ಪ್ರಜೆಗಳಿಗೆ ರಾಜಭವನ ಮುಕ್ತ


Team Udayavani, Aug 17, 2018, 6:15 AM IST

16bnp-24.jpg

ಬೆಂಗಳೂರು: ಹದಿನೈದು ದಿನಗಳ ಮಟ್ಟಿಗೆ “ಪ್ರಜೆ’ಗಳಿಗೆ “ರಾಜ’ಭವನ ಮುಕ್ತವಾಗಲಿದೆ. ಹೌದು! ಆ.16ರಿಂದ 31ರವರೆಗೆ ರಾಜಭವನಕ್ಕೆ ಭೇಟಿ ನೀಡಲು ಸಾರ್ವಜನಿಕರಿಗೆ ಮುಕ್ತ ಅವಕಾಶ ಮಾಡಿಕೊಡಲಾಗಿದೆ.

ರಾಜ್ಯ ಸರ್ಕಾರದ ಸಂವಿಧಾನ ಮುಖ್ಯಸ್ಥರಾದ ರಾಜ್ಯಪಾಲರ ಕಾರ್ಯ ಮತ್ತು ಆವಾಸ ಸ್ಥಾನ ಆಗಿರುವ ರಾಜಭವನ “ಹೈ ಸೆಕ್ಯೂರಿಟಿ’ ಪ್ರದೇಶಗಳಲ್ಲೊಂದು. ಸಾರ್ವಜನಿಕರ ಪ್ರವೇಶ, ಭೇಟಿ ಮತ್ತು ಸಂದರ್ಶನಕ್ಕೆ ಇಲ್ಲಿ ಮುಕ್ತ ಅವಕಾಶ ಇರುವುದಿಲ್ಲ.
ಆದರೆ, ಸಾಮಾನ್ಯ ಜನರಲ್ಲಿ ರಾಜಭವನದ ಕುರಿತು ಇರುವ ಕುತೂಹಲ ತಣಿಸಲು, ಶತಮಾನಕ್ಕೂ ಹೆಚ್ಚು ಇತಿಹಾಸವಿರುವ ಈ ರಾಜಭವನ ಎಂಬ ಪಾರಂಪರಿಕ ಕಟ್ಟಡ ವೈಭವ ಕಣ್ಣಾರೆ ಕಂಡು ಸಂಭ್ರಮಪಟ್ಟುಕೊಳ್ಳಲು ಅವಕಾಶ ಮಾಡಿಕೊಡಲು ಈಗಿನ ರಾಜ್ಯಪಾಲ ವಜುಭಾಯಿ ವಾಲಾ ಮುಂದಾಗಿದ್ದಾರೆ. ಕೆಲವು ವಿಶೇಷ ಸಂದರ್ಭಗಳನ್ನು ಹೊರತುಪಡಿಸಿ, ಸಾರ್ವಜನಿಕ ಪ್ರವೇಶಕ್ಕೆ ಮುಕ್ತ ಅವಕಾಶ ಮಾಡಿಕೊಡುತ್ತಿರುವುದು ರಾಜಭವನದ ಇತಿಹಾಸದಲ್ಲಿ ಇದೇ ಮೊದಲು ಎನ್ನಲಾಗಿದೆ.

ಗುರುವಾರ ರಾಜಭವನದ ಗಾಜಿನಮನೆಯಲ್ಲಿ ವಿಶೇಷ ಪತ್ರಿಕಾಗೋಷ್ಠಿ ನಡೆಸಿದ ರಾಜ್ಯಪಾಲ ವಜುಭಾಯಿ ವಾಲಾ, ರಾಜಭವನ ದರ್ಶನಕ್ಕೆ ಹದಿನೈದು ದಿನಗಳ ಸಾರ್ವಜನಿಕರಿಗೆ ಮುಕ್ತ ಅವಕಾಶ ಮಾಡಿಕೊಡಲಾಗುತ್ತಿದೆ. ಇದೊಂದು ವಿನೂತನ ಪ್ರಯತ್ನವಾಗಿದ್ದು, ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಬೆಂಗಳೂರಿನಗ ನಾಗರಿಕರಲ್ಲಿ ಮನವಿ ಮಾಡಿದರು.

ಆ.16ರಿಂದ 31ರವರೆಗೆ ಒಟ್ಟು 15 ದಿನಗಳ ಕಾಲ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಇರಲಿದೆ. ಈ ಅವಧಿಯಲ್ಲಿ ಸಂಜೆ 4ರಿಂದ 7.30ರ ತನಕ ರಾಜಭವನಕ್ಕೆ ಭೇಟಿ ಕೊಡಬಹುದು. ಆನ್‌ಲೈನ್‌ನಲ್ಲಿ ನೊಂದಾಯಿಸಿಕೊಂಡವರ ಪೈಕಿ ಪ್ರತಿ ದಿನ 350ರಿಂದ 400 ಮಂದಿಗೆ ಮಾತ್ರ ಅವಕಾಶ ಮಾಡಿಕೊಡಲಾಗುವುದು. 20 ಮಂದಿಯ ಒಂದು ಗುಂಪು ಮಾಡಿ ಇಡೀ ರಾಜಭವನ ಸುತ್ತಾಡಿಸಲಾಗುವುದು. ಇದಕ್ಕಾಗಿ ಮಾಗದರ್ಶಕರನ್ನು (ಗೈಡ್‌) ನೇಮಕ ಮಾಡಲಾಗಿದೆ. ಜನರಿಂದ ಬೇಡಿಕೆ ವ್ಯಕ್ತವಾದರೆ ಭೇಟಿಯ ದಿನಗಳನ್ನು ವಿಸ್ತರಿಸುವ ಬಗ್ಗೆ ಚಿಂತಿಸಲಾಗುವುದು. ಜತೆಗೆ ಸದ್ಯ ವರ್ಷದಲ್ಲಿ ಒಂದು ಬಾರಿ ಈ ಅವಕಾಶ ಮಾಡಿಕೊಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಅವಶ್ಯಕತೆ ಕಂಡು ಬಂದಲ್ಲಿ ವರ್ಷದಲ್ಲಿ 2 ಬಾರಿ ಈ ರೀತಿಯ ವ್ಯವಸ್ಥೆ ಮಾಡಲು ರಾಜಭವನ ಸಿದ್ಧವಿದೆ ಎಂದು ವಾಲಾ ತಿಳಿಸಿದರು.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

CM Siddu

Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ

Result: ಇಂದು ಯುಜಿನೀಟ್‌ ಪರಿಷ್ಕೃತ ತಾತ್ಕಾಲಿಕ ಫ‌ಲಿತಾಂಶ ಪ್ರಕಟ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.