ಶರಾವತಿ ಎಡಬಲ ದಂಡೆಯಲ್ಲಿ  ಪ್ರವಾಹ 


Team Udayavani, Aug 18, 2018, 4:41 PM IST

18-agust-18.jpg

ಹೊನ್ನಾವರ: ದಿನಾಂಕ 15ಕ್ಕೆ ಮಳೆ ಕಡಿಮೆಯಾದ ಕಾರಣ ಬಂದ್‌ ಮಾಡಲಾದ ಲಿಂಗನಮಕ್ಕಿ ಅಣೆಕಟ್ಟಿನ ಮತ್ತು ಶರಾವತಿ ಟೇಲರೀಸ್‌ ಅಣೆಕಟ್ಟಿನ ಗೇಟ್‌ಗಳನ್ನು ಮುಚ್ಚಲಾಗಿತ್ತು. ಜಲಾನಯನ ಪ್ರದೇಶಗಳಾದ ಸಾಗರ, ಕುಂಬ್ರಿ, ರಿಪ್ಪನಪೇಟೆ ಮೊದಲಾದ ಪ್ರದೇಶದಲ್ಲಿ ಮಳೆ ಜೋರಾದ ಕಾರಣ ನಿನ್ನೆ ಲಿಂಗನಮಕ್ಕಿಯ ಗೇಟ್‌ಗಳನ್ನು ತೆರೆದು 15ಸಾವಿರ ಕ್ಯೂಸೆಕ್‌ ನೀರು ಬಿಡಲು ಆರಂಭಿಸಲಾಯಿತು. ಸಂಜೆ ಹೊತ್ತಿಗೆ ಮಳೆ ಜೋರಾಗಿ 35ಸಾವಿರ ಕ್ಯೂಸೆಕ್‌ಗೆ ಏರಿಸಿ ಇಂದು ಮುಂಜಾನೆ 61ಸಾವಿರ ಕ್ಯೂಸೆಕ್‌ ಟೇಲರೀಸ್‌ನಿಂದ ಬಿಟ್ಟ ಕಾರಣ ಶರಾವತಿ ಪಾತಳಿಗಿಂತ 3ಅಡಿ ನೀರು ಏರಿದ್ದು ಗೇರುಸೊಪ್ಪೆಯಿಂದ ಹೊನ್ನಾವರವರೆಗಿನ 35ಕಿಮೀ ಎಡಬಲದಂಡೆ ತೋಟಗಳು ನೀರಿನಿಂದ ಆವೃತವಾಗಿದೆ.

ಗೇರುಸೊಪ್ಪಾ ನಗರಬಸ್ತಿಕೇರಿ, ತೆಂಗಾರ, ಸಂಶಿ, ಉಪ್ಪೋಣಿ ಗ್ರಾಮದ ಶಾಲೆ, ಮಾಗೋಡ ದಾಸ ಪೈ ಅಂಗಡಿಗಳಿಗೆ ನೀರು ಹೊಕ್ಕಿವೆ. ಅಳ್ಳಂಕಿ ಗಾಬಿತಕೇರಿಯಲ್ಲಿ ಶರಾವತಿ ಪ್ರವಾಹದಿಂದ ಅಕ್ಷರಶಃ ದ್ವೀಪವಾಗಿ ಪರಿವರ್ತನೆಗೊಂಡಿರುವ ನಾರಾಯಣ ಗೊಯ್ದು ನಾಯ್ಕ ಮನೆಗೆ ನೀರು ನುಗ್ಗಿದ್ದು ಕುಟುಂಬವನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳಿಸಲಾಗಿದೆ. ಹೈಗುಂದ ಸೇತುವೆಯ ಎತ್ತರಕ್ಕೆ ನೀರು ಹರಿಯುತ್ತಿದೆ. ಟೇಲರೀಸ್‌ ಸೇತುವೆಯ ತಳಭಾಗದವರೆಗೆ ನೀರು ಏರಿದೆ.

