ಪುತ್ತೂರು: ಸಂಚಾರ ಸುವ್ಯವಸ್ಥೆಗೆ ಪ್ರಾಯೋಗಿಕ ಮುನ್ನುಡಿ


Team Udayavani, Jul 30, 2018, 10:33 AM IST

30-july-3.jpg

ಪುತ್ತೂರು: ಸಂಚಾರ ನಿಯಂತ್ರಣ, ರಸ್ತೆ ಸುರಕ್ಷತಾ ಸಪ್ತಾಹದಲ್ಲಿ ಜನರಿಂದ ಸಂಗ್ರಹಿಸಿದ ಅಭಿಪ್ರಾಯಕ್ಕೆ ಪೂರಕವಾಗಿ ಪೊಲೀಸ್‌ ಇಲಾಖೆ ಪುತ್ತೂರು ನಗರದ ಹೃದಯ ಭಾಗದಲ್ಲಿ ವಾಹನಗಳ ಸಂಚಾರಕ್ಕೆ ಸಂಬಂಧಿಸಿ ಕೆಲವು ಬದಲಾವಣೆಗೆ ಪ್ರಾಯೋಗಿಕ ಮುನ್ನಡಿ ಇಟ್ಟಿದೆ. ಈ ವ್ಯವಸ್ಥೆಯನ್ನು ಪ್ರಾಯೋಗಿಕವಾಗಿ ರವಿವಾರದಿಂದಲೇ ಕಾರ್ಯರೂಪಕ್ಕೆ ಇಳಿಸಲಾಗಿದೆ. ವ್ಯತ್ಯಾಸ ಮಾಡಿದಲ್ಲಿ ಸಂಚಾರ ಪೊಲೀಸರನ್ನು ನಿಯೋಜಿಸಿ, ಸವಾರರಿಗೆ ಮಾಹಿತಿ ನೀಡಲಾಗುತ್ತಿದೆ. ಮುಂದೆ ಸೂಚನ ಫಲಕ ಅಳವಡಿಸಲಾಗುತ್ತದೆ. ಸೋಮವಾರ ವಾಹನಗಳ ಸಂಚಾರ ಜಾಸ್ತಿ ಇರುವ ಕಾರಣ ಬದಲಾದ ವ್ಯವಸ್ಥೆಯ ಅರಿವು ಮೂಡಿಸುವ ಸವಾಲು ಸಂಚಾರ ಪೊಲೀಸರಿಗಿದೆ.

ಸಪ್ತಾಹದ ಅಭಿಪ್ರಾಯ
ಪುತ್ತೂರಿನ ಸಂಚಾರ ಅವ್ಯವಸ್ಥೆಯ ಕುರಿತು ಸಾರ್ವಜನಿಕ ವಲಯದಿಂದ ಆರೋಪ, ಅಸಮಾಧಾನಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ನಗರ ಠಾಣೆ ಹಾಗೂ ಸಂಚಾರ ಪೊಲೀಸ್‌ ಠಾಣೆಯ ನೇತೃತ್ವದಲ್ಲಿ ಸಾರ್ವಜನಿಕರಿಂದಲೇ ಅಭಿಪ್ರಾಯ ಸಂಗ್ರಹಣೆಗೆ ಇಲಾಖೆಗಳ ಅಧಿಕಾರಿಗಳನ್ನೂ ಕೂಡಿಕೊಂಡು ಸಪ್ತಾಹವನ್ನು ಆಯೋಜಿಸಲಾಗಿದೆ. ಸಾರ್ವಜನಿಕರು, ಆಟೋ ರಿಕ್ಷಾ ಸಂಘಟನೆಗಳು, ವರ್ತಕರಿಂದ ಲಿಖಿತ ಅಭಿಪ್ರಾಯಗಳನ್ನು ಪಡೆದು ಈ ಪ್ರಯೋಗ ಮಾಡಲಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಬದಲಾವಣೆ ಹೇಗೆಂದರೆ…
· ಆಟೋ ರಿಕ್ಷಾಗಳಿಗೆ ವಿಕ್ಟರ್ ಶಾಲಾ ಬಳಿಯಿಂದ ಸಂಜೀವ ಶೆಟ್ಟಿ ಅಂಗಡಿ ತನಕದ ರಸ್ತೆ ಒನ್‌ ವೇ ಮಾಡಲಾಗಿದೆ.
· ಬೊಳುವಾರು ಕಡೆಯ ರಿಕ್ಷಾಗಳು ಹಳೆ ಪೋಸ್ಟ್‌ ಬಜಾರ್‌ ರಸ್ತೆ ಮೂಲಕ ಬಸ್‌ ನಿಲ್ದಾಣದ ಬಳಿಯಿಂದ ಬರಬೇಕು.
· ಭುವನೇಂದ್ರ ಕಲಾ ಮಂದಿರ ರಸ್ತೆಯ ಒನ್‌ ವೇ ನಿಯಮ ರದ್ದು.
· ಬಸ್‌ ನಿಲ್ದಾಣದ ಬಳಿಯ ಸೂಪರ್‌ ಟವರ್‌ ಎದುರಿನ ದ್ವಿಚಕ್ರ ವಾಹನ ಪಾರ್ಕಿಂಗ್‌ ಬಸ್‌ ನಿಲ್ದಾಣದ ನೆಲ ಅಂತಸ್ತಿಗೆ ಸ್ಥಳಾಂತರ.
· ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣಕ್ಕೆ ಮುಖ್ಯರಸ್ತೆ, ಗಾಂಧಿಕಟ್ಟೆ ಮೂಲಕ ಪ್ರವೇಶವಿಲ್ಲ. ಬಸ್‌ ನಿಲ್ದಾಣದ ಬಳಿಯಿಂದ ಗಾಂಧಿಕಟ್ಟೆ ಮೂಲಕ ಮಾತ್ರ ಮುಖ್ಯರಸ್ತೆಗೆ ಪ್ರವೇಶ.
· ಕೋರ್ಟು ರಸ್ತೆಯಿಂದ ಮುಖ್ಯರಸ್ತೆಗೆ ಸೇರುವ ಆಟೋ ರಿಕ್ಷಾಗಳು ಮುಖ್ಯ ರಸ್ತೆಗೆ ಸೇರುವಾಗ ಎಡಕ್ಕೆ ಚಲಿಸಬೇಕು.

