ವನಿತಾ ಟೀಮ್‌ ಬ್ಯಾಡ್ಮಿಂಟನ್‌ ಭಾರತಕ್ಕೆ ಕ್ವಾರ್ಟರ್‌ ಫೈನಲ್‌ ಆಘಾತ


Team Udayavani, Aug 21, 2018, 6:20 AM IST

pti8202018000053a.jpg

ಜಕಾರ್ತಾ: ಏಶ್ಯನ್‌ ಗೇಮ್ಸ್‌ ವನಿತಾ ಟೀಮ್‌ ಬ್ಯಾಡ್ಮಿಂಟನ್‌ ಸ್ಪರ್ಧೆಯಲ್ಲಿ ಜಪಾನ್‌ ವಿರುದ್ಧ ಎಡವಿದ ಭಾರತ ಪದಕ ರೇಸ್‌ನಿಂದ ಹೊರಬಿದ್ದಿದೆ. ಸೋಮವಾರ ನಡೆದ ಮುಖಾಮುಖೀಯಲ್ಲಿ ಜಪಾನ್‌ 3-1 ಅಂತರದಿಂದ ಭಾರತವನ್ನು ಮಣಿಸಿ ಸೆಮಿಫೈನಲ್‌ಗೆ ನೆಗೆಯಿತು.

ಕಳೆದ ಏಶ್ಯಾಡ್‌ನ‌ಲ್ಲಿ ಕಂಚಿನ ಪದಕ ಜಯಿಸಿದ್ದ ವನಿತಾ ತಂಡದ ಮೇಲೆ ಈ ಬಾರಿ ಇನ್ನೂ ಹೆಚ್ಚಿನ ನಿರೀಕ್ಷೆ ಇತ್ತು. ಆದರೆ ಪಿ.ವಿ. ಸಿಂಧು ಹೊರತುಪಡಿಸಿ ಉಳಿದವರೆಲ್ಲರೂ ಸೋಲಿನ ಸುಳಿಗೆ ಸಿಲುಕಿದರು. ವಿಶ್ವದ ಬಲಿಷ್ಠ ತಂಡಗಳಲ್ಲಿ ಒಂದಾಗಿರುವ, ಕೂಟದ ಅಗ್ರ ಶ್ರೇಯಾಂಕಿತ ತಂಡವೂ ಆಗಿರುವ ಜಪಾನ್‌ ತನ್ನ ಛಾತಿಗೆ ತಕ್ಕ ಪ್ರದರ್ಶನ ನೀಡಿತು.

ಗೆದ್ದದ್ದು ಸಿಂಧು ಮಾತ್ರ
ಆರಂಭಿಕ ಸಿಂಗಲ್ಸ್‌ನಲ್ಲಿ ಪಿ.ವಿ. ಸಿಂಧು 21-18, 21-19 ಅಂತರದಿಂದ ಅಕಾನೆ ಯಮಗುಚಿ ಅವರನ್ನು ಮಣಿಸಿ ಭಾರತಕ್ಕೆ 1-0 ಮುನ್ನಡೆ ಒದಗಿಸಿದರು. ಆದರೆ ಭಾರತದ ಗೆಲುವಿನ ಆಟ ಈ ಪಂದ್ಯಕ್ಕಷ್ಟೇ ಸೀಮಿತಗೊಂಡಿತು. ತಿರುಗಿ ಬಿದ್ದ ಜಪಾನ್‌ ಮುಂದಿನ ಮೂರೂ ಪಂದ್ಯಗಳಲ್ಲಿ ಗೆದ್ದು ಮುನ್ನಡೆಯಿತು.ವನಿತಾ ಡಬಲ್ಸ್‌ನಲ್ಲಿ ಎನ್‌. ಸಿಕ್ಕಿ ರೆಡ್ಡಿ-ಆರತಿ ಸುನೀಲ್‌ ಅವರನ್ನು ಯುಕಿ ಫ‌ುಕುಶಿಮಾ-ಸಯಾಕಾ ಹಿರೋಟಾ 21-15, 21-6 ಅಂತರದಿಂದ ಮಣಿಸಿದರು. ಸ್ಪರ್ಧೆ 1-1 ಸಮಬಲಕ್ಕೆ ಬಂತು.

