ಕೋಟಿ ವೆಚ್ಚದ ಡಾ| ಅಂಬೇಡ್ಕರ್‌ ಭವನ ಉದ್ಘಾಟನೆ


Team Udayavani, Aug 17, 2018, 4:24 PM IST

17-agust-20.jpg

ಬ್ಯಾಡಗಿ: ಪಟ್ಟಣದಲ್ಲಿರುವ ಡಾ| ಬಿ.ಆರ್‌. ಅಂಬೇಡ್ಕರ್‌ ಭವನಕ್ಕೆ ವಿದ್ಯುತ್‌ ಸೌಲಭ್ಯ ಹಾಗೂ ಕಂಪೌಂಡ್‌ ನಿರ್ಮಾಣಕ್ಕೆ ಅಗತ್ಯವಿರುವ ಹೆಚ್ಚಿನ ಅನುದಾನ ಒದಗಿಸುವುದಾಗಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಭರವಸೆ ನೀಡಿದರು. ಸಮಾಜ ಕಲ್ಯಾಣ ಇಲಾಖೆ ಹಾಗೂ ನಿರ್ಮಿತಿ ಕೇಂದ್ರದ ಆಶ್ರಯದಲ್ಲಿ ನಿರ್ಮಿಸಿದ 1 ಕೋಟಿ ರೂ. ಗಳ ವೆಚ್ಚದ ನೂತನ ಡಾ| ಬಿ.ಆರ್‌.ಅಂಬೇಡ್ಕರ ಭವನ ಉದ್ಘಾಟಿಸಿ ಮಾತನಾಡಿದ ಅವರು, ಕಳೆದ ವಾರವಷ್ಟೇ ಸಮಾಜ ಕಲ್ಯಾಣ ಇಲಾಖೆಯ ನೂತನ ಸಮಿತಿ ರಚನೆಯಾಗಿದೆ. ಅದರಲ್ಲಿ ನನ್ನನ್ನು ನಿರ್ದೇಶಕರನ್ನಾಗಿ ನೇಮಿಸಲಾಗಿದ್ದು ಇದರಿಂದಾಗಿ ಹಿಂದುಳಿದ ವರ್ಗದ ಜನತೆಯ ಹಲವಾರು ಬೇಡಿಕೆಗಳನ್ನು ಈಡೇರಸಲು ಬೇಕಾಗಿರುವ ಅನುದಾನವನ್ನು ಪಡೆಯಲು ಸಹಕಾರಿಯಾಗಲಿದೆ ಎಂದರು.

ಒಂದು ಕೋಟಿ ವೆಚ್ಚದಲ್ಲಿ ಸುಸಜ್ಜಿತವಾಗಿ ಭವನ ನಿರ್ಮಾಣವಾಗಿದೆ. ಆದರೆ, ಸುತ್ತ ಮುತ್ತಲೂ ಕಂಪೌಂಡ್‌ ಸೇರಿದಂತೆ ವಿದ್ಯುದ್ಧೀಕರಣಕ್ಕೆ ಸುಮಾರು ಇನ್ನೂ 50 ಲಕ್ಷ ರೂ. ಅನುದಾನದ ಅವಶ್ಯಕತೆಯಿದ್ದು ಅದನ್ನು ಶೀಘ್ರದಲ್ಲೆ ಒದಗಿಸುವುದಾಗಿ ತಿಳಿಸಿದರು. ಸುರೇಶ ಅಸಾದಿ ಮಾತನಾಡಿ, ತಾಲೂಕಿನ ಹಲವಾರು ಗ್ರಾಮಗಳಲ್ಲಿ ಇಗಾಗಲೇ ಅಂಬೇಡ್ಕರ್‌ ಭವನಗಳನ್ನು ನಿರ್ಮಿಸಲಾಗಿದೆ. ಇನ್ನೂ ಕೆಲವೊಂದು ಗ್ರಾಮಗಳಲ್ಲಿ ಕಟ್ಟಡದ ಕಾಮಗಾರಿಗಳು ನಡೆಯುತ್ತಲಿವೆ. ಗ್ರಾಮೀಣ ಪ್ರದೇಶಗಳಲ್ಲಿಯ ಪರಿಶಿಷ್ಟ ಜಾತಿ ಹಾಗೂ ಪಂಗಡದ ಕಾಲೋನಿಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಚಿವರ ಜೊತೆಗೆ ಈಗಾಗಲೇ ಶಾಸಕರು ಹಲವಾರು ಬಾರಿ ಚರ್ಚಿಸಿದ್ದು, ಹೆಚ್ಚಿನ ಅನುದಾನಕ್ಕೆ ಬೇಡಿಕೆ ಸಲ್ಲಿಸಿದ್ದಾರೆ ಎಂದರು.

