ಹೊಸ ಚಿಂತೆಯಿಂದ ಋಣ ತೀರಿಸುವೆ


Team Udayavani, Jul 24, 2018, 12:19 PM IST

m5-kai.jpg

ಹುಣಸೂರು: ತಮ್ಮ ರಾಜಕೀಯ ಸಂಧ್ಯಾಕಾಲದಲ್ಲಿ ಕೈಹಿಡಿದ ಜೆಡಿಎಸ್‌ ಪಕ್ಷ ಮತ್ತು ಕಾರ್ಯಕರ್ತರು, ಮತದಾರರ ಋಣ ತಮ್ಮ ಮೇಲಿದ್ದು, ಸಂಘಟನೆ ಮೂಲಕ ಹಾಗೂ ಹೊಸ ಚಿಂತನೆಗಳನ್ನು ಅನುಷ್ಠಾನಗೊಳಿಸುವ ಮೂಲಕ ಋಣತೀರಿಸುವೆ ಎಂದು ಶಾಸಕ ಎಚ್‌.ವಿಶ್ವನಾಥ್‌ ವ್ಯಾಖ್ಯಾನಿಸಿದರು.

ನಗರದ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ತಾಲೂಕು ಜೆಡಿಎಸ್‌ ವತಿಯಿಂದ ಮತದಾರರು ಹಾಗೂ ಪಕ್ಷದ ಕಾರ್ಯಕರ್ತರಿಗಾಗಿ ಆಯೋಜಿಸಿದ್ದ ಕೃತಜ್ಞತಾ ಸಮಾರಂಭದಲ್ಲಿ ಮಾತನಾಡಿದ ಅವರು ಜೆಡಿಎಸ್‌ ಪಕ್ಷಕ್ಕೆ ವರ್ಷದ ಹಿಂದಷ್ಟೆ ಎಚ್‌.ಡಿ.ದೇವೇಗೌಡ, ಕುಮಾರಸ್ವಾಮಿಯವರ ಕೃಪಾಶಿರ್ವಾದದಿಂದ ಸೇರಿದ ತಮ್ಮನ್ನು  ಕ್ಷೇತ್ರದ ಜನತೆ ಆಶೀರ್ವದಿಸಿದ್ದಾರೆ.

ನನ್ನ ಗೆಲುವಿಗಾಗಿ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಬಿಎಸ್‌ಪಿ ಕಾರ್ಯಕರ್ತರು ಕ್ಷೇತ್ರದ ಮತದಾರರ ಮನವೊಲಿಸಿ ಮತ ಹಾಕಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಶಾಸಕರಾಗಿದ್ದ ಚಿಕ್ಕಮಾದು ನನ್ನ ಬರುವಿಕೆಗೆ ಅಸ್ಥಿಭಾರ ಹಾಕಿದ್ದರೆ, ತಾವು ಹುಣಸೂರಿಗೆ ಅಭ್ಯರ್ಥಿಯೆಂದು ಪಕ್ಷದ ವರಿಷ್ಠ ಎಚ್‌.ಡಿ.ದೇವೇಗೌಡ, ಜಿ.ಟಿ.ದೇವೇಗೌಡರೇ ಘೋಷಿಸಿದ್ದರು ನಾನೀಗ ಪಕ್ಷದ ಋಣ ತೀರಿಸಬೇಕಿದೆ ಎಂದರು.

ಆಮೂಲಾಗ್ರ ಬದಲಾವಣೆ: ಮುಂಬರುವ ಲೋಕಸಭಾ ಹಾಗೂ ಸ್ಥಳೀಯಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಪಕ್ಷವನ್ನು ಅಮೂಲಾಗ್ರವಾಗಿ ಬದಲಾವಣೆ ಮಾಡಬೇಕಿದೆ. ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರನ್ನು ಗುರುತಿಸಿ, ಅ ಧಿಕಾರ ಕೊಡಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಮೊದಲಿಗೆ ಪಕ್ಷದ ಅಧ್ಯಕ್ಷ ಮಹದೇವೇಗೌಡರಿಗೆ ಸೂಕ್ತ ಸ್ಥಾನಮಾನ ಕಲ್ಪಿಸುವುದಾಗಿ ವಾಗ್ಧಾನ ಮಾಡಿದರು.

ಹೊಸ ಪರಂಪರೆಯ ಆಡಳಿತ: ತಾವು ಜನರ ಕೈಗೆಸಿಗುವುದಿಲ್ಲವೆಂಬ ಕೂಗಿದೆ. ಗ್ರಾಪಂಗಳು ಸ್ಥಳೀಯ ವಿಧಾನಸಭೆ ಇದ್ದಂತೆ, ಇವುಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಪ್ರತಿ ಗ್ರಾಪಂ ಕೇಂದ್ರಕ್ಕೆ ತಾಲೂಕು ಮಟ್ಟದ ಅಧಿ ಕಾರಿಗಳನ್ನು ಕರೆಸಿ, ಜನಸ್ಪಂದನ ನಡೆಸಲಾಗುವುದು. ಆಮೂಲಕ ಗ್ರಾಪಂಗಳನ್ನು ಬಲಪಡಿಸಲಾಗುವುದು ಎಂದರು.

