ಉ.ಕ ಸಂತ್ರಸ್ತರಿಗೆ ಇನ್ನೂ ಸಿಕ್ಕಿಲ್ಲ ಸೂರು!


Team Udayavani, Aug 21, 2018, 6:00 AM IST

20-bgk-3b.jpg

ಹುನಗುಂದ: ವರುಣನ ಆರ್ಭಟಕ್ಕೆ ಕೊಡಗು ಅಕ್ಷರಶಃ ನಲುಗಿ ಹೋಗಿದೆ. ಸಾವು, ನೋವಿಗೆ ರಾಜ್ಯದ ಜನ ಮಿಡಿದ ಪರಿ ಶ್ಲಾಘನಾರ್ಹ. ನೊಂದ ಜೀವಗಳಿಗೆ ಸರ್ಕಾರ ಅಭಯ ನೀಡಿ ಧೈರ್ಯ ತುಂಬಿದೆ. ಅಂತಹದ್ದೇ ಸ್ಥಿತಿ 2009ರಲ್ಲಿ ಉತ್ತರ ಕರ್ನಾಟಕದಲ್ಲೂ ಎದುರಾಗಿತ್ತು. ಬದುಕು ಛಿದ್ರವಾಗಿ ಜನ ಕಂಗಾಲಾಗಿದ್ದರು. ಅಂದು ನೀರಿನಲ್ಲಿ ಮುಳುಗಿದ ಊರುಗಳ ಜನರು ಈಗಲೂ ತಾತ್ಕಾಲಿಕ ಶೆಡ್‌ನ‌ಲ್ಲಿ ವಾಸವಾಗಿದ್ದಾರೆ!

2009ರಲ್ಲಿ ಮಹಾಮಳೆಗೆ ಕೃಷ್ಣಾ, ಘಟಪ್ರಭಾ ಹಾಗೂ ಮಲಪ್ರಭಾ ನದಿಗಳು ಉಕ್ಕಿ ಹರಿದಿದ್ದವು. ನದಿಗಳ ರಭಸದ ಹರಿವಿನ ಜತೆಗೆ 2 ತಿಂಗಳ ಕಾಲ ಎಡಬಿಡದೆ ಸುರಿದ ಮಳೆಗೆ ಬಾಗಲಕೋಟೆ, ಗದಗ, ವಿಜಯಪುರ, ಬೆಳಗಾವಿ, ಯಾದಗಿರಿ, ರಾಯಚೂರು ಜಿಲ್ಲೆಗಳು ನಲುಗಿದ್ದವು. ನಾರಾಯಣಪುರ ಹಿನ್ನೀರಿನಿಂದ ಹುನಗುಂದ ತಾಲೂಕಿನ ಕೆಂಗಲಕಡಪಟ್ಟಿ-236, ಬಿಸನಾಳ-121, ಬಿಸನಾಳಕೊಪ್ಪ-183, ಕಮದತ್ತ-121, ಎಮ್ಮೆಟ್ಟಿ-259, ಖಜಗಲ್‌-126, ವರಗೋಡದಿನ್ನಿ-313, ಅಡಿಹಾಳ-407, ಅನಪಕಟ್ಟಿ-384, ಕೆಸರಪೆಂಟಿ-114, ಇದ್ದಲಗಿ-1136 ಸೇರಿ ಒಟ್ಟು 3,432 ಮನೆಗಳು ಪ್ರವಾಹಕ್ಕೆ ಸಿಲುಕಿ ನೆಲಸಮಗೊಂಡಿದ್ದವು. ಈ ಎಲ್ಲ ಮನೆಗಳ ಸಂತ್ರಸ್ತರಿಗೆ ಆಯಾ ಗ್ರಾಮಗಳ ಪಕ್ಕದಲ್ಲೇ ಜಿಲ್ಲಾಡಳಿತ ತಾತ್ಕಾಲಿಕ ಶೆಡ್‌ ನಿರ್ಮಿಸಿ ಆಶ್ರಯ ಒದಗಿಸಿತ್ತು. ಆದರೆ, ಸರ್ಕಾರದ ಗೊಂದಲದ ನೀತಿಯಿಂದ ಇಂದಿಗೂ ವಾಸಿಸಲು ಶಾಶ್ವತ ಮನೆ ಕಲ್ಪಿಸಿಲ್ಲ. ತಾತ್ಕಾಲಿಕ ಶೆಡ್‌ನ‌ಲ್ಲಿ ಕಾಯಂ ವಾಸವಾಗಿದ್ದಾರೆ.

