ಕೊನೆಗೂ ನಡೆದ ಕೆಂಪೇಗೌಡ ಜಯಂತಿ
Team Udayavani, Aug 17, 2018, 11:22 AM IST
ಬೆಂಗಳೂರು: ಹಲವು ಬಾರಿ ಮುಂದೂಡಲ್ಪಟ್ಟ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಕೊನೆಗೂ ಸಂಭ್ರಮದಿಂದ ಆಚರಿಸಲಾಯಿತು. ಆದರೂ, ಸಂಜೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ವಿಧಿವಶರಾದ ಹಿನ್ನೆಲೆಯಲ್ಲಿ ಸಂತಾಪ ಸೂಚಿಸಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮೊಟಕುಗೊಳಿಸಲಾಯಿತು.
ಪಾಲಿಕೆಯ ಕೇಂದ್ರ ಕಚೇರಿ ಮುಂಭಾಗದಲ್ಲಿರುವ ನಾಡಪ್ರಭು ಕೆಂಪೇಗೌಡ ಹಾಗೂ ಅವರ ಸೊಸೆ ಲಕ್ಷ್ಮೀದೇವಿ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡುವ ಮೂಲಕ ಜಯಂತಿಗೆ ಮೇಯರ್ ಆರ್.ಸಂಪತ್ರಾಜ್ ಚಾಲನೆ ನೀಡಿದರೆ, ಲಾಲ್ಬಾಗ್ನ ಗಡಿಗೋಪುರದ ಬಳಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಜ್ಯೋತಿಯಾತ್ರೆಗೆ ಚಾಲನೆ ನೀಡಿದರು.
ಅದರಂತೆ ಕೆಂಪೇಗೌಡರು ಹಲಸೂರು ಕೆರೆ, ಕೆಂಪಾಂಬುದಿ ಕೆರೆ, ಮೇಖೀ ವೃತ್ತ, ಲಾಲ್ಬಾಗ್ ಬಳಿ ನಿರ್ಮಿಸಿರುವ ಗಡಿಗೋಪುರಗಳು ಹಾಗೂ ಮಾಗಡಿ ಬಳಿಯ ಕೆಂಪೇಗೌಡರ ಸಮಾಧಿ ಸ್ಥಳದಿಂದ ಡೊಳ್ಳು ಕುಣಿತ, ವೀರಗಾಸೆ, ಕೀಲು ಕುದುರೆ, ಗಾರುಡಿ ಗೊಂಬೆ, ಮಹಿಳಾ ವೀರಗಾಸೆ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳ ಮೂಲಕ ಬಿಬಿಎಂಪಿ ತಲುಪಿದ ಜ್ಯೋತಿಗಳನ್ನು ಮೇಯರ್ ಸ್ವೀಕರಿಸಿ ಗೌರವ ಸಲ್ಲಿಸಿದರು.
ಇದಕ್ಕೂ ಮೊದಲು ಸದಾಶಿವನಗರದ ರಮಣಶ್ರೀ ಉದ್ಯಾನದಲ್ಲಿ ನಿರ್ಮಿಸಲಾಗಿರುವ ದೇಶದ ಅತಿದೊಡ್ಡ ಕೆಂಪೇಗೌಡರ ಪ್ರತಿಮೆಯನ್ನು ಡಾ.ಜಿ.ಪರಮೇಶ್ವರ್ ಅನಾವರಣಗೊಳಿಸಿದರು. ಅಶ್ವಾರೂಢ ಕೆಂಪೇಗೌಡರ ಪ್ರತಿಮೆ ನಿಲ್ಲಿಸಲು ಕೋಟೆ ಮಾದರಿಯ ಬೃಹತ್ ವೇದಿಕೆ ನಿರ್ಮಿಸಿದ್ದು, ನೆಲದಿಂದ 30ಅಡಿ ಎತ್ತರ ಹಾಗೂ 16 ಅಡಿ ಅಗಲದ ಕಲ್ಲಿನ ಕೋಟೆಯ ಮಾದರಿ ನಿರ್ಮಿಸಲಾಗಿದೆ.
ನಂತರ ಮಧ್ಯಾಹ್ನ ಪಾಲಿಕೆ ಆವರಣದ ಡಾ.ರಾಜ್ ಕುಮಾರ್ ಗಾಜಿನ ಮನೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 145 ಉತ್ತಮ ಅಧಿಕಾರಿಗಳು ಹಾಗೂ ನೌಕರರಿಗೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಪ್ರಶಸ್ತಿ ನೀಡಿ ಗೌರವಿಸಿದರು.
