ಕರ್ನಾಟಕ ಅರಣ್ಯ ಪ್ರದೇಶ ಶೇ. 33ಕ್ಕೆ ಹೆಚ್ಚಿಸಲು ಯತ್ನ 


Team Udayavani, Aug 19, 2018, 5:21 PM IST

19-agust-16.jpg

ನರೇಗಲ್ಲ: ಮನೆಗೊಂದು ಮರ, ಊರಿಗೊಂದು ತೋಪು, ತಾಲೂಕಿಗೊಂದು ಕಿರು ಅರಣ್ಯ, ಜಿಲ್ಲೆಗೊಂದು ವನ ಎಂಬ ಧ್ಯೇಯ ವಾಕ್ಯದೊಂದಿಗೆ ಪ್ರಸಕ್ತ ಆಯವ್ಯಯದಲ್ಲಿ ಹಸಿರು ಕರ್ನಾಟಕ ಆಂದೋಲನವನ್ನು ಎಲ್ಲೆಡೆ ಹಮ್ಮಿಕೊಳ್ಳಲಾಗಿದೆ ಎಂದು ರೋಣ ಉಪ ವಲಯ ಅರಣ್ಯಾಧಿಕಾರಿ ಎಸ್‌. ರಂಗಣ್ಣವರ ಹೇಳಿದರು. ಪಟ್ಟಣದ ಸರ್ಕಾರಿ ಕಾಲೇಜು ಆವರಣದಲ್ಲಿ ಅರಣ್ಯ ಇಲಾಖೆ ಗದಗ, ಪಟ್ಟಣ ಪಂಚಾಯತ್‌ ನರೇಗಲ್‌, ಗ್ರೀನ್‌ ಆರ್ಮಿ ತಂಡ, ಸರಕಾರಿ ಪ್ರೌಢಶಾಲೆ, ಪಿಯು ಕಾಲೇಜು ಹಾಗೂ ಪದವಿ ಕಾಲೇಜುಗಳ ಸಂಯುಕ್ತಾಶ್ರಯದಲ್ಲಿ ಶನಿವಾರ ಹಸಿರು ಕರ್ನಾಟಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಹಸಿರು ಕರ್ನಾಟಕ ಯೋಜನೆಗೆ ಅಗತ್ಯವಿರುವ ಸಸಿಗಳನ್ನು ಇಲಾಖೆಯಿಂದ ಪೂರೈಸಲಾಗುತ್ತದೆ. ಈ ಕಾರ್ಯಕ್ರಮದಡಿ ಸಣ್ಣಪುಟ್ಟ ಬೋಳು ಗುಡ್ಡಗಳು, ಗೋಮಾಳಗಳು, ಸರಕಾರಿ ಜಮೀನುಗಳು, ಸರಕಾರಿ ಇಲಾಖೆಯ ಕಚೇರಿ ಬಯಲು ಆವರಣ, ಶಾಲಾ-ಕಾಲೇಜು ಆವರಣ, ರೈತರ ಜಮೀನು, ಉದ್ಯಾನವನ ಮತ್ತು ಹಂತ ಹಂತವಾಗಿ ಮನೆಗಳ ಅಂಗಳಗಳಲ್ಲಿ ಮರಗಿಡಗಳನ್ನು ಬೆಳೆಸುವ ಮೂಲಕ ಹಸಿರು ಹೊದಿಕೆ ಹೆಚ್ಚಿಸಲಾಗುವುದು. ಈ ನಿಟ್ಟಿನಲ್ಲಿ ಎಲ್ಲ ಇಲಾಖೆಗಳು, ಶಾಲಾ ಕಾಲೇಜುಗಳು, ಸಾರ್ವಜನಿಕರು, ಸಂಘ ಸಂಸ್ಥೆಗಳು, ಸ್ವಯಂ ಸೇವಕರು ಸಕ್ರಿಯವಾಗಿ ಭಾಗವಹಿಸಬೇಕಾಗಿದೆ. ಕರ್ನಾಟಕ ಅರಣ್ಯ ಪ್ರದೇಶವನ್ನು ಶೇ. 33ಕ್ಕೆ ಹೆಚ್ಚಿಸಲು ಹಾಗೂ ಗದಗ ಜಿಲ್ಲೆಯಲ್ಲಿ ಕೇವಲ ಶೇ. 7ಕ್ಕಿಂತ ಕಡಿಮೆ ಅರಣ್ಯ ಪ್ರದೇಶ ಇದ್ದು, ಸಸಿಗಳನ್ನು ನೆಟ್ಟು ಅರಣ್ಯ ಪ್ರದೇಶವನ್ನು ಹೆಚ್ಚಿಸಬೇಕಾಗಿದೆ ಎಂದರು.

