ಕೋಟಿ ವೆಚ್ಚದ ಡಾ| ಅಂಬೇಡ್ಕರ್‌ ಭವನ ಉದ್ಘಾಟನೆ


Team Udayavani, Aug 17, 2018, 4:24 PM IST

17-agust-20.jpg

ಬ್ಯಾಡಗಿ: ಪಟ್ಟಣದಲ್ಲಿರುವ ಡಾ| ಬಿ.ಆರ್‌. ಅಂಬೇಡ್ಕರ್‌ ಭವನಕ್ಕೆ ವಿದ್ಯುತ್‌ ಸೌಲಭ್ಯ ಹಾಗೂ ಕಂಪೌಂಡ್‌ ನಿರ್ಮಾಣಕ್ಕೆ ಅಗತ್ಯವಿರುವ ಹೆಚ್ಚಿನ ಅನುದಾನ ಒದಗಿಸುವುದಾಗಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಭರವಸೆ ನೀಡಿದರು. ಸಮಾಜ ಕಲ್ಯಾಣ ಇಲಾಖೆ ಹಾಗೂ ನಿರ್ಮಿತಿ ಕೇಂದ್ರದ ಆಶ್ರಯದಲ್ಲಿ ನಿರ್ಮಿಸಿದ 1 ಕೋಟಿ ರೂ. ಗಳ ವೆಚ್ಚದ ನೂತನ ಡಾ| ಬಿ.ಆರ್‌.ಅಂಬೇಡ್ಕರ ಭವನ ಉದ್ಘಾಟಿಸಿ ಮಾತನಾಡಿದ ಅವರು, ಕಳೆದ ವಾರವಷ್ಟೇ ಸಮಾಜ ಕಲ್ಯಾಣ ಇಲಾಖೆಯ ನೂತನ ಸಮಿತಿ ರಚನೆಯಾಗಿದೆ. ಅದರಲ್ಲಿ ನನ್ನನ್ನು ನಿರ್ದೇಶಕರನ್ನಾಗಿ ನೇಮಿಸಲಾಗಿದ್ದು ಇದರಿಂದಾಗಿ ಹಿಂದುಳಿದ ವರ್ಗದ ಜನತೆಯ ಹಲವಾರು ಬೇಡಿಕೆಗಳನ್ನು ಈಡೇರಸಲು ಬೇಕಾಗಿರುವ ಅನುದಾನವನ್ನು ಪಡೆಯಲು ಸಹಕಾರಿಯಾಗಲಿದೆ ಎಂದರು.

ಒಂದು ಕೋಟಿ ವೆಚ್ಚದಲ್ಲಿ ಸುಸಜ್ಜಿತವಾಗಿ ಭವನ ನಿರ್ಮಾಣವಾಗಿದೆ. ಆದರೆ, ಸುತ್ತ ಮುತ್ತಲೂ ಕಂಪೌಂಡ್‌ ಸೇರಿದಂತೆ ವಿದ್ಯುದ್ಧೀಕರಣಕ್ಕೆ ಸುಮಾರು ಇನ್ನೂ 50 ಲಕ್ಷ ರೂ. ಅನುದಾನದ ಅವಶ್ಯಕತೆಯಿದ್ದು ಅದನ್ನು ಶೀಘ್ರದಲ್ಲೆ ಒದಗಿಸುವುದಾಗಿ ತಿಳಿಸಿದರು. ಸುರೇಶ ಅಸಾದಿ ಮಾತನಾಡಿ, ತಾಲೂಕಿನ ಹಲವಾರು ಗ್ರಾಮಗಳಲ್ಲಿ ಇಗಾಗಲೇ ಅಂಬೇಡ್ಕರ್‌ ಭವನಗಳನ್ನು ನಿರ್ಮಿಸಲಾಗಿದೆ. ಇನ್ನೂ ಕೆಲವೊಂದು ಗ್ರಾಮಗಳಲ್ಲಿ ಕಟ್ಟಡದ ಕಾಮಗಾರಿಗಳು ನಡೆಯುತ್ತಲಿವೆ. ಗ್ರಾಮೀಣ ಪ್ರದೇಶಗಳಲ್ಲಿಯ ಪರಿಶಿಷ್ಟ ಜಾತಿ ಹಾಗೂ ಪಂಗಡದ ಕಾಲೋನಿಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಚಿವರ ಜೊತೆಗೆ ಈಗಾಗಲೇ ಶಾಸಕರು ಹಲವಾರು ಬಾರಿ ಚರ್ಚಿಸಿದ್ದು, ಹೆಚ್ಚಿನ ಅನುದಾನಕ್ಕೆ ಬೇಡಿಕೆ ಸಲ್ಲಿಸಿದ್ದಾರೆ ಎಂದರು.

