ಕೇರಳದಲ್ಲಿ ಪಿಎಂ ಮೋದಿ ಮಹತ್ವದ ಸಭೆ; 500 ಕೋಟಿ ರೂ. ಮಧ್ಯಂತರ ನೆರವು
Team Udayavani, Aug 18, 2018, 10:58 AM IST
ತಿರುವನಂತಪುರ: ಶತಮಾನದ ಮಹಾ ಮಳೆಗೆ ನಲುಗಿರುವ ಕೇರಳದ ನೆರೆ ಪೀಡಿತ ಪ್ರದೇಶಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಶನಿವಾರ ವೈಮಾನಿಕ ಸಮೀಕ್ಷೆ ನಡೆಸುತ್ತಿದ್ದಾರೆ.
ಬೆಳಿಗ್ಗೆ ಕೊಚ್ಚಿಗೆ ಆಗಮಿಸಿದ ಪ್ರಧಾನಿ ತಿರುವನಂತಪುರಂಗೆ ತೆರಳಿ ಮಹತ್ವದ ಉನ್ನತ ಮಟ್ಟದ ಸಭೆಯಲ್ಲಿ ಪಾಲ್ಗೊಂಡು ಪ್ರವಾಹ ಹಾನಿಯ ಬಗ್ಗೆ ವಿವರಗಳನ್ನು ಪಡೆದರು. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಕೇಂದ್ರ ಸಚಿವ ಕೆ.ಜೆ.ಅಲ್ಫಾನ್ಸೋ, ರಾಜ್ಯದ ಸಚಿವರು ಮತ್ತು ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿ ವಿವರಗಳನ್ನು ನೀಡಿದರು.
ಪ್ರವಾಹ ಪರಿಸ್ಥಿತಿಯ ನೆರವಿಗಾಗಿ ಕೇಂದ್ರ ಸರ್ಕಾರದ ವತಿಯಿಂದ 500 ಕೋಟಿ ರೂಪಾಯಿ ಮಧ್ಯಂತರ ನೆರವು ಘೋಷಿಸಿರುವ ಬಗ್ಗೆ ವರದಿಯಾಗಿದೆ.
ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಟ್ವೀಟ್ ಮಾಡಿದ್ದು ‘ಕೇರಳದಲ್ಲಿ ಶತಮಾನ ಕಾಣದ ಅಂತ್ಯಂತ ಕೆಟ್ಟ ಪ್ರವಾಹ ಪರಿಸ್ಥಿತಿ ಇದೆ. 38 ಡ್ಯಾಮ್ಗಳನ್ನು ತೆರೆಯಲಾಗಿದೆ. 324 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 1500 ಗಂಜಿ ಕೇಂದ್ರಗಳಲ್ಲಿ 2,23,139 ನಿರಾಶ್ರಿತರು ಆಶ್ರಯ ಪಡೆದಿದ್ದಾರೆ. 71,000 ಮಂದಿಯನ್ನು ರಕ್ಷಿಸಲಾಗಿದೆ’ ಎಂದು ವಿವರಗಳನ್ನು ನೀಡಿದ್ದಾರೆ.
ಇನ್ನೆರಡು ದಿನ ಭಾರೀ ಮಳೆ
ಕೇರಳದಲ್ಲಿ ಇನ್ನೆರಡುದಿನ ಅಗಸ್ಟ್ 20 ರ ವರೆಗೆ ಭಾರೀ ಮಳೆ ಬೀಳುವ ಮುನ್ಸೂಚನೆಯನ್ನು ಹವಮಾನ ಇಲಾಖೆ ಮತ್ತು ವಿಪತ್ತು ನಿರ್ವಹಣಾ ಕೇಂದ್ರ ನೀಡಿದ್ದು ,ಜನರ ಆತಂಕ ಇನ್ನು ಹೆಚ್ಚಾಗಿದ್ದು ಎಲ್ಲೆಡೆ ಕಣ್ಣೀರಿಡುತ್ತಿರುವ ದೃಶ್ಯ ಕಂಡು ಬಂದಿದೆ.
#WATCH: Prime Minister Narendra Modi conducts an aerial survey of flood affected areas. PM has announced an ex-gratia of Rs. 2 lakh per person to the next kin of the deceased and Rs.50,000 to those seriously injured, from PM’s National Relief Funds (PMNRF). #KeralaFloods pic.twitter.com/T6FYNVLmMu
— ANI (@ANI) August 18, 2018
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು
Puja Khedkar: ಐಎಎಸ್ ಸೇವೆಯಿಂದ ಪೂಜಾ ಖೇಡ್ಕರ್ ವಜಾ; ಕೇಂದ್ರ ಆದೇಶ
ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ
Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ
Crime: ಸೈನೈಡ್ ಮಿಶ್ರಿತ ಜ್ಯೂಸ್ ನೀಡಿ ಚಿನ್ನಾಭರಣ ಲೂಟಿ; ಲೇಡಿ ಗ್ಯಾಂಗ್ ಅರೆಸ್ಟ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.