ಮತ್ತೆ ಪ್ಲಾಸ್ಟಿಕ್‌ ಧ್ವಜಗಳ ಹಾರಾಟ


Team Udayavani, Aug 1, 2018, 11:05 AM IST

blore-2.jpg

ಬೆಂಗಳೂರು: ಪ್ಲಾಸ್ಟಿಕ್‌ ಧ್ವಜಗಳಿಗೆ ದೇಶಾದ್ಯಂತ ನಿಷೇಧ ಹೇರಿ ವರ್ಷಗಳೇ ಕಳೆದಿವೆ. ಇದರ ಜತೆಗೆ ರಾಜ್ಯದಲ್ಲಿ ಪ್ಲಾಸ್ಟಿಕ್‌ ವಸ್ತುಗಳ ಮೇಲೆ ನಿರ್ಬಂಧವೂ ಜಾರಿಯಲ್ಲಿದೆ. ಇಷ್ಟಾಗ್ಯೂ, ಸ್ವಾತಂತ್ರ್ಯ ದಿನಾಚರಣೆ ಸಮೀಪಿಸುತ್ತಿದ್ದಂತೆ ಪ್ಲಾಸ್ಟಿಕ್‌ ಧ್ವಜಗಳ ಹಾವಳಿ ಮತ್ತೆ ವಕ್ಕರಿಸತೊಡಗಿದೆ.

ನಗರದ ಬಹುತೇಕ ಮಾರುಕಟ್ಟೆ, ಹೋಲ್‌ಸೇಲ್‌ ಹಾಗೂ ರಿಟೈಲ್‌ ಮಳಿಗೆಗಳಲ್ಲಿ, ಮಾಲ್‌ಗ‌ಳಲ್ಲಿ, ರಸ್ತೆ ಬದಿಯ ಅಂಗಡಿಗಳಲ್ಲಿ ಮಾರಾಟ ಆರಂಭವಾಗಿದೆ. ಮುಖ್ಯವಾಗಿ ನಗರದ ಪ್ರಮುಖ ಜಂಕ್ಷನ್‌ಗಳಲ್ಲಿ ರಸ್ತೆ ಬದಿಯ ವ್ಯಾಪಾರಿಗಳು ಗೊಂಚಲು ಗೊಂಚಲಾಗಿ ಪ್ಲಾಸ್ಟಿಕ್‌ ಧ್ವಜಗಳನ್ನು ಹಿಡಿದುಕೊಂಡು ಮಾರಾಟ ಮಾಡಲಾರಂಭಿಸಿದ್ದಾರೆ. ಇದಕ್ಕೆ ಆರಂಭದಲ್ಲೇ ಬಿಬಿಎಂಪಿ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕಡಿವಾಣ ಹಾಕಬೇಕಾಗಿದೆ.

ಪ್ಲಾಸ್ಟಿಕ್‌ ಧ್ವಜಗಳನ್ನು ಗುಜರಾತ್‌, ಆಂಧ್ರಪ್ರದೇಶ, ತಮಿಳುನಾಡಿನಿಂದ ನಗರದ ರೀಟೇಲ್‌ ಹಾಗೂ ಹೋಲ್‌ಸೇಲ್‌ ವ್ಯಾಪಾರಿಗಳು ತರಿಸಿಕೊಳ್ಳುತ್ತಾರೆ. ರಾಷ್ಟ್ರ ಪ್ರೇಮದ ಹೆಸರಿನಲ್ಲಿ ಅನೇಕರು ಪುಟ್ಬಾತ್‌ಗಳಲ್ಲಿ ಸಿಗುವ ಕೇಸರಿ, ಬಿಳಿ, ಹಸಿರು ಬಣ್ಣದ ಪ್ಲಾಸ್ಟಿಕ್‌ ಧ್ವಜವನ್ನು ಕೊಂಡುಕೊಳ್ಳುತ್ತಾರೆ. ಅದನ್ನು ತಮ್ಮ ವಾಹನಗಳ ಮೇಲೆ ಹಾಕಿಕೊಂಡು ತಿರುಗಾಡುವುದು, ಮನೆಗಳ ಮುಂಭಾಗದಲ್ಲಿ ಹಾಕುವುದು.ಅಲಂಕಾರಿಕ ವಸ್ತುಗಳಾಗಿ ಬಳಸುವುದು ಜತೆಗೆ ಕೆಲವರು ಕೈಗಳಲ್ಲಿ ಹಿಡಿದು ಮೆರವಣಿಗೆಯನ್ನೂ ಹೋಗುತ್ತಾರೆ. ಈ ಧ್ವಜಕ್ಕೆ ಕಳಪೆ ದರ್ಜೆಯ ಪ್ಲಾಸ್ಟಿಕ್‌ ಬಳಸುವುದರಿಂದ ಅದರ ಆಯಸ್ಸು ಒಂದು ದಿನ ಮಾತ್ರ. ಬೆಳಗ್ಗೆ ಕೊಂಡಾಗ ದೇಶ ಪ್ರೇಮ ಹಾಗೂ ಗೌರವದ
ಸಂಕೇತವಾಗಿದ್ದ ಈ ಪ್ಲಾಸ್ಟಿಕ್‌ ಧ್ವಜಗಳು ಸಂಜೆಯಾಗುತ್ತಿದ್ದಂತೆ ರಸ್ತೆ ಬದಿ, ಕಸದ ಬುಟ್ಟಿಗಳಲ್ಲಿ, ಚರಂಡಿಗಳಲ್ಲಿ ಕಾಣುತ್ತವೆ. ಅದರಲ್ಲೂ ನಗರದ ಮಾಣಿಕ್‌ ಷಾ ಪರೇಡ್‌ ಸೇರಿದಂತೆ ವಿವಿಧೆಡೆಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ನಂತರ ಆ ಪ್ರದೇಶಗಳ ಸುತ್ತಮುತ್ತ ರಾಶಿಗಟ್ಟಲೆ ಪ್ಲಾಸ್ಟಿಕ್‌ ಧ್ವಜಗಳು ಬಿದ್ದಿರುತ್ತವೆ.

