ಭಾರತದ ವನಿತಾ ಕಂಪೌಂಡ್‌ ಆರ್ಚರಿ ತಂಡವೀಗ ನಂ.1


Team Udayavani, Jul 28, 2018, 6:00 AM IST

21.jpg

ಕೋಲ್ಕತಾ: ಜಕಾರ್ತಾ ಏಶ್ಯನ್‌ ಗೇಮ್ಸ್‌ಗೆ ಅಣಿಯಾಗಿರುವ ಭಾರತದ ವನಿತಾ ಕಂಪೌಂಡ್‌ ಬಿಲ್ಗಾರಿಕಾ ತಂಡವೀಗ ಹೊಸ ಇತಿಹಾಸ ನಿರ್ಮಿಸಿದೆ. ಇದೇ ಮೊದಲ ಬಾರಿಗೆ ವಿಶ್ವದ ನಂಬರ್‌ ವನ್‌ ತಂಡವೆಂಬ ಹಿರಿಮೆಗೆ ಪಾತ್ರವಾಗಿದೆ. 5ನೇ ಸ್ಥಾನದಿಂದ ಅಗ್ರಸ್ಥಾನಕ್ಕೆ ಗುರುವಾರ ರಾತ್ರಿ ಬಿಡುಗಡೆಗೊಂಡ ನೂತನ ಆರ್ಚರಿ ರ್‍ಯಾಂಕಿಂಗ್‌ನಲ್ಲಿ ಭಾರತದ ವನಿತಾ ಕಂಪೌಂಡ್‌ ಆರ್ಚರಿ ತಂಡ ಒಟ್ಟು 342.6 ಅಂಕಗಳೊಂದಿಗೆ 5ನೇ ಸ್ಥಾನದಿಂದ ಅಗ್ರಸ್ಥಾನಕ್ಕೆ ನೆಗೆದಿದೆ. ದ್ವಿತೀಯ ಸ್ಥಾನದಲ್ಲಿರುವ ಚೈನೀಸ್‌ ತೈಪೆಗಿಂತ 6 ಅಂಕಗಳ ಮುನ್ನಡೆ ಕಾಯ್ದುಕೊಂಡಿದೆ.

ವಿ. ಜ್ಯೋತಿ ಸುರೇಖಾ, ತಿೃಷಾ ದೇಬ್‌, ಪಿ. ಲಿಲಿ ಚಾನು, ಮುಸ್ಕಾನ್‌ ಕಿರಾರ್‌, ದಿವ್ಯಾ ದಯಾಳ್‌ ಹಾಗೂ ಮಧುಮಿತಾ ಅವರನ್ನೊಳಗೊಂಡ ಭಾರತ ಕಳೆದ 4 ವಿಶ್ವಕಪ್‌ ಹಂತದ ಸ್ಪರ್ಧೆಗಳಲ್ಲಿ 2 ಪದಕ ಗೆದ್ದ ಸಾಧನೆ ಮಾಡಿತ್ತು. ಅಂಟಾಲ್ಯಾ ಮತ್ತು ಬರ್ಲಿನ್‌ ಸ್ಪರ್ಧೆಗಳೆರಡರಲ್ಲೂ ಬೆಳ್ಳಿ ಪದಕ ಜಯಿಸಿತ್ತು. ಜ್ಯೋತಿ ಸುರೇಖಾ ಮತ್ತು ಮುಸ್ಕಾನ್‌ ಕಿರಾರ್‌ ಈ ಎರಡೂ ಪದಕ ವಿಜೇತ ಭಾರತೀಯ ತಂಡದ ಸದಸ್ಯರಾಗಿದ್ದರು. ಅಂಟಾಲ್ಯಾದಲ್ಲಿ ದಿವ್ಯಾ ದಯಾಳ್‌ ಹಾಗೂ ಬರ್ಲಿನ್‌ನಲ್ಲಿ ತಿೃಷಾ ದೇಬ್‌ ಭಾರತ ತಂಡದ ತೃತೀಯ ಸದಸ್ಯರಾಗಿದ್ದರು. ಅಮೆರಿಕದ ಸಾಲ್ಟ್ಲೇಕ್‌ ಸಿಟಿಯಲ್ಲಿ ನಡೆದ 3ನೇ ಹಂತದ ಸ್ಪರ್ಧೆಗೆ ಆರ್ಚರಿ ಅಸೋಸಿಯೇಶನ್‌ ಆಫ್ ಇಂಡಿಯಾ (ಎಎಐ) ಅರ್ಜಿ ಸಲ್ಲಿಸಿಲ್ಲ. 

