ಕೋಟೆಬೆಟ್ಟ ಹತ್ತಿಳಿದು 80 ಗ್ರಾಮಸ್ಥರ ರಕ್ಷಣೆ


Team Udayavani, Aug 21, 2018, 6:15 AM IST

ban2108.jpg

ಸೋಮವಾರಪೇಟೆ: ಕಳೆದ 5 ದಿನಗಳಿಂದ ಹೊರ ಜಗತ್ತಿನ ಸಂಪರ್ಕ ಕಡಿದುಕೊಂಡು ಸಂತ್ರಸ್ತರಾಗಿದ್ದ ಮುಕ್ಕೋಡ್ಲು ಗ್ರಾಮದ ಸುಮಾರು 80 ಮಂದಿಯನ್ನು ರಕ್ಷಿಸಲಾಗಿದೆ.

ಮಾದಾಪುರದ ಇಗ್ಗೊàಡ್ಲು ಮಾರ್ಗವಾಗಿ ಮತ್ತು ಹಚ್ಚಿನಾಡು ಮಾರ್ಗವಾಗಿ ಮುಕ್ಕೋಡ್ಲು ತಲುಪಿದ ಯುವಕರ ತಂಡ ಗ್ರಾಮದೊಳಗೆ ಸಿಲುಕಿದ್ದ ಜನರನ್ನು ಹರಸಾಹಸ ಪಟ್ಟು ರಕ್ಷಿಸಿತು.

ಜಲಪ್ರಳಯದಿಂದ ಗ್ರಾಮದಲ್ಲಿ ಭಾರೀ ಬೆಟ್ಟಗಳು ಕುಸಿದು, ಮರಗಳು ನೆಲಕ್ಕುರುಳಿ ರಸ್ತೆ ಸಂಪರ್ಕ ನಾಶವಾಗಿದೆ. ಹಚ್ಚಿನಾಡು ಗ್ರಾಮದ ಸುಭಾಶ್‌ ಸೋಮಯ್ಯ ಎಂಬುವರ ಮನೆ ಕಣ್ಮರೆಯಾಗಿದೆ. ಮಾದಾಪುರದ ಇಗ್ಗೊàಡ್ಲು ಎಸ್ಟೇಟ್‌ ನಡುವೆ ಯಂತ್ರಗಳ ಸಹಾಯದಿಂದ ಶಾಸಕ ಅಪ್ಪಚ್ಚು ರಂಜನ್‌ ನೇತೃತ್ವದಲ್ಲಿ 30ಕ್ಕೂ ಹೆಚ್ಚು ಯುವಕರು ಕಾರ್ಯಾಚರಣೆಗೆ ಇಳಿದರು. ಕೋಟೆಬೆಟ್ಟವನ್ನು ಹತ್ತಿ ಇಳಿದು ಯುವಕರು ಮುಕ್ಕೋಡ್ಲು ಮುಟ್ಟಿದರು. ಅಲ್ಲಿನ ರಾಜೇಶ್‌ ಎಂಬುವರ ಕುಟುಂಬದ ಇಬ್ಬರು ಮಕ್ಕಳು, ವೃದಟಛಿರು ಸೇರಿದಂತೆ 6 ಮಂದಿಯನ್ನು ರಕ್ಷಿಸಲಾಯಿತು. ಇದರೊಂದಿಗೆ ಸಂಪರ್ಕ ಕಡಿದುಕೊಂಡಿದ್ದ 40ಕ್ಕೂ ಅಧಿಕ ಮಂದಿಯನ್ನು ಮಾದಾಪುರ ಮಾರ್ಗವಾಗಿ ಕರೆದುಕೊಂಡು ಬರಲಾಯಿತು.

ಇತ್ತ ಸೂರ್ಲಬ್ಬಿ, ಹಮ್ಮಿಯಾಲ ಮಾರ್ಗವಾಗಿ ಹಚ್ಚಿನಾಡು ತಲುಪಿದ ತಂಡ, ಮುಕ್ಕೋಡ್ಲುನಲ್ಲಿ ಯಾರ ಸಂಪರ್ಕಕ್ಕೂ ಸಿಗದೇ ಉಳಿದುಕೊಂಡಿದ್ದ ಪೊನ್ನಚೆಟ್ಟಿರ ಮಾದಪ್ಪ-ಬೋಜಮ್ಮ ಅವರ ಮನೆಯವರನ್ನು ರಕ್ಷಿಸಿತು.

