ದಿನಕರ್‌ ಜೊತೆ ಸೆಲ್ಫಿ ಮಾತು


Team Udayavani, Aug 20, 2018, 12:42 PM IST

dinakar.jpg

“ಸಾರಥಿ’ ನಂತರ ನಿರ್ದೇಶನದಿಂದ ದೂರವೇ ಇದ್ದ ದಿನಕರ್‌ ತೂಗುದೀಪ, ಈಗ ತಮ್ಮ ಹೊಸ ಚಿತ್ರ “ಲೈಫ್ ಜೊತೆ ಒಂದ್‌ ಸೆಲ್ಫಿ’ ಬಿಡುಗಡೆ ಮಾಡುವುದಕ್ಕೆ ಸಜ್ಜಾಗುತ್ತಿದ್ದಾರೆ. ತಮ್ಮ ತೂಗುದೀಪ ಸಂಸ್ಥೆ ಮೂಲಕ ಈ ವಾರ ರಾಜ್ಯಾದ್ಯಂತ ಸುಮಾರು 160 ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡುತ್ತಿದ್ದಾರೆ. ಇಷ್ಟಕ್ಕೂ ದಿನಕರ್‌ ಈ ಏಳು ವರ್ಷಗಳ ಕಾಲ ಏನು ಮಾಡುತ್ತಿದ್ದರು ಎಂಬ ಪ್ರಶ್ನೆ ಬರಬಹುದು.

“ಸಾರಥಿ’ ಬಳಿಕ “ಬುಲ್‌ ಬುಲ್‌’ ಮತ್ತು “ಮದುವೆಯ ಮಮತೆಯ ಕರೆಯೋಲೆ’ ಚಿತ್ರ ನಿರ್ಮಿಸಿದರು. ಆ ಬಳಿಕ “ಚಕ್ರವರ್ತಿ’ ಚಿತ್ರದಲ್ಲಿ ನಟಿಸಿದರು. ಅದರೊಂದಿಗೆ ವಿತರಣೆ ಮಾಡುವ ಮೂಲಕ ಬಿಜಿಯಾಗಿದ್ದರು. ಇದೇ ಸಮಯದಲ್ಲಿ ಅವರ ಪತ್ನಿ ಮಾನಸ ಕಥೆ ಇಷ್ಟವಾಗಿ, ಅದನ್ನು ತೆರೆಯ ಮೇಲೆ ತಂದಿದ್ದಾರೆ. ಈ ಕುರಿತು ಮಾತನಾಡುವ ಅವರು, “ನನ್ನ ಮೊದಲ ಚಿತ್ರ “ಜೊತೆ ಜೊತೆಯಲಿ’ ಲವ್‌ಸ್ಟೋರಿ ಆಗಿತ್ತು.

“ಸಾರಥಿ’ ಪಕ್ಕಾ ಮಾಸ್‌ ಚಿತ್ರವಾಗಿತ್ತು. “ನವಗ್ರಹ’ ಥ್ರಿಲ್ಲರ್‌ ಆಗಿತ್ತು. ಮೂರು ಬೇರೆ ರೀತಿಯ ಕಥೆ ಇದ್ದ ಚಿತ್ರಗಳು. ಹಾಗಾಗಿ ಈ ಮೂರು ಕಥೆ ಹೊರತುಪಡಿಸಿ ಬೇರೆ ಕಥೆಗೆ ಹುಡುಕುತ್ತಿದ್ದೆ. ಮಾನಸ ಕಥೆ ಇಷ್ಟವಾಯ್ತು. ಅದಕ್ಕೇ ಈ ಚಿತ್ರ ಮಾಡಿದೆ’ ಎನ್ನುತ್ತಾರೆ ದಿನಕರ್‌. “ಈ ಚಿತ್ರದಲ್ಲಿ ಮೂರು ಪಾತ್ರಗಳು ಹೈಲೆಟ್‌. ಪ್ರೇಮ್‌ ನಕುಲ್‌ ಎಂಬ ಪಾತ್ರ ಮಾಡಿದ್ದಾರೆ. ಒಂದು ಮಲ್ಟಿನ್ಯಾಷನಲ್‌ ಕಂಪೆನಿ ಉದ್ಯೋಗಿ ಅವರು.

