ಮೆಕ್ಕೆ ಜೋಳಕ್ಕೆ ಕೀಟಬಾಧೆ: ಕರಪತ್ರ ಬಿಡುಗಡೆ
Team Udayavani, Aug 19, 2018, 4:10 PM IST
ಧಾರವಾಡ: ಜಿಲ್ಲೆಯ ವಿವಿಧ ತಾಲೂಕಿನ ಸೀಮಿತ ಪ್ರದೇಶಗಳಲ್ಲಿ ತಡವಾಗಿ ಬಿತ್ತನೆ ಮಾಡಿದ ಮೆಕ್ಕೆಜೋಳದ ಬೆಳೆಗೆ ಹೊಸ ಪ್ರಬೇಧದ ಸೈನಿಕ ಹುಳು (ನ್ಪೋಡೆಪ್ಟರಾ ಫ್ರು ಜಿಪೆರ್ಡಾ) ಕೀಟಬಾಧೆ ಕಾಣಿಸಿಕೊಂಡಿದ್ದು, ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಹುಳು ಕಾಣಿಸಿಕೊಂಡಿದೆ ಎಂದು ಜಿಲ್ಲಾಧಿಕಾರಿ ಎಂ.ದೀಪಾ ಹೇಳಿದರು. ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಕೃಷಿ ಇಲಾಖೆ ಅಧಿಕಾರಿಗಳ ಮತ್ತು ಕೃಷಿ ವಿಜ್ಞಾನಿಗಳ ಸಭೆಯಲ್ಲಿ ಮಾಹಿತಿ ಕರಪತ್ರ ಬಿಡುಗಡೆಗೊಳಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಸುಮಾರು 30 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಮೆಕ್ಕೆಜೋಳದ ಬಿತ್ತನೆಯಾಗಿದೆ. ಜೂನ್ ಅಂತ್ಯದಲ್ಲಿ ಮತ್ತು ಸೆಪ್ಟಂಬರ್ ಮೊದಲ ವಾರದಲ್ಲಿ ಬಿತ್ತನೆಯಾಗಿರುವ ಸುಮಾರು 9 ಸಾವಿರ ಹೆಕ್ಟೇರ್ ಪ್ರದೇಶದಲ್ಲಿನ ಮೆಕ್ಕೆಜೋಳ ಬೆಳೆಯ ಶೇ.5ರಿಂದ 10ರಷ್ಟು ಬೆಳೆಯಲ್ಲಿ ಈ ಹೊಸ ಪ್ರಬೇಧದ ಸೈನಿಕ ಹುಳು ಪತ್ತೆಯಾಗಿದೆ. ಹೀಗಾಗಿ ರೈತರು ಕೃಷಿ ಇಲಾಖೆ ಹಾಗೂ
ವಿಜ್ಞಾನಿಗಳ ಸಲಹೆ ಮೇರೆಗೆ ಜಾಗೃತಿ ವಹಿಸಬೇಕು ಎಂದರು.
ರೈತರಿಗೆ ಮಾಹಿತಿ: ಈಗಾಗಲೇ ಈ ಕೀಟಬಾಧೆ ಕುರಿತು ಜನ ಜಾಗೃತಿಗಾಗಿ ಕ್ರಮಕೈಗೊಳ್ಳಲಾಗಿದೆ. ರೈತರಿಗೆ ನೇರವಾಗಿ ಹುಳು ಬಾಧೆ ಹಾಗೂ ಅದರ ನಿಯಂತ್ರಣ ಕುರಿತು ಮಾಹಿತಿಯನ್ನು ಕೃಷಿ ಇಲಾಖೆ ಅಧಿಕಾರಿಗಳು ಮತ್ತು ರೈತ ಸಂಪರ್ಕ ಕೇಂದ್ರದಲ್ಲಿರುವ ವಿಜ್ಞಾನಿಗಳು ನೀಡುತ್ತಿದ್ದಾರೆ. ಪಾಲ್ ಸೈನಿಕ ಹುಳು ನಿಯಂತ್ರಣ ಮತ್ತು ನಿಮೂರ್ಲನೆಗೆ ರಾಸಾಯನಿಕ ಮತ್ತು ಜೈವಿಕ ಕೀಟನಾಶಕಗಳು ಲಭ್ಯವಿದ್ದು, ರೈತ ಸಂಪರ್ಕ ಕೇಂದ್ರಗಳಲ್ಲಿ ದಾಸ್ತಾನು ಮಾಡಲಾಗಿದೆ. ರೈತರಿಗೆ ಶೇ.50 ರಿಯಾಯತಿ ದರದಲ್ಲಿ ಇದನ್ನು ವಿತರಿಸಲಾಗುವುದು. ರೈತರು ಮುಂಜಾಗ್ರತೆ ವಹಿಸಿ ರೋಗ ನಿಯಂತ್ರಣಕ್ಕೆ ಕ್ರಮ ತೆಗೆದುಕೊಳ್ಳಬೇಕು ಎಂದರು.