ಕಾಲಾವಕಾಶವಿದೆ
ಸಪ್ತಾಹದ ಮೂಲಕ ಸಾರ್ವಜನಿಕ ಅಭಿಪ್ರಾಯ ಸಂಗ್ರಹಿಸಿ ಸಂಚಾರ ವ್ಯತ್ಯಾಸಗಳ ಪ್ರಸ್ತಾವನೆಯನ್ನು ಸಿದ್ಧಪಡಿಸಲಾಗಿದ್ದು, ಜಿಲ್ಲಾಧಿಕಾರಿಗೆ ಸಲ್ಲಿಸಲಾಗುವುದು. ಪ್ರಾಯೋಗಿಕ ಅವಧಿಯಲ್ಲಿ ಸಾಧಕ -ಬಾಧಕಗಳನ್ನು ಅರಿತುಕೊಳ್ಳಲಾಗುತ್ತದೆ. ಪ್ರಸ್ತಾವನೆ ಅಂಗೀಕರಿಸಲು ಜಿಲ್ಲಾಧಿಕಾರಿಗಳಿಗೆ ಮೂರು ತಿಂಗಳ ಕಾಲಾವಕಾಶವಿದೆ. ಒಂದು ತಿಂಗಳೊಳಗಿನ ಪ್ರಾಯೋಗಿಕ ಅವಧಿಯಲ್ಲಿ ಬದಲಾವಣೆಯ ಕ್ರಮ ಅಂತಿಮಗೊಳ್ಳಲಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು, ವಾಹನ ಚಾಲಕರ ಸಹಕಾರಬೇಕು.
– ಮಹೇಶ್‌ ಪ್ರಸಾದ್‌,
ಪಿಐ, ಪುತ್ತೂರು

