ಜಲಪ್ರಳಯ: ನಿರಾಶ್ರಿತ ಕೇಂದ್ರಗಳಲ್ಲಿ 10.50 ಲಕ್ಷ  ಮಂದಿ


Team Udayavani, Aug 21, 2018, 6:00 AM IST

20ksde26.jpg

ಕಾಸರಗೋಡು: ಕೇರಳದಲ್ಲಿ ಭಾರೀ ಮಳೆ ಸಾಧ್ಯತೆಯಿಲ್ಲವೆಂದೂ, ಹನಿ ಮಳೆಯಾಗಲಿದೆ ಎಂದೂ ಹವಾಮಾನ ವೀಕ್ಷಣೆ ಕೇಂದ್ರ ಹೇಳಿರುವುದರಿಂದ ಎಲ್ಲ ಜಿಲ್ಲೆಗಳಲ್ಲೂ ಪ್ರಸ್ತುತ ಇದ್ದ ಮುನ್ನೆಚ್ಚರಿಕೆ ನಿರ್ದೇಶವನ್ನು ಹಿಂದೆಗೆದುಕೊಳ್ಳಲಾಗಿದೆ. ಕಳೆದ 24 ಗಂಟೆಗಳೊಳಗೆ ಎಲ್ಲೂ ಭಾರೀ ಮಳೆಯಾಗದಿರುವುದರಿಂದ ಸಮಾಧಾನದ ನಿಟ್ಟುಸಿರು ಬಿಡಲು ಕಾರಣವಾಗಿದೆ. ಮಳೆಯ ಬಿರುಸು ಕಡಿಮೆಯಾಗಿದ್ದರೂ ಪ್ರಳಯ ಬಾಧಿತ ಪ್ರದೇಶಗಳಾದ ಪತ್ತನಂತಿಟ್ಟ, ಎರ್ನಾಕುಳಂ ಮತ್ತು ತೃಶ್ಶೂರು ಜಿಲ್ಲೆಗಳಲ್ಲಿ ಸ್ಥಿತಿ ಶೋಚನೀಯಾವಸ್ಥೆಯಲ್ಲಿದೆ. ಹಲವಾರು ಮಂದಿ ವಿವಿಧೆಡೆ ಸಿಲುಕಿಕೊಂಡಿದ್ದಾರೆ.

ಇತಿಹಾಸದಲ್ಲಿ ಈ ಹಿಂದೆ ಎಂದೂ ಕಂಡರಿಯದ ಜಲ ಪ್ರಳಯ ದುರಂತದಿಂದ ಮಳೆ ಕಡಿಮೆಯಾಗಿರುವುದರಿಂದ ಕೇರಳ ದಡ ಸೇರುತ್ತಿದ್ದು, ಸಂತ್ರಸ್ತರಲ್ಲಿ ಹೊಸ ಆಶಾಕಿರಣ ಮೂಡತೊಡಗಿದೆ.

ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಮಳೆಯ ಅಬ್ಬರ ಕುಸಿದಿದ್ದು, ಅದರ ಜತೆಗೆ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ನೀರಿನ ಮಟ್ಟವೂ ಇಳಿಯತೊಡಗಿದೆ. ಅಣೆಕಟ್ಟುಗಳಲ್ಲೂ ನೀರಿನ ಮಟ್ಟ ನಿಧಾನವಾಗಿ ಇಳಿಯತೊಡಗಿದೆ. ಆದರೆ ಸಾವಿನ ಸಂಖ್ಯೆ ಹೆಚ್ಚುತ್ತಲೇ ಇದ್ದು, ನದಿಗಳಲ್ಲಿ ಮೃತ ದೇಹಗಳು ತೇಲಿಕೊಂಡು ಬರತೊಡಗಿವೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ. ಆ.19 ರಂದು 30 ಮೃತದೇಹಗಳು ಪತ್ತೆಯಾಗಿವೆ. ಮಾತ್ರವಲ್ಲ 22,034 ಮಂದಿಯನ್ನು ಪ್ರವಾಹದ ಹಿಡಿತದಿಂದ ರಕ್ಷಿಸಲಾಗಿದೆ. 2,324 ಮಂದಿಯನ್ನು ಹೆಲಿಕಾಪ್ಟರ್‌ಗಳಲ್ಲಿ ವಾಯು ಪಡೆ ರಕ್ಷಿಸಿದರೆ, 1500 ಮಂದಿಯನ್ನು ಸೇನಾ ಪಡೆ ರಕ್ಷಿಸಿದೆ. ಈಗಲೂ ಹಲವು ಮಂದಿ ನೆರೆ ಪೀಡಿತ ಪ್ರದೇಶಗಳಲ್ಲಿ ಸಿಲುಕಿಕೊಂಡಿದ್ದಾರೆ.

