
ಸಂಪೂರ್ಣ ಸಾಲಮನ್ನಾ ಬಗ್ಗೆ ಮೆತ್ತಗಾದರಾ?
Team Udayavani, Jul 29, 2018, 6:45 AM IST

ಬೆಂಗಳೂರು: ಸಂಪೂರ್ಣ ಸಾಲ ಮನ್ನಾಗೆ ನಮ್ಮ ಒತ್ತಾಯ ಎಂದು ಹೇಳುತ್ತಿದ್ದ ಬಿಜೆಪಿ ಮೆತ್ತಗಾದಂತೆ ಕಾಣುತ್ತಿದೆ.
ಸಂಪೂರ್ಣ ಸಾಲ ಮನ್ನಾ ರಾಗ ಬದಲಾಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಈಗಾಗಲೇ ಘೋಷಿಸಿರುವಂತೆ ಸಹಕಾರ ಸಂಘಗಳ 1 ಲಕ್ಷ ರೂ.ಹಾಗೂ ರಾಷ್ಟ್ರೀಕೃತ ಬ್ಯಾಂಕ್ಗಳ ಎರಡು ಲಕ್ಷ ರೂ. ಚಾಲ್ತಿ ಸಾಲ ಮನ್ನಾ ಮಾಡಲಿ ಎಂದು ಆಗ್ರಹಿಸಿದ್ದಾರೆ.
ಶನಿವಾರ ಬಿಜೆಪಿ ಕೋರ್ ಕಮಿಟಿ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಪೂರ್ಣ ಸಾಲ ಮನ್ನಾ ಅಲ್ಲದಿದ್ದರೂ ಈಗಾಗಲೇ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡುವಾಗ ತಿಳಿಸಿರುವಂತೆ ಸಾಲ ಮನ್ನಾ ಮಾಡಿ ಆ ಮೊತ್ತ ರಾಷ್ಟ್ರೀಕೃತ ಬ್ಯಾಂಕ್ ಹಾಗೂ ಸಹಕಾರ ಸಂಘಗಳಿಗೆ ಜಮೆ ಮಾಡಿ ರೈತರಿಗೆ ಹೊಸ ಸಾಲ ದೊರಕುವಂತೆ ಮಾಡಲಿ ಎಂದು ಒತ್ತಾಯಿಸಿದರು.
ಜೆಡಿಎಸ್ ಸುಳ್ಳು ಭರವಸೆ ನೀಡಿ 37 ಸ್ಥಾನ ಪಡೆದಿದೆ. ಇಲ್ಲದಿದ್ದರೆ ಅವರಿಗೆ 20 ಸ್ಥಾನ ಸಹ ಬರುತ್ತಿರಲಿಲ್ಲ. ಅವರು ಹೇಳಿದಂತೆ ನಡೆದುಕೊಳ್ಳಲಿ. ಮೀನುಗಾರರು, ಸ್ತ್ರೀ ಶಕ್ತಿ ಸಂಘಗಳು, ನೇಕಾರರ ಸಾಲ ಸಹ ಮನ್ನಾ ಮಾಡಲಿ. ಹಿರಿಯ ನಾಯಕರಿಗೆ, ಗರ್ಭಿಣಿಯರಿಗೆ, ಬಡ ಮಹಿಳೆಯರಿಗೆ ನುಡಿದಂತೆ ಮಾಸಾಶನ ನೀಡಲಿ. ಇಲ್ಲದಿದ್ದರೆ ನಾವು ಜನತಾ ನ್ಯಾಯಾಲಯದ ಮುಂದೆ ಹೋದಾಗ ಇವರ ಸುಳ್ಳು ಭರವಸೆ ಹೇಳುತ್ತೇವೆ ಎಂದು ಹೇಳಿದರು.
ಪ್ರಸ್ತುತ ಸಂದರ್ಭದಲ್ಲಿ ರೈತರ ಸಂಪೂರ್ಣ ಸಾಲ ಮನ್ನಾ ವಿಚಾರ ಹೆಚ್ಚು ಬೆಳೆಸುವುದು ಬೇಡ. ಬಿಜೆಪಿ ಸಹ ಒಂದು ಲಕ್ಷ ರೂ.ವರೆಗೆ ಮಾತ್ರ ಸಾಲ ಮನ್ನಾ ಘೋಷಿಸಿತ್ತು. ಹೀಗಾಗಿ, ಸಾಲ ಮನ್ನಾ ಈಗಾಗಲೇ ಘೋಷಿಸಿರುವುದನ್ನು ಶೀಘ್ರ ಜಾರಿಗೆ ಒತ್ತಡ ಹೇರೋಣ ಎಂದು ಬಿಜೆಪಿ ಪ್ರಮುಖ ನಾಯಕರ ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ನಿಲುವು ತಾಳಲಾಗಿದೆ.
ರೈತರ ಸಾಲ ಮನ್ನಾ ವಿಚಾರದಲ್ಲಿ ಸಮಾಧಾನ ವ್ಯಕ್ತಪಡಿಸಿ ಮೀನುಗಾರರ, ಸ್ತ್ರೀಶಕ್ತಿ ಸಂಘಗಳ ಹಾಗೂ ನೇಕಾರರ ಸಾಲ ಮನ್ನಾಗೆ ಪಟ್ಟು ಹಿಡಿದು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವುದು ಇದರ ಹಿಂದಿನ ತಂತ್ರವಾಗಿದೆ ಎಂದು ಹೇಳಲಾಗಿದೆ.
ಬಡ ಮಹಿಳೆಯರು, ಹಿರಿಯ ನಾಗರಿಕರು, ಗರ್ಭಿಣಿಯರಿಗೆ ಜೆಡಿಎಸ್ ಪ್ರಣಾಳಿಕೆಯಲ್ಲಿ ಹೇಳಿದಂತೆ ಮಾಸಾಶನ ನೀಡಿಲ್ಲ. ಈ ವಿಚಾರವನ್ನು ರಾಜ್ಯ ಪ್ರವಾಸ ಸಂದರ್ಭದಲ್ಲಿ ಪ್ರಸ್ತಾಪಿಸಿ ಎಚ್.ಡಿ.ಕುಮಾರಸ್ವಾಮಿಗೆ ತಿರುಗೇಟು ನೀಡಲು ಬಿಜೆಪಿ ಕಾರ್ಯತಂತ್ರ ರೂಪಿಸಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ

Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ

Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
MUST WATCH
ಹೊಸ ಸೇರ್ಪಡೆ

Puttur: ಬಸ್ – ಬೈಕ್ ಅಪಘಾತ; ಸವಾರ ಸಾವು

Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ

BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.