ಕೇರಳದಲ್ಲಿ ನಿಲ್ಲದ ತಲ್ಲಣ


Team Udayavani, Aug 17, 2018, 6:50 AM IST

keralaa.jpg

ನವದೆಹಲಿ: ಕಳೆದೊಂದು ವಾರದಿಂದ ಕೇರಳವನ್ನು ಬಿಡದೇ ಆವರಿಸಿರುವ ಶತಮಾನದ ಮಹಾಮಳೆ ಕಳೆದ 48 ಗಂಟೆಗಳಲ್ಲಿ 60 ಜನರ ಬಲಿ ಪಡೆದಿದೆ. ತ್ರಿಶೂರ್‌, ಕಣ್ಣೂರ್‌,ಕಲ್ಲಿಕೋಟೆ, ಕೊಟ್ಟಾಯಂನ ಅಂಬಾಯತ್ತೋಡ್‌ನಲ್ಲಿ ಗುರುವಾರ ಭೂಕುಸಿತ ಉಂಟಾ ಗಿದ್ದು, ಪಾಲಕ್ಕಾಡ್‌ ಜಿಲ್ಲೆಯ ಉತ್ತರದಲ್ಲಿರುವ ನೆನ್ಮಾರದಲ್ಲಿ ಸಂಭವಿಸಿದ ಭೂಕುಸಿತದಿಂದಾಗಿ 8 ಮಂದಿ ಮೃತಪಟ್ಟಿದ್ದಾರೆ. ಇದ ರಿಂದಾಗಿ, ಆ.1ರಿಂದ ಈವರೆಗೆ ಮಳೆಗೆ ಬಲಿಯಾದವರ ಸಂಖ್ಯೆ 100ಕ್ಕೇರಿದೆ. ಏತನ್ಮಧ್ಯೆ, ಆಗಸ್ಟ್‌ 15ರಂದು ನಿಯಂತ್ರಣಕ್ಕೆ ಬರ ಲಿದೆ ಎಂದು ಹೇಳಲಾಗಿದ್ದ ಮಹಾಮಳೆ 18ರವರೆಗೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿರುವುದು ಕೇರಳದ ಜನತೆಯನ್ನು ಮತ್ತಷ್ಟು ಆತಂಕಕ್ಕೆ ದೂಡಿದೆ. 

14 ಜಿಲ್ಲೆಗಳಲ್ಲಿ ಪ್ರವಾಹ ಭೀತಿ
ಕೇರಳ ಇತಿಹಾಸದಲ್ಲೇ ಇದೇ ಮೊದಲ ಬಾರಿ, ಕೇರಳ ವಿದ್ಯುತ್‌ಶಕ್ತಿ ಮಂಡಳಿಗೆ ಸೇರಿದ 52 ಅಣೆಕಟ್ಟು ಹಾಗೂ ಕೇರಳ ಜಲ ಆಯೋಗಕ್ಕೆ ಸೇರಿದ 22 ಅಣೆಕಟ್ಟುಗಳಲ್ಲಿ ನೀರು ಗರಿಷ್ಠ ಮಿತಿಯನ್ನೂ ಮೀರಿ ತುಂಬುತ್ತಿವೆ. ಪೆರಿಯಾರ್‌ ನದಿ ನೀರು ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು, 14 ಜಿಲ್ಲೆಗಳಿಗೆ ಪ್ರವಾಹದ ಮುನ್ನೆಚ್ಚರಿಕೆ ಕೊಡಲಾಗಿದೆ. 

ನಾಗರಿಕರ ಮೊರೆ
ಸದ್ಯಕ್ಕೆ ಜಲಾವೃತಗೊಂಡಿರುವ ಪಟ್ಟಣಂತಿಟ್ಟ, ಎರ್ನಾಕುಳಂ, ಅಲಪ್ಪುಳ ಮುಂತಾದೆಡೆ ಜನರು ಅಪಾರ್ಟ್‌ ಮೆಂಟ್‌ಗಳು, ಎತ್ತರ ಮನೆಗಳ ಛಾವಣಿಗಳನ್ನು ಏರಿ ನಿಂತು ನೆರವಿಗಾಗಿ ಕೂಗುತ್ತಿದ್ದಾರೆ. ಇಂಥ ನಾಗರಿಕರು ತಮ್ಮಲ್ಲಿನ ಮೊಬೈಲ್‌ಗ‌ಳಿಂದಲೇ ಸಾಮಾ ಜಿಕ ಜಾಲ ತಾಣಗಳಲ್ಲಿ ನೆರವಿಗಾಗಿ ಮೊರೆಯಿಡುತ್ತಿದ್ದಾರೆ. ನಿರ್ಗತಿಕರಿಗೆ ಆಹಾರ ಪೊಟ್ಟಣ, ಕುಡಿಯುವ ನೀರಿನ ಬಾಟಲಿಗಳನ್ನು ಸರಬರಾಜು ಮಾಡಲಾಗುತ್ತಿದೆ. ಪಟ್ಟಣಂತಿಟ್ಟ ಜಿಲ್ಲೆಯ ರಣ್ಣಿ ಎಂಬ ಪ್ರಾಂತ್ಯದಲ್ಲಿನ ಥಿಯಾಲಜಿ ಸೆಮಿನರಿ  ಜಲಾವೃತವಾಗಿದ್ದ ರಿಂದಾಗಿ ಅದರೊಳಗೆ ಸಿಲುಕಿದ್ದ 20 ಮಂದಿಯನ್ನು ಏರ್‌ ಲಿಫ್ಟ್ ಮೂಲಕ ತಿರುವನಂತಪುರಂಗೆ ತರಲಾಗಿದೆ.