ಕೋಚ್‌ ತೇಜ ಸಂತಸ
“ಕೊನೆಗೂ ನಾವಿದನ್ನು ಸಾಧಿಸಿದೆವು. ದೇವರ ದಯೆಯಿಂದ ನಮ್ಮ ತಂಡವೀಗ ವಿಶ್ವದ ಅಗ್ರಸ್ಥಾನಕ್ಕೆ ನೆಗೆದಿದೆ. ಎಲ್ಲ ಸಾಧಕಿಯರಿಗೂ ಅಭಿನಂದನೆಗಳು. ಬೇಸರವೆಂದರೆ, ಕಂಪೌಂಡ್‌ ಆರ್ಚರಿ ಸ್ಪರ್ಧೆಯನ್ನು ಒಲಿಂಪಿಕ್ಸ್‌ನಲ್ಲಿ ಅಳವಡಿಸದಿರುವುದು…’ ಎಂಬುದಾಗಿ ಭಾರತ ತಂಡದ ಕೋಚ್‌ ಜೀವನ್‌ಜೋತ್‌ ಸಿಂಗ್‌ ತೇಜ ಪ್ರತಿಕ್ರಿಯಿಸಿದ್ದಾರೆ.

ಸುರೇಖಾ-ಅಭಿಷೇಕ್‌ ನಂ.5
ಕಂಪೌಂಡ್‌ ಮಿಶ್ರ ತಂಡ ರ್‍ಯಾಂಕಿಂಗ್‌ನಲ್ಲಿ ಜ್ಯೋತಿ ಸುರೇಖಾ-ಅಭಿಷೇಕ್‌ ವರ್ಮ 5ನೇ ಸ್ಥಾನ ಉಳಿಸಿಕೊಂಡಿದ್ದಾರೆ. ಈ ಜೋಡಿ ಸೆ. 29-30ರಂದು ಟರ್ಕಿಯಲ್ಲಿ ನಡೆಯುವ ಕಂಪೌಂಡ್‌ ಮಿಕ್ಸೆಡ್‌ ಟೀಮ್‌ ಸ್ಪರ್ಧೆಗೆ ಅರ್ಹತೆ ಪಡೆದಿದೆ. ಇದೇ ವೇಳೆ ರಿಕರ್ವ್‌ ಮಿಶ್ರ ತಂಡ 7ನೇ ರ್‍ಯಾಂಕಿಂಗ್‌ ಕಾಯ್ದುಕೊಂಡಿದೆ.  ವನಿತಾ ರಿಕರ್ವ್‌ ತಂಡ 8ನೇ ಸ್ಥಾನದಲ್ಲೇ ಮುಂದುವರಿದರೆ, ಪುರುಷರ ರಿಕರ್ವ್‌ ತಂಡ 12ನೇ ಸ್ಥಾನಕ್ಕೆ ಜಾರಿದೆ. ಕಳೆದ ವರ್ಷ ಮೆಕ್ಸಿಕೊದಲ್ಲಿ ನಡೆದ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ವನಿತಾ ರಿಕರ್ವ್‌ ತಂಡ ಬೆಳ್ಳಿ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು. 2014ರ ಏಶ್ಯಾಡ್‌ನ‌ ಕಂಪೌಂಡ್‌ ಟೀಮ್‌ ಆರ್ಚರಿ ಸ್ಪರ್ಧೆಯಲ್ಲಿ ಭಾರತದ ಪುರುಷರ ತಂಡ ಚಿನ್ನ ಹಾಗೂ ವನಿತಾ ತಂಡ ಕಂಚಿನ ಪದಕ ಜಯಿಸಿತ್ತು.

ಟಾಪ್ ನ್ಯೂಸ್

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

Ranji Trophy: Samit Dravid in possible squad

Ranji Trophy: ಸಂಭಾವ್ಯ ತಂಡದಲ್ಲಿ ಸಮಿತ್‌ ದ್ರಾವಿಡ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.