ಸೈನಾ ನೆಹ್ವಾಲ್‌ಗೆ ಸೋಲು
ನಿರ್ಣಾಯಕ ದ್ವಿತೀಯ ಸಿಂಗಲ್ಸ್‌ನಲ್ಲಿ ನಜೋಮಿ ಒಕುಹರಾ ವಿರುದ್ಧ  ಆಡಲಿಳಿದ ಸೈನಾ ನೆಹ್ವಾಲ್‌ ಮೇಲೆ ವಿಪರೀತ ನಿರೀಕ್ಷೆ ಇತ್ತು. ಆದರೆ 3 ಗೇಮ್‌ಗಳ ಕಾದಾಟ ನಡೆಸಿದರೂ ಗೆಲುವು ಒಲಿಯಲಿಲ್ಲ. ಸೈನಾ 11-21, 25-23, 16-21 ಅಂತರದ ಸೋಲು ಕಾಣಬೇಕಾಯಿತು.

“ಮಸ್ಟ್‌ ವಿನ್‌’ ಪಂದ್ಯದಲ್ಲಿ ಪಿ.ವಿ. ಸಿಂಧು-ಅಶ್ವಿ‌ನಿ ಪೊನ್ನಪ್ಪ ಡಬಲ್ಸ್‌ ಆಡಲಿಳಿದರು. ಆದರೆ ಒಲಿಂಪಿಕ್‌ ಚಾಂಪಿಯನ್ಸ್‌ ಮಿಸಾಕಿ ಮತ್ಸುಟೊಮೊ-ಅಯಾಕಾ ತಕಹಾಶಿ ವಿರುದ್ಧ ಇವರ ಆಟ ನಡೆಯಲಿಲ್ಲ. 13-21, 12-21 ಅಂತರದ ಸೋಲುಂಡ ಸಿಂಧು-ಅಶ್ವಿ‌ನಿ ಭಾರತದ ಹೋರಾಟವನ್ನು ನಿರಾಶಾದಾಯಕವಾಗಿ ಮುಗಿಸಿದರು.

“ಜಪಾನ್‌ ವಿರುದ್ಧ ಮೊದಲ ಪಂದ್ಯವಾಡುವುದು ಯಾವತ್ತೂ ಅತ್ಯಂತ ಕಠಿನ ಸವಾಲು. ಗೆಲುವಿನ ಆರಂಭವನ್ನೇ ಪಡೆದೆವು. ಡಬಲ್ಸ್‌ ಆಟಗಾರ್ತಿಯರ ಪ್ರದರ್ಶನವೂ ಉತ್ತಮ ಮಟ್ಟದಲ್ಲಿತ್ತು. ಸೈನಾ ಕೂಡ ನೂರು ಪ್ರತಿಶತ ಸಾಮರ್ಥ್ಯ ತೋರಿದರು. ಆದರೆ ತಾಂತ್ರಿಕವಾಗಿ ಜಪಾನಿಯರ ಆಟ ಮೇಲ್ಮಟ್ಟದಲ್ಲಿತ್ತು’ ಎಂಬುದಾಗಿ ಸಿಂಧು ಅಭಿಪ್ರಾಯಪಟ್ಟರು.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ

Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ

Harman-Kuar

Womens Cricket: ನ್ಯೂಜಿಲ್ಯಾಂಡ್‌ ಎದುರಿನ ಏಕದಿನ ಸರಣಿಗೆ ನಾಯಕತ್ವ ಉಳಿಸಿಕೊಂಡ ಕೌರ್‌

Pro-kabbaddi

Pro Kabaddi League: ಇಂದಿನಿಂದ 11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್‌ ಹವಾ

South-Affrica

Womens T20 World Cup: 6 ಬಾರಿ ಚಾಂಪಿಯನ್‌ ಆಸ್ಟ್ರೇಲಿಯಾ ಮಣಿಸಿ ಫೈನಲ್‌ಗೇರಿದ ದ.ಆಫ್ರಿಕಾ

1-wqewqew

Virat Kohli ಸಮಸ್ಯೆಗಳನ್ನು ಜಟಿಲಗೊಳಿಸಿದ್ದಾರೆ!; ಖ್ಯಾತ ಕ್ರಿಕೆಟ್ ವಿಶ್ಲೇಷಕ ಟೀಕೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.