ಭೂಸ್ವಾಧೀನದಲ್ಲೇ ಕಾಲ ಕಳೆದರು:
ಪ್ರವಾಹದಿಂದ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಶಾಶ್ವತ ಪರಿಹಾರ ಕೈಗೊಳ್ಳಲು ಕಂದಾಯ ಇಲಾಖೆಗೆ ಸೂಚಿಸಿತ್ತು. 2009ರಿಂದ 2013ರವರೆಗೆ ಕಂದಾಯ ಇಲಾಖೆ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ತಾತ್ಕಾಲಿಕ ಶೆಡ್‌ ನಿರ್ಮಿಸಿದ ಜಾಗೆಯಲ್ಲಿ ಸಂತ್ರಸ್ತರಿಗೆ ಮನೆ ನಿರ್ಮಿಸಿ ಕೊಡಲು ಭೂಸ್ವಾಧೀನ ಪ್ರಕ್ರಿಯೆಯಲ್ಲೇ ಕಾಲ ಕಳೆದಿತ್ತು.

ಹಲವು ಹೋರಾಟ, ಸಂತ್ರಸ್ತರ ಒತ್ತಾಯದ ಬಳಿಕ ಸರ್ಕಾರ ಈ ಗ್ರಾಮಗಳ ಸಂತ್ರಸ್ತರಿಗೆ ಶಾಶ್ವತ ಪುನರ್ವಸತಿ ಕಲ್ಪಿಸುವ ಹೊಣೆಯನ್ನು ಕೃಷ್ಣಾ ಮೇಲ್ದಂಡೆ ಯೋಜನೆಯ ಪುನರ್ವಸತಿ ಹಾಗೂ ಪುನರ್‌ ನಿರ್ಮಾಣ ಕಚೇರಿಗೆ ವಹಿಸಿತು. ಆಗ ಈ ಇಲಾಖೆಯಿಂದ ಮತ್ತೆ ಮೊದಲಿನಿಂದ ಕೆಲಸ ಆರಂಭಿಸಿತು. ಹೀಗಾಗಿ 8 ವರ್ಷ ಕಳೆದರೂ ಅವರೆಲ್ಲ ಸರ್ಕಾರದ ಸೂರು ಕಾಣದೇ ಶೆಡ್‌ನ‌ಲ್ಲಿ ವಾಸಿಸುವ ಪರಿಸ್ಥಿತಿ ಬಂದೋದಗಿದೆ. ಸದ್ಯ ಕೊಡಗು ಜಿಲ್ಲೆಯಲ್ಲಿನ ಸ್ಥಿತಿ ಕಂಡು 8 ವರ್ಷಗಳ ಹಿಂದಿನ ಕಹಿ ಅನುಭವ ನೆನಪಿಗೆ ಬರುತ್ತಿದೆ. ಸೂರು ಕಲ್ಪಿಸುವುದಾಗಿ ಹೇಳಿದ್ದ ಸರ್ಕಾರ ಇಂದಿಗೂ ಶೆಡ್‌ನ‌ಲ್ಲೇ ಬಿಟ್ಟಿದ್ದಕ್ಕೆ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭೂಸ್ವಾಧೀನ ಪ್ರಕ್ರಿಯೆಗೆ ಕೆಲವರು ನ್ಯಾಯಾಲಯಕ್ಕೆ ಹೋಗಿ ತಡೆಯಾಜ್ಞೆ ತಂದಿದ್ದರಿಂದ ತಡವಾಗಿದೆ. ಸದ್ಯ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ ನಿವೇಶನ ಅಭಿವೃದ್ಧಿಪಡಿಸುವ ಕೆಲಸ ನಡೆದಿದೆ.
– ಪಿ.ಎ. ಮೇಘಣ್ಣವರ, ಆಯುಕ್ತರು, ಯುಕೆಪಿ

– ಮಲ್ಲಿಕಾರ್ಜುನ ಬಂಡರಗಲ್ಲ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Chikkamagaluru: ಸಾವಿನಲ್ಲೂ ಸಾರ್ಥಕತೆ; ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Chikkamagaluru: ಸಾವಿನಲ್ಲೂ ಸಾರ್ಥಕತೆ… ರಸ್ತೆ ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

9

Cabinet Meeting: ದಶಕದ ಬಳಿಕ ಕಲಬುರಗಿಯಲ್ಲಿ ಸಂಪುಟ ಸಭೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.