ಸಮಾಜ ಕಲ್ಯಾಣಾ ಧಿಕಾರಿ ಹನುಮಂತಪ್ಪ ಲಮಾಣಿ, ಪುರಸಭೆ ಅಧ್ಯಕ್ಷ ಬಸವರಾಜ ಛತ್ರದ, ಉಪಾಧ್ಯಕ್ಷೆ ದ್ರಾಕ್ಷಾಯಣೆಮ್ಮ ಪಾಟೀಲ, ಸದಸ್ಯರಾದ ಶಾಂತಮ್ಮ ಬೇವಿನಮಟ್ಟಿ, ದುರ್ಗೇಶ ಗೋಣೆಮ್ಮನವರ, ಬಸವರಾಜ ಹಂಜಿ, ಪ್ರಶಾಂತ ಯಾದವಾಡ, ಮಂಜುನಾಥ ಭೋವಿ, ಮಲ್ಲನಗೌಡ್ರ ಭದ್ರಗೌಡ್ರ, ರೋಹಿಣಿ ಹುಣಿಸಿಮರದ, ಎಪಿಎಂಸಿ ನಿರ್ದೇಶಕ ವಿಜಯ ಮಾಳಗಿ, ತಿಮ್ಮಣ್ಣ ವಡ್ಡರ, ನಾಗರಾಜ ಹಾವನೂರ, ಮಾರುತಿ ಹಂಜಿ, ಹೊನ್ನಪ್ಪ ತಗಡಿನಮನಿ, ರವಿ ಹುಣಿಸಿಮರದ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಎಚ್‌.ಡಿ.ಶಾಂತಕುಮಾರ, ರಾಮಣ್ಣ ಉಕ್ಕುಂದ, ಮಲ್ಲೇಶಪ್ಪ ಚಿಕ್ಕಣ್ಣನವರ, ಸುರೇಶ ಯತ್ನಳ್ಳಿ ಸೇರಿದಂತೆ ಇನ್ನಿತರರಿದ್ದರು. ಬಿ.ಎಫ್‌. ದೊಡ್ಡಮನಿ ಸ್ವಾಗತಿಸಿದರು. ಎಂ.ಎಫ್‌. ಕರಿಯಮ್ಮನವರ ನಿರೂಪಿಸಿದರು. 

ಟಾಪ್ ನ್ಯೂಸ್

Horoscope: ಈ ರಾಶಿಯ ಅವಿವಾಹಿತರಿಗೆ ವಿವಾಹ ಯೋಗ ಕೂಡಿ ಬರಲಿದೆ

Horoscope: ಈ ರಾಶಿಯ ಅವಿವಾಹಿತರಿಗೆ ವಿವಾಹ ಯೋಗ ಕೂಡಿ ಬರಲಿದೆ

Rice-Distri

Padubidri: ಕೆವೈಸಿ ಸಮಸ್ಯೆಯಿಂದ ಪಡಿತರಕ್ಕೆ ಅಡಚಣೆ: ಸ್ಪಂದಿಸಿದ ಆಹಾರ ಇಲಾಖೆ

highcourt

145 ವರ್ಷಗಳ ಆಸ್ತಿ ವ್ಯಾಜ್ಯ ರಾಜಿ ಸಂಧಾನದಲ್ಲಿ ಇತ್ಯರ್ಥ

1-wFH

Work from Home; ಇದು ಆಂಧ್ರ ಆಫ‌ರ್‌!

Rashimka

Remark Sparks: ನಾನು ಹೈದರಾಬಾದಿನವಳು ಎಂದ ರಶ್ಮಿಕಾಗೆ ನೆಟ್ಟಿಗರ ಕ್ಲಾಸ್‌

India US

India-US;ಭಾರತ ಚುನಾವಣೆಯಲ್ಲಿ ಅಮೆರಿಕದ ಹಸ್ತಕ್ಷೇಪ?

Telangana: ತೆಲಂಗಾಣದ ಗ್ರಾಮದ ಎಲ್ಲ ಜನರಿಂದ ನೇತ್ರದಾನಕ್ಕೆ ನೋಂದಣಿ

Telangana: ತೆಲಂಗಾಣದ ಗ್ರಾಮದ ಎಲ್ಲ ಜನರಿಂದ ನೇತ್ರದಾನಕ್ಕೆ ನೋಂದಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

8

Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು

Hubli: Police seize Rs 89.99 lakhs being transported without documents

Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್‌ ವಶಕ್ಕೆ

ED summons case: Temporary relief for Siddaramaiah’s wife Parvathi, Bairati Suresh

ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Horoscope: ಈ ರಾಶಿಯ ಅವಿವಾಹಿತರಿಗೆ ವಿವಾಹ ಯೋಗ ಕೂಡಿ ಬರಲಿದೆ

Horoscope: ಈ ರಾಶಿಯ ಅವಿವಾಹಿತರಿಗೆ ವಿವಾಹ ಯೋಗ ಕೂಡಿ ಬರಲಿದೆ

Rice-Distri

Padubidri: ಕೆವೈಸಿ ಸಮಸ್ಯೆಯಿಂದ ಪಡಿತರಕ್ಕೆ ಅಡಚಣೆ: ಸ್ಪಂದಿಸಿದ ಆಹಾರ ಇಲಾಖೆ

18

Robbery Case: ಮೂಡುಬಿದಿರೆ ಅಳಿಯೂರು; ಹಾಡ ಹಗಲೇ ಚಿನ್ನಾಭರಣ ದರೋಡೆ

highcourt

145 ವರ್ಷಗಳ ಆಸ್ತಿ ವ್ಯಾಜ್ಯ ರಾಜಿ ಸಂಧಾನದಲ್ಲಿ ಇತ್ಯರ್ಥ

1-wFH

Work from Home; ಇದು ಆಂಧ್ರ ಆಫ‌ರ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.