ಕೃಷಿ ಇಲಾಖೆ ಜಂಟಿ ನಿರ್ದೇಶಕ ಟಿ.ಎಸ್. ರುದ್ರೇಶಪ್ಪ ಮಾತನಾಡಿ, ಜಿಲ್ಲೆಯಲ್ಲಿ ಮುಖ್ಯವಾಗಿ ನವಲಗುಂದ ತಾಲೂಕಿನ ಬೆಳವಟಗಿ, ಗೊಬ್ಬರಗುಂಪಿ, ಶಾನವಾಡ, ಹಾಳಕುಸುಗಲ್ಲ, ಶಿಶ್ವಿನಾಳ, ಗುಡಿಸಾಗರ, ಅಳಗವಾಡಿ, ಪಡೆಸೂರು, ಹುಬ್ಬಳ್ಳಿ ತಾಲೂಕಿನ
ಛಬ್ಬಿ ಹೋಬಳಿ, ಧಾರವಾಡ ತಾಲೂಕಿನ ಗರಗ, ಧಾರವಾಡ, ಅಳ್ನಾವರ, ಅಮ್ಮಿನಬಾವಿ ಹೋಬಳಿಗಳು ಮತ್ತು ಕುಂದಗೊಳ ತಾಲೂಕಿನ ಕುಂದಗೋಳ, ಸಂಶಿ ಹೋಬಳಿಯ ಗ್ರಾಮಗಳಲ್ಲಿನ ಶೇ.5ರಿಂದ 10ರಷ್ಟು ಮೆಕ್ಕೆಜೋಳ ಪ್ರದೇಶದಲ್ಲಿ ಹೊಸ ಪ್ರಬೇಧದ ಸೈನಿಕರ ಹುಳು (ನ್ಪೋಡೆಪ್ಟರಾ ಫ್ರುಜಿಪೆರ್ಡಾ) ಕೀಟಬಾಧೆ ಕಾಣಿಸಿಕೊಂಡಿದ್ದು, ಸಮಗ್ರ ನಿರ್ವಹಣೆ ಮೂಲಕ ಹುಳು ಹತೋಟಿ ಮಾಡಬೇಕು ಎಂದರು.
ಕೃಷಿ ವಿಶ್ವವಿದ್ಯಾಲಯದ ಕೀಟಶಾಸ್ತ್ರಜ್ಞ ಡಾ| ಎಸ್. ಎನ್ ಜಾಧವ ಅವರು, ಪಾಲ್ ಸೈನಿಕ ಹುಳುವಿನ ಜೀವನಚಕ್ರ ಹಾಗೂ ನಿಯಂತ್ರಣ ಕುರಿತು ಮಾಹಿತಿ ನೀಡಿದರು. ಕೃಷಿ ಇಲಾಖೆಯ ಉಪನಿರ್ದೇಶಕ ಪಿ.ಎನ್. ಪಾಟೀಲ, ಕೃವಿವಿಯ ವಿಸ್ತರಣಾ ಸಹ ನಿರ್ದೇಶಕ ಡಾ| ಚನ್ನಪ್ಪಗೌಡ, ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರು, ತಾಲೂಕುಗಳ ಸಹಾಯಕ ಕೃಷಿ ನಿರ್ದೇಶಕರು ಪಾಲ್ಗೊಂಡಿದ್ದರು.
ಮೆಕ್ಕೆಜೋಳ ಹಾಕಿದ 35ರಿಂದ 45 ದಿನದೊಳಗೆ ಈ ರೋಗ ಬಾಧೆ ಬೆಳೆಯಲ್ಲಿ ಕಾಣಿಸುತ್ತದೆ. ರೈತರು ಕೀಟನಾಶಕ ಬಳಸಿ ಇದನ್ನು ನಿಯಂತ್ರಿಸಬಹುದು. ಮೆಕ್ಕೆಜೋಳ ಪ್ರದೇಶದಲ್ಲಿ ಹೊಸ ಪ್ರಬೇಧದ ಸೈನಿಕರ ಹುಳು (ನ್ಪೋಡೆಪ್ಟರಾ ಫ್ರುಜಿಪೆರ್ಡಾ) ಕೀಟಬಾಧೆ ಕಾಣಿಸಿಕೊಂಡಿದ್ದು, ಸಮಗ್ರ ನಿರ್ವಹಣೆ ಮೂಲಕ ಹುಳು ಹತೋಟಿ ಮಾಡಬೇಕು.
ಟಿ.ಎಸ್. ರುದ್ರೇಶಪ್ಪ,
ಕೃಷಿ ಇಲಾಖೆ ಜಂಟಿ ನಿರ್ದೇಶಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain: ಹಿಂಗಾರು ಮಳೆಯಬ್ಬರಕ್ಕೆ ಇಬ್ಬರು ಸಾವು, ಬೆಳೆ ಹಾನಿ
Flight: ಹುಬ್ಬಳ್ಳಿ-ಅಹ್ಮದಾಬಾದ್ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ
Pralhad Joshi: ಬೆಂಬಲ ಬೆಲೆ ಹೆಚ್ಚಳದೊಂದಿಗೆ ಅನ್ನದಾತರಿಗೆ ನೆರವು
Hubli; ಗಲಭೆ ಪ್ರಕರಣ ವಾಪಸ್ ಖಂಡಿಸಿ ಠಾಣೆ ಮುಂಭಾಗ ಶ್ರೀರಾಮ ಸೇನೆ ಪ್ರತಿಭಟನೆ
Dharwad: ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ಪಡೆದಿದ್ದು ಸರಿ ಇದೆ : ಸಚಿವ ಮಧು ಬಂಗಾರಪ್ಪ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.