ಮತ್ತೆ ಆಶ್ಲೇಷಾ ಆರ್ಭಟ: ಜನಜೀವನ ಅಸ್ತವ್ಯಸ್ತ


Team Udayavani, Aug 17, 2018, 5:06 PM IST

cta.jpg

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಆಶ್ಲೇಷಾ ಮಳೆ ಪುನಃ ಆರ್ಭಟಿಸುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮಲೆನಾಡು ಭಾಗವಾದ ಶೃಂಗೇರಿ, ಮೂಡಿಗೆರೆ, ಕೊಪ್ಪ ತಾಲೂಕುಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಹಲವೆಡೆ ನದಿಯ ನೀರು ಜಮೀನುಗಳಿಗೆ ನುಗ್ಗಿದೆ.

ಪ್ರವಾಸಿಗರಿಗೆ ನಿರ್ಬಂಧ: ಗುಡ್ಡ ಕುಸಿಯುತ್ತಿರುವುದರಿಂದ ಅಪಾಯದ ಮುನ್ಸೂಚನೆ ಅರಿತು ಮುಳ್ಳಯ್ಯನಗಿರಿ ಬೆಟ್ಟ ಶ್ರೇಣಿಯಲ್ಲಿ ಪ್ರವಾಸಿಗರಿಗೆ ನಿರ್ಬಂಧಿಂಸಲಾಗಿದೆ.

ಶೃಂಗೇರಿಯ ಗಾಂಧಿ ಮೈದಾನ ನೀರಿನಿಂದ ಆವೃತವಾಗಿದ್ದು, ಗುಡ್ಡೇತೋಟದಲ್ಲಿ 4 ಕಡೆ ರಸ್ತೆ ಬಿರುಕು ಬಿಟ್ಟಿದೆ. ಹೊರನಾಡಿಗೆ ಸಂಪರ್ಕ ಕಲ್ಪಿಸುವ ಹೆಬ್ಟಾಳೆ ಸೇತುವೆ 15ನೇ ಬಾರಿಗೆ ತುಂಬಿದೆ. ನಂತರ ಮಳೆ ಕಡಿಮೆಯಾಗಿದ್ದರಿಂದ ಸಂಚಾರಕ್ಕೆ  ರೆದುಕೊಂಡಿದೆ.ಶೃಂಗೇರಿ ರಾಷ್ಟ್ರೀಯ ಹೆದ್ದಾರಿ, ತನಿಗೋಡು ರಸ್ತೆಗೂ ನೀರು ನುಗ್ಗಿದೆ.

ಬಾಳೆಹೊನ್ನೂರಿನಲ್ಲಿ ಭದ್ರಾ ನದಿ ಉಕ್ಕಿ ಹರಿಯುತ್ತಿದ್ದು, ನದಿ ಅಕ್ಕಪಕ್ಕದ ತೋಟಗಳಿಗೆ ನೀರು ನುಗ್ಗಿದೆ. ಜೀವನದಿಗಳಾದ ತುಂಗಾ, ಭದ್ರಾ, ಹೇಮಾವತಿ ನದಿಗಳ ನೀರಿನ ಮಟ್ಟದಲ್ಲಿ ಇಳಿಕೆಯಾಗಿಲ್ಲ, ಮಲೆನಾಡು ಭಾಗದಲ್ಲಿ ಬಿಟ್ಟು,ಬಿಟ್ಟು ಮಳೆ ಸುರಿಯುತ್ತಿರುವುದರಿಂದ ಹಳ್ಳ-ಕೊಳ್ಳಗಳು ತುಂಬಿವೆ. ಬುಧವಾರಕ್ಕೆ ಹೋಲಿಸಿದರೆ ಗುರುವಾರ ಮಳೆಯ ಪ್ರಮಾಣದಲ್ಲಿ ಸ್ವಲ್ಪ ಕಡಿಮೆಯಾಗಿದೆ.

