ. ಕೇಳಿದರೆ ಅನುದಾನ ಇಲ್ಲ ಎನ್ನುತ್ತಾರೆ. 
– ಸುರೇಶ್‌ ಕಲ್ಲಾಗರ, ಕುಂದಾಪುರ

ಗಮನಕ್ಕೆ ತರುತ್ತೇನೆ
ಫ‌ಲಾನುಭವಿಗಳಿಗೆ ನೀಡಲು ಹಣ ಬಿಡುಗಡೆಯಾಗಿಲ್ಲ. ಇದನ್ನು ಸರಕಾರದ ಗಮನಕ್ಕೆ ತರುತ್ತೇನೆ. ಮುಂದಿನ ದಿನಗಳಲ್ಲಿ ಈ ಯೋಜನೆ ಇರುವುದಿಲ್ಲ ಎಂದು ಮೌಖೀಕವಾಗಿ ಸೂಚನೆ ಬಂದಿದೆ. 
– ಡಾ| ರೋಹಿಣಿ, ಜಿಲ್ಲಾ ಆರೋಗ್ಯ 
ಮತ್ತು ಕುಟುಂಬ ಕಲ್ಯಾಣಾಧಿಕಾರಿ

*ಲಕ್ಷ್ಮಿ ಮಚ್ಚಿನ

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

1

Amparu: ರೆಸ್ಟೋರೆಂಟ್‌ನಲ್ಲಿ ಹೊಡೆದಾಟ

sand

Kundapura: ಮರಳು ಅಕ್ರಮ ಸಾಗಾಟ ಪತ್ತೆ

4

Kundapura: ಕೆಲಸವಿಲ್ಲದೆ ಜುಗುಪ್ಸೆ: ಯುವಕ ಆತ್ಮಹತ್ಯೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.