ಬರ ನೋಡಲು ಬಂದ ಸಚಿವರು ನೆರೆ ಮರೆತರು!


Team Udayavani, Aug 19, 2018, 11:53 AM IST

vij-3.jpg

ರಾಯಚೂರು: ಮುಂಗಾರು ಮಳೆ ಇಲ್ಲದೆ ಕಂಗೆಟ್ಟ ರೈತರ ಕಷ್ಟ ಆಲಿಸಲು ಬಂದಿದ್ದ ಕೃಷಿ ಸಚಿವರು, ತರಾತುರಿಯಲ್ಲಿ ಅನಾವೃಷ್ಟಿ ಕಣ್ತುಂಬಿಕೊಂಡರು. ಆದರೆ, ಮಳೆ ಇಲ್ಲದೆಯೂ ಜಿಲ್ಲೆಯನ್ನು ಬಾಧಿಸುತ್ತಿರುವ ನೆರೆಯನ್ನೇ ಮರೆತರು. ಸಚಿವ ಎಚ್‌.ಎನ್‌.ಶಿವಶಂಕರ ರೆಡ್ಡಿ ಶನಿವಾರ ತಾಲೂಕಿನ ವಿಜಯನಗರ ಕ್ಯಾಂಪ್‌ನಲ್ಲಿ ಬರ ಅಧ್ಯಯನ ನಡೆಸಿದರು. ಆದರೆ, ಜಿಲ್ಲೆಯ ಬರದ ಬಗ್ಗೆ ಅವರಿಗೆ ವಿವರಿಸಬೇಕಿದ್ದ ಜಿಲ್ಲಾಧಿಕಾರಿಯಾಗಲಿ, ಸಿಇಒ ಆಗಲಿ ಸ್ಥಳದಲ್ಲಿರಲಿಲ್ಲ. ಇರುವ ಅಧಿಕಾರಿಗಳೇ ವರದಿ ಒಪ್ಪಿಸಿದರು.

ವಿಪರ್ಯಾಸವೆಂದರೆ ಜಿಲ್ಲೆ ಬರದಿಂದ ಹೇಗೆ ತತ್ತರಿಸಿದೆಯೋ ನೆರೆಯಿಂದಲೂ ಕೂಡ ಸಮಸ್ಯೆಗೆ ತುತ್ತಾಗಿದೆ. ಉಭಯ ನದಿಗಳು ತುಂಬಿ ಹರಿಯುತ್ತಿದ್ದು, ತುಂಗಭದ್ರಾ ನದಿಪಾತ್ರಗಳಲ್ಲಿ ರೈತರ ಬದುಕು ಅಕ್ಷರಶಃ ಬೀದಿ ಪಾಲಾಗುತ್ತಿದೆ. ಬಿತ್ತನೆ ಮಾಡಿದ ಬೆಳೆಗಳೆಲ್ಲ ನೀರಿಗೆ ಕೊಚ್ಚಿ ಹೋಗಿವೆ. ಪಂಪ್‌ಸೆಟ್‌ಗಳು ನದಿಯಲ್ಲಿ ಮುಳುಗಿ ಹೋಗಿವೆ. ಆದರೆ, ಆ ಬಗ್ಗೆ ಕಿಂಚಿತ್ತೂ ಸಚಿವರು ವಿಚಾರಿಸಲಿಲ್ಲ. 

ನಂತರ ಸುಲ್ತಾನಪುರ ಗ್ರಾಮಕ್ಕೆ ತೆರಳಿ ಅಲ್ಲೊಂದಿಷ್ಟು ಕಾಲ ಪರಿಶೀಲನೆ ನಡೆಸಿ ಯಾದಗಿರಿಯತ್ತ ಪ್ರಯಾಣ ಬೆಳೆಸಿದರು. ಅವರು ಬರುವುದು ಒಂದೂವರೆ ಗಂಟೆ ತಡವಾದರೂ ರೈತರು ಕಾದು ಕುಳಿತಿದ್ದರು.