ಮತ್ತೂಂದು ತುಕಡಿ
ಈಗಾಗಲೇ ಕೇರಳದಲ್ಲಿ ಪರಿಹಾರ ಕಾರ್ಯ ನಡೆಸುತ್ತಿರುವ ಭೂ ಸೇನೆ, ನೌಕಾ ಪಡೆ, ವಾಯು ಪಡೆ, ಕರಾವಳಿ ಪಡೆ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಗಳ (ಎನ್‌ಡಿಆರ್‌ಎಫ್) ತುಕಡಿಗಳಿಗೆ ಸಹಾಯಕವಾಗಿ 40 ಸೈನಿಕರುಳ್ಳ ಮತ್ತೂಂದು ಸೇನಾ ತುಕಡಿಯನ್ನು ರವಾನಿಸಲು ತೀರ್ಮಾನಿಸಿದೆ.

ಸಂಚಾರ ಅಸ್ತವ್ಯಸ್ತ
ಕೇರಳದ ಕೇಂದ್ರ ಭಾಗದಲ್ಲಿ ಎಡಬಿಡದೇ ಮಳೆ ಸುರಿದು ಎಲ್ಲೆಲ್ಲೂ ನೀರು ತುಂಬಿಕೊಂಡಿರುವುದರಿಂದ ಆ ಭಾಗದ ರೈಲು ಸಂಚಾ ರಕ್ಕೆ ತೀವ್ರ ಅಡಚಣೆಯಾಗಿದೆ. ಹಾಗಾಗಿ, ತಿರುವನಂತಪುರ ದಿಂದ ಇತರೆಡೆಗೆ ಸಾಗುವ ಎಲ್ಲಾ ರೈಲುಗಳನ್ನು ರದ್ದುಗೊಳಿಸಲಾ ಗಿದೆ. ಕೊಚ್ಚಿ ಮೆಟ್ರೋ ರೈಲು ಮಾರ್ಗವೂ ಸ್ಥಗಿತವಾಗಿದೆ. ರಸ್ತೆ ಮಾರ್ಗಗಳನ್ನೂ ಬಂದ್‌ ಮಾಡಲಾಗಿದೆ. 

ಸುಪ್ರೀಂ ಆತಂಕ 
ಕೇರಳದ ಪ್ರವಾಹ ಪರಿಸ್ಥಿತಿಯನ್ನು ವಿನಾಶಕಾರಿ ಎಂದು ಬಣ್ಣಿಸಿರುವ ಸುಪ್ರೀಂಕೋರ್ಟ್‌, ಮುಲ್ಲಪೆರಿಯಾರ್‌ ಅಣೆಕಟ್ಟಿನಲ್ಲಿರುವ ನೀರನ್ನು ಕಡಿಮೆ ಮಾಡುವ ಬಗ್ಗೆ ಕೇರಳ ಮತ್ತು ತಮಿಳುನಾಡು ನಡುವೆ ಎದ್ದಿರುವ ವಿವಾದದಲ್ಲಿ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಲು ತಾನು ಅನುವು ಮಾಡಿಕೊಡುವುದಾಗಿ ಹೇಳಿದೆ. ಮುಲ್ಲಪೆರಿಯಾರ್‌ ಅಣೆಕಟ್ಟಿನ ಗರಿಷ್ಟ ಮಟ್ಟ 142 ಅಡಿ ಇದ್ದು, ಇದನ್ನು ಮೀರಿ ನೀರು ಸಂಗ್ರಹವಾಗಿರುವುದರಿಂದ ಅಣೆಕಟ್ಟಿನ ಕ್ರೆಸ್ಟ್‌ ಗೇಟ್‌ ತೆರೆಯಲು ಕೇರಳ ಕಾತುರಿಸುತ್ತಿದ್ದರೆ, ಕ್ರೆಸ್ಟ್‌ ಗೇಟ್‌ ತೆರೆಯುವುದರಿಂದ ಪ್ರವಾಹದ ಭೀತಿ ತಲೆದೋರಲಿದೆ ಎಂದು ಆಪಾದಿಸಿರುವ ತಮಿಳುನಾಡು ಗೇಟ್‌ ತೆರೆಯದಂತೆ ತಾಕೀತು ಮಾಡಿದೆ. ಹಾಗಾಗಿ, ಈ ವಿಚಾರ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದೆ.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

NDA-Meet

NDA CMs Meet: ರಾಷ್ಟ್ರದ ಅಭಿವೃದ್ಧಿಗೆ ಎನ್‌ಡಿಎ ಬದ್ಧ: ಪ್ರಧಾನಿ ಮೋದಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.