ಚಿಕ್ಕಮಗಳೂರು ತಾಲೂಕಿನ ಕೋಟೆವೂರಿನ ಉದ್ದಮ್ಮ, ಹೊಸಳ್ಳಿಪೇಟೆಯ ಸರಸ್ವತಿ ಅವರ ಮನೆಗಳು ಭಾಗಶಃ, ಸವಿತಾ ಅವರಿಗೆ ಸೇರಿದ ಮನೆ ಶೇ.100 ಹಾನಿಯಾಗಿದೆ. ಸೀಗೋಡಿನ ಯಶೋಧ, ನರಸಿಂಹರಾಜಪುರ ಪಟ್ಟಣದ ಮಂಜುಳಾ ಅವರ ಮನೆಗಳಿಗೂ ಹಾನಿಯಾಗಿದೆ. 

ಶೃಂಗೇರಿ: ಒಂದೇ ವಾರದಲ್ಲಿ ಮೂರನೇ ಬಾರಿ ಪ್ರವಾಹ ಶೃಂಗೇರಿ: ಆಶ್ಲೇಷಾ ಮಳೆಯಬ್ಬರ ಮುಂದುವರಿದಿದ್ದು,
ಒಂದೇ ವಾರದಲ್ಲಿ ಮೂರನೇ ಬಾರಿಗೆ ತುಂಗೆಯಲ್ಲಿ ಪ್ರವಾಹ ಉಂಟಾಗಿದೆ. ಗುರುವಾರ ದಿನವಿಡೀ ಮಳೆ ಸುರಿದಿದ್ದು, ನದಿ ನೀರಿನ ಮಟ್ಟ ಏರಿಕೆಯಾಗತೊಡಗಿದೆ. ಶಾಲೆ, ಕಾಲೇಜುಗಳಿಗೆ ಶುಕ್ರವಾರವೂ ರಜೆ ನೀಡಲಾಗಿದೆ. ಪ್ರವಾಹದ ನೀರು ಪಟ್ಟಣದ ಬೈಪಾಸ್‌ ರಸ್ತೆ ಹಾಗೂ ಕೆವಿಆರ್‌ ರಸ್ತೆಗೆ ಬಂದಿದ್ದು, ಸಂಚಾರ ಸ್ಥಗಿತಗೊಂಡಿದೆ. ಕಾವಡಿ ಸಮೀಪದ ಕಾರ್ಮಿಕರ ಶೆಡ್‌ಗಳಿಗೆ ನೀರು ನುಗ್ಗಿದೆ. ತೋಟ,ಗದ್ದೆಗಳಿಗೆ ನೀರು ನುಗ್ಗುತ್ತಿದೆ. ಅಲ್ಲಲ್ಲಿ ಭೂಕುಸಿತ ಉಂಟಾಗುತ್ತಿದೆ. ಮರ್ಕಲ್‌ ಗ್ರಾಪಂನ ಕೋಗೋಡು ಗ್ರಾಮದ
ವಡಗೆರೆಮನೆಯ ಲಕ್ಷಿ  ನಾರಾಯಣ ಅವರ ಮನೆಗೆ ದರೆ ಕುಸಿದು ಮನೆ ಸಂಪೂರ್ಣ ಜಖಂಗೊಂಡಿದೆ. ಯಡದಾಳು
ಗ್ರಾಮದ ಕೊಠಾರಿಕೊಪ್ಪ ಹಿರಿಯಣ್ಣಯ್ಯರವರ ಮನೆ, ಕಾವಡಿ ಗ್ರಾಮದ ಹೆಗ್ಗದ್ದೆ ಗೋಪಾಲಕೃಷ್ಣಭಟ್‌ ಮನೆ, ಬೇಗಾನೆ ಹಕೀಂ ಸಾಹೇಬರ ಮನೆಗೆ ಧರೆ ಕುಸಿದು ಹಾನಿಯಾಗಿದೆ.

ಕೋಗೋಡು ಗ್ರಾಮದ ಹೊನ್ನೆಕುಡಿಗೆ ರಸ್ತೆಯಲ್ಲಿ ಗುಡ್ಡ ಕುಸಿದು ಸಂಚಾರಕ್ಕೆ ಅಡ್ಡಿಯಾಗಿದೆ. ಹೊನ್ನವಳ್ಳಿ ಗ್ರಾಮದ ಹೊಂಬಾಗಿ ದೇವಸ್ಥಾನ, ಹೊನ್ನವಳ್ಳಿ ದೇವಸ್ಥಾನ ಬಳಿ ಅಕೇಶಿಯಾ ಮರ ರಸ್ತೆಗೆ ಉರುಳಿ ಬಿದ್ದು ಸಂಚಾರಕ್ಕೆ ಅಡ್ಡಿಯಾಗಿತ್ತು. ವಿದ್ಯುತ್‌ ಕಂಬಗಳು ಮುರಿದು ವಿದ್ಯುತ್‌ ಸಂಪರ್ಕ ಕಡಿತಗೊಂಡಿದೆ.