ರಾಜ್ಯದ ವಿವಿಧ ಜಿಲ್ಲೆಗಳಲ್ಲಾಗಿ 3,734 ನಿರಾಶ್ರಿತ ಕೇಂದ್ರಗಳನ್ನು ತೆರೆಯಲಾಗಿದ್ದು, 10.50 ಲಕ್ಷ ಮಂದಿ ಇಲ್ಲಿ ಕಳೆಯುತ್ತಿದ್ದಾರೆ. ಅವರೆಲ್ಲ ತಮ್ಮ ಮನೆಗೆ ತೆರಳುವ ತಯಾರಿಯಲ್ಲಿದ್ದಾರೆ. ಮಳೆಯಿಂದಾಗಿ ರಸ್ತೆ ಹಾನಿಗೊಂಡಿರುವುದರಿಂದ ಸುಮಾರು 4,450 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಪ್ರಾಥಮಿಕ ವರದಿ ಹೇಳಿದೆ. 221 ಸೇತುವೆಗಳು ಪ್ರವಾಹದಲ್ಲಿ ಮುಳುಗಿದ್ದು, ಈ ಪೈಕಿ 59 ಸೇತುವೆಗಳು ಇನ್ನೂ ನೀರಿನಡಿಯಲ್ಲಿವೆ.

ನೆರೆಯಿಂದ ಕೊಚ್ಚಿ, ನೆಡುಂಬಶೆÏàರಿ ವಿಮಾನ ನಿಲ್ದಾಣ ಈಗ ಪೂರ್ಣವಾಗಿ ನೆರೆ ಮುಕ್ತವಾಗಿದ್ದು, ಇದರಿಂದಾಗಿ ವಿಮಾನ  ಸೇವೆ ಪುನರಾರಂಭಗೊಂಡಿದೆ. ಮೊಟಕುಗೊಂಡಿದ್ದ ರೈಲು ಸೇವೆ ಮತ್ತು ದೀರ್ಘ‌ ದೂರ ಬಸ್‌ ಸಂಚಾರ ಪುನರಾರಂಭಗೊಂಡಿವೆ.

ಪ್ರಳಯ ಪೀಡಿತ ಪ್ರದೇಶಗಳಲ್ಲಿ ನೀರಿನ ಮಟ್ಟ ಕುಸಿದು ಸಂತ್ರಸ್ತರು ತಮ್ಮ ಮನೆಗಳಿಗೆ ಹಿಂದಿರುಗುತ್ತಿದ್ದರೂ ನೀರಿನಲ್ಲಿ ಮುಳುಗಿದ್ದ ಮನೆ, ರಸ್ತೆ, ಪರಿಸರ ಪ್ರದೇಶಗಳು ತ್ಯಾಜ್ಯದಿಂದ ತುಂಬಿಕೊಂಡಿದೆ. ಇದರಿಂದಾಗಿ ಶುಚೀಕರಣ ಸಮಸ್ಯೆ ತಲೆದೋರಿದೆ. ಪ್ರವಾಹದಲ್ಲಿ ಸಹಸ್ರಾರು ಜಾನುವಾರುಗಳು ಮತ್ತು ಸಾಕುಪ್ರಾಣಿಗಳು ಸಿಲುಕಿ ಸಾವಿಗೀಡಾಗಿವೆ. ನೆರೆ ಇಳಿದಂತೆ ಅವುಗಳ ಮೃತದೇಹಗಳು ಕಂಡು ಬರುತ್ತಿದ್ದು ಕೊಳೆಯುತ್ತಿವೆ. ಕೊಳೆತ ಪ್ರಾಣಿಗಳನ್ನು ಸಾಗಿಸುವುದು, ರಸ್ತೆ ಚರಂಡಿ, ಪರಿಸರದ ಪ್ರದೇಶಗಳನ್ನು ಶುಚೀಕರಿಸುವ ಕೆಲಸಗಳು ಸಮಸ್ಯೆಯಾಗಲಿವೆ.

