ಜಲಾಶಯಗಳ ನೀರು ಸದ್ಬಳಕೆಗೆ ಸರ್ಕಾರದ ಸಂಕಲ್ಪ: ಡಿಕೆಶಿ
Team Udayavani, Aug 16, 2018, 3:46 PM IST
ಹೊಸಪೇಟೆ: ರಾಜ್ಯದ ಜಲಾಶಯಗಳ ಒಂದು ಹನಿ ನೀರು ಕೂಡ ನಿರುಪಯುಕ್ತವಾಗದಂತೆ ಅಗತ್ಯ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಸಂಕಲ್ಪ ಮಾಡಿದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಹೇಳಿದರು.
ಸಮೀಪದ ಟಿ.ಬಿ.ಡ್ಯಾಂನಲ್ಲಿ ಬುಧವಾರ ಸಂಜೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಂಗಭದ್ರಾ ಜಲಾಶಯದಿಂದ ಒಂದು ಲಕ್ಷಕ್ಕೂ ಅಧಿಕ ನೀರು ಹೊರ ಹೋಗುತ್ತಿದೆ. ಪ್ರತಿ ಹನಿ ನೀರು ಉಪಯೋಗವಾಗಬೇಕು ಎಂಬ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸಲಾಗುತ್ತಿದೆ. ಈ ಕುರಿತಂತೆ ಈಗಾಗಲೇ 210ಕ್ಕೂ ಹೆಚ್ಚು ದೇಶಿ ವಿದೇಶಿಯರು ಹಾಗೂ ಸ್ಥಳೀಯರಿಂದ ಸಲಹೆ ಸೂಚನೆ ಪಡೆಯಲಾಗಿದೆ. ಅವರ ಸಲಹೆಯನ್ವಯ ಸರ್ಕಾರ ಕಾರ್ಯಕ್ರಮ ರೂಪಿಸಲಿದೆ ಎಂದರು.
ತುಂಗಭದ್ರಾ ಜಲಾಶಯದಲ್ಲಿ 30 ಟಿಎಂಸಿ ಗೂ ಅಧಿಕ ಹೂಳು ತುಂಬಿದ್ದು, ಇದರಿಂದ ಹೆಚ್ಚುವರಿ ನೀರು ನಿರುಪಯುಕ್ತವಾಗಿ
ಸಮುದ್ರ ಸೇರುತ್ತಿದೆ. ಈ ಬಗ್ಗೆ ತಜ್ಞರಿಂದ ವರದಿ ಪಡೆಯಲಾಗಿದೆ. ಸಮಾನಾಂತರ ಜಲಾಶಯಗಳ ನಿರ್ಮಾಣ ಕುರಿತು ಚಿಂತನೆ ನಡೆಸಲಾಗುತ್ತಿದೆ. ಸ್ಥಳಗಳ ಪರಿಶೀಲನೆ ನಡೆಸಲಾಗಿದೆ ಎಂದರು.
ಮಹದಾಯಿ ತೀರ್ಪು ಸಮಾಧಾನ ತಂದಿಲ್ಲ. ರಾಜ್ಯಕ್ಕೆ ನ್ಯಾಯ ಒದಗಿಸಿಲ್ಲ. ನಮ್ಮ ಪಾಲು ನಮಗೆ ಸಿಕ್ಕಿಲ್ಲ. 34 ಟಿಎಂಸಿ ನೀರು ಕೇಳಲಾಗಿತ್ತು. ಆದರೆ 13.5 ಟಿಎಂಸಿ ನೀರು ಮಾತ್ರ ನೀಡಲಾಗಿದೆ. ಕುಡಿಯಲು ಮಾತ್ರ 9.5 ಟಿಎಂಸಿ ನೀರು ನೀಡಿದ್ದಾರೆ. ವಿದ್ಯುತ್ ಬಳಕೆಗೆ 8 ಟಿಎಂಸಿ ಮಾತ್ರ ನೀಡಲಾಗಿದೆ. ಆದರೆ ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಉತ್ತಮ ತೀರ್ಪು ಎಂದು ಬಿಂಬಿಸಲು ಹೊರಟಿದ್ದಾರೆ.