ತುಂಗಭದ್ರಾ ನದಿಗೆ 2 ಲಕ್ಷ ಕ್ಯುಸೆಕ್‌ ನೀರು ಹರಿಸಿದ ಪರಿಣಾಮ ನದಿ ಪಾತ್ರದ ಗ್ರಾಮಗಳನ್ನು ಸ್ಥಳಾಂತರ ಮಾಡಲಾಗುತ್ತಿದೆ. ಅತ್ತ ರೈತರು ಬಿತ್ತನೆ ಮಾಡಿದ್ದ ಭತ್ತ, ಹತ್ತಿ ಸೇರಿ ಇತರೆ ಬೆಳೆಗಳು ನೀರಲ್ಲಿ ಮುಳುಗಿ ಹಾಳಾಗುತ್ತಿವೆ. ಆ ಭಾಗದ ರೈತರು ಅನುಭವಿಸುತ್ತಿರುವ ಸಂಕಷ್ಟಗಳನ್ನು
ಸಚಿವರು ಸೌಜನ್ಯಕ್ಕೂ ಕೇಳಲಿಲ್ಲ. ಅಲ್ಲದೇ ಅವರು ಭೇಟಿ ನೀಡಿದ್ದು ನೀರಾವರಿ ಆಶ್ರಿತ ಪ್ರದೇಶಗಳಿಗೆ ವಿನಃ ಬಯಲು ಸೀಮೆಗಲ್ಲ. ಅದೊಂದು ಕಾಟಾಚಾರದ ಪ್ರವಾಸದಂತಾಗಿತ್ತು.

ಇನ್ನು ಈಗಾಗಲೇ ಜಿಲ್ಲೆಯ ಬರ ಅಧ್ಯಯನ ನಡೆಸಿರುವ ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್‌, ಸಿಇಒ ನಲಿನ್‌ ಅತುಲ್‌ ಸಚಿವರು ಬಂದಾಗ ಕಾಣಲಿಲ್ಲ. ಇದರಿಂದ ಸಚಿವರಿಗೆ ಕೃಷಿ ಇಲಾಖೆ ಜಂಟಿ ನಿರ್ದೇಶಕಿ ನೀಡಿದ ಬಿತ್ತನೆ ಪ್ರಮಾಣ, ವಿಮಾ ಸೌಲಭ್ಯದ ವಿನಃ ಹೆಚ್ಚಿನ ಮಾಹಿತಿ ಸಿಗಲಿಲ್ಲ. ಸಚಿವರು ಕೂಡ ಕೆದಕಲು ಹೋಗಲಿಲ್ಲ. ಅಲ್ಲಿಗೆ ಬರ ನೋಡಲು ಬಂದ ಸಚಿವರು ನೆರೆ ಮರೆತು ಜಿಲ್ಲೆಯಿಂದ ಕಾಲ್ಕಿತ್ತರು.

13 ಜಿಲ್ಲೆಗಳಲ್ಲಿ ಶೇ.63ರಷ್ಟು ಬೆಳೆ ಹಾನಿ: ಶಿವಶಂಕರ
ರಾಯಚೂರು:
ಉತ್ತರ ಕರ್ನಾಟಕದ 13 ಜಿಲ್ಲೆಗಳಲ್ಲಿ ಮಳೆ ಕೊರತೆಯಾಗಿ ಬರ ಆವರಿಸುತ್ತಿದೆ. ಹೀಗಾಗಿ ಪರಿಸ್ಥಿತಿ ಅಧ್ಯಯನ ನಡೆಸುತ್ತಿದ್ದು, ಶೀಘ್ರದಲ್ಲೇ ಬರ ಘೋಷಣೆ ಕುರಿತು ನಿರ್ಧಾರ ಪ್ರಕಟಿಸಲಾಗುವುದು ಎಂದು ಕೃಷಿ ಸಚಿವ ಎಚ್‌.ಎನ್‌. ಶಿವಶಂಕರ ರೆಡ್ಡಿ ತಿಳಿಸಿದರು.

ತಾಲೂಕಿನ ವಿಜಯನಗರ ಕ್ಯಾಂಪ್‌ನ ಜಮೀನುಗಳಲ್ಲಿ ಬರ ಅಧ್ಯಯನ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಸಾಕಷ್ಟು ಭಾಗ ಬರಕ್ಕೆ ತುತ್ತಾಗಿದ್ದರೂ ಕೇಂದ್ರ ಸರ್ಕಾರದ ಮಾನದಂಡದಿಂದಾಗಿ ಬರಪೀಡಿತ ಎಂದು ಘೋಷಿಸಲಾಗುತ್ತಿಲ್ಲ. ಶೇ.50ರಷ್ಟು ಬೆಳೆ ಹಾನಿಯಾದರೆ ಬರ
ಘೋಷಿಸಬೇಕು ಎಂಬ ನಿಯಮವಿದೆ. ಆದರೆ, ಜಿಲ್ಲೆಯಲ್ಲಿ ಶೇ.63ರಷ್ಟು ಬೆಳೆ ಹಾನಿಯಾಗಿದ್ದು, ಈ ಕುರಿತು ಮುಖ್ಯಮಂತ್ರಿ ಜತೆ ಚರ್ಚಿಸಿ ಬರ ಘೋಷಿಸಲಾಗುವುದು ಎಂದರು.