ಲಿಂಗನಮಕ್ಕಿಯಿಂದ ವಿದ್ಯುತ್‌ ಉತ್ಪಾದಿಸಿ, ಗೇಟು ತೆಗೆದು ಹೊರಬಿಡುವ ನೀರಿನ ಜೊತೆ, ಜೋಗ ಜಲಪಾತದಿಂದ ಟೇಲರೀಸ್‌ ಆಣೆಕಟ್ಟಿನವರೆಗಿನ 30ಕಿಮೀ ವ್ಯಾಪ್ತಿಯ ಕೊಳ್ಳದಲ್ಲಿ ಬೀಳುವ ಮಳೆನೀರು ಸೇರಿ ಟೇಲರೀಸ್‌ಗೆ ಭಾರೀ ನೀರು ಬರುತ್ತಿರುವುದರಿಂದ 60ಸಾವಿರ ಕ್ಯೂಸೆಕ್‌ ನೀರು ಬಿಡಲಾಗುತ್ತಿದೆ. ಪ್ರವಾಹದಿಂದ ಮನೆಗಳಿಗೆ ನೀರು ನುಗ್ಗಿ ಆಗಬಹುದಾದ ತೊಂದರೆ ತಪ್ಪಿಸಲು ಕೆಪಿಸಿ ಹರಸಾಹಸ ಪಡುತ್ತಿದೆ. ಶಾಸಕ ಸುನಿಲ್‌ ನಾಯ್ಕ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದರು.

ಜಿಲ್ಲೆಯ ಜಲಾಶಯ ಮಟ್ಟ
ಕದ್ರಾ: 34.50ಮೀ (ಗರಿಷ್ಠ), 33 ಮೀ (ಇಂದಿನ ಮಟ್ಟ). ಕೊಡಸಳ್ಳಿ: 75.50 ಮೀ (ಗರಿಷ್ಠ), 73.85 ಮೀ. (ಇಂದಿನ ಮಟ್ಟ), ಸೂಪಾ: 564ಮೀ (ಗ), 558.50 ಮೀ (ಇ.ಮಟ್ಟ), ತಟ್ಟಿಹಳ್ಳ: 468.38ಮೀ (ಗ), 459.88 ಮೀ (ಇ.ಮಟ್ಟ), ಬೊಮ್ಮನಹಳ್ಳಿ: 438.46ಮೀ (ಗ), 434.70 ಮೀ (ಇ.ಮಟ್ಟ), ಗೇರುಸೊಪ್ಪ: 55ಮೀ (ಗ), 50.31 ಮೀ (ಇ.ಮಟ್ಟ), ಲಿಂಗನಮಕ್ಕಿ: 1819 ಅಡಿ (ಗ), 1817.70 ಅಡಿ (ಇಂದಿನ ಮಟ್ಟ). 

ಟಾಪ್ ನ್ಯೂಸ್

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain: ಹಿಂಗಾರು ಮಳೆಯಬ್ಬರಕ್ಕೆ ಇಬ್ಬರು ಸಾವು, ಬೆಳೆ ಹಾನಿ

Rain: ಹಿಂಗಾರು ಮಳೆಯಬ್ಬರಕ್ಕೆ ಇಬ್ಬರು ಸಾವು, ಬೆಳೆ ಹಾನಿ

Flight: ಹುಬ್ಬಳ್ಳಿ-ಅಹ್ಮದಾಬಾದ್‌ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ

Flight: ಹುಬ್ಬಳ್ಳಿ-ಅಹ್ಮದಾಬಾದ್‌ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ

Pralhad Joshi: ಬೆಂಬಲ ಬೆಲೆ ಹೆಚ್ಚಳದೊಂದಿಗೆ ಅನ್ನದಾತರಿಗೆ ನೆರವು

Pralhad Joshi: ಬೆಂಬಲ ಬೆಲೆ ಹೆಚ್ಚಳದೊಂದಿಗೆ ಅನ್ನದಾತರಿಗೆ ನೆರವು

1-rss

Hubli; ಗಲಭೆ ಪ್ರಕರಣ ವಾಪಸ್ ಖಂಡಿಸಿ ಠಾಣೆ ಮುಂಭಾಗ ಶ್ರೀರಾಮ ಸೇನೆ ಪ್ರತಿಭಟನೆ

Madhu Bangarappa

Dharwad: ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ಪಡೆದಿದ್ದು ಸರಿ ಇದೆ : ಸಚಿವ ಮಧು ಬಂಗಾರಪ್ಪ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.