ಎಸ್ಟೇಟ್ನಲ್ಲಿ ಹುಲಿ ಪ್ರತ್ಯಕ್ಷ: ಆತಂಕ
Team Udayavani, Aug 20, 2018, 12:40 PM IST
ಮೈಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಹುಣಸೂರು ವಲಯದ ಪಕ್ಕದಲ್ಲಿನ ತರಗನ್ ಎಸ್ಟೇಟ್ನಲ್ಲಿ ಕಳೆದೊಂದು ವಾರದಿಂದ ಹುಲಿ ಕಾಣಿಸಿಕೊಂಡಿರುವುದಲ್ಲದೆ, ಈಗಾಗಲೆ ಎರಡು ಜಾನುವಾರುಗಳನ್ನು ತಿಂದು ಹಾಕಿದ್ದು, ಮತ್ತೆರಡು ಜಾನುವಾರುಗಳನ್ನು ಗಾಯಗೊಳಿಸಿ ಆತಂಕ ಮೂಡಿಸಿತ್ತು.
ಅಲ್ಲದೆ ಹಸುವೊಂದರ ಮೇಲೆ ದಾಳಿ ಮಾಡುತ್ತಿದ್ದ ಹುಲಿಯನ್ನು ಕಂಡಿರುವ ಗ್ರಾಮಸ್ಥರೊಬ್ಬರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಹುಲಿ ಯೋಜನೆ ಕ್ಷೇತ್ರ ನಿರ್ದೇಶಕ ಆರ್.ರವಿಶಂಕರ್ ಮಾರ್ಗದರ್ಶನದಲ್ಲಿ ಸಿಬ್ಬಂದಿಗಳು ಮತ್ತಿಗೋಡು ವಲಯದ ಕಂಠಾಪುರ ಶಿಬಿರದ ಸಾಕಾನೆಗಳಾದ ಅಭಿಮನ್ಯು, ಬಲರಾಮ, ಭೀಮ, ಗಣೇಶ, ದ್ರೋಣ ಆನೆಗಳ ಸಹಾಯದಿಂದ ಪ್ರತ್ಯೇಕ ತಂಡ ರಚಿಸಿಕೊಂಡು 400 ಎಕರೆಗೂ ಹೆಚ್ಚು ಪ್ರದೇಶದ ತರಗನ್ ಎಸ್ಟೇಟ್ನಲ್ಲಿ ಹುಲಿ ಪತ್ತೆಗೆ ಕೂಂಬಿಂಗ್ ನಡೆಯುತ್ತಿದೆ.
ಹುಲಿಯಿಂದಾಗಿ ಕಚುವಿನಹಳ್ಳಿ, ನೇರಳೇಗುಪ್ಪೆ, ಕೆ.ಜಿ. ಹಬ್ಬನಕುಪ್ಪೆ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಜನತೆ ಆತಂಕಗೊಂಡಿದ್ದಾರೆ. ಸ್ಥಳದಲ್ಲಿ ಸಿ.ಎಫ್.ರವಿಶಂಕರ್, ವೈಲ್ಡ್ ಲೈಫ್ ವಾರ್ಡನ್ ಕೃತಿಕ ಸೇರಿದಂತೆ ತಂಡ ಕಾರ್ಯಾಚರಣೆಗೆ ಮುಂದಾಗಿದೆ. ಕೆ.ಜಿ.ಹಬ್ಬನಕುಪ್ಪೆ ಎಸ್ಟೇಟ್ನಲ್ಲಿ ಕಾಣಿಸಿಕೊಂಡಿರುವ ಹುಲಿಯು ಎಸ್ಟೇಟ್ನ ಸುತ್ತಮುತ್ತ ಅಡ್ಡಾಡುತ್ತಿರುವ ಮಾಹಿತಿ ಸಿಕ್ಕಿದೆ.
ಅಗತ್ಯ ವಿರುವೆಡೆ ಸಿ.ಸಿ.ಕ್ಯಾಮೆರಾ ಅಳವಡಿಸಲಾಗಿದೆ. ಈಗಾಗಲೆ ಹುಲಿಯನ್ನು ಉದ್ಯಾನದೊಳಗೆ ಸೇರಿಸಲು ಪ್ರಯತ್ನ ನಡೆದಿದೆ. ಪರಿಸ್ಥಿತಿಯನ್ನು ನೋಡಿಕೊಂಡು ಬಗ್ಗೆ ಹಿರಿಯ ಅ ಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ವಹಿಸಲಾಗುವುದೆಂದು ನಾಗರಹೊಳೆ ಉದ್ಯಾನವನದ ಹುಲಿ ಯೋಜನೆ ಕ್ಷೇತ್ರ ನಿರ್ದೇಶಕ ಆರ್.ರವಿಶಂಕರ್ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.