ಸಚಿವರಿಂದ ಭತ್ತದ ಯಾತ್ರೀಕೃತ ನಾಟಿ ಪ್ರಾತ್ಯಕ್ಷಿಕೆ ವೀಕ್ಷಣೆ


Team Udayavani, Aug 21, 2018, 6:00 AM IST

2008kdpp5.jpg

ಕುಂದಾಪುರ: ಹೆಮ್ಮಾಡಿಯ ಸಂತೋಷನಗರದ ಬುಗ್ರಿಕಡುವಿಗೆ ಸೋಮವಾರ ಭೇಟಿ ನೀಡಿದ ರಾಜ್ಯ ಕೃಷಿ ಸಚಿವ ಶಿವಶಂಕರ ರೆಡ್ಡಿ ಅವರಿಗೆ ರೈತರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವಂತೆ ಉಡುಪಿ ಜಿಲ್ಲಾ ಕೃಷಿಕ ಸಮಾಜದ ವತಿಯಿಂದ ಮನವಿ ಸಲ್ಲಿಸಲಾಯಿತು. 
ಈ ಸಂದರ್ಭದಲ್ಲಿ ಸಚಿವರು ಭತ್ತದ ಯಾಂತ್ರೀಕೃತ ನಾಟಿ ಪ್ರಾತ್ಯಕ್ಷಿಕೆಯನ್ನು ವೀಕ್ಷಿಸಿದರು.
 
ಸಮ್ಮಾನ
ಈ ಸಂದರ್ಭದಲ್ಲಿ 10 ಎಕರೆ ಜಾಗದಲ್ಲಿ ಕೃಷಿ ಮಾಡಿರುವ ರೈತ ಶೀನ ಪೂಜಾರಿ ಅವರನ್ನು ಸಚಿವರು ಸಮ್ಮಾನಿಸಿದರು. 

ಸಚಿವರಿಗೆ ಸಲ್ಲಿಸಿದ ಮನವಿ ಪಟ್ಟಿ ಇಂತಿದೆ
– ಕೃಷಿ ಬೆಳೆಗೆ ಕಾಡು ಪ್ರಾಣಿಗಳ ಹಾವಳಿಯಿದ್ದು, ಅದರ ನಿಯಂತ್ರಣಕ್ಕಾಗಿ ಕೋವಿ ಕಾನೂನು ಸಡಿಲಿಕೆ, ಶೆ. 90ರ ಸಹಾಯಧನದಲ್ಲಿ ಸೋಲಾರ್‌ ಐಬೆಕ್ಸ್‌ ತಂತಿ ಬೇಲಿ ಒದಗಿಸಿ. 
–   ಕರಾವಳಿಯ ರೈತರನ್ನು ಗಮನದಲ್ಲಿಟ್ಟು ಕೊಂಡು ರಾಜ್ಯ ಸರಕಾರ ಬೆಂಬಲ ಬೆಲೆಯನ್ನು ಅಕ್ಟೋಬರ್‌- ನವೆಂಬರ್‌ನಲ್ಲಿ ಘೋಷಿಸಬೇಕು. 
–  ಕೃಷಿ ಇಲಾಖೆಯಲ್ಲಿ ಸಿಬಂದಿ ಕೊರತೆಯಿಂದ ಸೌಲಭ್ಯ ಪಡೆಯುವಲ್ಲಿ ವಿಳಂಬ.
–  ಜಿಲ್ಲೆಯಲ್ಲಿ ಕೃಷಿಗೆ ಕೂಲಿಯಾಳುಗಳ ಸಮಸ್ಯೆಯಿದ್ದು, ಸಣ್ಣ ಹಾಗೂ ಅತೀ ಸಣ್ಣ ರೈತರನ್ನು ಪ್ರೋತ್ಸಾಹಿಸಲು ಕಂಬೈನಡ್‌ ಹಾರ್ವೆಸ್ಟರ್‌ ಮೂಲಕ ಕಟಾವು ಮಾಡಿದ ರೈತರಿಗೆ ಎಕರೆವಾರು ಪ್ರೋತ್ಸಾಹಧನ ಸರಕಾರ ನೀಡಬೇಕು. 

ಇದಲ್ಲದೆ ಸೇರಿದ್ದ ರೈತರ ಪರ ಪ್ರಭಾಕರ ಶೆಟ್ಟಿ ಅವರು, ನೆಲಗಡಲೆಗೆ ಪ್ರೋತ್ಸಾಹಧನ, ಕೃಷಿಕರಿಗೆ ಸಬ್ಸಿಡಿ ದರದಲ್ಲಿ ಡೀಸೆಲ್‌ ನೀಡಲಿ ಎಂದರು. 

