ಕ್ರೀಡಾ ವಸತಿ ನಿಲಯಕ್ಕೆ ಆಯ್ಕೆ ವಯೋಮಿತಿ ಅವೈಜ್ಞಾನಿಕ


Team Udayavani, Aug 20, 2018, 5:29 PM IST

20-agust-21.jpg

ಬ್ಯಾಡಗಿ: ಕೇಂದ್ರ ಸರ್ಕಾರ ಕ್ರೀಡಾ ವಸತಿ ನಿಲಯಗಳಲ್ಲಿ ತರಬೇತಿ ಪಡೆಯುವ ವಿದ್ಯಾರ್ಥಿಗಳ ಗರಿಷ್ಟ ವಯೋಮಿತಿ 25ರ ವರೆಗೆ ಹೆಚ್ಚಿಸಬೇಕು. ಅಂದಾಗ ಮಾತ್ರ ವಿದ್ಯಾರ್ಥಿ ಕ್ರೀಡೆಯಲ್ಲಿ ಪರಿಪೂರ್ಣತೆ ಕಂಡುಕೊಳ್ಳಲು ಸಾಧ್ಯ, ಇದೊಂದು ಅವೈಜ್ಞಾನಿಕ ಪದ್ಧತಿಯಾಗಿದ್ದು ಕೂಡಲೇ ಸಂಸದರು, ಕೇಂದ್ರದ ಕ್ರೀಡಾ ಸಚಿವರು ಈ ಕುರಿತು ಗಂಭೀರ ಚರ್ಚೆ ನಡೆಸುವುದು ಅಗತ್ಯ ಎಂದು ಜಿಲ್ಲಾ ದೈಹಿಕ ಶಿಕ್ಷಣ ಸಂಯೋಜಕ ಬಿಎಚ್‌ಎನ್‌ ರಾವಳ ಅಭಿಪ್ರಾಯ ವ್ಯಕ್ತಪಡಿಸಿದರು.

ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಹಾವೇರಿ ಜಿಲ್ಲಾ ಅಮೆಚೂರ ಕಬಡ್ಡಿ ಸಂಸ್ಥೆ ಬ್ಯಾಡಗಿ ಹಾಗೂ ತೀರ್ಪುಗಾರರ ಮಂಡಳಿ ಆಶ್ರಯದಲ್ಲಿ ಏರ್ಪಡಿಸಿದ್ದ ಜ್ಯೂನಿಯರ್‌ ಬಾಲಕ-ಬಾಲಕಿಯರ ಆಯ್ಕೆ ಟ್ರಯಲ್ಸ್‌ಗೆ ಚಾಲನೆ ನೀಡಿ ಮಾತನಾಡಿದ ಅವರು, ಈಗಿನ ನಿಯಮದಂತೆ 15 ರಿಂದ 19 ವಯೋಮಾನದ ಕ್ರೀಡಾಟುಗಳಿಗೆ ಮಾತ್ರ ಕ್ಷತ್ರಿಯ  ಹಾಸ್ಟೆಲ್‌ಗ‌ಳಲ್ಲಿ ತರಬೇತಿ ಪಡೆಯಲು ಅವಕಾಶವಿದೆ, 15 ನೇ ವಯಸ್ಸಿಗೆ ಕ್ರೀಡಾಪಟು ಇನ್ನೂ ಪ್ರವರ್ಧಮಾನಕ್ಕೆ ಬಂದಿರುವುದಿಲ್ಲ, ಇಂತಹ ಸಂದರ್ಭದಲ್ಲಿ ಆತನ ಶಿಕ್ಷಣ ಎಲ್ಲಿ ಅತಂತ್ರವಾಗುವುದೋ ಎಂಬ ಭಯದಲ್ಲಿ ಬಹುತೇಕ ಪಾಲಕರು ವಸತಿ ಶಾಲೆಗೆ ಸೇರಿಸಲು ಹಿಂಜರಿಯುತ್ತಾರೆ. ಹೀಗಾಗಿ ಇದೊಂದು ಅವೈಜ್ಞಾನಿಕ ಪದ್ಧತಿಯಾಗಿದ್ದು, ಕನಿಷ್ಟ 16 ರಿಂದ ಗರಿಷ್ಟ 25ಕ್ಕೆ ವಯೋಮಿತಿ ಹೆಚ್ಚಿಸುವುದು ಸೂಕ್ತ ಎಂದರು.