ಪದವಿ ಪ್ರಾಚಾರ್ಯ ಬಸವರಾಜ ಬಳಗಾನೂರಮಠ ಮಾತನಾಡಿ, ಮಾನವ ಸಂಕುಲದ ಅಭಿವೃದ್ಧಿಗೆ ಪರಿಸರ ಉಳಿಸಿ ಬೆಳೆಸುವುದು ಅವಶ್ಯವಾಗಿದೆ. ನಾವಿಂದು ಕೇರಳ, ಕೊಡಗು, ಹಾಸನದಲ್ಲಿನ ಅತೀವೃಷ್ಟಿಯಿಂದಾಗಿ ಆಗುತ್ತಿರುವ ಜಲಪ್ರಳಯ, ಭೂಕುಸಿತ ಹಾಗೂ ಉತ್ತರ ಕರ್ನಾಟಕದಲ್ಲಿನ ಭೀಕರ ಬರಗಾಲ, ಅಂತರ್ಜಲ ಕುಸಿತ, ಹೆಚ್ಚುತ್ತಿರುವ ತಾಪಮಾನ ಪರಿಸರದ ನಾಶಕ್ಕೆ ಕಾರಣವಾಗಿದೆ. ಆದ್ದರಿಂದ ಎಲ್ಲರೂ ಪರಿಸರ ಸಂರಕ್ಷಣೆಗೆ ಕೈ ಜೋಡಿಸಬೇಕು ಎಂದರು.

ಪಪಂ ಆರೋಗ್ಯ ನಿರೀಕ್ಷಕ ಎನ್‌.ಎಂ. ಹಾದಿಮನಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಗಿಡ ಮರ ಬೆಳೆಸಿ ಹಸಿರೀಕರಣದ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಈ ಅಭಿಯಾನದ ಮೂಲದ ಆಗಬೇಕಿದೆ. ಶಾಲಾ ಶಿಕ್ಷಕರಿಗೆ ಈ ಬಗ್ಗೆ ಹೆಚ್ಚು ತಿಳಿವಳಿಕೆ ನೀಡಿ ವಿದ್ಯಾರ್ಥಿಗಳನ್ನು ಉತ್ತೇಜಿಸುವಂತೆ ಮಾಡಬೇಕು ಎಂದರು. ಈ ಸಂದರ್ಭದಲ್ಲಿ ಪರಿಸರ ಸಂರಕ್ಷಣೆ ಕುರಿತು ಪ್ರತಿಜ್ಞಾವಿಧಿ ಬೋಧಿಸಲಾಯಿತು. ಸಸಿ ನೆಡುವ ಮೂಲಕ ಹಸಿರು ಕರ್ನಾಟಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. 

ಪಿಯು ಪ್ರಾಚಾರ್ಯ ಎನ್‌.ಎಂ. ಪವಾಡಿಗೌಡರ, ಪ್ರೌಢಶಾಲೆ ಮುಖ್ಯ ಶಿಕ್ಷಕ ಎಸ್‌.ಬಿ. ನಿಡಗುಂದಿ, ಎಸ್‌.ಸಿ.ಗುಳಗೊಣ್ಣವರ, ಎಸ್‌.ಎನ್‌. ಚಕ್ರಸಾಲಿ, ಕೆ. ಶಿವುಕುಮಾರ, ಕೆ.ಎಚ್‌. ಅಂಜನಮೂರ್ತಿ, ಶಿವುಕುಮಾರ ಹಿರೆಹಾಳ, ಶಿವು ಕೊಪ್ಪದ, ಸಂತೋಷ ಮಣ್ಣೋಡ್ಡರ, ನಿಂಗಪ್ಪ ಮಡಿವಾಳ, ಎಂ.ಎಚ್‌. ಕಾತರಕಿ ಹಾಗೂ ಶಾಲಾ ಕಾಲೇಜಿನ ಸಿಬ್ಬಂದಿ, ಅರಣ್ಯ ಇಲಾಖೆ ಸಿಬ್ಬಂದಿ, ಗ್ರೀನ್‌ ಆರ್ಮಿ ತಂಡದ ಸದಸ್ಯರು ಇದ್ದರು.