ರಾಜೇಶ್‌ ಪಟ್ಟೆ

ಟಾಪ್ ನ್ಯೂಸ್

Channapatna ByPoll: NDA ticket to Yogeshwar: Aswath Narayan Gowda confident

Channapatna ByPoll: ಎನ್ ಡಿಎ ಟಿಕೆಟ್ ಯೋಗೇಶ್ವರ್ ಗೆ: ಅಶ್ವಥ್ ನಾರಾಯಣ ಗೌಡ ವಿಶ್ವಾಸ

ನಾಡಿಗೆ ಬಂದ ಕಾಡಾನೆ… ಸಿಡಿಮದ್ದಿಗೂ ಜಗ್ಗದೆ ಅರಣ್ಯ ಸಿಬ್ಬಂದಿಗಳನ್ನು ಕಾಡಿದ ಆನೆ ಹಿಂಡು

ನಾಡಿಗೆ ಬಂದ ಕಾಡಾನೆ… ಸಿಡಿಮದ್ದಿಗೂ ಜಗ್ಗದೆ ಅರಣ್ಯ ಸಿಬ್ಬಂದಿಗಳನ್ನು ಕಾಡಿದ ಆನೆ ಹಿಂಡು

13-

Gudibanda: ದೇವಸ್ಥಾನದಲ್ಲಿ ಕಳವು; ಆರೋಪಿಗಳು ಪೊಲೀಸ್ ವಶಕ್ಕೆ

ByPoll ticket: ಬಿಜೆಪಿ ನಾಯಕರ ವಿರುದ್ದವೇ ಕಿಡಿಕಾರಿದ ಎಚ್‌ ಡಿ ಕುಮಾರಸ್ವಾಮಿ

ByPoll ticket: ಬಿಜೆಪಿ ನಾಯಕರ ವಿರುದ್ದವೇ ಕಿಡಿಕಾರಿದ ಎಚ್‌ ಡಿ ಕುಮಾರಸ್ವಾಮಿ

Jersey Unveiled: ಉಡುಪಿ ಪತ್ರಕರ್ತರ ‘ರಜತ ಕ್ರೀಡಾ ಸಂಭ್ರಮ’ದ ಜೆರ್ಸಿ ಅನಾವರಣ

Jersey Unveiled: ಉಡುಪಿ ಪತ್ರಕರ್ತರ ‘ರಜತ ಕ್ರೀಡಾ ಸಂಭ್ರಮ’ದ ಜೆರ್ಸಿ ಅನಾವರಣ

Channapatna ByPoll: ಜೆಡಿಎಸ್ ಗೆ ಟಿಕೆಟ್ ನೀಡುವಂತೆ ಒತ್ತಾಯವಿಲ್ಲ, ಆದರೆ…: ನಿಖಿಲ್‌

Channapatna ByPoll: ಜೆಡಿಎಸ್ ಗೆ ಟಿಕೆಟ್ ನೀಡುವಂತೆ ಒತ್ತಾಯವಿಲ್ಲ, ಆದರೆ…: ನಿಖಿಲ್‌

Tahshildar: ತೀರ್ಥಹಳ್ಳಿಯ ನೂತನ ಪ್ರಭಾರ ತಹಶೀಲ್ದಾರ್ ಆಗಿ ರಂಜಿತ್ ಎಸ್. ನೇಮಕ!

Tahshildar: ತೀರ್ಥಹಳ್ಳಿಯ ನೂತನ ಪ್ರಭಾರ ತಹಶೀಲ್ದಾರ್ ಆಗಿ ರಂಜಿತ್ ಎಸ್. ನೇಮಕ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

14-yellapur

Yellapur: ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಲಾರಿ

Channapatna ByPoll: NDA ticket to Yogeshwar: Aswath Narayan Gowda confident

Channapatna ByPoll: ಎನ್ ಡಿಎ ಟಿಕೆಟ್ ಯೋಗೇಶ್ವರ್ ಗೆ: ಅಶ್ವಥ್ ನಾರಾಯಣ ಗೌಡ ವಿಶ್ವಾಸ

ಯಕ್ಷಧ್ರುವ ಯುರೋಪ್‌ ಘಟಕ ಉದ್ಘಾಟನೆ; ಮಕ್ಕಳಿಂದ ಮಾಯಾಮೃಗ ಪ್ರದರ್ಶನ

ಯಕ್ಷಧ್ರುವ ಯುರೋಪ್‌ ಘಟಕ ಉದ್ಘಾಟನೆ; ಮಕ್ಕಳಿಂದ ಮಾಯಾಮೃಗ ಪ್ರದರ್ಶನ

ನಾಡಿಗೆ ಬಂದ ಕಾಡಾನೆ… ಸಿಡಿಮದ್ದಿಗೂ ಜಗ್ಗದೆ ಅರಣ್ಯ ಸಿಬ್ಬಂದಿಗಳನ್ನು ಕಾಡಿದ ಆನೆ ಹಿಂಡು

ನಾಡಿಗೆ ಬಂದ ಕಾಡಾನೆ… ಸಿಡಿಮದ್ದಿಗೂ ಜಗ್ಗದೆ ಅರಣ್ಯ ಸಿಬ್ಬಂದಿಗಳನ್ನು ಕಾಡಿದ ಆನೆ ಹಿಂಡು

13-

Gudibanda: ದೇವಸ್ಥಾನದಲ್ಲಿ ಕಳವು; ಆರೋಪಿಗಳು ಪೊಲೀಸ್ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.