ಕಬಡ್ಡಿ ಸಂಸ್ಥೆಯ ಖಜಾಂಚಿ ಗಂಗಣ್ಣ ಎಲಿ ಮಾತನಾಡಿ, 15ನೇ ವಯಸ್ಸಿಗೆ ಕ್ರೀಡಾಪಟು ಇನ್ನೂ 9ನೇ ತರಗತಿ ಅಭ್ಯಾಸದಲ್ಲಿರುತ್ತಾನೆ. ಬಾಲ್ಯಾವಸ್ಥೆಯಿಂದ ಹೊರಬಂದಿರನು. ಇಂತಹ ವಯಸ್ಸಿನಲ್ಲಿ ಕ್ಷತ್ರಿಯ ಹಾಸ್ಟೆಲ್‌ಗೆ ಆಯ್ಕೆಯಾದ ಕ್ರೀಡಾಪಟುವಿನ ಶೈಕ್ಷಣಿಕ ಜೀವನದ ಪ್ರಮುಖ ಘಟ್ಟ 10ನೇ ತರಗತಿ ಫಲಿತಾಂಶದ ಮೇಲೆ ದುಷ್ಪರಿಣಾಮ ಬೀರುವುದು ನಿಶ್ಚಿತ ಎಂದರು.

ಎಲ್‌.ಎಸ್‌.ಹರಳಹಳ್ಳಿ ಮಾತನಾಡಿ, ಕ್ರೀಡಾಪಟುವಿನ ಕನಿಷ್ಟ ವಿದ್ಯಾರ್ಹತೆ ಎಸ್‌ಎಸ್‌ಎಲ್‌ಸಿ ನಿಗದಿಪಡಿಸಿದಲ್ಲಿ 16ನೇ ವಯಸ್ಸಿನ ಬಳಿಕ ಕ್ರೀಡಾಪಟು ತನ್ನದೇ ಆದ ಜವಾಬ್ದಾರಿಗಳನ್ನು ನಿಭಾಯಿಸಿಕೊಳ್ಳಲು ಸಾಧ್ಯ. ಅಲ್ಲದೇ ಕನಿಷ್ಟ 10 ವರ್ಷ ಆತ ಕ್ರೀಡಾ ವಸತಿ ಶಾಲೆಯಲ್ಲಿ ತರಬೇತಿ ಪಡೆದುಕೊಂಡಲ್ಲಿ ಒಬ್ಬ ಪರಿಪೂರ್ಣ ಕ್ರೀಡಾಪಟುವಾಗಿ ಸಾಧನೆ ಮಾಡಬಹುದು. ಅಲ್ಲದೇ ಸರ್ಕಾರ ಮತ್ತು ಪಾಲಕರ ಉದ್ದೇಶವೂ ಕೂಡ ಸಫಲತೆ ಕಾಣಲಿದೆ. ಈ ಎಲ್ಲ ಕಾರಣಗಳಿಂದ ಗರಿಷ್ಟ ವಯೋಮಾನವನ್ನು 25ಕ್ಕೆ ಹೆಚ್ಚಿಸುವುದು ಬಹಳಷ್ಟು ಅವಶ್ಯವಿದೆ ಎಂದರು.

ತೀರ್ಪುಗಾರರ ಮಂಡಳಿ ಅಧ್ಯಕ್ಷ ಸಿ.ಜಿ.ಚಕ್ರಸಾಲಿ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರಾಷ್ಟ್ರೀಯ ಕ್ರೀಡಾ ನೀತಿ ಜಾರಿಗೆ ತರುವ ಉದ್ದೇಶದಿಂದ ಸಮರ್ಪಕ ವರದಿ ಅನುಷ್ಠಾನಗೊಳಿಸಲು ಮುಂದಾಗಿರುವ ಕ್ರಮ ಸ್ವಾಗತಾರ್ಹ, ಆದರೆ ರಾಷ್ಟ್ರೀಯ ಕ್ರೀಡಾಪಟುಗಳು ತರಬೇತುದಾರರು, ನಿರ್ಣಾಯಕರು, ಕ್ರೀಡಾ ಸಂಸ್ಥೆಗಳ ಪದಾಧಿಕಾರಿಗಳ ಜೊತೆ ಸಭೆಗಳನ್ನು ನಡೆಸುವುದರಲ್ಲಿಯೇ ಕಾಲಹರಣ ಮಾಡುತ್ತಿರುವುದು ದುರದೃಷ್ಟಕರ, ಎಲ್ಲದರಲ್ಲಿಯೂ ಲೋಪ ದೋಷಗಳಿರುವುದು ಸಹಜ, ನಂತರ ಬದಲಾವಣೆ ಮಾಡಿಕೊಳ್ಳಲು ಸಾಧ್ಯತೆ ಇದ್ದು, ಮೊದಲು ರಾಷ್ಟ್ರೀಯ ಕ್ರೀಡಾ ನೀತಿ ಜಾರಿಗೆ ತರುವಂತೆ ಆಗ್ರಹಿಸಿದರು.