ಕೊನೆ ಭಾಗದ ರೈತರಿಗೆ ನೀರು ತಲುಪದಿರುವ ಸಮಸ್ಯೆ ಎಲ್ಲ ಭಾಗದಲ್ಲೂ ಇದೆ. ಹೀಗಾಗಿ ಅಕ್ರಮ ನೀರು ಬಳಕೆಗೆ ಕಡಿವಾಣ ಹಾಕಲು ವಿಶೇಷ ಕಾನೂನು ರೂಪಿಸಲು ಚಿಂತನೆ ನಡೆಸಲಾಗಿದೆ. ಈಗಾಗಲೇ ಮುಖ್ಯಮಂತ್ರಿ ಜತೆಗೂ ಚರ್ಚಿಸಿದ್ದು, ಶೀಘ್ರದಲ್ಲೇ ಕಾನೂನು ಜಾರಿಗೆ ಕ್ರಮ ಕೈಗೊಳ್ಳಲಾಗುವುದು. ಮಳೆ ಕೊರತೆ ಹಿನ್ನೆಲೆಯಲ್ಲಿ ಫಸಲ್‌ ಬಿಮಾ ಯೋಜನೆಯಡಿ ಬೆಳೆಗಳ ವಿಮೆ ಮಾಡಿಸಲು ರೈತರು ಆಸಕ್ತಿ ತೋರುತ್ತಿದ್ದು, ಜಿಲ್ಲೆಯಲ್ಲೂ 73 ಸಾವಿರ ರೈತರು ವಿಮೆ ಮಾಡಿಸಿದ್ದಾರೆ. ಜಿಲ್ಲೆಗೆ ಇನ್ನೂ 23 ಕೋಟಿ ರು. ಬಾಕಿ ಬರಬೇಕಿದ್ದು, ಸಂಬಂಧಿಸಿದ ಸಂಸ್ಥೆ ಜತೆ ಮಾತುಕತೆ ನಡೆಸಲಾಗಿದೆ. 15 ದಿನದೊಳಗೆ ರೈತರ ಖಾತೆಗೆ ಹಣ ಸಂದಾಯ ಮಾಡುವಂತೆ ಸೂಚಿಸಲಾಗಿದೆ. ಅದರ ಜತೆಗೆ ಬೆಳೆ ವಿಮೆ ಮಾಡಿದ ವರ್ಷದಲ್ಲೇ ಪರಿಹಾರ ನೀಡಬೇಕು, ಹೋಬಳಿವಾರು ವಿಮೆ ಅಧಿಕಾರಿಗಳ ನೇಮಕಕ್ಕೆ ಕಂಪನಿಗಳಿಗೆ ಸೂಚನೆ ನೀಡಲಾಗುವುದು. ರಾಯಚೂರು ಕೃಷಿ ವಿವಿಯಲ್ಲಿ ಅಧಿಕಾರಿ, ಸಿಬ್ಬಂದಿ ವರ್ಗದ ನೇಮಕದಲ್ಲಿ ನಿಯಮ ಉಲ್ಲಂಘಿಸಲಾಗಿದೆ ಎಂಬ ದೂರುಗಳಿದ್ದು, ಅದಕ್ಕಾಗಿ ಒಂದು ಸಮಿತಿ ರಚಿಸಲಾಗಿದೆ. ತನಿಖೆ ಕೈಗೊಂಡು ವರದಿ ಬಂದ ಬಳಿಕ ಕ್ರಮ ಜರುಗಿಸಲಾಗುವುದು. ವಿವಿ ಕುಲಪತಿ ಆಯ್ಕೆಗಾಗಿ ಶೀಲವಂತ ನೇತೃತ್ವದಲ್ಲಿ ಸಮಿತಿ ರಚಿಸಿದ್ದು, ಅವರು ನೀಡುವ ವರದಿ ಆಧರಿಸಿ ಕುಲಪತಿ  ಮಿಸಲಾಗುವುದು ಎಂದರು.

ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಡಾ| ಚೇತನಾ ಪಾಟೀಲ, ಸಹಾಯಕ ನಿರ್ದೇಶಕ ಡಾ| ಸಂದೀಪ ಸೇರಿ ಇತರರಿದ್ದರು. ರೈತ ಮಿತ್ರ ವೆಬ್‌ಸೈಟ್‌ಗೆ ಚಾಲನೆ ಇದೇ ವೇಳೆ ರೈತ ಮಿತ್ರ ವೆಬ್‌ಸೈಟ್‌ ನೋಂದಣಿ ಅಪ್ಲಿಕೇಶನ್‌ಗೆ ಚಾಲನೆ ನೀಡಿದ ಅವರು, ಕೃಷಿ ಸಂಬಂಧಿತ ಇಲಾಖೆಗಳಲ್ಲಿ ಒಂದೇ ಬಾರಿ ಏಕ ರೂಪದಲ್ಲಿ ರೈತ ದತ್ತಾಂಶ ಮಾಹಿತಿ ಸಂಗ್ರಹಣೆಗೆ ಇದು ಸಹಕಾರಿಯಾಗಲಿದೆ. ರೈತರ ನೋಂದಣಿ, ಪಹಣಿ, ಬ್ಯಾಂಕ್‌ ವಿವರ ಸಿಗಲಿದೆ. ಒಮ್ಮೆ ನೋಂದಣಿಯಾದರೆ ಅದು ಶಾಶ್ವತವಾಗಿ ಉಳಿಯಲಿದೆ. ಮುಂದಿನ ದಿನಗಳಲ್ಲಿ ರೈತರಿಗೆ ಸ್ಮಾರ್ಟ್‌ ಕಾರ್ಡ್‌ ವಿತರಿಸಲಾಗುವುದು ಎಂದರು.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shrana-p

Hospital: ರಾಯಚೂರಿನಲ್ಲಿ ಏಮ್ಸ್‌ ಸ್ಥಾಪನೆಗಾಗಿ ಕೇಂದ್ರಕ್ಕೆ ಮನವಿ: ಸಚಿವ ಡಾ. ಶರಣಪ್ರಕಾಶ

Manvi

Raichuru: ಅಪಘಾತದಲ್ಲಿ ಮೃತ ಮಕ್ಕಳ ಕುಟುಂಬಕ್ಕೆ ಪರಿಹಾರ: ಸಿಎಂ ಸಿದ್ದರಾಮಯ್ಯ

Manvi: ಶಾಲಾ ಬಸ್-‌ ಸರ್ಕಾರಿ ಬಸ್‌ ನಡುವೆ ಭೀಕರ ಅಪಘಾತ; ಇಬ್ಬರು ಮಕ್ಕಳು ಸಾವು

Manvi: ಶಾಲಾ ಬಸ್-‌ ಸರ್ಕಾರಿ ಬಸ್‌ ನಡುವೆ ಭೀಕರ ಅಪಘಾತ; ಇಬ್ಬರು ಮಕ್ಕಳು ಸಾವು

Muda Case: ಮುಡಾ‌ ಪ್ರಕರಣ ಅಂದುಕೊಂಡಿದ್ದಕ್ಕಿಂತ ಆಳವಾಗಿದೆ- ಸಚಿವ ವಿ.ಸೋಮಣ್ಣ

Muda Case: ಮುಡಾ‌ ಪ್ರಕರಣ ಅಂದುಕೊಂಡಿದ್ದಕ್ಕಿಂತ ಆಳವಾಗಿದೆ- ಸಚಿವ ವಿ.ಸೋಮಣ್ಣ

Raichur: ನಗರಸಭೆ ಕೈ ವಶ… ಅಧ್ಯಕ್ಷೆಯಾಗಿ ನರಸಮ್ಮ, ಉಪಾಧ್ಯಕ್ಷರಾಗಿ ಸಾಜಿದ್ ಸಮೀರ್

Election: ರಾಯಚೂರು ನಗರಸಭೆ ಕೈ ವಶ, ಅಧ್ಯಕ್ಷೆಯಾಗಿ ನರಸಮ್ಮ, ಉಪಾಧ್ಯಕ್ಷರಾಗಿ ಸಾಜಿದ್ ಸಮೀರ್

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.