ಅವರಿಗೊಂದು ಆಸೆ, ತಾನು ನಿರ್ದೇಶಕ ಆಗಬೇಕು ಅನ್ನೋದು. ಇನ್ನು ಪ್ರಜ್ವಲ್‌, ವಿರಾಟ್‌ ಎನ್ನುವ ಪಾತ್ರ ಮಾಡಿದ್ದಾರೆ. ಅವರು ಮಲ್ಟಿಮಿಲೇನಿಯರ್‌. ಲೈಫ‌ಲ್ಲಿ ಎಲ್ಲವೂ ಇದೆ. ಆದರೆ ಏನೋ ಒಂದು ಕೊರಗು. ಹರಿಪ್ರಿಯಾ ಅವರದೂ ಒಂದು ಸಮಸ್ಯೆ. ಈ ಮೂವರು ಲೈಫ‌ಲ್ಲಿ ಒಂದಲ್ಲ ಒಂದು ಕೊರಗಿನಲ್ಲಿದ್ದವರು. ಒಂದು ಬ್ರೇಕ್‌ ತೆಗೆದುಕೊಂಡು ದೂರದ ಗೋವಾಗೆ ಹೋಗುತ್ತಾರೆ.

ಮೂವರೂ ಅಲ್ಲಿ ಫ್ರೆಂಡ್‌ ಆಗ್ತಾರೆ. ಒಬ್ಬೊಬ್ಬರ ಕಥೆ ಅಲ್ಲಿ ಬಿಚ್ಚಿಕೊಳ್ಳುತ್ತವೆ. ಬೇರೆ ಕಡೆಯಿಂದ ಬಂದ ಮೂವರು ಗೋವಾದಲ್ಲಿ ಭೇಟಿಯಾಗುತ್ತಾರೆ. ಒಂದೇ ಕಾಮನ್‌ ವಿಷಯ ಅಂದರೆ, ಮೂವರು ಕನ್ನಡಿಗರು ಅನ್ನೋದು. ಅಲ್ಲಿಂದ ಗೆಳೆತನ ಹೆಚ್ಚಾಗುತ್ತೆ. ಮೊದಲರ್ಧ ಸಮಸ್ಯೆ ಹಂಚಿಕೊಂಡರೆ, ದ್ವಿತಿಯಾರ್ಧ ಅದಕ್ಕೆ ಪರಿಹಾರ ಸಿಗುತ್ತೆ. ಅದು ಏನು ಅನ್ನೋದೇ ಕಥೆ’ ಎಂಬುದು ದಿನಕರ್‌ ಮಾತು.

“ಪ್ರಜ್ವಲ್‌ ಅವರ “ಸಿಕ್ಸರ್‌’ ನೋಡಿದಾಗಿನಿಂದಲೂ ಅವನ ಜೊತೆ ಚಿತ್ರ ಮಾಡಬೇಕು ಎಂಬ ಯೋಚನೆ ಇತ್ತು. ಅದು ಈಗ ಈಡೇರಿದೆ. ಇನ್ನು, ಪ್ರೇಮ್‌ ಜೊತೆ “ಜೊತೆ ಜೊತೆಯಲಿ’ ಮಾಡಿದ ನಂತರ ಇಬ್ಬರೂ ಒಂದು ಸಿನಿಮಾ ಮಾಡಬೇಕು ಅಂತ ಮಾತಾಡಿದ್ದೆವು. ಆಗಿರಲಿಲ್ಲ. ಹರಿಪ್ರಿಯಾ ಒಳ್ಳೇ ಕಲಾವಿದೆ ಅನ್ನೋದು ಅವರ ಹಿಂದಿನ “ಉಗ್ರಂ’, “ನೀರ್‌ದೋಸೆ’ ನೋಡಿ ಗೊತ್ತಾಯ್ತು. ಆ ಹುಡುಗಿಯಲ್ಲಿ ಮೆಚೂರಿಟಿ ಇದೆ.