ಆಯ್ಕೆ ಪ್ರಕ್ರಿಯೆಯಲ್ಲಿ ಹಾವೇರಿ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಒಟ್ಟು 204 ಬಾಲಕರು ಹಾಗೂ 42 ಬಾಲಕಿಯರು ಪಾಲ್ಗೊಂಡಿದ್ದು ಅದರಲ್ಲಿ ಅತ್ಯುತ್ತಮ ತಲಾ 6 ಬಾಲಕ ಬಾಲಕಿಯರನ್ನು ಆಯ್ಕೆ ಮಾಡುವ ಮೂಲಕ ಬೆಂಗಳೂರಿಗೆ ಕಳುಹಿಸಿಕೊಡಲಾಯಿತು. ರಾಷ್ಟ್ರಮಟ್ಟದ ತೀರ್ಪುಗಾರರಾದ ಎಂ.ಆರ್‌. ಕೋಡಿಹಳ್ಳಿ, ಮಹ್ಮದಲಿ ಜಿನ್ನಾ ಹಲಗೇರಿ, ಎಚ್‌ .ಬಿ.ದಾಸರ, ಎ.ಎಸ್‌.ಅಕ್ಕೂರ, ಬಸವರಾಜಪ್ಪ, ಮಂಜುಳ ಭಜಂತ್ರಿ, ರಾಜೇಶ ಮಾಳಗಿ, ಮಾರುತಿ ಜನ್ನು, ನಿಂಗಪ್ಪ ಯಲಿಮಣ್ಣನವರ, ಜಮೀರ ರಿತ್ತಿ, ಹಿರಿಯ ಕ್ರೀಡಾಪಟುಗಳಾದ ಸುಭಾಸ್‌ ಮಾಳಗಿ, ಜುಲ್ಪೀಕರ್‌ ಮೆಡ್ಲೇರಿ, ಸುಭಾಸ್‌ ಗಂಗಮ್ಮನವರ ಹಾಗೂ ಇನ್ನಿತರರು ಉಪಸ್ಥಿತರಿದ್ದರು. ರಾಷ್ಟ್ರಮಟ್ಟದ ತೀರ್ಪುಗಾರ ಎ.ಟಿ.ಪೀಠದ ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

P.-Joshi

Bengaluru Jail: ಸರಕಾರದಿಂದಲೇ ದರ್ಶನ್‌ ಕೇಸ್‌ ಫೋಟೋ ವೈರಲ್‌: ಪ್ರಹ್ಲಾದ್‌ ಜೋಶಿ ಕಿಡಿ

Dharwad: ಮಹದಾಯಿ ಬಗ್ಗೆ ವನ್ಯಜೀವಿ ಮಂಡಳಿ ನಿರ್ಲಕ್ಷ್ಯ: ಸಚವ‌ ಲಾಡ್ ಕಿಡಿ

Dharwad: ಮಹದಾಯಿ ಬಗ್ಗೆ ವನ್ಯಜೀವಿ ಮಂಡಳಿ ನಿರ್ಲಕ್ಷ್ಯ: ಸಚವ‌ ಲಾಡ್ ಕಿಡಿ

Dharwad;ವೀರಶೈವ ಮಹಾಸಭೆಗೆ ಸದ್ಯಕ್ಕಿಲ್ಲ ಆಡಳಿತಾತ್ಮಕ ಅಧಿಕಾರ; ಜಿಎಂಎಫ್‌ಸಿ ನ್ಯಾಯಾಲಯ ಆದೇಶ

Dharwad;ವೀರಶೈವ ಮಹಾಸಭೆಗೆ ಸದ್ಯಕ್ಕಿಲ್ಲ ಆಡಳಿತಾತ್ಮಕ ಅಧಿಕಾರ; ಜಿಎಂಎಫ್‌ಸಿ ನ್ಯಾಯಾಲಯ ಆದೇಶ

Hubli; ಬ್ಯಾಂಕ್‌ ದೋಚಲು ಯತ್ನಸಿದ ವ್ಯಕ್ತಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಪೊಲೀಸರು

Hubli; ಬ್ಯಾಂಕ್‌ ದೋಚಲು ಯತ್ನಸಿದ ವ್ಯಕ್ತಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಪೊಲೀಸರು

Hubballi: ಮಲಪ್ರಭಾ ಬಚಾವೋ ಆಂದೋಲನಕ್ಕೆ ಚಿಂತನೆ

Hubballi: ಮಲಪ್ರಭಾ ಬಚಾವೋ ಆಂದೋಲನಕ್ಕೆ ಚಿಂತನೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.