ಸದ್ಯದಲ್ಲೇ ಪಾಣೆಮಂಗಳೂರು ಉಕ್ಕಿನ ಸೇತುವೆ ಸಾಮರ್ಥ್ಯ ತಪಾಸಣೆ


Team Udayavani, Aug 20, 2018, 11:13 AM IST

20-agust-5.jpg

ಬಂಟ್ವಾಳ : ಜಿಲ್ಲೆಯನ್ನು ತಲ್ಲಣಗೊಳಿಸಿದ್ದ ಸತತ ಮಳೆ, ನೆರೆ ಹಾವಳಿಯ ಸಂದರ್ಭ ಪಾಣೆಮಂಗಳೂರು ಶತಾಯುಷಿ ಸೇತುವೆಯಲ್ಲಿ (ಬ್ರಿಟಿಷ್‌ ಕಾಲದ ಉಕ್ಕಿನ ಸೇತುವೆ) ಬಿರುಕು ಉಂಟಾಗಿದೆ ಎಂದು ಯಾರೋ ಹಾಕಿದ ವಾಟ್ಸ್ಯಾಪ್‌ ಸಂದೇಶ ಆತಂಕ ಸೃಷ್ಟಿಸಿತ್ತು. ಇದೀಗ ಸೇತುವೆಯ ಸಾಮರ್ಥ್ಯ ತಪಾಸಣೆಗೆ ಸಂಬಂಧಪಟ್ಟ ಇಲಾಖೆ ಸಜ್ಜಾಗಿದೆ.

ಮೂಲರಪಟ್ಣ ಸೇತುವೆ ಕುಸಿದ ಘಟನೆ ನಮ್ಮ ಕಣ್ಣೆದುರು ಇರುವ ಹಿನ್ನೆಲೆಯಲ್ಲಿ ಪಾಣೆಮಂಗಳೂರು ಉಕ್ಕಿನ ಸೇತುವೆಯಲ್ಲಿ ಬಿರುಕು ಮೂಡಿದೆ ಎಂಬ ವಾಟ್ಸ್ಯಾಪ್‌ ಸುದ್ದಿ ತುಣುಕಿಗೆ ಮಹತ್ವ ಬಂದಿದೆ. ಸೇತುವೆಯಲ್ಲಿ ಬಿರುಕು ಇಲ್ಲ ಎಂಬುದು ಪ್ರಾಥಮಿಕ ತನಿಖೆಗಳಲ್ಲಿ ಸ್ಪಷ್ಟವಾಗಿದೆ ಎಂದು ಇಲಾಖೆಯ ಮೂಲಗಳು ಹೇಳುತ್ತವೆ. ಆದರೆ ಉನ್ನತ ಪರಿಶೀಲನೆ ಆಗಬೇಕು ಎಂಬುದು ಸಾರ್ವಜನಿಕರ ಆಶಯ. 

10.6 ಮೀಟರ್‌ ನೀರು
1974ರಲ್ಲಿ ನೇತ್ರಾವತಿ ನದಿಯಲ್ಲಿ 15 ಮೀಟರ್‌ ಮಟ್ಟಕ್ಕೆ ಬಂದ ನೆರೆ ನೀರಿನ ಬಳಿಕ ಎರಡನೇ ಬಾರಿಗೆ ಗುರುವಾರ ರಾತ್ರಿ 10.6 ಮೀಟರ್‌ ದಾಖಲಾಗಿ ಸುತ್ತಮುತ್ತಲ ಪ್ರದೇಶ ಪ್ರವಾಹ ಪೀಡಿತವಾಗಿತ್ತು. ಈ ಸಂದರ್ಭ ಶತಾಯುಷಿ ಹಳೆ ಸೇತುವೆಯಲ್ಲಿ ಬಿರುಕು ಸಂದೇಶ ಹರಿದಾಡಿತ್ತು. ಗುರುವಾರ ರಾತ್ರಿ ಸ್ಥಳೀಯರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ನಗರ ಠಾಣೆ ಮತ್ತು ಸಂಚಾರ ಠಾಣೆ ಪೊಲೀಸರು ಧಾವಿಸಿ ತಡರಾತ್ರಿ ಸೇತುವೆಯ ಎರಡೂ ಬದಿ ಬ್ಯಾರಿಕೇಡ್‌ ಅಳವಡಿಸಿ ಮುಂಜಾಗ್ರತ ಕ್ರಮವಾಗಿ ಎಲ್ಲ ವಾಹನ ಸಂಚಾರ ಸ್ಥಗಿತಗೊಳಿಸಿದ್ದರು. 