ಹಸಿರು ಕರ್ನಾಟಕ ಅಭಿಯಾನದಡಿ ನರೇಗಲ್ಲ ಪಟ್ಟಣದಲ್ಲಿ 900 ಸಸಿಗಳನ್ನು ಸರ್ಕಾರಿ ಶಾಲಾ ಕಾಲೇಜಿನ ಆವರಣದಲ್ಲಿ, ಹಿರೇಕೆರೆ ದಂಡೆಯ ಮೇಲೆ, ಎಸ್‌.ಡಬ್ಲೂ ಲೇಯವುಟ್‌ ಇತರೆ ಖಾಲಿ ಜಾಗಗಳಲ್ಲಿ ನೆಡಲಾಗುತ್ತದೆ. ಇಲಾಖೆಯವರು ಒದಗಿಸುವ ಸಸಿಗಳನ್ನು ರೈತರು ನೆಟ್ಟು ಪೋಷಿಸಿದ್ದಲ್ಲಿ ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆಯಡಿ ಪ್ರೋತ್ಸಾಹ ಧನವನ್ನೂ ನೀಡಲಾಗುವುದು.
ಎಸ್‌. ರಂಗಣ್ಣವರ,
ಉಪವಲಯ ಅರಣ್ಯಾಧಿಕಾರಿ ರೋಣ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

P.-Joshi

Bengaluru Jail: ಸರಕಾರದಿಂದಲೇ ದರ್ಶನ್‌ ಕೇಸ್‌ ಫೋಟೋ ವೈರಲ್‌: ಪ್ರಹ್ಲಾದ್‌ ಜೋಶಿ ಕಿಡಿ

Dharwad: ಮಹದಾಯಿ ಬಗ್ಗೆ ವನ್ಯಜೀವಿ ಮಂಡಳಿ ನಿರ್ಲಕ್ಷ್ಯ: ಸಚವ‌ ಲಾಡ್ ಕಿಡಿ

Dharwad: ಮಹದಾಯಿ ಬಗ್ಗೆ ವನ್ಯಜೀವಿ ಮಂಡಳಿ ನಿರ್ಲಕ್ಷ್ಯ: ಸಚವ‌ ಲಾಡ್ ಕಿಡಿ

Dharwad;ವೀರಶೈವ ಮಹಾಸಭೆಗೆ ಸದ್ಯಕ್ಕಿಲ್ಲ ಆಡಳಿತಾತ್ಮಕ ಅಧಿಕಾರ; ಜಿಎಂಎಫ್‌ಸಿ ನ್ಯಾಯಾಲಯ ಆದೇಶ

Dharwad;ವೀರಶೈವ ಮಹಾಸಭೆಗೆ ಸದ್ಯಕ್ಕಿಲ್ಲ ಆಡಳಿತಾತ್ಮಕ ಅಧಿಕಾರ; ಜಿಎಂಎಫ್‌ಸಿ ನ್ಯಾಯಾಲಯ ಆದೇಶ

Hubli; ಬ್ಯಾಂಕ್‌ ದೋಚಲು ಯತ್ನಸಿದ ವ್ಯಕ್ತಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಪೊಲೀಸರು

Hubli; ಬ್ಯಾಂಕ್‌ ದೋಚಲು ಯತ್ನಸಿದ ವ್ಯಕ್ತಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಪೊಲೀಸರು

Hubballi: ಮಲಪ್ರಭಾ ಬಚಾವೋ ಆಂದೋಲನಕ್ಕೆ ಚಿಂತನೆ

Hubballi: ಮಲಪ್ರಭಾ ಬಚಾವೋ ಆಂದೋಲನಕ್ಕೆ ಚಿಂತನೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.