ಕನ್ನಡ ಬಳಗದ ಸೇವೆ 
ಕಾಸರಗೋಡಿನ ಸಿರಿಚಂದನ ಕನ್ನಡ ಯುವ ಬಳಗದ 12 ಮಂದಿ ನೆರೆ ಪೀಡಿತ ವಯನಾಡಿಗೆ ತೆರಳಿ ಆ ಬಳಿಕ ಕೊಡಗಿಗೆ ಹೋಗಲಿದ್ದು, ಒಂದು ದಿನ ಪೂರ್ತಿ ಅಲ್ಲಿ ಸೇವೆ ಸಲ್ಲಿಸಲಿದೆ. ಇದರ ನೇತೃತ್ವವನ್ನು ಡಾ| ರತ್ನಾಕರ ಮಲ್ಲಮೂಲೆ ಅವರು ವಹಿಸಿದ್ದಾರೆ.

ಶುಚಿಗೆ ಕಾಸರಗೋಡಿನ ತಂಡಗಳು 
ಪ್ರಳಯದಿಂದ ತತ್ತರಿಸಿರುವ ವಿವಿಧ ಜಿಲ್ಲೆಗಳ ಪ್ರದೇಶಗಳಲ್ಲಿ ಶುಚೀಕರಣಕ್ಕಾಗಿ ಕಾಸರಗೋಡು ಜಿಲ್ಲೆಯ ಹಲವು ರಾಜಕೀಯ ಪಕ್ಷಗಳೂ ಪ್ರತ್ಯೇಕ ತಂಡಗಳನ್ನು ಕಳುಹಿಸಲಿವೆೆ. ಕಾಂಗ್ರೆಸ್‌ನ ಒಂದು ತಂಡ  ಶುಚೀಕರಣಕ್ಕಾಗಿ ಈಗಾಗಲೇ ವಯ ನಾಡಿಗೆ ತೆರಳಿದೆ. ಇನ್ನೊಂದು ತಂಡ ಎರ್ನಾಕುಳಂಗೆ ತೆರಳಲು ಸಜ್ಜಾಗಿದೆ. ಅದೇ ರೀತಿ ಡಿವೈಎಫ್‌ಐ 12 ಬ್ಲಾಕ್‌ಗಳ ಪ್ರತಿಯೊಂದು ಬ್ಲಾಕ್‌ನಿಂದ 50 ಮಂದಿಯ ತಂಡವನ್ನು ಶುಚೀಕರಣಕ್ಕೆ ಕಳುಹಿಸಲಿದೆ. ಈ ಪೈಕಿ ಉದುಮ ಬ್ಲಾಕ್‌ ತಂಡ ಸೋಮವಾರ ಪ್ರಯಾಣ ಆರಂಭಿಸಿದೆ. ಇದೇ ರೀತಿ ಆರ್‌ಎಸ್‌ಎಸ್‌ನ ಹಲವು ತಂಡಗಳು ಪ್ರವಾಹ ಪೀಡಿತ  ಪ್ರದೇಶಗಳಲ್ಲಿ   ಈಗಾಗಲೆ ಶುಚೀಕರಣ ಪ್ರಕ್ರಿಯೆಯನ್ನು ಆರಂಭಿಸಿದೆ. ಮುಸ್ಲಿಂ ಲೀಗ್‌ನ ವೈಟ್‌ ಗಾರ್ಡ್‌ ಎಂಬ ತಂಡ ರೂಪಿಸಲಾಗಿದ್ದು, ಪ್ರತಿ ಪಂಚಾಯತ್‌ನಿಂದ ತಲಾ 30 ಮಂದಿಯ ತಂಡ ತೆರಳಲಿದೆ.

