ತಿ.ನರಸೀಪುರ: ನದಿತೀರದ ಪ್ರದೇಶಗಳು ಜಲಾವೃತ
Team Udayavani, Aug 19, 2018, 11:23 AM IST
ತಿ.ನರಸೀಪುರ: ಕೆಆರ್ಎಸ್ ಮತ್ತು ಕಬಿನಿ ಜಲಾಶಯಗಳ ಹೊರ ಹರಿವು ಹೆಚ್ಚಳದ ಹಿನ್ನೆಲೆಯಲ್ಲಿ ಕೃಷಿ ಭೂಮಿ ಸೇರಿದಂತೆ ನದಿಪಾತ್ರದ ಅಂಚಿನ ಪ್ರದೇಶಗಳು ಜಲಾವೃತವಾಗಿವೆ.
ಪಟ್ಟಣದ ತೋಟಗೇರಿ ಮಾರಮ್ಮನ ದೇವಾಲಯದ ಮುಂಭಾಗದ ಕೃಷಿ ಭೂಮಿ, ಸ್ಮಶಾನ ಹಾಗೂ ಹಳೇ ತಿರಮಕೂಡಲು, ಶ್ರೀಗುಂಜಾ ನರಸಿಂಹಸ್ವಾಮಿ ದೇವಾಲಯದ ಸೋಪಾನ ಕಟ್ಟೆ ಸಂಪೂರ್ಣ ಮುಳುಗಡೆಗೊಂಡಿದ್ದು, ಅದರ ಆಸು ಪಾಸು ರಸ್ತೆಯಂಚಿನ ಬಳಿಗೆ ನೀರು ಹರಿದಿದೆ.
ಪಟ್ಟಣದಿಂದ ತಾಯೂರಿಗೆ ತೆರಳುವ ಹುಣಸೂರು ಮಾರ್ಗದಲ್ಲಿ ರಸ್ತೆಯ ಮೇಲೆ ನೀರು ಹರಿಯುತ್ತಿದೆ. ನದಿಯಂಚಿನ ಕೃಷಿ ಭೂಮಿಯಲ್ಲಿ ಕೆಲವರು ಬಿತ್ತನೆ ಮಾಡಿದ್ದ ಪ್ರದೇಶಗಳು ಹಾಗೂ ನಾಟಿ ಮಾಡಿದ್ದ ಪ್ರದೇಶಗಳು ಜಲಾವೃತಗೊಂಡಿದ್ದು, ಬರಗಾಲದಿಂದ ತತ್ತರಿಸಿದ್ದ ರೈತರು ಬೆಳೆ ಕಾಣುವ ನಿರೀಕ್ಷೆ ಇಟ್ಟು ನಾಟಿ ಮಾಡಲು ಮುಂದಾಗಿದ್ದರು.
ಈಗ ಪ್ರವಾಹವೂ ಅವರನ್ನು ಮತ್ತಷ್ಟು ಕಂಗೆಡಿಸಿದೆ. ಈಗಾಗಲೇ ಹೆಮ್ಮಿಗೆ ಸೇತುವೆ ಸಂಚಾರ ಬಂದ್ ಆಗಿದೆ. ಹಳೇ ತಿರಮಕೂಡಲಿನ ವ್ಯಾಸರಾಜಮಠದ ಹಾಗೂ ಗುಂಜಾನರಸಿಂಹಸ್ವಾಮಿ ದೇವಾಲಯದ ಮುಂಭಾಗದ ಬ್ಯಾರಿಕೇಡ್ ಅಳವಡಿಸಿಲಾಗಿದೆ. ಪೊಲೀಸರ ನಿಯೋಜನೆ ಮಾಡಲಾಗಿದೆ.
ತಡಿಮಾಲಂಗಿಗೆ ಶಾಸಕರ ಭೇಟಿ: ಜಲಾವೃತ್ತಗೊಂಡಿರುವ ತಡಿ ಮಾಲಂಗಿ ನದಿ ಪಾತ್ರದ ಸ್ಥಳಾಂತರಗೊಂಡ ಮನೆಗಳನ್ನು ಪರಿಶೀಲಿಸಿ ಗ್ರಾಮಸ್ಥರಿಂದ ಮಾಹಿತಿ ಪಡೆದಿದ್ದಾರೆ. ಇದೇ ವೇಳೆ, ನದಿ ಅಂಚಿನಲ್ಲಿ ವಾಸವಿರುವ ಕುಟುಂಬಗಳಿಗೆ ಬೇರೆ ಕಡೆ ನಿವೇಶನ ಸೌಲಭ್ಯ ದೊರಕಿಸುವಂತೆ ಗ್ರಾಮಸ್ಥರು ಮನವಿ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ
Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು
Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್ ರಾಜ್ ನಿರ್ದೇಶನ
Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!
INDvsNZ: ಪಂತ್ ಬದಲು ಧ್ರುವ್ ಜುರೆಲ್ ವಿಕೆಟ್ ಕೀಪಿಂಗ್; ರಿಷಭ್ ಪಂತ್ ಗೆ ಏನಾಗಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.