ಈ ಕುರಿತು ಜನಪ್ರತಿನಿಧಿಗಳು ಸಂಘ ಸಂಸ್ಥೆಗಳ ನೇತೃತ್ವದಲ್ಲಿ ಸರ್ಕಾರ ಹೋರಾಟ ನಡೆಸಲಿದೆ ಎಂದರು. ಸಣ್ಣ ನೀರಾವರಿ ಸಚಿವ ವೆಂಕಟರಾವ್ ನಾಡಗೌಡ, ಅರಣ್ಯ ಸಚಿವ ಶಂಕರ್, ಸಂಸದ ಕರಡಿ ಸಂಗಣ್ಣ, ಶಾಸಕರಾದ ಆನಂದ್ಸಿಂಗ್, ಬಿ.ನಾಗೇಂದ್ರ, ಈ. ತುಕಾರಾಂ, ಜೆ.ಎನ್. ಗಣೇಶ, ಭೀಮಾನಾಯ್ಕ, ರಾಘವೇಂದ್ರ ಹಿಟ್ನಾಳ್, ಅಮರೇಗೌಡ ಬಯ್ನಾಪುರ, ಪ್ರತಾಪ್ ಗೌಡ ಪಾಟೀಲ್, ಜಿಲ್ಲಾಧಿಕಾರಿ ಡಾ.ರಾಮ್ ಪ್ರಸಾತ್ ಮನೋಹರ್, ಕೊಪ್ಪಳ ಡಿಸಿ ಪಿ.ಸುನೀಲ್ ಕುಮಾರ್, ಸಹಾಯಕ ಆಯುಕ್ತರಾದ ಗಾರ್ಗಿ ಜೈನ್, ತಹಶೀಲ್ದಾರ್ ಎಚ್.ವಿಶ್ವನಾಥ ಸೇರಿದಂತೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary: ದರ್ಶನ್ ಭೇಟಿಗೆ ಬಂದ ವಿಜಯಲಕ್ಷ್ಮಿ-ದಿನಕರ್: ಪ್ರಸಾದ,ಡ್ರೈಫ್ರೂಟ್ಸ್ ತಂದ ಪತ್ನಿ
Valmiki scam; ತುಕಾರಾಮ್ ಗೆಲುವನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಶ್ರೀರಾಮುಲು ದಾವೆ
Renukaswamy Case ಚಾರ್ಜ್ಶೀಟ್ನಲ್ಲಿ ಸಾಕ್ಷಿಗಳ ಹೇಳಿಕೆ ಕೇಳಿ ದಂಗಾದ ದರ್ಶನ್
Bellary: ಬಳ್ಳಾರಿ ಜೈಲಿಗೆ ಬಂದ ಶಿಗ್ಲಿ ಬಸ್ಯಾ; ದರ್ಶನ್ ಪರ ವಾದ ಮಾಡಲು ಸಿದ್ದ ಎಂದ ಬಸ್ಯಾ
Renukaswamy Case: ದರ್ಶನ್ ಕಸ್ಟಡಿ ಅಂತ್ಯ; ವಿಡಿಯೋ ಕಾನ್ಪರೆನ್ಸ್ ಮೂಲಕ ಕೋರ್ಟ್ ಗೆ ಹಾಜರು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Mudubidire: 77 ಕೋ.ರೂ. ವೆಚ್ಚದ ಅಮೃತ್ 2.0 ನೀರಿನ ಯೋಜನೆಗೆ ಚಾಲನೆ
Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್ ಬೆಳ್ಳಿ’ ತೆರೆಗೆ
Space Wonder: ಇಂದು ವಿಶೇಷ ಸೂಪರ್ಮೂನ್
Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್ಐಎಗೆ ವಹಿಸಲಿ: ಶಾಸಕ ಸುನಿಲ್ ಕುಮಾರ್
Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.