ಇಲಾಖೆಯಿಂದ ಸಿಗುವ ಸವಲತ್ತುಗಳು ರೈತರಿಗೆ ಸುಲಭವಾಗಿ ಸಿಗುವಂತೆ, ಇರುವ ವ್ಯವಸ್ಥೆಯನ್ನು ಸರಳ ಮಾಡುವಂತೆ ಕೃಷಿಕರಾದ ಡಾ| ಅತುಲ್‌ ಹೇಳಿದರು. 

ಎಪಿಎಂಸಿ ಅಧ್ಯಕ್ಷ ಶರತ್‌ ಕುಮಾರ್‌ ಶೆಟ್ಟಿ ಈ ಭಾಗದಲ್ಲಿ ಕೃಷಿ ನೀರಿಗೆ ಉಪ್ಪು ನೀರಿನ ಸಮಸ್ಯೆಯಾಗುತ್ತಿದ್ದು, ಹೊಳೆ ದಂಡೆಗೆ ಬದುಗಳನ್ನು ನಿರ್ಮಿಸಿದರೆ ಅನುಕೂಲವಾಗಲಿದೆ. ಗದ್ದೆಗಳಿಗೆ ರಸ್ತೆ ಸಂಪರ್ಕ ಇಲ್ಲದಿರುವುದರಿಂದ ಯಂತ್ರೀಕೃತ ಕೃಷಿಗೆ ತೊಂದರೆಯಾಗುತ್ತಿದೆ ಎಂದರು. 

ಉಡುಪಿ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಎ. ಅಶೋಕ್‌ ಕುಮಾರ್‌ ಕೊಡ್ಗಿ ಸಚಿವರಿಗೆ ಮನವಿ ಸಲ್ಲಿಸಿದರು. ತಾಲೂಕು ಎಪಿಎಂಸಿ ಅಧ್ಯಕ್ಷ ಶರತ್‌ ಕುಮಾರ್‌ ಶೆಟ್ಟಿ,  ಕೃಷಿ ಇಲಾಖೆಯ ಅಧಿಕಾರಿಗಳು, ನೂರಾರು ಮಂದಿ ರೈತರು ಉಪಸ್ಥಿತರಿದ್ದರು.  

ಕೋವಿ ಕಾನೂನು ಸಡಿಲಿಕೆಗೆ ಪ್ರಯತ್ನ
ರೈತರ ಸಮಸ್ಯೆಗಳನ್ನು ಆಲಿಸಿದ ಸಚಿವರು ಕೋವಿ ಕಾನೂನು ಸಡಿಲಿಕೆ ಅಧಿಕಾರ ಡಿಸಿಯವರಿಗೆ ಮಾತ್ರವಿದ್ದು, ಅವರೊಂದಿಗೆ ಮಾತನಾಡಿ, ಸಡಿಲಿಕೆಗೆ ಪ್ರಯತ್ನ ಮಾಡಲಾಗುವುದು. ಉಪ್ಪು ನೀರಿನ ಸಮಸ್ಯೆಗೆ ಪರಿಹಾರವಾಗಿ ಹೊಳೆ ದಂಡೆಗೆ ಏರಿಸುವ ಸಂಬಂಧ ನೀರಾವರಿ ಸಚಿವರೊಂದಿಗೆ ಮಾತನಾಡಲಾಗುವುದು ಎಂದ ಅವರು, ತಾಲೂಕು ಮಟ್ಟದಲ್ಲಿ ಕೃಷಿ ಯಂತ್ರ ದುರಸ್ತಿಗೆ ಸಿಬಂದಿ ನೇಮಿಸಲಾಗುವುದು ಎಂದು ಸಚಿವರು ಹೇಳಿದರು. 

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BUS driver

Bus ticket; ದೀಪಾವಳಿ ಸಂಭ್ರಮಕ್ಕೆ ಬಸ್‌ ಟಿಕೆಟ್‌ ದರ ತಣ್ಣೀರು

1-mahe

MAHE-Mangalore University ಒಡಂಬಡಿಕೆ : ಮೂಳೆ ಅಲೋಗ್ರಾಫ್ಟ್‌ಗಳ ಗಾಮಾ ವಿಕಿರಣ

1-a-kota-pammu

Pramod Madhwaraj ಅವರದ್ದು ಯಾರನ್ನೂ ದ್ವೇಷಿಸದ ಅಪರೂಪದ ವ್ಯಕ್ತಿತ್ವ: ಕೋಟ

1-ottin

Baindur; ಒತ್ತಿನೆಣೆ ತಿರುವಿನಲ್ಲಿ ಗುಡ್ಡ ಕುಸಿತ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.