ದಂಡ ಹಾಕಲಾಗುವುದು: ಬಿಬಿಎಂಪಿ ಪ್ಲಾಸ್ಟಿಕ್‌ ನಿಗ್ರಹ ಕಾರ್ಯಾಚರಣೆಯಲ್ಲಿ ಪ್ಲಾಸ್ಟಿಕ್‌ ಧ್ವಜವೂ ಸೇರಿದೆ. ರಸ್ತೆ ಬದಿ ಹಾಗೂ ಜಂಕ್ಷನ್‌ಗಳಲ್ಲಿ ಮಾರಾಟ ಮಾಡುವವರನ್ನು ಹಿಡಿದು ಅವರ ಮಾಲೀಕರಿಗೆ ದಂಡ ಹಾಕಲಾಗುವುದು. ಅಥವಾ ಆ ವ್ಯಾಪಾರಿಯ ವಹಿ ವಾಟಿನ ಆಧಾರದ ಮೇಲೆ ನೂರು ಅಥವಾ
ಸಾವಿರ ರೂ ಪಾಯಿ ದಂಡ ಹಾಕಿ ಮಾರಾಟ ಮಾಡದಂತೆ ಎಚ್ಚರಿಕೆ ನೀಡಲಾಗುವುದು ಎಂದು ಬಿಬಿಎಂಪಿ ಜಂಟಿ ಆಯುಕ್ತ ಸಫ‌ìರಾಜ್‌ ಖಾನ್‌ ತಿಳಿಸಿದ್ದಾರೆ. ರಾಷ್ಟ್ರೀಯ ಹಬ್ಬಗಳು ಹತ್ತಿರ ಬರುತ್ತಿದಂತೆ ಮಳಿಗೆಗಳಲ್ಲಿ ಪ್ಲಾಸ್ಟಿಕ್‌ ಧ್ವಜ ಹಾವಳಿ ಹೆಚ್ಚಾಗುತ್ತದೆ. ಧ್ವಜಕ್ಕೆಂದೇ ಪ್ರತ್ಯೇಕವಾಗಿ ಯಾವ ಕಾನೂನು
ಸಿದ್ಧಪಡಿಸಿಲ್ಲ. ಪ್ಲಾಸ್ಟಿಕ್‌ ದಾಳಿಯಲ್ಲಿಯೇ ಅದನ್ನು ವಶಪಡಿಸಿಕೊಳ್ಳುತ್ತೇವೆ. ಬೀದಿ ಬದಿಯ ವ್ಯಾಪಾರಿಗಳ ಸಭೆಯಲ್ಲಿ ಧ್ವಜವನ್ನು ಮಾರಾಟ ಮಾಡದಂತೆ ಸೂಚನೆ ನೀಡಲಾಗುತ್ತದೆ. ಸಾರ್ವಜನಿಕರಿಗೆ ಕೊಂಡುಕೊಳ್ಳದಂತೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಸದ್ಯದಲ್ಲೇ ಹಾಕಿಕೊಳ್ಳುತ್ತೇವೆ ಎಂದೂ ಅವರು ಹೇಳಿದ್ದಾರೆ.

ಜಂಕ್ಷನ್‌ಗಳಲ್ಲಿ ಪ್ಲಾಸ್ಟಿಕ್‌ ಧ್ವಜ ಮಾರಾಟ ಮಾಡುವವರು,
ಕೊಳ್ಳುವವರನ್ನು ಎಚ್ಚರಿಸಬೇಕು. ಯಾವುದೇ ಸಮಾರಂಭದಲ್ಲಿ ಬಳಸುತ್ತಿದ್ದರೇ ನೇರವಾಗಿ ವಶಕ್ಕೆ
ಪಡೆಯಬೇಕು. ಸಾರ್ವಜನಿಕರು ಪ್ಲಾಸ್ಟಿಕ್‌ ಧ್ವಜ ತಿರಸ್ಕರಿಸಬೇಕಿದೆ.
   ಯಲ್ಲಪ್ಪ ರೆಡ್ಡಿ, ಪರಿಸರವಾದಿ

10 ರೂ. ಒಂದು ಬಾವುಟ ಮಾರಾಟ ಮಾಡಿದರೆ ನಮಗೆ 5
ರೂ. ಲಾಭ ಬರುತ್ತದೆ. ಸಿಗ್ನಲ್‌ಗಳಲ್ಲಿಯೇ ಮಾರಾಟ ಜೋರಿರುತ್ತದೆ. ಈ ಬಾರಿ ಪ್ಲಾಸ್ಟಿಕ್‌ ಧ್ವಜದ ಜತೆಗೆ
ಪಾಲಿಸ್ಟರ್‌ ಬಟ್ಟೆಯ ಹಾಗೂ ಲೋಹದ ಚಿಕ್ಕ ಚಿಕ್ಕ ಲಾಂಛನಗಳನ್ನು ಮಾರಾಟ ಮಾಡುತ್ತಿದ್ದೇವೆ.
    ಬಸವರಾಜ. ವ್ಯಾಪಾರಿ 

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.