ಅಡ್ಡಗದ್ದೆ ಗ್ರಾಮದ ನೇರಳಕೊಡಿಗೆ ವೃತ್ತದ ಬಳಿ ಪ್ರಸಕ್ತ ವರ್ಷ ಅಭಿವೃದ್ಧಿಪಡಿಸಲಾಗಿದ್ದ ರಸ್ತೆ ಕುಸಿದು, ಶೃಂಗೇರಿ-ಆಗುಂಬೆ
ರಸ್ತೆ ಬಿರುಕು ಬಿಟ್ಟಿದೆ. ರಾಷ್ಟ್ರೀಯ ಹೆದ್ದಾರಿ 169ರ ಆನೆಗುಂದ, ಉಳುವೆ, ಕಾವಡಿ, ತನಿಕೋಡು ಬಳಿ ರಸ್ತೆ ಭೂಕುಸಿತ ಉಂಟಾಗಿದೆ. ಮೆಣಸೆ ಗ್ರಾಪಂನ ಮಸಿಗೆ ಗ್ರಾಮದಲ್ಲಿ ತೆಂಗಿನ ಮರ ಗಾಳಿಯ ಹೊಡೆತಕ್ಕೆ ಉರುಳಿ ಬಿದ್ದಿದೆ.

ವಿದ್ಯುತ್‌ ಸಂಪರ್ಕ ಕಡಿತ: ಸತತ ಗಾಳಿಯಿದ ವಿದ್ಯುತ್‌ ಕಂಬ ನೆಲಕ್ಕುರುಳುತ್ತಿದ್ದು, ವಿದ್ಯುತ್‌ ಸಂಪರ್ಕ ಸಾಧ್ಯವಾಗುತ್ತಿಲ್ಲ 

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkamagaluru: ಸಾವಿನಲ್ಲೂ ಸಾರ್ಥಕತೆ; ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Chikkamagaluru: ಸಾವಿನಲ್ಲೂ ಸಾರ್ಥಕತೆ… ರಸ್ತೆ ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

3-chikkamagaluru

Chikkamagaluru: ಟಾಟಾ ಏಸ್ ಆಟೋ ಪಲ್ಟಿ ; ಇಬ್ಬರು ಸ್ಥಳದಲ್ಲೇ ಸಾವು

4-chikkamagaluru

Chikkamagaluru: ಸ್ಕಿಡ್ ಆಗಿ 20 ಅಡಿ ಎತ್ತರಿಂದ ಕೆಳಗೆ ಬಿದ್ದ ಗೂಡ್ಸ್ ವಾಹನ

Kottigehara: ಕಸ ವಿಲೇವಾರಿ ವಾಹನ ಬಂದಿಲ್ಲವೆಂದು ಪಂಚಾಯತ್ ಬಾಗಿಲಿಗೆ ಕಸ ಸುರಿದ ಭೂಪ

Kottigehara: ಕಸ ವಿಲೇವಾರಿ ವಾಹನ ಬಂದಿಲ್ಲವೆಂದು ಪಂಚಾಯತ್ ಬಾಗಿಲಿಗೆ ಕಸ ಸುರಿದ ಭೂಪ

ಹದಗೆಟ್ಟ ಕೊಟ್ಟಿಗೆಹಾರ-ಗಂಗಾಮುಲ ರಸ್ತೆ, ಗ್ರಾಮಸ್ಥರಿಂದ ಪ್ರತಿಭಟನೆಗೆ ನಿರ್ಧಾರ

ಹದಗೆಟ್ಟ ಕೊಟ್ಟಿಗೆಹಾರ-ಗಂಗಾಮುಲ ರಸ್ತೆ, ಗ್ರಾಮಸ್ಥರಿಂದ ಪ್ರತಿಭಟನೆಗೆ ನಿರ್ಧಾರ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.