ಮೂವರು ಪಾತ್ರಕ್ಕೆ ಸರಿಯಾದ ಆಯ್ಕೆ ಎನಿಸಿ ಸಿನಿಮಾ ಮಾಡಿದೆ. ಮೊದಲು ನಾನು ಹೊಸಬರ ಜೊತೆ ಮಾಡಬೇಕು ಅಂದುಕೊಂಡಿದ್ದೆ. ಆದರೆ, ನಿರ್ಮಾಪಕ ಸಮೃದ್ಧಿ ಮಂಜುನಾಥ್‌ ಅವರು, ಮೊದಲ ಚಿತ್ರ, ಸ್ಟಾರ್‌ ಇದ್ದರೆ ಚೆನ್ನಾಗಿರುತ್ತೆ ಅಂದರು. ಒಂದೇ ದಿನದಲ್ಲಿ ಈ ಮೂವರು ಫಿಕ್ಸ್‌ ಆಗಿಬಿಟ್ಟರು. ಒಟ್ಟು 55 ದಿನಗಳ ಕಾಲ ಗೋವಾ, ಚಿಕ್ಕಮಗಳೂರು, ಬೆಂಗಳೂರು ಸುತ್ತಮುತ್ತ ಚಿತ್ರೀಕರಣವಾಗಿದೆ’ ಎಂದು ಮಾಹಿತಿ ಕೊಡುತ್ತಾರೆ ದಿನಕರ್‌.

“ಮದುವೆ ಆಗಿ ಇಷ್ಟು ವರ್ಷ ಆಯ್ತು, ಏಳೆಂಟು ಸಲ ಜಗಳ ಆಡಿರಬಹುದಷ್ಟೇ. ಆದರೆ, ಈ ಸಿನಿಮಾ ಮಾಡುವಾಗ, ಸುಮಾರು 150 ಸಲ ಜಗಳ ಆಡಿದ್ದೇನೆ. ಕಾರಣ, ಕಥೆಗಾಗಿ. ಕಥೆ ಹೀಗೆ ಇರಬೇಕು, ಹೀಗೇ ಬರಬೇಕು ಎಂಬ ಆದೇಶ ಅವರದು. ನಾನು ನಿರ್ದೇಶಕ, ನನಗೂ ಗೊತ್ತಿದೆ, ಮಾಡಿ ತೋರಿಸ್ತೀನಿ ಅಂತ ಜಗಳ ಆಡಿದ್ದುಂಟು. ಪ್ರತಿ ಪಾತ್ರವನ್ನೂ ಡೀಟೆಲ್‌ ಆಗಿ ಡಿಸೈನ್‌ ಮಾಡಿದ್ದರು.

ಅದು ಇಷ್ಟ ಆಯ್ತು. ಎಡಿಟ್‌ ಮಾಡಿ ಸಿನಿಮಾ ತೋರಿಸಿದಾಗ ಮಾನಸ ಖುಷಿಯಾದರು. ಒಳ್ಳೆಯ ತಂಡ ಜೊತೆ ಚಿತ್ರ ಮಾಡಿದ್ದಕ್ಕೆ ನನಗೂ ಹೆಮ್ಮೆ ಇದೆ ಎಂಬುದು ದಿನಕರ್‌ ಮಾತು. ಈ ಚಿತ್ರಕ್ಕೆ ವಿ. ಹರಿಕೃಷ್ಣ ಸಂಗೀತ ನೀಡಿದರೆ, ನಿರಂಜನ್‌ಬಾಬು ಛಾಯಾಗ್ರಹಣ ಮಾಡಿದ್ದಾರೆ. ಕೆ.ಎಂ.ಪ್ರಕಾಶ್‌ ಸಂಕಲನವಿದೆ. 

ಟಾಪ್ ನ್ಯೂಸ್

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

20

UV Fusion: ವಿಘ್ನ ವಿನಾಯಕನಿಗೆ ನಮನ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Ramesh aravind: ಇಡೀ ಸಿನಿಮಾರಂಗದ ದೂಷಣೆ ಬೇಡ

Ramesh aravind: ಇಡೀ ಸಿನಿಮಾರಂಗದ ದೂಷಣೆ ಬೇಡ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

2-desiswara-1

Teacher: ಗುರಿಯೊಂದಿಗೆ ಗುರುಕೃಪೆಯಿದ್ದರೆ ಯಶ

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

1-teachers-day

Teacher’s Day ವಿಶೇಷ: ವಿಚಾರ ವಿನಿಮಯ ಶಿಕ್ಷಣದ ಸುತ್ತ: ಆಲೋಚನೆಯಲ್ಲಿ ವೈವಿಧ್ಯತೆ ಇರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.