ಸಮಾಜ ಕಲ್ಯಾಣಾ ಧಿಕಾರಿ ಹನುಮಂತಪ್ಪ ಲಮಾಣಿ, ಪುರಸಭೆ ಅಧ್ಯಕ್ಷ ಬಸವರಾಜ ಛತ್ರದ, ಉಪಾಧ್ಯಕ್ಷೆ ದ್ರಾಕ್ಷಾಯಣೆಮ್ಮ ಪಾಟೀಲ, ಸದಸ್ಯರಾದ ಶಾಂತಮ್ಮ ಬೇವಿನಮಟ್ಟಿ, ದುರ್ಗೇಶ ಗೋಣೆಮ್ಮನವರ, ಬಸವರಾಜ ಹಂಜಿ, ಪ್ರಶಾಂತ ಯಾದವಾಡ, ಮಂಜುನಾಥ ಭೋವಿ, ಮಲ್ಲನಗೌಡ್ರ ಭದ್ರಗೌಡ್ರ, ರೋಹಿಣಿ ಹುಣಿಸಿಮರದ, ಎಪಿಎಂಸಿ ನಿರ್ದೇಶಕ ವಿಜಯ ಮಾಳಗಿ, ತಿಮ್ಮಣ್ಣ ವಡ್ಡರ, ನಾಗರಾಜ ಹಾವನೂರ, ಮಾರುತಿ ಹಂಜಿ, ಹೊನ್ನಪ್ಪ ತಗಡಿನಮನಿ, ರವಿ ಹುಣಿಸಿಮರದ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಎಚ್‌.ಡಿ.ಶಾಂತಕುಮಾರ, ರಾಮಣ್ಣ ಉಕ್ಕುಂದ, ಮಲ್ಲೇಶಪ್ಪ ಚಿಕ್ಕಣ್ಣನವರ, ಸುರೇಶ ಯತ್ನಳ್ಳಿ ಸೇರಿದಂತೆ ಇನ್ನಿತರರಿದ್ದರು. ಬಿ.ಎಫ್‌. ದೊಡ್ಡಮನಿ ಸ್ವಾಗತಿಸಿದರು. ಎಂ.ಎಫ್‌. ಕರಿಯಮ್ಮನವರ ನಿರೂಪಿಸಿದರು. 

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain: ಹಿಂಗಾರು ಮಳೆಯಬ್ಬರಕ್ಕೆ ಇಬ್ಬರು ಸಾವು, ಬೆಳೆ ಹಾನಿ

Rain: ಹಿಂಗಾರು ಮಳೆಯಬ್ಬರಕ್ಕೆ ಇಬ್ಬರು ಸಾವು, ಬೆಳೆ ಹಾನಿ

Flight: ಹುಬ್ಬಳ್ಳಿ-ಅಹ್ಮದಾಬಾದ್‌ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ

Flight: ಹುಬ್ಬಳ್ಳಿ-ಅಹ್ಮದಾಬಾದ್‌ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ

Pralhad Joshi: ಬೆಂಬಲ ಬೆಲೆ ಹೆಚ್ಚಳದೊಂದಿಗೆ ಅನ್ನದಾತರಿಗೆ ನೆರವು

Pralhad Joshi: ಬೆಂಬಲ ಬೆಲೆ ಹೆಚ್ಚಳದೊಂದಿಗೆ ಅನ್ನದಾತರಿಗೆ ನೆರವು

1-rss

Hubli; ಗಲಭೆ ಪ್ರಕರಣ ವಾಪಸ್ ಖಂಡಿಸಿ ಠಾಣೆ ಮುಂಭಾಗ ಶ್ರೀರಾಮ ಸೇನೆ ಪ್ರತಿಭಟನೆ

Madhu Bangarappa

Dharwad: ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ಪಡೆದಿದ್ದು ಸರಿ ಇದೆ : ಸಚಿವ ಮಧು ಬಂಗಾರಪ್ಪ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.