ಸಭೆಯಲ್ಲಿ ಪಕ್ಷದ ತಾಲೂಕು ಅಧ್ಯಕ್ಷ ಮಾದೇಗೌಡ,ಬಿ.ಎಸ್‌.ಪಿ.ಅಧ್ಯಕ್ಷ ಡಾ.ಮಹದೇವ್‌, ನಗರಸಭಾಧ್ಯಕ್ಷಶಿವಕುಮಾರ್‌, ಸದಸ್ಯರಾದ ಸುನಿತಾಜಯರಾಮೇಗೌಡ, ಎಚ್‌.ವೈ.ಮಹದೇವ್‌, ಸತೀಶ, ಜಿ.ಪಂ.ಸದಸ್ಯ ಸುರೇಂದ್ರ, ಮಾಜಿ ಸದಸ್ಯರಾದ ತೊಂಡಾಳುರಾಮಕೃಷ್ಣೇಗೌಡ, ಫಜಲುಲ್ಲಾ, ಪರಮೇಶ್‌, ಕುನ್ನೇಗೌಡ, ಪಕ್ಷದಮುಖಂಡರಾದ ಬಾಲಕೃಷ್ಣೇಗೌಡ, ಹರಿಹರ ಆನಂದಸ್ವಾಮಿ,ಶಿವಶೇಖರ, ಬಿಳಿಕೆರೆರಾಜು, ನಿಂಗರಾಜಮಲ್ಲಾಡಿ, ವಕೀಲಪುಟ್ಟರಾಜು ಮಾತನಾಡಿದರು. 

ಬೆಳ್ಳಿ ಕಿರೀಟ-ಗಧೆ ಸನ್ಮಾನ: ಅಖೀಲ ಕರ್ನಾಟಕ ಕುರುಬರ ಯುವಒಕ್ಕೂಟದವತಿಯಿಂದ ಶಾಸಕ ವಿಶ್ವನಾಥರಿಗೆ ಐದು ಕೆ.ಜಿ ತೂಕದ ಬೆಳ್ಳಿಗಧೆ ನೀಡಿ, ಕಿರೀಟತೊಡಿಸಿ ಸನ್ಮಾನಿಸಿದರು, ವಿವಿಧ ಸಂಘ-ಸಂಸ್ಥೆ ಪ್ರಮುಖರು ಅಭಿನಂದನೆ ಸಲ್ಲಿಸಿದರು. ತಾವು ದೇವರಾಜ ಅರಸರ ಗರಡಿಯ ಮೂಲಕ ರಾಜಕೀಯ ಪ್ರವೇಶ ಮಾಡಿದ್ದರೆ, 71 ವಸಂತಕ್ಕೆ ಕಾಲಿರಿಸುತ್ತಿರುವ ಈ ಸಂದ್ಯಾಕಾಲದಲ್ಲಿ ಎಚ್‌.ಡಿ.ದೇವೇಗೌಡರ ಗರಡಿ ಮೂಲಕ ನಿರ್ಗಮನವಾಗುತ್ತಿದ್ದು, ಮನುಜ ಸಹಜ ಆಸೆ ಈಡೇರಿದೆ ಎಂದು ಶಾಸಕ ಎಚ್‌.ವಿಶ್ವನಾಥ್‌ ಸಂತಸ ಹಂಚಿಕೊಂಡರು.

ಟಾಪ್ ನ್ಯೂಸ್

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

kejriwal-2

AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಸ್ಲೀಪರ್ ಕೋಚ್ ಬಸ್ ಪಲ್ಟಿ: ಓರ್ವ ಮೃತ್ಯು; 11 ಮಂದಿಗೆ ಗಾಯ

Road Mishap ಸ್ಲೀಪರ್ ಕೋಚ್ ಬಸ್ ಪಲ್ಟಿ: ಓರ್ವ ಮೃತ್ಯು; 11 ಮಂದಿಗೆ ಗಾಯ

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

11

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

1-aaccc

Mangaluru; ಕುಂಟಿಕಾನದಲ್ಲಿ ಅಪಘಾತ: ಕಾಲೇಜು ವಿದ್ಯಾರ್ಥಿ ಸಾ*ವು

3

Uppala: ಸುಮಾರು 3.5 ಕೋಟಿ ರೂ. ಮೌಲ್ಯದ ಅಮಲು ಪದಾರ್ಥ ವಶಕ್ಕೆ : ಬಂಧನ

sand

Malpe: ಮರಳು ಅಕ್ರಮ ಸಂಗ್ರಹ, ಕೇಸು ದಾಖಲು

crime

Bidar; ಪತ್ನಿ ಜತೆ ಅನೈತಿಕ ಸಂಬಂಧ‌:ಯುವಕನ ಮರ್ಮಾಂಗಕ್ಕೆ ಕತ್ತರಿ ಹಾಕಿದ ಪತಿ!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.