ನಕಲಿ ಸಂಘಟನೆಗಳ ಬಗ್ಗೆ ಜಾಗ್ರತೆ  
ರಾಜ್ಯ ಪ್ರಳಯದಲ್ಲಿ  ಸಿಲುಕಿರುವಾಗ ಅವರಿಗೆ ಆರ್ಥಿಕ ಸಹಾಯ ಒದಗಿಸುವ ಹೆಸರಿನಲ್ಲಿ ಜನರಿಂದ ದೇಣಿಗೆ ಪಡೆದು ಜೇಬಿಗಿಳಿಸುವ ನಕಲಿ ಸಂಘಟನೆಗಳು ಕಾರ್ಯವೆಸಗುತ್ತಿವೆ ಎಂದೂ ಆ ಬಗ್ಗೆ ಜನರು ಜಾಗ್ರತೆ ವಹಿಸಬೇಕೆಂದು ಪೊಲೀಸರು ಮುನ್ನೆಚ್ಚರಿಕೆ ನೀಡಿದ್ದಾರೆ. ಹೀಗೆ ನಕಲಿ ಸಂಘಟನೆಗಳು ಮತ್ತು ಕೇವಲ ಕಾಗದದಲ್ಲಿ ಮಾತ್ರವೇ ಸೀಮಿತವಾಗಿರುವ ಸಂಘಟನೆಗಳು ಹಣ ಸಂಗ್ರಹ ನಡೆಸುವುದು ಕಂಡು ಬಂದಲ್ಲಿ ಅಂತಹವರ ವಿರುದ್ಧ ಕಠಿನ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದೂ ಪೊಲೀಸ್‌ ಇಲಾಖೆ ಎಚ್ಚರಿಕೆ ನೀಡಿದೆ.

ಟಾಪ್ ನ್ಯೂಸ್

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Kasaragod: ಬೋಟ್‌ ಮುಳುಗಡೆ; ನಾಪತ್ತೆಯಾಗಿದ್ದ ಮುಜೀಬ್‌ ಮೃತದೇಹ ಪತ್ತೆ

8

Kumbla: ಕುಸಿದು ಬೀಳುವ ಅಪಾಯದಲ್ಲಿದೆ ಉರ್ಮಿ-ಪಲ್ಲೆಕೂಡೆಲು ಕಿರು ಸೇತುವೆ

Kodagu: ತಲಕಾವೇರಿಯಲ್ಲಿ ನಿಗಧಿತ ಸಮಯಕ್ಕೆ ತೀಥ೯ರೂಪಿಣಿಯಾದ ಕಾವೇರಿ ಮಾತೆ

Kodagu: ತಲಕಾವೇರಿಯಲ್ಲಿ ನಿಗಧಿತ ಸಮಯಕ್ಕೆ ತೀಥ೯ರೂಪಿಣಿಯಾದ ಕಾವೇರಿ ಮಾತೆ

17

Kasaragod: ಜಿಲ್ಲಾ ನ್ಯಾಯಾಲಯದ ತೀರ್ಪಿನ ವಿರುದ್ಧ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಸರಕಾರ

courts

Kasaragod: ಕೊಲೆ ಪ್ರಕರಣ: 8 ವರ್ಷ ಕಠಿಣ ಸಜೆ, ದಂಡ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.