5 ದಿನಗಳಿಂದ ಆಹಾರವಿಲ್ಲದೇ ಅತಂತ್ರ ಸ್ಥಿತಿಯಲ್ಲಿದ್ದ ಕುಟುಂಬವನ್ನು ಸೋಮವಾರ ಪೇಟೆಗೆ ಕರೆತರಲಾಯಿತು. ಮನೆಯೊಳಗಿದ್ದ ವಿಕಲಚೇತನ ರತೀಶ್‌ ಅವರನ್ನು ತಂಡ ಬಡಿಗೆ ಕಟ್ಟಿಕೊಂಡು ಸುಮಾರು 6 ಕಿ.ಮೀ. ಹೊತ್ತು ಸಾಗಿದರು. ಮಂಡಿಯವರೆಗೆ ಹೂತುಕೊಳ್ಳುವ ಕೆಸರಿನ ನಡುವೆ ಸಾಹಸಪಟ್ಟು ಹಚ್ಚಿನಾಡುವರೆಗೆ ಕರೆತರಲಾಯಿತು. ಹೋಂಸ್ಟೇ ಒಂದರಲ್ಲಿ ತಂಗಿದ್ದ ಹಚ್ಚಿನಾಡು, ಕಬ್ಬಣಿ, ಮುಕ್ಕೋಡ್ಲು ಗ್ರಾಮದ ಸುಮಾರು 43 ಮಂದಿಯನ್ನು ರಕ್ಷಿಸಲಾಯಿತು. ಸ್ಥಳೀಯ ಜನಪ್ರತಿನಿಧಿಗಳು ಕಾರ್ಯಾಚರಣೆಗೆ ಸಹಕಾರ ನೀಡಿದರು.

ಮುಕ್ಕೋಡ್ಲು ಗ್ರಾಮದಲ್ಲಿ ಲಕ್ಷಾಂತರ ರೂ. ಹಾನಿ ಸಂಭವಿಸಿದೆ. ನಾಟಿ ಮಾಡಿದ್ದ ಗದ್ದೆಗಳು ಮುಚ್ಚಿಹೋಗಿದ್ದು, ಎರಡೂ ಬದಿಯ ಬೆಟ್ಟಗುಡ್ಡ ಕುಸಿಯುತ್ತಿದೆ. ಹೊಳೆಯಂತೂ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.

ಗ್ರಾಮಸ್ಥರ ರಕ್ಷಣೆ
ಕೊಡಗಿನ ಮಕ್ಕಂದೂರು, ಮುಕ್ಕೋಡ್ಲು ಸೇರಿದಂತೆ ಭೂಕುಸಿತಕ್ಕೊಳಕ್ಕಾಗಿ ಸಂಕಷ್ಟದಲ್ಲಿರುವ ಗ್ರಾಮ ವ್ಯಾಪ್ತಿಯ ಎಲ್ಲ ಜನತೆಯನ್ನು ರಕ್ಷಿಸಲಾಗಿದೆ.

ಸೋಮವಾರ ಕೂಡ ಸೇನಾ ಕಾರ್ಯಾಚರಣೆ ನಡೆಸಲಾಗಿದ್ದು, ಅಪಾಯದಲ್ಲಿದ್ದ ಎಲ್ಲ ಗ್ರಾಮಸ್ಥರನ್ನು ಸುರಕ್ಷಿತವಾಗಿ ಕರೆತರಲಾಗಿದೆ. ಸೇನಾ ಕಾರ್ಯಾಚರಣೆ ಯಶಸ್ವಿಯಾಗಿದೆ ಎಂದು ಅಗ್ನಿಶಾಮಕ ದಳ ಮತ್ತು ಗೃಹ ರಕ್ಷಕ ದಳದ ಮಹಾ ನಿರ್ದೇಶಕ ಎಂ.ಎನ್‌.ರೆಡ್ಡಿ ಮಾಹಿತಿ ನೀಡಿದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Chikkamagaluru: ಸಾವಿನಲ್ಲೂ ಸಾರ್ಥಕತೆ; ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Chikkamagaluru: ಸಾವಿನಲ್ಲೂ ಸಾರ್ಥಕತೆ… ರಸ್ತೆ ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

9

Cabinet Meeting: ದಶಕದ ಬಳಿಕ ಕಲಬುರಗಿಯಲ್ಲಿ ಸಂಪುಟ ಸಭೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.