ಬಳಿಕ ಮಾತನಾಡಿ, ಕೆಂಪೇಗೌಡರು ಬೆಂಗಳೂರು ಮುಂದಿನ ದಿನಗಳಲ್ಲಿ ಹೇಗಿರಬೇಕು ಎಂಬ ದೂರದೃಷ್ಟಿಯನ್ನು ಹೊಂದಿದ್ದರು. ಆ ಕಾರಣಕ್ಕಾಗಿಯೇ ಅವರು ನಗರದ ನಾಲ್ಕು ದಿಕ್ಕುಗಳಲ್ಲಿ ಗಡಿಗೋಪುರಗಳನ್ನು ನಿರ್ಮಿಸಿದ್ದರು ಎಂದರು.
ಮೇಯರ್ ಆರ್.ಸಂಪತ್ರಾಜ್, ಆಡಳಿತ ಪಕ್ಷ ನಾಯಕ ಎಂ.ಶಿವರಾಜು, ಬಿಬಿಎಂಪಿ ಆಯುಕ್ತಎನ್.ಮಂಜುನಾಥ ಪ್ರಸಾದ್, ಮಾಜಿ ಮೇಯರ್ ಸತ್ಯನಾರಾಯಣ, ಆಡಳಿತ ಮತ್ತು ಸಿಬ್ಬಂದಿ ಸ್ಥಾಯಿ ಸಮಿತಿ ಅಧ್ಯಕ್ಷ ಲಕ್ಷ್ಮೀನಾರಾಯಣ್, ಜೆಡಿಎಸ್ ನಾಯಕಿ ನೇತ್ರನಾರಾಯಣ್, ಕೌನ್ಸಿಲ್ ಕಾರ್ಯದರ್ಶಿ ಕೆ.ಆರ್.ಪಲ್ಲವಿ ಸೇರಿದಂತೆ ಪ್ರಮುಖರು ಹಾಜರಿದ್ದರು.
ಪಾಲಿಕೆಯಲ್ಲಿ ವಾಜಪೇಯಿಗೆ ನಮನ
ಬೆಂಗಳೂರು: ಬಿಬಿಎಂಪಿ ವತಿಯಿಂದ ಗುರುವಾರ ಆಯೋಜಿಸಿದ್ದ ಕೆಂಪೇಗೌಡ ದಿನಾಚರಣೆ ಸಂದರ್ಭದಲ್ಲೇ ಮಾಜಿ ಪ್ರಧಾನಿ ವಾಜಪೇಯಿ ಅವರು ಮೃತಪಟ್ಟಿರುವ ವಿಷಯ ತಿಳಿದ ಕೂಡಲೇ ಕಾರ್ಯಕ್ರಮ ಮೊಟಕುಗೊಳಿಸಲಾಯಿತು.
ನಂತರ ಕಾರ್ಯಕ್ರಮದ ವೇದಿಕೆಯಲ್ಲೇ ವಾಜಪೇಯಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಅವರ ಆತ್ಮಕ್ಕೆ ಶಾಂತಿ ಕೋರಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಅಟಲ್ ಬಿಹಾರಿ ವಾಜಪೇಯಿ ಅವರು ದೇಶ ಕಂಡ ಅಪ್ರತಿಮ ಹಾಗೂ ಆದರ್ಶ ರಾಜಕಾರಣಿಯಾಗಿದ್ದು, ನೆರೆಯ ಪಾಕಿಸ್ತಾನದ ಜತೆಗೂ ಸಹೋದರತ್ವದಿಂದ ಇರಬೇಕೆಂದು ಪ್ರತಿಪಾದಿಸಿದ್ದರು ಎಂದು ಸ್ಮರಿಸಿದರು.
ಮೇಯರ್ ಸಂಪತ್ರಾಜ್, ಶಾಸಕ ಎಸ್.ಟಿ.ಸೋಮಶೇಖರ್, ಆಡಳಿತ ಪಕ್ಷ ನಾಯಕ ಎಂ.ಶಿವರಾಜು, ಪ್ರತಿಪಕ್ಷ ನಾಯಕ ಪದ್ಮನಾಭರೆಡ್ಡಿ, ಪಾಲಿಕೆ ಸದಸ್ಯರಾದ ಕೇಶವಮೂರ್ತಿ, ಲಕ್ಷ್ಮೀನಾರಾಯಣ ಸೇರಿದಂತೆ ಪ್ರಮುಖರು ನಮನ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಎಲೆಕ್ಟ್ರಾನಿಕ್ ಸಿಟಿ ಎನ್ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ
Anekal: ಶಾಲಾ ಬಸ್ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ
Road rage case: ರೋಡ್ ರೇಜ್ ಕೇಸ್ ಬಗ್ಗೆ ದೂರು ನೀಡಿ; ಕಮಿಷನರ್
Namma Metro: ಮೆಟ್ರೋ ಹಳಿ ಮೇಲೆ ಜಿಗಿದು ಆತ್ಮಹತ್ಯೆಗೆ ಯತ್ನ
Laptop theft: ಕೆಲಸಕ್ಕಿದ್ದ ಕಂಪನಿಯಲ್ಲೇ 55 ಲ್ಯಾಪ್ಟಾಪ್ ಕದ್ದ ಟೆಕ್ಕಿ!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.