ಆರೋಪ
ಇಲ್ಲಿನ ರಾ.ಹೆ. ವಿಸ್ತರಣೆ ಕಾಮಗಾರಿ ಗುತ್ತಿಗೆ ವಹಿಸಿಕೊಂಡಿರುವ ಎಲ್‌ ಆ್ಯಂಡ್‌ ಟಿ. ಕಂಪೆನಿಯು ಹೊಸ ಸೇತುವೆಯನ್ನು ಷಟ್ಪಥ ಮಾಡಲು ನದಿಯಲ್ಲಿ ಕಾಮಗಾರಿ ಆರಂಭಿಸಿದ ಪರಿಣಾಮ ಉಕ್ಕಿನ ಸೇತುವೆಯ ಆಧಾರ ಸ್ತಂಭಗಳಿಗೆ ನೀರಿನ ಸೆಳೆತಕ್ಕೆ ಭಾರೀ ಒತ್ತಡ ಬೀಳುತ್ತಿದೆ ಎಂಬ ಆರೋಪ ಸ್ಥಳೀಯರದ್ದು.

2001-02ನೇ ಸಾಲಿನಲ್ಲಿ ವ್ಯಾಪಕವಾಗಿ ನಡೆದ ಅದಿರು ಸಾಗಾಟದಿಂದ ಸೇತುವೆಯ ಎರಡು ಆಧಾರ ಸ್ತಂಭಗಳಿಗೆ ಹಾನಿಯಾಗಿದೆ. ಇದರಿಂದಾಗಿ ಅಂದಿನ ಜಿಲ್ಲಾಧಿಕಾರಿ ಚಿನ್ನಪ್ಪ ಗೌಡರು ಘನ ವಾಹನ ಸಂಚಾರ ನಿಷೇಧಿಸಿ ಆದೇಶ ಹೊರಡಿಸಿ ಸೇತುವೆ ನಿರ್ವಹಣೆ ಜವಾಬ್ದಾರಿಯನ್ನು ಜಿಲ್ಲಾಡಳಿತದಿಂದ ಇಲ್ಲಿನ ಪುರಸಭೆಗೆ ಹಸ್ತಾಂತರಿಸಿದ್ದರು. ಈ ಸೇತುವೆ ದುರ್ಬಲವಾಗಿದ್ದು, ಘನ ವಾಹನ ಸಂಚಾರ ನಿಷೇಧಿಸಲಾಗಿದೆ ಎಂದು ನಾಮಫಲಕವನ್ನೂ ಹಾಕಲಾಗಿದೆ. 

ಘನ ವಾಹನ ನಿಷೇಧ
ಪಾಣೆಮಂಗಳೂರು ಉಕ್ಕಿನ ಸೇತುವೆಯಲ್ಲಿ ಘನ ವಾಹನ ಸಂಚಾರ ನಡೆಸದಂತೆ ನಾಮಫಲಕ ಅಳವಡಿಸಿದ್ದರೂ ಕದ್ದುಮುಚ್ಚಿ ಸಂಚರಿಸುವ ದುಸ್ಸಾಹದಿಂದ ಉಂಟಾಗುವ ದುರಂತಕ್ಕೆ ಅವರೇ ಹೊಣೆಗಾರರಾಗುತ್ತಾರೆ.
– ರೇಖಾ ಜೆ. ಶೆಟ್ಟಿ
ಪುರಸಭೆ ಮುಖ್ಯಾಧಿಕಾರಿ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.